Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 17:16 - ಕನ್ನಡ ಸತ್ಯವೇದವು C.L. Bible (BSI)

16 ಅವರು ಮತ್ತೆ ಯೆಹೋಶುವನಿಗೆ , “ನಮ್ಮ ಮಲೆನಾಡು ನಮಗೆ ಸಾಲುವುದಿಲ್ಲ. ಬೇತ್ ಷೆಯಾನ್ ಮತ್ತು ಅದಕ್ಕೆ ಸೇರಿದ ಊರುಗಳಿರುವ ಕಣಿವೆಯಲ್ಲೂ ಹಾಗೂ ಇಜ್ರೇಲಿನ ಕಣಿವೆಯಲ್ಲೂ ವಾಸಮಾಡುವ ಕಾನಾನ್ಯರೆಲ್ಲರು ಕಬ್ಬಿಣದ ರಥವುಳ್ಳವರು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಅವರು ತಿರುಗಿ ಯೆಹೋಶುವನಿಗೆ, “ನಮ್ಮ ಪರ್ವತ ಪ್ರದೇಶವು ನಮಗೆ ಸಾಲುವುದಿಲ್ಲ. ಬೇತಷೆಯಾನ್ ಮತ್ತು ಅದಕ್ಕೆ ಸೇರಿದ ಊರುಗಳಿರುವ ಕಣಿವೆಯಲ್ಲೂ ಹಾಗೂ ಇಜ್ರೇಲಿನ ಕಣಿವೆಯಲ್ಲೂ ವಾಸಮಾಡುವ ಕಾನಾನ್ಯರೆಲ್ಲರೂ ಕಬ್ಬಿಣದ ರಥವುಳ್ಳವರು” ಎಂದರು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಅವರು ತಿರಿಗಿ ಯೆಹೋಶುವನಿಗೆ - ನಮ್ಮ ಪರ್ವತಪ್ರದೇಶವು ನಮಗೆ ಸಾಲುವದಿಲ್ಲ; ಬೇತ್‍ಷೆಯಾನ್ ಮತ್ತು ಅದಕ್ಕೆ ಸೇರಿದ ಊರುಗಳಿರುವ ತಗ್ಗಿನಲ್ಲಿಯೂ ಇಜ್ರೇಲಿನ ತಗ್ಗಿನಲ್ಲಿಯೂ ವಾಸಿಸುವ ಕಾನಾನ್ಯರೆಲ್ಲರಿಗೆ ಕಬ್ಬಿಣದ ರಥಗಳಿವೆ ಅನ್ನಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಯೋಸೇಫನ ಜನರು, “ಎಫ್ರಾಯೀಮ್ ಬೆಟ್ಟಪ್ರದೇಶವು ನಮಗೆ ಸಾಕಾಗುವುದಿಲ್ಲ ಎಂಬುದೇನೋ ನಿಜ. ಆದರೆ ಅಲ್ಲಿ ವಾಸಮಾಡುವ ಕಾನಾನ್ಯರಲ್ಲಿ ಬಲವಾದ ಆಯುಧಗಳಿವೆ; ಕಬ್ಬಿಣದ ರಥಗಳಿವೆ. ಇಜ್ರೇಲ್, ಬೇತ್‌ಷೆಯಾನ್ ಕಣಿವೆಗಳು ಮತ್ತು ಆ ಕ್ಷೇತ್ರದ ಎಲ್ಲ ಸಣ್ಣ ಹಳ್ಳಿಗಳು ಅವರ ಅಧೀನದಲ್ಲಿವೆ” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಅದಕ್ಕೆ ಯೋಸೇಫನ ಸಂತತಿಯರು, “ಆ ಪರ್ವತವು ನಮಗೆ ಸಾಲದು. ಇದಲ್ಲದೆ ತಗ್ಗಿನ ಸೀಮೆಯಲ್ಲಿರುವ ಬೇತ್ ಷೆಯಾನ್‌ನಲ್ಲಿಯೂ ಇಜ್ರೆಯೇಲ್ ಕಣಿವೆಯಲ್ಲಿಯೂ ವಾಸಿಸಿರುವ ಸಮಸ್ತ ಕಾನಾನ್ಯರ ಬಳಿಯಲ್ಲಿ ಕಬ್ಬಿಣದ ರಥಗಳು ಇವೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 17:16
20 ತಿಳಿವುಗಳ ಹೋಲಿಕೆ  

ಬಿನ್ ಅಬೀನಾದಾಬ್ - ನಾಪೋತ್ ದೋರ್ (ಇವನು ಸೊಲೊಮೋನನ ಮಗಳು ಟಾಫತಳನ್ನು ವಿವಾಹವಾಗಿದ್ದನು);


ಒಂಬೈನೂರು ಕಬ್ಬಿಣದ ರಥಗಳನ್ನು ಪಡೆದಿದ್ದ ಇವನು ಇಸ್ರಯೇಲರನ್ನು ಇಪ್ಪತ್ತು ವರ್ಷಕಾಲ ದಬ್ಬಾಳಿಕೆಗೆ ಈಡುಪಡಿಸಿದನು. ಆಗ ಅವರು ಸರ್ವೇಶ್ವರನಿಗೆ ಮೊರೆಯಿಟ್ಟರು.


ಸರ್ವೇಶ್ವರ ಯೆಹೂದಕುಲದವರ ಸಂಗಡ ಇದ್ದುದರಿಂದ ಅವರು ಪರ್ವತ ಪ್ರದೇಶಗಳನ್ನೆಲ್ಲಾ ಸ್ವತಂತ್ರಿಸಿಕೊಂಡರು. ಆದರೆ ತಗ್ಗಿನ ಪ್ರದೇಶಗಳಲ್ಲಿ ವಾಸಿಸುವವರಿಗೆ ಕಬ್ಬಿಣ ರಥಗಳಿದ್ದುದರಿಂದ ಅವರನ್ನು ಹೊರಗಟ್ಟಲು ಆಗಲಿಲ್ಲ.


ಇಷ್ಟರಲ್ಲಿ ಮಿದ್ಯಾನ್ಯರೂ ಅಮಾಲೇಕ್ಯರೂ ಮೂಡಣದೇಶದವರೂ ಕೂಡಿ ಹೊಳೆದಾಟಿ ಬಂದು ಇಜ್ರೇಲಿನ ತಗ್ಗಿನಲ್ಲಿ ಪಾಳೆಯಮಾಡಿಕೊಂಡರು.


ಆಮೇಲೆ ನಾಡನ್ನು ನಿಮಗೆ ಕೊಟ್ಟಿರುತ್ತೇನೆ. ಅದರಲ್ಲಿ ಕಾಡುಗಳಿದ್ದರೂ ನೀವು ಅವುಗಳನ್ನು ಕಡಿದು ಹಾಕಬಹುದು. ಅದಕ್ಕೆ ಸೇರಿರುವ ಬಯಲುಭೂಮಿ ನಿಮ್ಮದೇ. ಕಾನಾನ್ಯರು ಬಲಿಷ್ಠರು ಹಾಗೂ ಕಬ್ಬಿಣದ ರಥಗಳುಳ್ಳವರು. ಆದರೂ ನೀವು ಅವರನ್ನು ಹೊರದೂಡಬಲ್ಲಿರಿ,” ಎಂದು ಉತ್ತರ ಕೊಟ್ಟನು.


ಆಕೆಯ ಶವ ಆ ಹೊಲಕ್ಕೆ ಗೊಬ್ಬರವಾಗುವುದು; ಇದು ಈಜೆಬೆಲಳ ಶವವೆಂದು ಯಾರಿಗೂ ಗುರುತು ಸಿಕ್ಕದ ಹಾಗಾಗುವುದು’ ಎಂಬುದಾಗಿ ತಿಷ್ಬೀಯನೂ ತಮ್ಮ ದಾಸನೂ ಆದ ಎಲೀಯನ ಮುಖಾಂತರ ಸರ್ವೇಶ್ವರ ಹೇಳಿಸಿದ ಮಾತು ಈಗ ನೆರವೇರಿತು,” ಎಂದನು.


ಈಜೆಬೆಲಳ ಶವವು ಸಮಾಧಿಯನ್ನು ಸೇರುವುದಿಲ್ಲ; ನಾಯಿಗಳು ಅದನ್ನು ಜೆಸ್ರೀಲಿನ ಹೊಲದಲ್ಲಿ ತಿಂದುಬಿಡುವುವು;’ ಎನ್ನುತ್ತಾರೆ,” ಎಂದು ಹೇಳಿ ಬಾಗಿಲು ತೆರೆದು ಓಡಿಹೋದನು.


ಇದಲ್ಲದೆ ಈಜೆಬೆಲಳನ್ನು ಕುರಿತು ಅವರು, ‘ನಾಯಿಗಳು ಜೆಸ್ರೀಲ್ ಪಟ್ಟಣದ ಗೋಡೆಯ ಬಳಿಯಲ್ಲಿ ಆಕೆಯ ಶವವನ್ನು ತಿನ್ನುವುವು;


ಅನಂತರ ಸಂಭವಿಸಿದ ಘಟನೆಗಳು ಇವು; ಜೆಸ್ರೀಲಿನಲ್ಲಿ, ಸಮಾರಿಯದ ಅರಸ ಅಹಾಬನ ಅರಮನೆಯ ಹತ್ತಿರ ಜೆಸ್ರೀಲಿನವನಾದ ನಾಬೋತನೆಂಬ ವ್ಯಕ್ತಿಗೆ ಒಂದು ದ್ರಾಕ್ಷೀತೋಟವಿತ್ತು.


ಸರ್ವೇಶ್ವರನ ಹಸ್ತ ಎಲೀಯನ ಸಂಗಡ ಇದ್ದುದರಿಂದ ಅವನು ನಡುಕಟ್ಟಿಕೊಂಡು ಅಹಾಬನ ಮುಂದೆ ಓಡುತ್ತಾ ಜೆಸ್ರೀಲನ್ನು ಸೇರಿದನು.


ಅವನು ತನ್ನ ಒಂಬೈನೂರು ಕಬ್ಬಿಣದ ರಥಗಳನ್ನೂ ಎಲ್ಲಾ ಸೈನ್ಯವನ್ನೂ ತೆಗೆದುಕೊಂಡು ಮ್ಲೇಚ್ಛರ ಹರೋಷೆತಿನಿಂದ ಕೀಷೋನ್ ಹಳ್ಳಕ್ಕೆ ಬಂದನು.


ಇಜ್ರೇಲ್, ಕೆಸುಲ್ಲೋತ್,


ಇದಲ್ಲದೆ ಮನಸ್ಸೆಯವರಿಗೆ ಇಸ್ಸಾಕಾರ್, ಆಶೇರ್ ಎಂಬವರ ಪ್ರಾಂತ್ಯಗಳಲ್ಲಿ ಬೇತ್ ಷೆಯಾನ್, ಇಬ್ಲೆಯಾಮ್, ದೋರ್ ಎಂಬ ನಗರಗಳೂ ಅವುಗಳ ಗ್ರಾಮಗಳೂ ದುರ್ಗತ್ರಯವಾದ ಎಂದೋರ್, ತಾನಕ್, ಮೆಗಿದ್ದೋ ಎಂಬ ನಗರಗಳೂ ಅವುಗಳಿಗೆ ಸೇರಿದ ಊರುಗಳೂ ಸಿಕ್ಕಿದವು.


ಅದಕ್ಕೆ ಯೆಹೋಶುವನು, “ಮಹಾಜನಾಂಗವಾದ ನಿಮಗೆ ಎಫ್ರಯಿಮ್ ಮಲೆನಾಡು ಸಾಲದಿದ್ದರೆ ಪೆರಿಜ್ಜೀಯರ ಮತ್ತು ರೆಫಾಯರ ನಾಡುಗಳಿಗೆ ಹೋಗಿ ಅಲ್ಲಿನ ಕಾಡು ಕಡಿದು ಸ್ಥಳ ಮಾಡಿಕೊಳ್ಳಿ,” ಎಂದನು.


ಯೆಹೋಶುವನು ಜೋಸೆಫ್ಯರಾದ ಎಫ್ರಯಿಮ್ - ಮನಸ್ಸೆಕುಲದ ಆ ಜನರಿಗೆ, “ನೀವು ಮಹಾಜನಾಂಗ ಹಾಗೂ ಶಕ್ತಿಶಾಲಿಗಳೆಂಬುದೇನೋ ನಿಜ. ನೀವು ಒಂದು ಪಾಲಿಗಿಂತ ಹೆಚ್ಚು ತೆಗೆದುಕೊಳ್ಳಬಹುದಾಗಿದೆ.


ತುಸು ಹೊತ್ತಿನಲ್ಲಿಯೇ ಆಕಾಶವು ಕಾರ್ಮೋಡಗಾಳಿಗಳಿಂದ ತುಂಬಿ ದೊಡ್ಡ ಮಳೆ ಪ್ರಾರಂಭವಾಯಿತು. ಅಹಾಬನು ರಥದಲ್ಲಿ ಕುಳಿತುಕೊಂಡು ಜೆಸ್ರೀಲಿಗೆ ಹೋದನು.


ಆದುದರಿಂದ ಇಗೋ ಕೇಳಿ: ನನ್ನ ಅಪ್ಪಣೆಯ ಮೇರೆಗೆ ಶತ್ರುಗಳು ರಬ್ಬಾ ಎಂಬ ಅಮ್ಮೋನ್ಯರ ನಗರದ ಮೇಲೆ ಬಿದ್ದು ಯುದ್ಧ ಘೋಷಣೆ ಮಾಡುವ ದಿನಗಳು ಬರುವುವು. ಆ ನಗರ ಹಾಳುದಿಬ್ಬವಾಗುವುದು. ಅದಕ್ಕೆ ಸೇರಿದ ಗ್ರಾಮಗಳು ಬೆಂಕಿಯಿಂದ ಸುಟ್ಟುಹೋಗುವುವು. ಆಗ ಇಸ್ರಯೇಲ್ ತನ್ನನ್ನು ವಶಮಾಡಿಕೊಂಡವರನ್ನು ತಾನು ವಶಮಾಡಿಕೊಳ್ಳುವುದು. ಇದು ಸರ್ವೇಶ್ವರನಾದ ನನ್ನ ನುಡಿ.


ಇಜ್ರೇಲ್, ಯೊಗ್ದೆಯಾಮ್, ಜನೋಹ, ಕಯಿನ್, ಗಿಬೆಯಾ, ತಿಮ್ನಾ ಎಂಬ ಹತ್ತು ನಗರಗಳು ಮತ್ತು ಅವುಗಳ ಗ್ರಾಮಗಳು.


ಫಿಲಿಷ್ಟಿಯರು ತಮ್ಮ ಸೈನ್ಯವನ್ನು ಕೂಡಿಸಿಕೊಂಡು ಬಂದು ಅಫೇಕಿನಲ್ಲಿ ಪಾಳೆಯಮಾಡಿಕೊಂಡರು. ಇಸ್ರಯೇಲರು ಜೆಸ್ರೀಲ್ ಬೈಲಿನಲ್ಲಿರುವ ಬುಗ್ಗೆಯ ಬಳಿಯಲ್ಲಿ ಇಳಿದುಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು