Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 15:47 - ಕನ್ನಡ ಸತ್ಯವೇದವು C.L. Bible (BSI)

47 ಅಷ್ಡೋದ್ ಸಂಸ್ಥಾನ ಮತ್ತು ಅದರ ಗ್ರಾಮ-ನಗರಗಳು; ಗಾಜಾ ಸಂಸ್ಥಾನ ಹಾಗೂ ಈಜಿಪ್ಟಿನ ನದಿಯ ಹತ್ತಿರದಲ್ಲಿ ಮತ್ತು ಮಹಾಸಾಗರದ ತೀರದಲ್ಲಿ ಇರುವ ಅದರ ಎಲ್ಲ ಗ್ರಾಮ, ನಗರಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

47 ಮತ್ತು ಅಷ್ಡೋದ್ ಸಂಸ್ಥಾನ ಮತ್ತು ಅದರ ಗ್ರಾಮ ಪಟ್ಟಣಗಳು; ಗಾಜಾ ಸಂಸ್ಥಾನ ಹಾಗೂ ಐಗುಪ್ತ ನದಿಯ ಹತ್ತಿರದಲ್ಲಿ ಮತ್ತು ಮಹಾಸಾಗರದ ತೀರದಲ್ಲಿ ಇರುವ ಅದರ ಎಲ್ಲಾ ಗ್ರಾಮ, ಪಟ್ಟಣಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

47 ಅಷ್ಡೋದ್ ಸಂಸ್ಥಾನವೂ ಅದರ ಗ್ರಾಮನಗರಗಳೂ; ಗಾಜಾ ಸಂಸ್ಥಾನವೂ ಐಗುಪ್ತಹಳ್ಳದ ಉತ್ತರದಲ್ಲಿ ಮತ್ತು ಮಹಾಸಾಗರತೀರದಲ್ಲಿ ಇರುವ ಅದರ ಎಲ್ಲಾ ಗ್ರಾಮ ನಗರಗಳೂ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

47 ಅಷ್ಡೋದಿನ ಸುತ್ತಮುತ್ತಲಿನ ಎಲ್ಲ ಕ್ಷೇತ್ರ ಮತ್ತು ಅಲ್ಲಿಯ ಸಣ್ಣ ಊರುಗಳು ಯೆಹೂದ ಪ್ರದೇಶದ ಭಾಗವಾಗಿದ್ದವು. ಯೆಹೂದದ ಜನರು ಗಾಜಾದ ಸುತ್ತಮುತ್ತಲಿನ ಕ್ಷೇತ್ರ ಮತ್ತು ಹತ್ತಿರದ ಊರುಕೇರಿಗಳನ್ನೂ ಹೊಲಗದ್ದೆಗಳನ್ನೂ ಪಡೆದುಕೊಂಡರು. ಅವರ ನೆಲವು ಈಜಿಪ್ಟಿನ ನದಿಯವರೆಗೂ ವಿಸ್ತರಿಸಿತ್ತು; ಮೆಡಿಟರೆನಿಯನ್ ಸಮುದ್ರದ ತೀರದುದ್ದಕ್ಕೂ ಚಾಚಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

47 ಅಷ್ಡೋದ್ ಪಟ್ಟಣ ಮತ್ತು ಅದರ ಸುತ್ತಲಿನ ಪಟ್ಟಣಗಳೂ ಗ್ರಾಮಗಳೂ, ಗಾಜಾ, ಅದರ ಪಟ್ಟಣಗಳು, ಅದರ ಗ್ರಾಮಗಳು. ಈಜಿಪ್ಟಿನ ಕಲ್ಲಿನ ನಾಲೆ, ಮೆಡಿಟೆರಿಯನ್ ಸಮುದ್ರ, ಅದರ ಮೇರೆ ಇವುಗಳವರೆಗೂ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 15:47
17 ತಿಳಿವುಗಳ ಹೋಲಿಕೆ  

ಅಲ್ಲಿಂದ ಕಾದೇಶ್ ಬರ್ನೇಯದ ದಕ್ಷಿಣ ಮಾರ್ಗವಾಗಿ ಹೆಚ್ರೋನಿಗೂ ಅಲ್ಲಿಂದ ಏರುತ್ತಾ ಅದ್ದಾರಿಗೂ ಹೋಗಿ ಕರ್ಕದ ಕಡೆಗೆ ತಿರುಗಿಕೊಳ್ಳುತ್ತದೆ. ಅಚ್ಮೋನಿನ ಮೇಲೆ ಈಜಿಪ್ಟಿನ ನದಿಗೆ ಬಂದು ಸಮುದ್ರತೀರದಲ್ಲಿ ಮುಕ್ತಾಯಗೊಳ್ಳುತ್ತದೆ. ಇದು ಅದರ ತೆಂಕಣ ಎಲ್ಲೆ.


ಅನಂತರ ದೇವದೂತನು ಫಿಲಿಪ್ಪನಿಗೆ, “ನೀನು ಎದ್ದು ದಕ್ಷಿಣಾಭಿಮುಖವಾಗಿ ಹೋಗು. ಅದು ಜೆರುಸಲೇಮಿನಿಂದ ಗಾಜಕ್ಕೆ ಹೋಗುವ ಅರಣ್ಯ ಮಾರ್ಗ,” ಎಂದನು.


ಗಾಜಾಪಟ್ಟಣ ನಿರ್ಜನವಾಗುವುದು, ಅಷ್ಕೆಲೋನ್ ಹಾಳಾಗುವುದು; ಅಷ್ಡೋದಿನ ನಿವಾಸಿಗಳನ್ನು ನಡುಮಧ್ಯಾಹ್ನದಲ್ಲೆ ಅಟ್ಟಿಸಿಬಿಡಲಾಗುವುದು; ಎಕ್ರೋನಿನ ಜನರನ್ನು ನಿರ್ಮೂಲಮಾಡಲಾಗುವುದು.


ಗಾಜಾ ಊರು ತಲೆಬೋಳಿಸಿಕೊಂಡಿದೆ ಅಷ್ಕೆಲೋನ್ ಊರು ನಿಶ್ಶಬ್ದವಾಗಿದೆ. ಅನಕಿಮ್ ಬೈಲುನಾಡಿನ ಅವಶೇಷವೇ, ಎಂದಿನವರೆಗೆ ನಿನ್ನನ್ನೇ ಕತ್ತರಿಸಿಕೊಳ್ಳುತ್ತಿರುವೆ !


ಫರೋಹನು ಗಾಜಾ ಊರಿಗೆ ಮುತ್ತಿಗೆ ಹಾಕುವ ಮೊದಲು ಫಿಲಿಷ್ಟಿಯರ ವಿಷಯವಾಗಿ ಪ್ರವಾದಿ ಯೆರೆಮೀಯನಿಗೆ ಸರ್ವೇಶ್ವರನಿಂದ ಕೇಳಿಬಂದ ವಾಣಿ:


ಕೆಂಪು ಸಮುದ್ರದಿಂದ ಫಿಲಿಷ್ಟಿಯರ ದೇಶದ ಬಳಿಯಿರುವ ಸಮುದ್ರದವರೆಗೂ ಮತ್ತು ಈ ಮರುಭೂಮಿಯಿಂದ ಯೂಫ್ರೆಟೀಸ್ ಮಹಾ ನದಿಯವರೆಗೂ ಇರುವ ನಾಡನ್ನೆಲ್ಲಾ ನಿಮಗೆ ನೇಮಿಸಿ ಅದರಲ್ಲಿರುವ ನಿವಾಸಿಗಳನ್ನು ನಿಮಗೆ ಅಧೀನಪಡಿಸುವೆನು.


ಎಕ್ರೋನಿನಿಂದ ಸಮುದ್ರದವರೆಗೆ ಅಷ್ಡೋದಿನ ಬಳಿಯಲ್ಲಿರುವ ಸಮಸ್ತ ಗ್ರಾಮಗಳು;


ಮಲೆನಾಡಿನ ಪ್ರದೇಶದಲ್ಲಿರುವ ಶಾಮೀರ್, ಯತ್ತೀರ್, ಸೋಕೋ,


ಮತ್ತು ಹೇಗೆ ಕಫ್ತೋರಿಂದ ಬಂದ ಕಫ್ತೋರ್ಯರು ಗಾಜಾ ಪಟ್ಟಣದವರೆಗೂ ಹಳ್ಳಿಗಳಲ್ಲಿದ್ದ ಅವ್ವಿಯರನ್ನು ನಾಶಮಾಡಿ ಅವರ ಸ್ಥಳದಲ್ಲಿ ವಾಸಮಾಡಿದರೋ, ಹಾಗೆಯೇ ಸರ್ವೇಶ್ವರ ರೆಫಾಯರನ್ನು ಅಮ್ಮೋನಿಯರ ಬಳಿಯಿಂದ ಹೊರದೂಡಿದರು; ಅಮ್ಮೋನಿಯರು ಆ ನಾಡನ್ನು ಸ್ವಾಧೀನಮಾಡಿಕೊಂಡು ಅದರಲ್ಲಿ ವಾಸಿಸಿದರು.)


ಇಸ್ರಯೇಲರ ಪ್ರಾಂತ್ಯದಲ್ಲಿ ಜನರಾರೂ ಉಳಿಯಲಿಲ್ಲ. ಗಾಜಾ, ಗತೂರು, ಅಷ್ಡೋದ್ ಎಂಬ ಊರುಗಳಲ್ಲಿ ಮಾತ್ರ ಕೆಲವರು ಉಳಿದರು.


ನನಗಾದರೋ ನನ್ನ ದೇವರಾದ ಸರ್ವೇಶ್ವರ ಎಲ್ಲ ಕಡೆಗಳಲ್ಲೂ ಸಮಾಧಾನವನ್ನು ಅನುಗ್ರಹಿಸಿದ್ದಾರೆ; ನನ್ನನ್ನು ವಿರೋಧಿಸುವವನು ಒಬ್ಬನೂ ಇಲ್ಲ; ಆಪತ್ತು ವಿಪತ್ತು ದೂರವಾಗಿವೆ.


ಗಾಜಪ್ರಾಂತ್ಯದವರೆಗೆ ವಾಸವಾಗಿದ್ದ ಫಿಲಿಷ್ಟಿಯರನ್ನು ಸೋಲಿಸಿ ಕಾವಲುಗಾರರ ಗೋಪುರವಿದ್ದ ಚಿಕ್ಕ ಹಳ್ಳಿ ಮೊದಲುಗೊಂಡು ಕೋಟೆಕೊತ್ತಲುಗಳುಳ್ಳ ಮಹಾನಗರಗಳವರೆಗೂ ಎಲ್ಲಾ ಊರುಗಳನ್ನು ಹಾಳುಮಾಡಿದನು.


ಉಜ್ಜೀಯನು ಫಿಲಿಷ್ಟಿಯರ ಮೇಲೆ ಯುದ್ಧಕ್ಕೆ ಹೊರಟು ಗತ್‍ಊರು, ಯಬ್ನೆ, ಅಷ್ಡೋದ್ ಎಂಬ ಪಟ್ಟಣಗಳ ಗೋಡೆಗಳನ್ನು ಕೆಡವಿಬಿಟ್ಟು ಅಷ್ಡೋದಿನ ಮತ್ತು ಫಿಲಿಷ್ಟಿಯರ ಪ್ರಾಂತಗಳಲ್ಲಿ ಪಟ್ಟಣಗಳನ್ನು ಕಟ್ಟಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು