Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 2:3 - ಕನ್ನಡ ಸತ್ಯವೇದವು C.L. Bible (BSI)

3 ಅವನು ರಾಹಾಬಳಿಗೆ, “ನಿನ್ನ ಮನೆಯಲ್ಲಿ ಇಳಿದುಕೊಂಡಿರುವ ಆ ವ್ಯಕ್ತಿಗಳನ್ನು ತಂದೊಪ್ಪಿಸು. ಅವರು ನಾಡನ್ನೆಲ್ಲಾ ಸಂಚರಿಸಿ ಬೇಹು ಮಾಡಲು ಬಂದವರು” ಎಂದು ಹೇಳಿ ಕಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆಗ ಯೆರಿಕೋವಿನ ಅರಸನು ರಾಹಾಬಳಿಗೆ “ನಿನ್ನ ಮನೆಯಲ್ಲಿ ಇಳಿದುಕೊಂಡಿರುವ ಆ ಮನುಷ್ಯರನ್ನು ತಂದೊಪ್ಪಿಸು; ಅವರು ದೇಶವನ್ನೆಲ್ಲಾ ಸಂಚರಿಸಿ ನೋಡಿ ಹೊಂಚುಹಾಕುವುದಕ್ಕೆ ಬಂದವರು” ಎಂದು ಹೇಳಿ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಯೆರಿಕೋವಿನ ಅರಸನು ರಾಹಾಬಳಿಗೆ - ನಿನ್ನ ಮನೆಯಲ್ಲಿಳುಕೊಂಡಿರುವ ಮನುಷ್ಯರನ್ನು ತಂದೊಪ್ಪಿಸು; ಅವರು ದೇಶವನ್ನೆಲ್ಲಾ ಸಂಚರಿಸಿ ನೋಡುವದಕ್ಕೆ ಬಂದವರು ಎಂದು ಹೇಳಿ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಆಗ ಜೆರಿಕೊ ನಗರದ ಅರಸನು ರಾಹಾಬಳಿಗೆ, “ನಿನ್ನ ಮನೆಗೆ ಬಂದು ಇಳಿದುಕೊಂಡ ಆ ಜನರನ್ನು ಬಚ್ಚಿಡಬೇಡ. ಅವರನ್ನು ಹೊರಗೆ ಕರೆದುಕೊಂಡು ಬಾ. ಅವರು ನಮ್ಮ ದೇಶದ ಬಗ್ಗೆ ತಿಳಿದುಕೊಳ್ಳುವುದಕ್ಕೆ ಬಂದಿದ್ದಾರೆ” ಎಂದು ಹೇಳಿ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆಗ ಯೆರಿಕೋವಿನ ಅರಸನು ರಾಹಾಬಳಿಗೆ, “ನಿನ್ನ ಬಳಿಗೆ ಬಂದು ನಿನ್ನ ಮನೆಯಲ್ಲಿ ಪ್ರವೇಶಿಸಿದ ಮನುಷ್ಯರನ್ನು ಹೊರಗೆ ಕರೆದುಕೊಂಡು ಬಾ. ಏಕೆಂದರೆ ಅವರು ದೇಶವನ್ನೆಲ್ಲಾ ಗೂಢಚಾರ ಮಾಡಲು ಬಂದಿದ್ದಾರೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 2:3
15 ತಿಳಿವುಗಳ ಹೋಲಿಕೆ  

ಅಲ್ಲಿನ ನಾಯಕರು ತಮ್ಮ ಒಡೆಯ ಹಾನೂನನಿಗೆ, “ದಾವೀದನು ನಿಮ್ಮ ಬಳಿಗೆ ಸಂತೈಸುವವರನ್ನು ಕಳುಹಿಸಿದ್ದಾನೆ. ಇದರಿಂದ ಅವನು ನಿಮ್ಮ ತಂದೆಯನ್ನು ಸನ್ಮಾನಿಸುತ್ತಾನೆಂದು ತಿಳಿಯುತ್ತೀರೋ? ಇಲ್ಲವೇ ಇಲ್ಲ. ಪಟ್ಟಣವನ್ನು ಸಂಚರಿಸಿ ನೋಡಿ ಅದನ್ನು ಸ್ವಾಧೀನಮಾಡಿಕೊಳ್ಳಬೇಕೆಂದು ತನ್ನ ಆಳುಗಳನ್ನು ಕಳುಹಿಸಿದ್ದಾನೆ,” ಎಂದು ಹೇಳಿದರು.


ಹೆರೋದನು ಪೇತ್ರನನ್ನು ಜನರ ಮುಂದೆ ತರಬೇಕೆಂದಿದ್ದ ಹಿಂದಿನ ರಾತ್ರಿ ಅದು. ಪೇತ್ರನು ಇಬ್ಬರು ಸೈನಿಕರ ನಡುವೆ ನಿದ್ರಿಸುತ್ತಿದ್ದನು. ಅವನನ್ನು ಎರಡು ಸರಪಣಿಗಳಿಂದ ಕಟ್ಟಲಾಗಿತ್ತು. ಪಹರೆಯವರು ಸೆರೆಮನೆಯ ದ್ವಾರದಲ್ಲಿ ಕಾವಲಿದ್ದರು.


ಪೇತ್ರನನ್ನು ಬಂಧಿಸಿದ ಮೇಲೆ ಸೆರೆಮನೆಯಲ್ಲಿಟ್ಟು ಅವನನ್ನು ಕಾಯಲು ನಾಲ್ಕು ನಾಲ್ಕು ಸೈನಿಕರಿದ್ದ ಚತುರ್ದಳಕ್ಕೆ ವಹಿಸಿದನು. ಪಾಸ್ಕಹಬ್ಬದ ನಂತರ ಪೇತ್ರನನ್ನು ಬಹಿರಂಗ ವಿಚಾರಣೆಗೆ ಗುರಿಪಡಿಸಲು ಉದ್ದೇಶಿಸಿದ್ದನು.


ಪಿಲಾತನು ಮತ್ತೆ ಹೊರಗೆ ಬಂದು ಯೆಹೂದ್ಯರಿಗೆ, “ನೋಡಿ, ನಾನು ಇವನನ್ನು ನಿಮ್ಮ ಮುಂದೆ ತರುತ್ತಿದ್ದೇನೆ. ನನಗೆ ಇವನಲ್ಲಿ ಯಾವ ಅಪರಾಧವೂ ಕಾಣಿಸುತ್ತಿಲ್ಲ ಎಂಬುದು ನಿಮಗೆ ತಿಳಿದಿರಲಿ,” ಎಂದು ಹೇಳಿದನು.


ದುರುಳನು ಆಪತ್ತಿನಾ ದಿನ ಸುರಕ್ಷಿತನಾಗಿರುತ್ತಾನೆ ದೇವರ ಆ ಕೋಪೋದ್ರೇಕದ ದಿನ ಆಶ್ರಯ ಪಡೆಯುತ್ತಾನೆ.


ಅಲ್ಲಿನ ನಾಯಕರು ಹಾನೂನನಿಗೆ, “ದಾವೀದನು ನಿಮ್ಮ ಬಳಿಗೆ ಸಂತೈಸುವವರನ್ನು ಕಳುಹಿಸಿದ್ದಾನೆ. ಇದರಿಂದ ಅವನು ನಿಮ್ಮ ತಂದೆಯನ್ನು ಸನ್ಮಾನಿಸುತ್ತಾನೆ ಎಂದು ತಿಳಿಯುತ್ತೀರೋ? ಇಲ್ಲ, ಅವನ ಆಳುಗಳು ದೇಶವನ್ನು ಸಂಚರಿಸಿ ನೋಡಿ ಅದನ್ನು ಸ್ವಾಧೀನ ಮಾಡಿಕೊಳ್ಳಬೇಕೆಂದು ಬಂದಿದ್ದಾರೆ,” ಎಂದು ದೂರಿತ್ತರು.


ಅವರು ಹೋಗಿ ಜೆರುಸಲೇಮ್, ಹೆಬ್ರೋನ್, ಯರ್ಮೂತ್, ಲಾಕೀಷ್ ಮತ್ತು ಎಗ್ಲೋನ್ ಎಂಬ ನಗರಗಳ ಐದು ಮಂದಿ ಅರಸರನ್ನು ಗವಿಯಿಂದ ಎಳೆದು ಅವನ ಬಳಿಗೆ ತಂದರು.


ಆ ದೇವದೂಷಕನನ್ನು ಪಾಳೆಯದ ಹೊರಗೆ ಒಯ್ಯಬೇಕು. ಅವನಾಡಿದ ದೂಷಣೆಯ ಮಾತುಗಳನ್ನು ಕೇಳಿದವರೆಲ್ಲರು ಅವನ ತಲೆಯ ಮೇಲೆ ಕೈಚಾಚಬೇಕು. ಅನಂತರ ಸಮಾಜದವರೆಲ್ಲರು ಅವನನ್ನು ಕಲ್ಲೆಸೆದು ಕೊಲ್ಲಬೇಕು.


ನಾವು ಅವನಿಗೆ, ‘ನಾವು ಸತ್ಯವಂತರೇ ಹೊರತು ಗೂಢಚಾರರೇನು ಅಲ್ಲ,


ಸುಮಾರು ಮೂರು ತಿಂಗಳಾದ ಬಳಿಕ, ಯೆಹೂದನಿಗೆ ತನ್ನ ಸೊಸೆ ತಾಮಾರಳು ವ್ಯಭಿಚಾರದಿಂದ ಗರ್ಭವತಿಯಾಗಿದ್ದಾಳೆಂಬ ಸಮಾಚಾರ ಬಂದಿತು. ಅವನು, “ಅವಳನ್ನು ಎಳೆದು ತನ್ನಿ; ಸುಟ್ಟುಹಾಕಬೇಕು,” ಎಂದನು.


ಇಸ್ರಯೇಲಿನ ಕೆಲವು ಜನರು ನಮ್ಮ ನಾಡಿನಲ್ಲಿ ಸಂಚರಿಸಿ ನೋಡಲು ಈ ರಾತ್ರಿ ನಗರಕ್ಕೆ ಬಂದಿದ್ದಾರೆಂದು ಜೆರಿಕೋವಿನ ಅರಸನಿಗೆ ತಿಳಿಸಲಾಯಿತು.


ವೇಶ್ಯೆ ಆ ಇಬ್ಬರನ್ನು ಅಡಗಿಸಿಟ್ಟು, ಕೇಳಲು ಬಂದವರಿಗೆ, “ಆ ವ್ಯಕ್ತಿಗಳು ನನ್ನ ಬಳಿಗೆ ಬಂದದ್ದೇನೋ ನಿಜ. ಅವರು ಎಲ್ಲಿಯವರೆಂದು ನನಗೆ ತಿಳಿಯದೆ ಹೋಗಿದೆ.


ಅಬ್ಷಾಲೋಮನ ಸೇವಕರು ಆ ಸ್ತ್ರೀಯ ಮನೆಗೆ ಹೋಗಿ, “ಅಹೀಮಾಚ್ ಮತ್ತು ಯೋನಾತಾನರೆಲ್ಲಿ?” ಎಂದು ಆಕೆಯನ್ನು ಕೇಳಿದ್ದಕ್ಕೆ ಆಕೆ, ” ಅವರು ಹಳ್ಳದಾಟಿ ಹೋಗಿಬಿಟ್ಟರು,” ಎಂದು ಉತ್ತರಕೊಟ್ಟಳು. ಸೇವಕರು ಅವರನ್ನು ಹುಡುಕುವುದಕ್ಕೆ ಹೋಗಿ ಕಾಣದೆ ಜೆರುಸಲೇಮಿಗೆ ಹಿಂದಿರುಗಿದರು.


ಅವನು ಆಕೆಗೆ, “ನೀನು ಗುಡಾರದ ಬಾಗಿಲಲ್ಲೇ ನಿಂತಿರು; ಯಾರಾದರೂ ಬಂದು ‘ಇಲ್ಲಿ ಒಬ್ಬ ಮನುಷ್ಯ ಇರುವನೇ?’ ಎಂದು ವಿಚಾರಿಸಿದರೆ, ‘ಇಲ್ಲ’ ಎನ್ನು” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು