Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 2:18 - ಕನ್ನಡ ಸತ್ಯವೇದವು C.L. Bible (BSI)

18 ನಾವು ಈ ನಾಡನ್ನು ಪ್ರವೇಶಿಸುವಾಗ ನೀನು ನಮ್ಮನ್ನು ಇಳಿಸಿದ ಕಿಟಕಿಗೆ ಈ ಕೆಂಪುದಾರವನ್ನು ಕಟ್ಟಬೇಕು ಮತ್ತು ನಿನ್ನ ತಂದೆತಾಯಿಗಳನ್ನು, ಅಣ್ಣತಮ್ಮಂದಿರನ್ನು, ಎಲ್ಲಾ ಬಂಧುಬಳಗದವರನ್ನು ನಿನ್ನ ಮನೆಯಲ್ಲೇ ಸೇರಿಸಿಕೊಂಡಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ನಾವು ಈ ದೇಶದಲ್ಲಿ ಪ್ರವೇಶಿಸುವಾಗ ನೀನು ನಮ್ಮನ್ನು ಇಳಿಸಿದ ಕಿಟಿಕಿಗೆ ಈ ಕೆಂಪು ದಾರವನ್ನು ಕಟ್ಟಬೇಕು ಮತ್ತು ನಿನ್ನ ತಂದೆತಾಯಿಗಳನ್ನೂ ಅಣ್ಣತಮ್ಮಂದಿರನ್ನೂ ಎಲ್ಲಾ ಬಂಧುಬಳಗದವರನ್ನೂ ನಿನ್ನ ಮನೆಯಲ್ಲಿ ಸೇರಿಸಿಕೊಂಡಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಇಗೋ, ನಾವು ಈ ದೇಶದಲ್ಲಿ ಪ್ರವೇಶಿಸುವಾಗ ನೀನು ನಮ್ಮನ್ನು ಇಳಿಸಿದ ಕಿಟಕಿಗೆ ಈ ಕೆಂಪು ದಾರವನ್ನು ಕಟ್ಟಬೇಕು. ಮತ್ತು ನಿನ್ನ ತಂದೆತಾಯಿಗಳನ್ನೂ ಅಣ್ಣ ತಮ್ಮಂದಿರನ್ನೂ ಎಲ್ಲಾ ಬಳಗದವರನ್ನೂ ನಿನ್ನ ಮನೆಯಲ್ಲಿ ಸೇರಿಸಿಕೊಂಡಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ನಮ್ಮನ್ನು ಇಳಿಸುವುದಕ್ಕಾಗಿ ನೀನು ಉಪಯೋಗಿಸಿದ ಈ ಕೆಂಪು ಹಗ್ಗವನ್ನು ನಾವು ಈ ದೇಶಕ್ಕೆ ಹಿಂತಿರುಗಿ ಬರುವಾಗ ನೀನು ಕಿಟಕಿಗೆ ಕಟ್ಟಿರಬೇಕು. ನಿನ್ನ ತಂದೆತಾಯಿಗಳು, ನಿನ್ನ ಸಹೋದರ ಸಹೋದರಿಯರು ಮತ್ತು ನಿನ್ನ ಕುಟುಂಬ ವರ್ಗದವರು ನಿನ್ನ ಸಂಗಡ ಈ ಮನೆಯಲ್ಲಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಇಗೋ, ನಾವು ಈ ದೇಶದಲ್ಲಿ ಪ್ರವೇಶಿಸುವಾಗ, ನೀನು ನಮ್ಮನ್ನು ಇಳಿಸಿದ ಕಿಟಿಕಿಗೆ ಈ ಕಡುಗೆಂಪು ಹಗ್ಗವನ್ನು ಕಟ್ಟಿ, ನಿನ್ನ ತಂದೆಯನ್ನೂ, ನಿನ್ನ ತಾಯಿಯನ್ನೂ, ನಿನ್ನ ಸಹೋದರರನ್ನೂ, ನಿನ್ನ ತಂದೆಯ ಮನೆಯವರೆಲ್ಲರನ್ನೂ ನಿನ್ನ ಮನೆಯಲ್ಲಿ ಕೂಡಿಸಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 2:18
19 ತಿಳಿವುಗಳ ಹೋಲಿಕೆ  

ಅಂತೆಯೇ ಅವರು ಹೋಗಿ ರಾಹಾಬಳನ್ನೂ ಅವಳ ತಂದೆತಾಯಿಗಳನ್ನೂ ಸಹೋದರರನ್ನೂ ಅವಳಿಗಿದ್ದುದೆಲ್ಲವನ್ನೂ ಅವಳ ಎಲ್ಲಾ ಸಂಬಂಧಿಕರನ್ನೂ ಇಸ್ರಯೇಲರ ಪಾಳೆಯದ ಹೊರಗಡೆ ಸುಭದ್ರವಾಗಿರಿಸಿದರು.


ಅದಕ್ಕವಳು, “ನಿಮ್ಮ ಮಾತಿನಂತೆಯೇ ಆಗಲಿ,” ಎಂದು ಹೇಳಿ ಅವರನ್ನು ಕಳುಹಿಸಿದಳು. ಅವರು ಹೊರಟುಹೋದ ಮೇಲೆ ಆ ಕೆಂಪುದಾರವನ್ನು ಕಿಟಕಿಗೆ ಕಟ್ಟಿದಳು.


ಮೋಶೆ ಧರ್ಮಶಾಸ್ತ್ರದ ಆಜ್ಞೆಗಳನ್ನೆಲ್ಲ ಸಾರಿ ಹೇಳಿ, ಹೋತ ಹಾಗೂ ಹೋರಿಕರುಗಳ ರಕ್ತವನ್ನು ತೆಗೆದುಕೊಂಡು ಅದಕ್ಕೆ ನೀರು ಬೆರೆಸಿದನು; ಅದನ್ನು ಕೆಂಪು ಉಣ್ಣೆಯ ನೂಲಿನಿಂದ ಕಟ್ಟಿದ ಹಿಸ್ಸೋಪ್ ಕಡ್ಡಿಗಳಿಂದ ಪವಿತ್ರಗ್ರಂಥದ ಮೇಲೂ ಜನರ ಮೇಲೂ ಚಿಮುಕಿಸಿದನು.


ಅಂತೆಯೇ ನಾನು ತಕ್ಷಣ ತಮ್ಮನ್ನು ಕರೆತರಲು ಕಳುಹಿಸಿದೆ. ತಾವು ಇಲ್ಲಿಗೆ ದಯಮಾಡಿಸಿದಿರಿ. ಪ್ರಭು ತಮಗೆ ಆಜ್ಞಾಪಿಸಿರುವುದನ್ನೆಲ್ಲಾ ಕೇಳಲು ನಾವೆಲ್ಲರೂ ಇಲ್ಲಿ ದೇವರ ಸನ್ನಿಧಿಯಲ್ಲಿ ಸೇರಿದ್ದೇವೆ,” ಎಂದನು.


ಶುದ್ಧಮಾಡಿಸಿಕೊಳ್ಳುವವನ ಪರವಾಗಿ ಸಜೀವವಾದ ಎರಡು ಶುದ್ಧಪಕ್ಷಿಗಳನ್ನೂ ದೇವದಾರಿನ ಕಟ್ಟಿಗೆಯನ್ನೂ ರಕ್ತವರ್ಣವುಳ್ಳ ದಾರವನ್ನೂ ಹಿಸ್ಸೋಪ್ ಗಿಡದ ಬರಲನ್ನೂ ತರಬೇಕೆಂದು ಯಾಜಕನು ಆಜ್ಞಾಪಿಸಬೇಕು.


ಒನೇಸಿಫೊರನ ಕುಟುಂಬವನ್ನು ಪ್ರಭು ಆಶೀರ್ವದಿಸಲಿ. ಆತನು ಅನೇಕ ಸಾರಿ ನನ್ನನ್ನು ಆದರಿಸಿದನು.


ಅವನು ನೀನೂ ನಿನ್ನ ಕುಟುಂಬದವರೆಲ್ಲರೂ ಪಡೆಯಬಹುದಾದಂಥ ಜೀವೋದ್ಧಾರದ ಸಂದೇಶವನ್ನು ನೀಡುವನು,’ ಎಂದು ತಿಳಿಸಿದನು” ಎಂದು ನಮಗೆ ಹೇಳಿದನು.


ಕೊರ್ನೇಲಿಯನೊಡನೆ ಮಾತನಾಡುತ್ತಾ ಪೇತ್ರನು ಮನೆಯೊಳಕ್ಕೆ ಬಂದಾಗ ಅಲ್ಲಿ ಅನೇಕ ಜನರು ಸಭೆ ಸೇರಿರುವುದನ್ನು ಕಂಡನು.


ಆಗ ಯೇಸು, “ಇಂದು, ಈ ಮನೆ ಉದ್ಧಾರವಾಯಿತು. ಇವನು ಕೂಡ ಅಬ್ರಹಾಮನ ವಂಶಕ್ಕೆ ಸೇರಿದವನಲ್ಲವೆ?


ಯಾಜಕನು ದೇವದಾರು ಮರದ ಕಟ್ಟಿಗೆಯನ್ನು ಹಿಸ್ಸೋಪ್ ಗಿಡದ ಬರಲನ್ನು ಮತ್ತು ರಕ್ತವರ್ಣದ ದಾರವನ್ನು ತೆಗೆದುಕೊಂಡು ಆ ಆಕಳನ್ನು ದಹಿಸುವ ಬೆಂಕಿಯಲ್ಲಿ ಹಾಕಬೇಕು.


ಅವೆಲ್ಲವುಗಳ ಮೇಲೆ ರಕ್ತವರ್ಣದ ಬಟ್ಟೆಯನ್ನು ಹಾಸಿ, ಹಸನಾದ ತೊಗಲನ್ನು ಹೊದಿಸಿ, ಹೊರುವ ಕೋಲುಗಳನ್ನು ಸಿಕ್ಕಿಸಬೇಕು.


ನಾನು ನಿನ್ನನ್ನು ದೊಡ್ಡ ಜನಾಂಗವಾಗಿ ಮಾಡುತ್ತೇನೆ. ನಿನ್ನನ್ನು ಆಶೀರ್ವದಿಸಿ ನಿನ್ನ ಹೆಸರಿಗೆ ಘನತೆಗೌರವವನ್ನು ತರುತ್ತೇನೆ. ನೀನೇ ಆದರ್ಶದ ಆಶೀರ್ವಾದವಾಗಿ ಬೆಳಗುವೆ.


ಸರ್ವೇಶ್ವರ ಸ್ವಾಮಿ ನೋಹನಿಗೆ, "ನೀನೂ ನಿನ್ನ ಮನೆಯವರೆಲ್ಲರೂ ನಾವೆಯನ್ನು ಸೇರಿಕೊಳ್ಳಿರಿ; ಈಗಿನ ಪೀಳಿಗೆಯಲ್ಲಿ ನೀನೊಬ್ಬನೇ ನನ್ನ ದೃಷ್ಟಿಗೆ ಸತ್ಪುರುಷ.


ನನ್ನ ಜನರಿಗೆ ಕೇಡು ಸಂಭವಿಸುವುದನ್ನು ಕಣ್ಣಾರೆ ಕಂಡು ನಾನು ಹೇಗೆ ತಾನೆ ಸಹಿಸಲಿ? ನನ್ನ ಕುಲನಾಶವನ್ನು ಕಂಡು ಸುಮ್ಮನಿರುವುದಾದರೂ ಹೇಗೆ?” ಎಂದು ಬಿನ್ನವಿಸಿದಳು.


ನಿನ್ನ ತುಟಿ ನಯವಾದ ಕೆಂಪುಪಟ್ಟಿ ಬಿಚ್ಚಿದಾಗ ನೀನೆಷ್ಟು ಸುರೂಪಿಣಿ! ಮಸುಕಿನಲ್ಲಿನ ನಿನ್ನ ಕೆನ್ನೆ, ಹೋಳಾಗಿಸಿದ ದಾಳಿಂಬೆ!


ನೀವು ಬಾಗಿಲಿಗೆ ಹಚ್ಚಿದ ಆ ರಕ್ತವು ನೀವಿರುವ ಮನೆಗಳನ್ನು ಸೂಚಿಸುವುದು. ಅದನ್ನು ಕಂಡು ನಿಮಗೆ ಯಾವ ಹಾನಿಯನ್ನು ಮಾಡದೆ ಮುಂದಕ್ಕೆ ದಾಟಿಹೋಗುವೆನು. ನಾನು ಈಜಿಪ್ಟಿನವರನ್ನು ಸಂಹರಿಸುವಾಗ ನಿಮಗೆ ಯಾವ ಕೇಡೂ ಆಗದು.


ವೇಶ್ಯೆಯಾದ ರಾಹಾಬಳು, ಜೆರಿಕೋ ನಗರದಲ್ಲಿ ಸಂಚರಿಸಿ ನೋಡಲು ಬಂದಿದ್ದ ಯೆಹೋಶುವನ ಗೂಢಚಾರರನ್ನು ಬಚ್ಚಿಟ್ಟಿದ್ದರಿಂದ ಅವಳನ್ನೂ ಅವಳ ತಂದೆಯ ಮನೆಯವರನ್ನೂ ಅವಳಿಗಿದ್ದುದೆಲ್ಲವನ್ನೂ ಉಳಿಸಿದರು. ಅವಳು ಇಂದಿನವರೆಗೂ ಇಸ್ರಯೇಲರಲ್ಲೇ ವಾಸವಾಗಿದ್ದಾಳೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು