Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 15:7 - ಕನ್ನಡ ಸತ್ಯವೇದವು C.L. Bible (BSI)

7 ಇವುಗಳ ಮೇಲೆ ದೆಬೀರಿಗೆ ಹೋಗುತ್ತದೆ. ಅದು ಅಲ್ಲಿಂದ ಉತ್ತರಕ್ಕೆ ತಿರುಗಿಕೊಂಡು ನದಿಯ ದಕ್ಷಿಣದಲ್ಲಿರುವ ಅದುಮೀಮಿಗೆ ಹೋಗುವ ದಾರಿಯ ಎದುರಿನಲ್ಲಿರುವ ಗಿಲ್ಗಾಲ್, ಏನ್ ಷೆಮೆಷ್ ಎನ್ನುವ ಬುಗ್ಗೆ, ಏನ್ ರೋಗೆಲ್ ಇವುಗಳ ಮೇಲೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆಕೋರಿನ ಕಣಿವೆ ಇವುಗಳ ಮೇಲೆ ದೆಬೇರಿಗೆ ಹೋಗುತ್ತದೆ. ಅದು ಅಲ್ಲಿಂದ ಉತ್ತರಕ್ಕೆ ತಿರುಗಿಕೊಂಡು ಹಳ್ಳದ ದಕ್ಷಿಣದಲ್ಲಿರುವ ಅದುಮೀಮಿಗೆ ಹೋಗುವ ದಾರಿಯ ಎದುರಿನಲ್ಲಿರುವ ಗಿಲ್ಗಾಲ್ ಏನ್ ಷೆಮೆಷ್ ಅನ್ನಿಸಿಕೊಳ್ಳುವ ಬುಗ್ಗೆ ಏನ್ ರೋಗೆಲ್ ಇವುಗಳ ಮೇಲೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಆಕೋರಿನ ತಗ್ಗು ಇವುಗಳ ಮೇಲೆ ದೆಬೀರಿಗೆ ಹೋಗುತ್ತದೆ. ಅದು ಅಲ್ಲಿಂದ ಉತ್ತರಕ್ಕೆ ತಿರುಗಿಕೊಂಡು ಹಳ್ಳದ ದಕ್ಷಿಣದಲ್ಲಿರುವ ಅದುಮೀವಿುಗೆ ಹೋಗುವ ದಾರಿಯ ಎದುರಿನಲ್ಲಿರುವ ಗಿಲ್ಗಾಲ್, ಏನ್‍ಷೆಮೆಷ್ ಅನ್ನಿಸಿಕೊಳ್ಳುವ ಬುಗ್ಗೆ, ಏನ್‍ರೋಗೆಲ್ ಇವುಗಳ ಮೇಲೆ ಬೆನ್‍ಹಿನ್ನೋಮನ ತಗ್ಗಿಗೆ ಹೋಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಅಲ್ಲಿಂದ ಅದು ಆಕೋರಿನ ಕಣಿವೆಯಿಂದ ಹಾದು ದೆಬೀರಕ್ಕೆ ಮುಟ್ಟಿ ಅಲ್ಲಿ ಉತ್ತರಕ್ಕೆ ತಿರುಗಿ ಗಿಲ್ಗಾಲಕ್ಕೆ ಮುಟ್ಟಿತ್ತು. ಅದು ಮೀಮಿನ ಬೆಟ್ಟದಿಂದ ಹೋಗುವ ದಾರಿಯ ಎದುರಿಗೆ ಗಿಲ್ಗಾಲ್ ಇದೆ. ಅದು ಹಳ್ಳದ ದಕ್ಷಿಣ ಭಾಗದಲ್ಲಿದೆ. ಈ ಸೀಮೆಯು ಏನ್‌ಷೆಮೆಷ್ ನದಿಯವರೆಗೆ ಹೋಗಿ ಏನ್‌ರೋಗೆಲ್‌ನಲ್ಲಿ ಕೊನೆಗೊಳ್ಳುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಅಲ್ಲಿಂದ ಆಕೋರ್ ತಗ್ಗನ್ನು ಬಿಟ್ಟು ದೆಬೀರಿಗೂ ಉತ್ತರಕ್ಕೆ ನದಿಗೆ ತಿರುಗಿಕೊಂಡು ದಕ್ಷಿಣದಲ್ಲಿರುವ ಅದುಮೀಮಿನ ದಿಬ್ಬೆಗೆ ಎದುರಾಗಿರುವ ಗಿಲ್ಗಾಲಿಗೂ, ಅಲ್ಲಿಂದ ಏನ್ ಷೆಮೆಷ್ ಎಂಬ ಬುಗ್ಗೆಗೂ, ಅಲ್ಲಿಂದ ಏನ್ ರೋಗೆಲ್‌ವರೆಗೂ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 15:7
13 ತಿಳಿವುಗಳ ಹೋಲಿಕೆ  

ಒಮ್ಮೆ ಅದೋನೀಯನು ರೋಗೆಲ್ ಬುಗ್ಗೆಯ ಬಳಿಯಿರುವ ಜೋಹೆಲೆತ್ ಬಂಡೆಯ ಮೇಲೆ ಕುರಿ, ಹೋರಿ ಮೊದಲಾದ ಕೊಬ್ಬಿದ ಪಶುಗಳನ್ನು ಬಲಿದಾನ ಮಾಡಿಸಿದನು; ಅರಸುಕುಮಾರರಾದ ತನ್ನ ಸಹೋದರರನ್ನು ಹಾಗು ಆಸ್ಥಾನದ ಎಲ್ಲ ಯೆಹೂದ್ಯ ಅಧಿಕಾರಿಗಳನ್ನು ಔತಣಕ್ಕೆ ಆಮಂತ್ರಿಸಿದನು.


ಯೋನಾತಾನ್ ಹಾಗು ಅಹೀಮಾಚರು ರೋಗೆಲಿನ ಬುಗ್ಗೆಯ ಬಳಿಯಲ್ಲಿದ್ದರು. ಇವರ ಮನೆಯ ದಾಸಿ ಎಲ್ಲಾ ವರ್ತಮಾನಗಳನ್ನು ಇವರಿಗೂ ಇವರ ಅರಸ ದಾವೀದನಿಗೂ ಮುಟ್ಟಿಸುವಂತೆ ಗೊತ್ತುಮಾಡಿಕೊಂಡಿದ್ದರು. ತಮ್ಮನ್ನು ಯಾರೂ ನೋಡಬಾರದೆಂದು ಇವರು ತಾವಾಗಿ ಊರೊಳಗೆ ಬರಲಿಲ್ಲ.


ಅವನ ಮೇಲೆ ಕಲ್ಲುಗಳ ಒಂದು ದೊಡ್ಡ ಗುಡ್ಡೆಯನ್ನು ಹಾಕಿದರು. ಅದು ಇಂದಿನವರೆಗೂ ಇದೆ. ಬಳಿಕ ಸರ್ವೇಶ್ವರನ ಕೋಪಾಗ್ನಿ ತಣ್ಣಗಾಯಿತು. ಈ ಘಟನೆಯಿಂದಾಗಿ ಆ ಸ್ಥಳಕ್ಕೆ ‘ಆಕೋರಿನ ಕಣಿವೆ’ ಎಂಬ ಹೆಸರು ಬಂದಿತು.


ಅವರ ತಾಯಿ ವೇಶ್ಯೆಯಾಗಿದ್ದಾಳೆ. ಲಜ್ಜೆಗೆಟ್ಟ ಹೆಂಗಸಾಗಿ ವರ್ತಿಸಿದ್ದಾಳೆ. ‘ನನಗೆ ಅನ್ನಪಾನ, ಉಣ್ಣೆ ಉಡಿಗೆ, ಎಣ್ಣೆತೈಲ, ಪಾಯಸಪಾನಕಗಳನ್ನು ಕೊಡುವಂಥ ನಲ್ಲರ ಹಿಂದೆ ಹೋಗುವೆನು’ ಎಂದುಕೊಂಡಿದ್ದಾಳೆ.


ನನ್ನ ಜನರ ಹಿತಕ್ಕಾಗಿ ಶಾರೋನ್‍ಬಯಲು ಮಂದೆಗಳಿಗೆ ಹುಲ್ಲುಗಾವಲಾಗುವುದು; ಆಕೋರಿನ ಕಣಿವೆ ದನಕರುಗಳಿಗೆ ಕೊಟ್ಟಿಗೆಯಾಗುವುದು.


ಅನಂತರ ಅವನು ಹೊರಟು ಕಿರ್ಯತ್ ಸೇಫೆರ್ ಎನ್ನಿಸಿಕೊಳ್ಳುತ್ತಿದ್ದ ದೆಬೀರಿನ ನಿವಾಸಿಗಳೊಡನೆ ಯುದ್ಧಮಾಡಿದನು.


ಇದಾದ ಮೇಲೆ ಯೆಹೋಶುವನು ಎಲ್ಲ ಇಸ್ರಯೇಲರೊಡನೆ ಗಿಲ್ಗಾಲಿನಲ್ಲಿದ್ದ ತನ್ನ ಪಾಳೆಯಕ್ಕೆ ಹಿಂದಿರುಗಿದನು.


ಜೆರಹನ ಮಗನಾದ ಆಕಾನನನ್ನು ಹಿಡಿದು ಬೆಳ್ಳಿ, ನಿಲುವಂಗಿ, ಬಂಗಾರದ ಗಟ್ಟಿಯನ್ನು, ಅವನ ಗಂಡುಹೆಣ್ಣು ಮಕ್ಕಳನ್ನು, ದನ, ಕರು, ಕತ್ತೆ, ಆಡುಕುರಿಗಳನ್ನು ಮತ್ತು ಗುಡಾರವನ್ನು ಆಕೋರ್ ಎಂಬ ಕಣಿವೆಗೆ ಒಯ್ಯಲಾಯಿತು. ಯೆಹೋಶುವನೂ ಇಸ್ರಯೇಲರೆಲ್ಲರೂ ಅಲ್ಲಿಗೆ ಬಂದರು.


ಜನರು ಮೊದಲನೇ ತಿಂಗಳಿನ ಹತ್ತನೆಯ ದಿನ ಜೋರ್ಡನನ್ನು ದಾಟಿ ಜೆರಿಕೋವಿನ ಪೂರ್ವಗಡಿಯಲ್ಲಿರುವ ಗಿಲ್ಗಾಲೆಂಬಲ್ಲಿಗೆ ಬಂದು ತಂಗಿದರು.


ಅದರ ಉತ್ತರ ದಿಕ್ಕಿನ ಎಲ್ಲೆ ಜೋರ್ಡನ್ ನದಿಯು ಲವಣಸಮುದ್ರವನ್ನು ಕೂಡುವ ಸ್ಥಳದಿಂದ ತೊಡಗಿ ಬೇತ್ ಹೊಗ್ಲಾ, ಬೇತ್ ಅರಾಬದ ಉತ್ತರ ಪ್ರಾಂತ್ಯ, ರೂಬೇನನ ಮಗ ಬೋಹನನ ಬಂಡೆ, ಆಕೋರಿನ ಕಣಿವೆ


ಅದು ಅಲ್ಲಿಂದ ಉತ್ತರಕ್ಕೆ ತಿರುಗಿಕೊಂಡು, ಇಳಿಯುತ್ತಾ ಏನ್ ಷೆಮೆಸ್, ಮೀಮಿನ ದಾರಿಯ ಎದುರಿನಲ್ಲಿರುವ ಗೆಲೀಲೊತ್,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು