Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 15:8 - ಕನ್ನಡ ಸತ್ಯವೇದವು C.L. Bible (BSI)

8 ಬೆನ್ ಹಿನ್ನೋಮನ ಕಣಿವೆಗೆ ಹೊಗುತ್ತದೆ. ಅಲ್ಲಿಂದ ಅದು ಜೆರುಸಲೇಮ್ ನಗರವು ಕಟ್ಟಲ್ಪಟ್ಟಿರುವ ಯೆಬೂಸಿಯರ ಬೆಟ್ಟದ ದಕ್ಷಿಣ ಮಾರ್ಗವಾಗಿ ಹಿನ್ನೋಮ್ ಕಣಿವೆಯ ಪಶ್ಚಿಮದಲ್ಲೂ ರೆಫಾಯೀಮ್ ಕಣಿವೆಯ ಉತ್ತರದಲ್ಲೂ ಇರುವ ಬೆಟ್ಟದ ತುದಿಗೆ ಹೋಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಬೆನ್ ಹಿನ್ನೋಮ್ ಕಣಿವೆಗೆ ಹೋಗುತ್ತದೆ. ಅಲ್ಲಿಂದ ಅದು ಯೆರೂಸಲೇಮ್ ಪಟ್ಟಣವು ಕಟ್ಟಲ್ಪಟ್ಟಿರುವ ಯೆಬೂಸಿಯರ ಬೆಟ್ಟದ ದಕ್ಷಿಣ ಮಾರ್ಗವಾಗಿ ಹಿನ್ನೋಮ್ ಕಣಿವೆಯ ಪಶ್ಚಿಮದಲ್ಲಿರುವ ರೆಫಾಯೀಮ್ ಕಣಿವೆಯ ಉತ್ತರದಲ್ಲಿರುವ ಬೆಟ್ಟದ ತುದಿಗೆ ಹೋಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಅಲ್ಲಿಂದ ಅದು ಯೆರೂಸಲೇಮ್ ಪಟ್ಟಣವು ಕಟ್ಟಲ್ಪಟ್ಟಿರುವ ಯೆಬೂಸಿಯರ ಬೆಟ್ಟದ ದಕ್ಷಿಣಮಾರ್ಗವಾಗಿ ಹಿನ್ನೋಮ್ ತಗ್ಗಿನ ಪಶ್ಚಿಮದಲ್ಲಿಯೂ ರೆಫಾಯೀಮ್ ತಗ್ಗಿನ ಉತ್ತರದಲ್ಲಿಯೂ ಇರುವ ಬೆಟ್ಟದ ತುದಿಗೆ ಹೋಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಆ ಸೀಮೆಯು ಜೆರುಸಲೇಮ್ ಎಂದು ಕರೆಯಲ್ಪಟುವ ಯೆಬೂಸಿಯ ನಗರದ ದಕ್ಷಿಣ ಮಾರ್ಗವಾಗಿ ಬೆನ್‌ಹಿನ್ನೋಮ್ ಕಣಿವೆಗೆ ಹೋಗುತ್ತದೆ. ಆ ಸ್ಧಳದಲ್ಲಿ ಸೀಮೆಯು ಹಿನ್ನೋಮ್ ಕಣಿವೆಯ ಪಶ್ಚಿಮದಿಕ್ಕಿನ ಬೆಟ್ಟದ ತುದಿಗೆ ಹೋಗುತ್ತದೆ. ಇದು ರೆಫಾಯೀಮ್ ಕಣಿವೆಯ ಉತ್ತರದ ಕೊನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಅಲ್ಲಿಂದ ಯೆಬೂಸಿಯರು ವಾಸವಾಗಿರುವ ಯೆರೂಸಲೇಮಿಗೆ ದಕ್ಷಿಣಮಾರ್ಗವಾಗಿ ಹಿನ್ನೋಮ್ ತಗ್ಗನ್ನು ದಾಟಿ, ಉತ್ತರಕ್ಕಿರುವ ರೆಫಾಯಿಮ್ ತಗ್ಗಿನ ಕಡೆಯಲ್ಲಿ ಪಶ್ಚಿಮಕ್ಕೆ ಬೆನ್ ಹಿನ್ನೋಮನ ತಗ್ಗಿನ ಮುಂದಿರುವ ಬೆಟ್ಟದ ಶಿಖರದವರೆಗೂ ಹೋಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 15:8
17 ತಿಳಿವುಗಳ ಹೋಲಿಕೆ  

ನೆಫ್ತೋಹ ಬುಗ್ಗೆಯ ಮೇಲೆ ಬೆನ್ ಹಿನ್ನೋಮ್ ಕಣಿವೆಯ ಉತ್ತರದಲ್ಲೂ ಇರುವ ಬೆಟ್ಟದ ಅಂಚಿಗೆ ಹೋಗಿ ಅಲ್ಲಿಂದ ಯೆಬೂಸಿಯರ ಬೆಟ್ಟದ ದಕ್ಷಿಣದಲ್ಲಿದ್ದ ಬೆನ್ ಹಿನ್ನೋಮ್ ಕಣಿವೆಯ ಮಾರ್ಗವಾಗಿ ಏನ್ ರೋಗೆಲಿಗೆ ಬರುತ್ತದೆ.


ಜೆರುಸಲೇಮಿನಲ್ಲಿ ವಾಸವಾಗಿದ್ದ ಯೆಬೂಸಿಯರನ್ನು ಹೊರಡಿಸಲು ಯೆಹೂದ ಕುಲದವರಿಂದ ಆಗದೆ ಹೋಯಿತು. ಆದುದರಿಂದ ಅವರು ಇಂದಿನವರೆಗೂ ಯೆಹೂದ ಕುಲದವರೊಡನೆ ಜೆರುಸಲೇಮಿನಲ್ಲೇ ವಾಸವಾಗಿದ್ದಾರೆ.


ಆದರೆ ಆ ಮನುಷ್ಯ ಒಪ್ಪದೆ ತನ್ನ ಎರಡು ಕತ್ತೆಗಳಿಗೆ ತಡಿಹಾಕಿಸಿ ಉಪಪತ್ನಿಯನ್ನು ಕರೆದುಕೊಂಡು ಹೊರಟನು.


ಎಲೆಫ್, ಯೆಬೂಸಿಯರು ಇದ್ದಂಥ ಜೆರೂಸಲೇಮ್, ಗಿಬೆಯತ್, ಕಿರ್ಯತ್ ಎಂಬ ಹದಿನಾಲ್ಕು ನಗರಗಳೂ ಮತ್ತು ಅವುಗಳಿಗೆ ಸೇರಿದ ಗ್ರಾಮಗಳು. ಬೆನ್ಯಾಮೀನ್ ಗೋತ್ರಗಳಿಗೆ ದೊರಕಿದ ಆಸ್ತಿಪಾಸ್ತಿ ಇವೇ.


ತಮ್ಮ ಗಂಡುಹೆಣ್ಣುಮಕ್ಕಳನ್ನು ಯಾರೂ ಮೋಲೆಕನಿಗಾಗಿ ಬಲಿಯಗ್ನಿಪರೀಕ್ಷೆಗೆ ಈಡುಮಾಡದಂತೆ ಬೆನ್ಹಿನ್ನೋಮ್ ಕಣಿವೆಯಲ್ಲಿದ್ದ ತೋಫೆತ್ ಎಂಬ ಸ್ಥಳವನ್ನು ಹೊಲೆಮಾಡಿದನು.


ಜೆರುಸಲೇಮಿನಲ್ಲಿದ್ದ ಯೆಬೂಸಿಯರನ್ನು ಹೊರಡಿಸಲು ಬೆನ್ಯಾಮೀನ್ಯರಿಂದ ಆಗದೆಹೋಯಿತು. ಅವರು ಇಂದಿನವರೆಗೂ, ಬೆನ್ಯಾಮೀನ್ಯರ ಸಂಗಡ ಜೆರುಸಲೇಮಿನಲ್ಲೇ ವಾಸವಾಗಿ ಇದ್ದಾರೆ.


ಯೆರೆಮೀಯನು ಸರ್ವೇಶ್ವರ ಸ್ವಾಮಿಯ ಅಪ್ಪಣೆಯಂತೆ ತೋಫೆತಿನಲ್ಲಿ ಪ್ರವಾದಿಸಿದ ಬಳಿಕ ಅಲ್ಲಿಂದ ಬಂದು ಸರ್ವೇಶ್ವರನ ಆಲಯದ ಪ್ರಾಕಾರದಲ್ಲಿ ನಿಂತುಕೊಂಡು:


ಆದಕಾರಣ ಈ ಸ್ಥಳಕ್ಕೆ ತೋಫೆತ್ ಮತ್ತು ಬೆನ್‍ಹಿನ್ನೋಮಿನ ಕಣಿವೆ ಎಂಬ ಹೆಸರುಗಳು ಹೋಗಿ, ‘ಕೊಲೆಯ ಕಣಿವೆ’ ಎಂದು ಹೆಸರಿಸಲಾಗುವ ಕಾಲ ಬರುವುದು.


ಬೋಕಿಯ ಬಾಗಿಲಿನ ಸಮೀಪದಲ್ಲಿರುವ ‘ಬೆನ್‍ಹಿನ್ನೋಮ್’ ಕಣಿವೆಗೆ ಹೋಗು. ನಾನು ನಿನಗೆ ತಿಳಿಸುವ ಈ ಸಂದೇಶವನ್ನು ಅಲ್ಲಿ ಸಾರು -


ಅದು ಕೊಯ್ದ ಹೊಲದಂತಿರುವುದು, ತೆನೆಕತ್ತರಿಸಿದ ಹುಲ್ಲಿನಂತಿರುವುದು. ಕೂಳೆಯನ್ನೂ ಬಿಡದೆ ಆಯ್ದುಕೊಂಡ ರೆಫಾಯಿಮ್ ಕಣಿವೆಯಂತೆ ಇರುವುದು.


ಅವನು ಬೆನ್‍ಹಿನ್ನೋಮ್ ಎಂಬ ಕಣಿವೆಯಲ್ಲಿ ಧೂಪ ಹಾಕಿಸಿದ್ದಲ್ಲದೆ ಸರ್ವೇಶ್ವರಸ್ವಾಮಿ ಇಸ್ರಯೇಲರ ನಾಡಿನಿಂದ ಓಡಿಸಿಬಿಟ್ಟ ಜನಾಂಗಗಳ ಅಸಹ್ಯಕಾರ್ಯಗಳನ್ನು ಅನುಸರಿಸಿ ತನ್ನ ಮಕ್ಕಳನ್ನು ಬಲಿಯಗ್ನಿ ಪರೀಕ್ಷೆಗೆ ಗುರಿಪಡಿಸಿದ್ದನು.


ಫಿಲಿಷ್ಟಿಯರು ಇನ್ನೊಮ್ಮೆ ಹೊರಟುಬಂದು ರೆಫಾಯೀಮ್ ತಗ್ಗಿನಲ್ಲಿ ಇಳಿದುಕೊಂಡರು.


ಫಿಲಿಷ್ಟಿಯರು ನಾಡಿನೊಳಗೆ ನುಗ್ಗಿ ರೆಫಾಯಿಮ್ ತಗ್ಗಿಗೆ ಬಂದು ಪಾಳೆಯ ಮಾಡಿಕೊಂಡರು.


ಯೆಹೂದ ಕುಲದವರು ಜೆರುಸಲೇಮಿನೊಡನೆ ಯುದ್ಧಮಾಡಿದರು. ಆ ಜನರನ್ನು ಕತ್ತಿಗೆ ತುತ್ತಾಗಿಸಿ ಅವರ ಪಟ್ಟಣವನ್ನು ಸುಟ್ಟುಹಾಕಿದರು.


ಆ ಕಾಲದಲ್ಲಿ ಜೆರುಸಲೇಮ್ ಪಟ್ಟಣವನ್ನು ‘ಯೆಬೂಸ’ ಎಂದು ಕರೆಯಲಾಗುತ್ತಿತ್ತು. ಅಲ್ಲಿಯ ಮೂಲನಿವಾಸಿಗಳಾದ ಯೆಬೂಸಿಯರು ಆ ಪ್ರದೇಶದಲ್ಲಿ ಇನ್ನೂ ವಾಸಿಸುತ್ತಿದ್ದರು. ಅರಸ ದಾವೀದನೂ ಎಲ್ಲಾ ಇಸ್ರಯೇಲರೂ ಜೆರುಸಲೇಮ್ ಪಟ್ಟಣಕ್ಕೆ ಮುತ್ತಿಗೆ ಹಾಕಿದರು.


ಯರ್ಮೂತ್ ಇವುಗಳೂ ಇವುಗಳ ಗ್ರಾಮಗಳೂ, ಲಾಕೀಷ್ ಊರೂ ಇದರ ಪ್ರಾಂತ್ಯಗಳೂ, ಅಜೇಕವೂ ಅದರ ಗ್ರಾಮಗಳೂ; ಇವು ಯೆಹೂದ ಕುಲದವರ ನಿವಾಸಸ್ಥಾನಗಳು. ಅವರು ಬೇರ್ಷೆಬದಿಂದ ಹಿನ್ನೋಮ್ ಕಣಿವೆಯವರೆಗೂ ವಾಸಿಸುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು