Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 18:6 - ಕನ್ನಡ ಸತ್ಯವೇದವು C.L. Bible (BSI)

6 ನೀವು ನಾಡನ್ನು ಏಳು ಪಾಲಾಗಿ ವಿಂಗಡಿಸಿ ನನ್ನ ಬಳಿಗೆ ಬರಬೇಕು. ನಾನು ನಮ್ಮ ದೇವರಾದ ಸರ್ವೇಶ್ವರನ ಸನ್ನಿಧಿಯಲ್ಲಿ ನಿಮಗೋಸ್ಕರ ಚೀಟು ಹಾಕುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅವರು ಪಟ್ಟಿಯಲ್ಲಿ ದೇಶವನ್ನು ಏಳು ಪಾಲು ಮಾಡಿ ನನ್ನ ಬಳಿಗೆ ತೆಗೆದುಕೊಂಡು ಬರಬೇಕು. ನಾನು ನಿಮಗೋಸ್ಕರ ನಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಚೀಟು ಹಾಕುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಅವರು ಪಟ್ಟಿಯಲ್ಲಿ ದೇಶವನ್ನು ಏಳು ಪಾಲುಮಾಡಿ ಇಲ್ಲಿ ನನ್ನ ಬಳಿಗೆ ತೆಗೆದುಕೊಂಡು ಬರಲಿ; ನಾನು ನಿಮಗೋಸ್ಕರ ನಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಚೀಟುಹಾಕುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆದರೆ ನೀವು ಒಂದು ನಕ್ಷೆಯನ್ನು ಮಾಡಿ ಭೂಮಿಯನ್ನು ಏಳು ಭಾಗಗಳಾಗಿ ವಿಂಗಡಿಸಬೇಕು. ಆ ನಕ್ಷೆಯನ್ನು ನನ್ನ ಬಳಿಗೆ ತೆಗೆದುಕೊಂಡು ಬನ್ನಿ. ಯಾವ ಕುಲದವರು ಯಾವ ಭೂಮಿಯನ್ನು ತೆಗೆದುಕೊಳ್ಳಬೇಕೆಂಬುದನ್ನು ನಮ್ಮ ದೇವರಾದ ಯೆಹೋವನು ನಿರ್ಣಯಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ನೀವು ದೇಶವನ್ನು ಏಳು ಪಾಲಾಗಿ ವಿತರಿಸಬೇಕು ಮತ್ತು ಅದರ ವಿವರಗಳನ್ನು ಇಲ್ಲಿ ನನ್ನ ಬಳಿಯಲ್ಲಿ ತರಬೇಕು. ಆಗ ನಾನು ಈ ಸ್ಥಳದಲ್ಲಿ ನಮ್ಮ ದೇವರಾದ ಯೆಹೋವ ದೇವರ ಮುಂದೆ ನಿಮಗಾಗಿ ಚೀಟುಗಳನ್ನು ಹಾಕುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 18:6
11 ತಿಳಿವುಗಳ ಹೋಲಿಕೆ  

ಸರ್ವೇಶ್ವರಸ್ವಾಮಿ ಮೋಶೆಯ ಮೂಲಕ ಆಜ್ಞಾಪಿಸಿದಂತೆ ಜೋರ್ಡನಿನ ಪಶ್ಚಿಮದ ಕಾನಾನ್ ನಾಡನ್ನು ಚೀಟುಹಾಕಿ ಇಸ್ರಯೇಲರ ಒಂಬತ್ತುವರೆ ಕುಲದವರಿಗೆ ಸ್ವಂತ ಆಸ್ತಿಯಾಗಿ ಹಂಚಿಕೊಟ್ಟರು.


ಯೆಹೋಶುವನು ಶೀಲೋವಿನಲ್ಲಿಯೇ ಸರ್ವೇಶ್ವರನ ಮುಂದೆ ಅವರಿಗೋಸ್ಕರ ಚೀಟು ಹಾಕಿ ನಾಡನ್ನು ಅವರವರ ಪಂಗಡಗಳಿಗೆ ಹಂಚಿಕೊಟ್ಟನು.


ಕಾನಾನ್ ನಾಡಿನ ಏಳು ಜನಾಂಗಗಳನ್ನು ನಾಶಮಾಡಿ ನಮ್ಮ ಜನರಿಗೆ ಆ ನಾಡನ್ನು ಸ್ವಾಸ್ತ್ಯವಾಗಿ ಕೊಟ್ಟರು.


ಚೀಟುಹಾಕುವುದರಿಂದ ವ್ಯಾಜ್ಯಗಳ ಶಮನ; ಜಟ್ಟಿಗಳ ನಡುವೆ ಕಾಳಗದ ವಿರಾಮ.


ಅದೃಷ್ಟದ ಚೀಟನ್ನು ಕುಲುಕಿ ಮಡಲಿಗೆ ಹಾಕಬಹುದು; ಆದರೆ ತೀರ್ಪು ಸರ್ವೇಶ್ವರನ ಕೈಯಲ್ಲಿರುವುದು.


“ನಾ ಕೊಡುವೆನು ಕಾನಾನ್ ನಾಡನು ನಿಮಗೆ I ಸ್ವಾಸ್ತ್ಯವಾಗುವುದು ಅದು ನಿಮ್ಮ ಸಂತತಿಗೆ” II


ನಾಡಿನ ಅಳತೆಯನ್ನು ಮಾಡತಕ್ಕ ಜನರು ಹೊರಡುವುದಕ್ಕೆ ಮುಂಚೆ ಯೆಹೋಶುವನು ಅವರಿಗೆ, “ಹೋಗಿ ನಾಡಿನಲ್ಲೆಲ್ಲಾ ಸಂಚರಿಸಿ ಅಳತೆಮಾಡಿ ನನ್ನ ಬಳಿ ಶೀಲೋವಿಗೆ ತನ್ನಿ. ನಾನು ಸರ್ವೇಶ್ವರನ ಮುಂದೆ ನಿಮಗೋಸ್ಕರ ಚೀಟು ಹಾಕುತ್ತೇನೆ,” ಎಂದು ಹೇಳಿ ಕಳುಹಿಸಿದನು.


ಅದಕ್ಕನುಸಾರವಾಗಿ ಮೋಶೆ ಇಸ್ರಯೇಲರಿಗೆ, “ನೀವು ಚೀಟುಹಾಕಿ ಹಂಚಿಕೊಳ್ಳಬೇಕೆಂದು ಸರ್ವೇಶ್ವರ ಆಜ್ಞಾಪಿಸಿದ ನಾಡು ಇದೇ. ಒಂಬತ್ತುವರೆ ಕುಲದವರಿಗೆ ಇದನ್ನು ಹಂಚಿಕೊಡಬೇಕು.


ಚೀಟು ಹಾಕಿ ಅದನ್ನು ನಿಮ್ಮ ನಿಮ್ಮ ಕುಟುಂಬಗಳಿಗೆ ಹಂಚಿಕೊಳ್ಳಿ. ಹೆಚ್ಚು ಮಂದಿಯುಳ್ಳ ಕುಟುಂಬಕ್ಕೆ ಹೆಚ್ಚಾಗಿಯೂ ಕಡಿಮೆಯಾದ ಕುಟುಂಬಕ್ಕೆ ಕಡಿಮೆಯಾಗಿಯೂ ಆಸ್ತಿ ದೊರಕಬೇಕು. ಒಂದೊಂದು ಕುಟುಂಬದ ಚೀಟು ಯಾವ ಯಾವ ಸ್ಥಳವನ್ನು ಸೂಚಿಸುವುದೋ ಅಲ್ಲೇ ಆ ಕುಟುಂಬದ ಸೊತ್ತಿರಬೇಕು. ಒಂದೊಂದು ಕುಲಕ್ಕೆ ಸೇರಿದ ಕುಟುಂಬಗಳು ಒಂದೇ ಪ್ರದೇಶದಲ್ಲಿರಬೇಕು.


ಲೇವಿಯರಿಗೆ ನಿಮ್ಮ ಹಾಗೆ ಪಾಲು ಸಿಕ್ಕುವುದಿಲ್ಲ. ಸರ್ವೇಶ್ವರನಿಗೆ ಸಲ್ಲಿಸುವ ಯಾಜಕ ಸೇವೆಯೇ ಅವರ ಸೊತ್ತು. ಗಾದ್ ಹಾಗೂ ರೂಬೇನ್ ಕುಲಗಳಿಗೂ ಮನಸ್ಸೆ ಕುಲದ ಅರ್ಧಜನರಿಗೂ ಜೋರ್ಡನಿನ ಪೂರ್ವದಿಕ್ಕಿನಲ್ಲಿ ಸರ್ವೇಶ್ವರನ ದಾಸ ಮೋಶೆಯಿಂದಲೇ ಸೊತ್ತು ಸಿಕ್ಕಿದೆ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು