Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 18:4 - ಕನ್ನಡ ಸತ್ಯವೇದವು C.L. Bible (BSI)

4 ಪ್ರತಿಯೊಂದು ಕುಲದಿಂದ ಮೂರುಮೂರು ಮಂದಿಯನ್ನು ನೇಮಿಸಿರಿ. ನಾನು ಅವರನ್ನು ಕಳುಹಿಸುವೆನು. ಅವರು ಹೋಗಿ ನಾಡಿನಲ್ಲೆಲ್ಲಾ ಸಂಚಾರಮಾಡಿ ತಮ್ಮ ತಮ್ಮ ಕುಲಗಳಿಗನುಸಾರ ಎಲ್ಲಾ ಪ್ರದೇಶಗಳ ಪಟ್ಟಿಯನ್ನು ಬರೆದುಕೊಂಡು ನನ್ನ ಬಳಿಗೆ ಬರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಪ್ರತಿಯೊಂದು ಕುಲದಿಂದ ಮೂರು ಮೂರು ಜನರನ್ನು ನೇಮಿಸಿರಿ. ನಾನು ಅವರನ್ನು ಕಳುಹಿಸುವೆನು. ಅವರು ಹೋಗಿ ದೇಶದಲ್ಲೆಲ್ಲಾ ಸಂಚರಿಸಿ ತಮ್ಮ ತಮ್ಮ ಕುಲಗಳಿಗನುಸಾರವಾಗಿ ಎಲ್ಲಾ ಪ್ರದೇಶಗಳ ಪಟ್ಟಿಯನ್ನು ಬರೆದುಕೊಂಡು ನನ್ನ ಬಳಿಗೆ ಬರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಪ್ರತಿಯೊಂದು ಕುಲದಿಂದ ಮೂರು ಮೂರು ಜನರನ್ನು ನೇವಿುಸಿರಿ; ನಾನು ಅವರನ್ನು ಕಳುಹಿಸುವೆನು. ಅವರು ಹೋಗಿ ದೇಶದಲ್ಲೆಲ್ಲಾ ಸಂಚರಿಸಿ ತಮ್ಮ ತಮ್ಮ ಕುಲಗಳಿಗನುಸಾರವಾಗಿ ಎಲ್ಲಾ ಪ್ರದೇಶಗಳ ಪಟ್ಟಿಯನ್ನು ಬರೆದುಕೊಂಡು ನನ್ನ ಬಳಿಗೆ ಬರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಆದ್ದರಿಂದ ಪ್ರತಿಯೊಂದು ಕುಲದಿಂದ ಮೂರು ಮೂರು ಜನರನ್ನು ಆರಿಸಬೇಕು. ಭೂಮಿಯನ್ನು ಪರಿಶೀಲಿಸಲು ನಾನು ಅವರನ್ನು ಕಳುಹಿಸುತ್ತೇನೆ. ಅವರು ಭೂಮಿಯನ್ನು ಸೂಕ್ಷ್ಮವಾಗಿ ಪರಿಶೀಲಿಸಿ ಅದರ ನಕ್ಷೆಯನ್ನು ಮಾಡಿ ನನ್ನ ಬಳಿಗೆ ತೆಗೆದುಕೊಂಡು ಬರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಒಂದೊಂದು ಗೋತ್ರಕ್ಕೆ ಮೂರು ಮಂದಿಯ ಪ್ರಕಾರ ನಿಮ್ಮೊಳಗಿಂದ ಕರೆದುಕೊಂಡು ಬನ್ನಿರಿ. ನಾನು ಅವರನ್ನು ಕಳುಹಿಸುವೆನು. ಅವರು ಎದ್ದು ದೇಶದಲ್ಲೆಲ್ಲಾ ಹೋಗಿ ತಮ್ಮ ಬಾಧ್ಯತೆಗಳ ಪ್ರಕಾರ ಅದನ್ನು ಅಳತೆಮಾಡಿ ವಿವರವಾಗಿ ಬರೆಯಲಿ. ತರುವಾಯ ನನ್ನ ಬಳಿಗೆ ಅವರು ಬರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 18:4
9 ತಿಳಿವುಗಳ ಹೋಲಿಕೆ  

ಆ ಜನರು ಹೊರಟು ನಾಡಿನಲ್ಲೆಲ್ಲಾ ಸಂಚರಿಸಿ ಒಂದು ಪುಸ್ತಕದಲ್ಲಿ ಗ್ರಾಮ-ನಗರಗಳನ್ನೆಲ್ಲಾ ಬರೆದು ಏಳು ಭಾಗಗಳನ್ನಾಗಿ ಮಾಡಿ ಶೀಲೋವಿನಲ್ಲಿದ್ದ ಯೆಹೋಶುವನ ಪಾಳೆಯಕ್ಕೆ ಹಿಂದಿರುಗಿ ಬಂದರು.


ನೀವು ನಾಡನ್ನು ಏಳು ಪಾಲಾಗಿ ವಿಂಗಡಿಸಿ ನನ್ನ ಬಳಿಗೆ ಬರಬೇಕು. ನಾನು ನಮ್ಮ ದೇವರಾದ ಸರ್ವೇಶ್ವರನ ಸನ್ನಿಧಿಯಲ್ಲಿ ನಿಮಗೋಸ್ಕರ ಚೀಟು ಹಾಕುತ್ತೇನೆ.


ಆದುದರಿಂದ ಯೆಹೋಶುವ ಅವರಿಗೆ, “ನಿಮ್ಮ ಪೂರ್ವಜರ ದೇವರಾದ ಸರ್ವೇಶ್ವರ ನಿಮಗೆ ಕೊಟ್ಟ ನಾಡನ್ನು ಸ್ವಾಧೀನ ಮಾಡಿಕೊಳ್ಳಲು ಇನ್ನೆಷ್ಟು ತಡ ಮಾಡುತ್ತಿರುವಿರಿ?


“ಜನರಲ್ಲಿ ಕುಲಕ್ಕೆ ಒಬ್ಬನಂತೆ ಹನ್ನೆರಡು ಮಂದಿಯನ್ನು ಆರಿಸಿಕೊ.


ಆಗ ನೀವು ಇಸ್ರಯೇಲ್ ಕುಲಗಳಿಂದ ಕುಲಕ್ಕೆ ಒಬ್ಬನಂತೆ ಹನ್ನೆರಡು ಮಂದಿಯನ್ನು ಆರಿಸಿಕೊಳ್ಳಬೇಕು.


“ನಾನು ಇಸ್ರಯೇಲರಿಗೆ ಕೊಡಲಿರುವ ಕಾನಾನ್ ನಾಡನ್ನು ಸಂಚರಿಸಿ ನೋಡಿಬರಲು ಒಂದೊಂದು ಕುಲದಿಂದ ಒಬ್ಬೊಬ್ಬ ಮುಖ್ಯಸ್ಥನನ್ನು ಕಳಿಸು,” ಎಂದು ಆಜ್ಞಾಪಿಸಿದರು.


ಈ ಕೆಲಸಕ್ಕಾಗಿ ಒಂದೊಂದು ಕುಲದಿಂದ ಆಯಾ ಕುಲದ ಮುಖ್ಯಸ್ಥನನ್ನು ಸಹಾಯಕನನ್ನಾಗಿ ತೆಗೆದುಕೊಳ್ಳಿ;


ತರುವಾಯ ಅವರು ಏಳು ಪಾಲುಗಳನ್ನು ಮಾಡಿ ತಮ್ಮ ತಮ್ಮೊಳಗೆ ಹಂಚಿಕೊಳ್ಳಲಿ. ದಕ್ಷಿಣದಲ್ಲಿ ಯೆಹೂದ ಕುಲದವರಿಗೆ ಉತ್ತರದಲ್ಲಿ ಜೋಸೆಫನ ಕುಲದವರಿಗೆ ಸೊತ್ತು ಸಿಕ್ಕಿದೆ. ಅದು ಅವರಿಗೇ ಇರಲಿ.


ಹೀಗಿರಲು ನೂಲೆಳೆದು ಭೂಮಿಯನ್ನು ಹಂಚಿಕೊಡಲು ಸ್ವಾಮಿಯ ಸಭೆಯಲ್ಲಿ ಯಾರೂ ಇರುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು