Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 18:8 - ಕನ್ನಡ ಸತ್ಯವೇದವು C.L. Bible (BSI)

8 ನಾಡಿನ ಅಳತೆಯನ್ನು ಮಾಡತಕ್ಕ ಜನರು ಹೊರಡುವುದಕ್ಕೆ ಮುಂಚೆ ಯೆಹೋಶುವನು ಅವರಿಗೆ, “ಹೋಗಿ ನಾಡಿನಲ್ಲೆಲ್ಲಾ ಸಂಚರಿಸಿ ಅಳತೆಮಾಡಿ ನನ್ನ ಬಳಿ ಶೀಲೋವಿಗೆ ತನ್ನಿ. ನಾನು ಸರ್ವೇಶ್ವರನ ಮುಂದೆ ನಿಮಗೋಸ್ಕರ ಚೀಟು ಹಾಕುತ್ತೇನೆ,” ಎಂದು ಹೇಳಿ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ದೇಶದ ಪಟ್ಟಿಯನ್ನು ಮಾಡತಕ್ಕ ಜನರು ಹೊರಡುವುದಕ್ಕಿಂತ ಮೊದಲು ಯೆಹೋಶುವನು ಅವರಿಗೆ, “ಹೋಗಿ ದೇಶದಲ್ಲೆಲ್ಲಾ ಸಂಚರಿಸಿ ಪಟ್ಟಿಮಾಡಿಕೊಂಡು ಶೀಲೋವಿನಲ್ಲಿರುವ ನನ್ನ ಬಳಿಗೆ ಬನ್ನಿರಿ. ನಾನು ಯೆಹೋವನ ಮುಂದೆ ನಿಮಗೋಸ್ಕರ ಚೀಟು ಹಾಕುವೆನು” ಎಂದು ಹೇಳಿ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ದೇಶದ ಪಟ್ಟಿಯನ್ನು ಮಾಡತಕ್ಕ ಜನರು ಹೊರಡುವದಕ್ಕಿಂತ ಮುಂಚೆ ಯೆಹೋಶುವನು ಅವರಿಗೆ - ಹೋಗಿ ದೇಶದಲ್ಲೆಲ್ಲಾ ಸಂಚರಿಸಿ ಪಟ್ಟಿಮಾಡಿಕೊಂಡು ಶೀಲೋವಿಗೆ ನನ್ನ ಬಳಿಗೆ ಬನ್ನಿರಿ; ನಾನು ಯೆಹೋವನ ಮುಂದೆ ನಿಮಗೋಸ್ಕರ ಚೀಟುಹಾಕುವೆನು ಎಂದು ಹೇಳಿ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಆದ್ದರಿಂದ ಭೂಮಿಯನ್ನು ಪರಿಶೀಲಿಸಲು ಆರಿಸಲ್ಪಟ್ಟ ಜನರಿಗೆ ಯೆಹೋಶುವನು, “ಹೋಗಿ, ಭೂಮಿಯನ್ನು ಸೂಕ್ಷ್ಮವಾಗಿ ಪರಿಶೀಲಿಸಿರಿ; ಅದರ ನಕ್ಷೆಗಳನ್ನು ತೆಗೆಯಿರಿ. ಆಮೇಲೆ ಶೀಲೋವಿನಲ್ಲಿ ನಾನಿರುವ ಸ್ಥಳಕ್ಕೆ ಬನ್ನಿ. ಆಗ ನಾನು ಚೀಟುಹಾಕುತ್ತೇನೆ. ಯೆಹೋವನು ನಿಮ್ಮ ಪಾಲುಗಳನ್ನು ಕೊಡಲಿ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಆ ಮನುಷ್ಯರು ನಾಡನ್ನು ಅಳತೆ ಮಾಡುವುದಕ್ಕಾಗಿ ಹೊರಟು ಹೋಗುವುದಕ್ಕೆ ಮುಂಚೆ ಯೆಹೋಶುವನು ಅವರಿಗೆ, “ನೀವು ಹೋಗಿ ದೇಶವೆಲ್ಲಾ ಸಂಚರಿಸಿ, ಅದನ್ನು ಅಳತೆಮಾಡಿ ನನ್ನ ಬಳಿಗೆ ತೆಗೆದುಕೊಂಡು ಬನ್ನಿರಿ. ನಾನು ಇಲ್ಲಿ ಶೀಲೋವಿನಲ್ಲಿ ಯೆಹೋವ ದೇವರ ಮುಂದೆ ನಿಮಗೆ ಚೀಟುಗಳನ್ನು ಹಾಕುವಂತೆ ನನ್ನ ಬಳಿಗೆ ಬನ್ನಿರಿ,” ಎಂದು ಅಪ್ಪಣೆಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 18:8
13 ತಿಳಿವುಗಳ ಹೋಲಿಕೆ  

ಆದ್ದರಿಂದ ಶಾಂತಿಸಮಾಧಾನಕ್ಕೂ ಪರಸ್ಪರ ಅಭ್ಯುದಯಕ್ಕೂ ಹಿತಕರವಾದವುಗಳನ್ನೇ ಅರಸೋಣ.


ಯೆಹೋಶುವನು ಶೀಲೋವಿನಲ್ಲಿಯೇ ಸರ್ವೇಶ್ವರನ ಮುಂದೆ ಅವರಿಗೋಸ್ಕರ ಚೀಟು ಹಾಕಿ ನಾಡನ್ನು ಅವರವರ ಪಂಗಡಗಳಿಗೆ ಹಂಚಿಕೊಟ್ಟನು.


ಅನಂತರ ಸೌಲನು, “ಇಸ್ರಯೇಲ್ ದೇವರೇ, ಸತ್ಯವನ್ನು ತಿಳಿಸಿ,” ಎಂದು ಸರ್ವೇಶ್ವರನನ್ನು ಪ್ರಾರ್ಥಿಸಿ ಚೀಟುಹಾಕಿದನು. ಅದು ಅವನಿಗೂ ಯೋನಾತಾನನಿಗೂ ಬಂದಿತು. ಜನರು ಪಾರಾದರು.


ನೀವು ನಾಡನ್ನು ಏಳು ಪಾಲಾಗಿ ವಿಂಗಡಿಸಿ ನನ್ನ ಬಳಿಗೆ ಬರಬೇಕು. ನಾನು ನಮ್ಮ ದೇವರಾದ ಸರ್ವೇಶ್ವರನ ಸನ್ನಿಧಿಯಲ್ಲಿ ನಿಮಗೋಸ್ಕರ ಚೀಟು ಹಾಕುತ್ತೇನೆ.


ನಾಡೆಲ್ಲವು ತಮ್ಮ ವಶವಾದ ಮೇಲೆ ಇಸ್ರಯೇಲ್ ಜನಾಂಗವೆಲ್ಲ ಶೀಲೋವಿನಲ್ಲಿ ಕೂಡಿ ದೇವದರ್ಶನದ ಗುಡಾರವನ್ನು ನಿಲ್ಲಿಸಿದರು.


ಎದೋಮ್ ನಾಡು ಹಾಗೂ ಚಿನ್ ಮರುಭೂಮಿಯ ಎಲ್ಲೆಯಾಗಿರುವ ಕಾನಾನ್ ನಾಡಿನ ದಕ್ಷಿಣ ಭಾಗವು ಯೆಹೂದ ಕುಲದ ಗೋತ್ರಗಳಿಗೆ ದೊರಕಿದ ಸೊತ್ತು.


“ನಾನೇ ಈ ಎಲ್ಲಾ ಜನಾಂಗಗಳನ್ನು ಇಸ್ರಯೇಲರ ಸಮ್ಮುಖದಿಂದ ಹೊರಡಿಸಿಬಿಡುವೆನು. ನೀನಾದರೋ ನಾನು ಮೊದಲೇ ಆಜ್ಞಾಪಿಸಿದಂತೆ ಇಸ್ರಯೇಲರಿಗೆ ನಾಡನ್ನು ಹಂಚಿಕೊಡುವಾಗ ಇವುಗಳನ್ನು ಕೂಡ ಸೇರಿಸಿ ನಾಡನ್ನೆಲ್ಲಾ ಒಂಬತ್ತು ಕುಲಗಳಿಗೂ ಮನಸ್ಸೆ ಕುಲದ ಅರ್ಧಜನರಿಗೂ ಪಾಲುಮಾಡಿಕೊಡು,” ಎಂದರು.


ನೀನೆದ್ದು ಈ ನಾಡಿನ ಉದ್ದಗಲಕ್ಕೂ ತಿರುಗಾಡು; ಇದನ್ನು ನಾನು ನಿನಗೆ ಕೊಡುತ್ತೇನೆ, ಎಂದು ಹೇಳಿದರು.


ಆ ಜನರು ಹೊರಟು ನಾಡಿನಲ್ಲೆಲ್ಲಾ ಸಂಚರಿಸಿ ಒಂದು ಪುಸ್ತಕದಲ್ಲಿ ಗ್ರಾಮ-ನಗರಗಳನ್ನೆಲ್ಲಾ ಬರೆದು ಏಳು ಭಾಗಗಳನ್ನಾಗಿ ಮಾಡಿ ಶೀಲೋವಿನಲ್ಲಿದ್ದ ಯೆಹೋಶುವನ ಪಾಳೆಯಕ್ಕೆ ಹಿಂದಿರುಗಿ ಬಂದರು.


ಅವರೇ, ಇವುಗಳಿಗೆ ಹಂಚಿಕೊಟ್ಟಿದ್ದಾರೆ, ಅವರ ಕೈಯೇ ನೂಲುಹಿಡಿದು ನಾಡನ್ನು ಇವುಗಳಿಗೆ ವಿಭಾಗಮಾಡಿದೆ; ಅದು ಇವುಗಳಿಗೆ ಶಾಶ್ವತ ಸೊತ್ತಾಗುವುದು, ತಲತಲಾಂತರಕ್ಕೂ ಅವು ಅಲ್ಲಿ ವಾಸಮಾಡುವುವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು