ಯೆಹೋಶುವ 17:1 - ಕನ್ನಡ ಸತ್ಯವೇದವು C.L. Bible (BSI)1 ಜೋಸೆಫನ ಚೊಚ್ಚಲ ಮಗ ಮನಸ್ಸೆಯ ವಂಶದವರಿಗೆ ದೊರಕಿದ ಸೊತ್ತಿನ ವಿವರ ಇದು: ಮನಸ್ಸೆಯ ಹಿರಿಯ ಮಗನೂ ಗಿಲ್ಯಾದನ ತಂದೆಯೂ ಆದ ಮಾಕೀರನು ಯುದ್ಧವೀರನು. ಆದ್ದರಿಂದ ಅವನಿಗೆ ಗಿಲ್ಯಾದ, ಬಾಷಾನ ಎಂಬ ಪ್ರಾಂತ್ಯಗಳು ಸಿಕ್ಕಿದವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಯೋಸೇಫನ ಚೊಚ್ಚಲ ಮಗನಾದ ಮನಸ್ಸೆಯ ವಂಶದವರಿಗೆ ಸಿಕ್ಕಿದ ಸ್ವತ್ತಿನ ವಿವರ: ಮನಸ್ಸೆಯ ಹಿರಿಯ ಮಗನೂ ಗಿಲ್ಯಾದನ ತಂದೆಯೂ ಆಗಿರುವ ಮಾಕೀರನು ಯುದ್ಧವೀರನಾಗಿದ್ದನು. ಆದ್ದರಿಂದ ಅವನಿಗೆ ಗಿಲ್ಯಾದ್, ಬಾಷಾನ್ ಎಂಬ ಪ್ರಾಂತ್ಯಗಳು ಸಿಕ್ಕಿದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಯೋಸೇಫನ ಚೊಚ್ಚಲಮಗನಾದ ಮನಸ್ಸೆಯ ವಂಶದವರಿಗೆ ಸಿಕ್ಕಿದ ಸ್ವಾಸ್ತ್ಯದ ವಿವರ. ಮನಸ್ಸೆಯ ಹಿರೀಮಗನೂ ಗಿಲ್ಯಾದನ ತಂದೆಯೂ ಆಗಿರುವ ಮಾಕೀರನು ಯುದ್ಧವೀರನಾದದರಿಂದ ಅವನಿಗೆ ಗಿಲ್ಯಾದ್, ಬಾಷಾನ್ ಎಂಬ ಪ್ರಾಂತಗಳು ಸಿಕ್ಕಿದವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಆಮೇಲೆ ಮನಸ್ಸೆ ಕುಲದವರಿಗೆ ಭೂಮಿಯನ್ನು ಕೊಡಲಾಯಿತು. ಮನಸ್ಸೆಯು ಯೋಸೇಫನ ಚೊಚ್ಚಲ ಮಗನು. ಗಿಲ್ಯಾದನ ತಂದೆಯಾದ ಮಾಕೀರನು ಮನಸ್ಸೆಯ ಚೊಚ್ಚಲ ಮಗನು. ಮಾಕೀರನು ವೀರ ಸೈನಿಕನಾಗಿದ್ದನು. ಈ ಕಾರಣದಿಂದ ಗಿಲ್ಯಾದ್ ಮತ್ತು ಬಾಷಾನ್ ಕ್ಷೇತ್ರಗಳನ್ನು ಮಾಕೀರ ಮನೆತನದವರಿಗೆ ಕೊಡಲಾಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಇದಲ್ಲದೆ ಮನಸ್ಸೆಯ ಗೋತ್ರಕ್ಕೂ ಭಾಗ ದೊರೆಯಿತು. ಏಕೆಂದರೆ ಅವನು ಯೋಸೇಫನಿಗೆ ಚೊಚ್ಚಲ ಮಗನಾಗಿದ್ದನು. ಮನಸ್ಸೆಯ ಹಿರಿಯ ಮಗ ಗಿಲ್ಯಾದನ ತಂದೆಯಾದ ಮಾಕೀರನು ಶೂರನಾದುದರಿಂದ ಗಿಲ್ಯಾದ್, ಬಾಷಾನ್ ಎಂಬ ಪ್ರಾಂತ್ಯಗಳು ಅವನ ಪಾಲಿಗೆ ಬಂದವು. ಅಧ್ಯಾಯವನ್ನು ನೋಡಿ |