Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 21:44 - ಕನ್ನಡ ಸತ್ಯವೇದವು C.L. Bible (BSI)

44 ಸರ್ವೇಶ್ವರ ಅವರ ಪೂರ್ವಜರಿಗೆ ಆಣೆಯಿಟ್ಟು ಹೇಳಿದಂತೆ ಅವರಿಗೆ ಎಲ್ಲೆಡೆಯಲ್ಲೂ ಶಾಂತಿಸಮಾಧಾನವನ್ನು ಅನುಗ್ರಹಿಸಿದರು. ಶತ್ರುಗಳಾರು ಅವರನ್ನು ಪ್ರತಿಭಟಿಸಿ ನಿಲ್ಲಲಿಲ್ಲ. ಎಲ್ಲರೂ ಅವರ ಕೈವಶವಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

44 ಯೆಹೋವನು ಅವರ ಪೂರ್ವಿಕರಿಗೆ ಆಣೆಯಿಟ್ಟು ಹೇಳಿದಂತೆ ಅವರಿಗೆ ಎಲ್ಲಾ ಕಡೆಗಳಿಂದಲೂ ಸಮಾಧಾನವನ್ನು ಅನುಗ್ರಹಿಸಿದನು. ವೈರಿಗಳಲ್ಲಿ ಒಬ್ಬನೂ ಅವರೆದುರು ನಿಲ್ಲಲಿಲ್ಲ. ಆತನು ಎಲ್ಲರನ್ನೂ ಅವರ ಕೈಗೆ ಒಪ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

44 ಯೆಹೋವನು ಅವರ ಪೂರ್ವಿಕರಿಗೆ ಆಣೆಯಿಟ್ಟು ಹೇಳಿದಂತೆ ಅವರಿಗೆ ಎಲ್ಲಾ ಕಡೆಯಲ್ಲಿಯೂ ಸಮಾಧಾನಕೊಟ್ಟನು. ವೈರಿಗಳಲ್ಲಿ ಒಬ್ಬನೂ ಅವರ ಮುಂದೆ ನಿಲ್ಲಲಿಲ್ಲ. ಆತನು ಎಲ್ಲರನ್ನೂ ಅವರ ಕೈಗೆ ಒಪ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

44 ಯೆಹೋವನು ಅವರ ಪೂರ್ವಿಕರಿಗೆ ಪ್ರಮಾಣ ಮಾಡಿದಂತೆ ಅವರ ಪ್ರದೇಶದಲ್ಲೆಲ್ಲಾ ಶಾಂತಿ ನೆಲೆಸುವಂತೆ ಮಾಡಿದನು. ಅವರ ಯಾವ ಶತ್ರುಗಳೂ ಅವರನ್ನು ಸೋಲಿಸಲಿಲ್ಲ. ಇಸ್ರೇಲರು ತಮ್ಮ ಎಲ್ಲ ಶತ್ರುಗಳನ್ನು ಸೋಲಿಸುವಂತೆ ಯೆಹೋವನು ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

44 ಯೆಹೋವ ದೇವರು ಅವರ ತಂದೆಗಳಿಗೆ ಆಣೆಯಿಟ್ಟ ಪ್ರಕಾರವೇ ಅವರ ಸುತ್ತಲೂ ಅವರಿಗೆ ವಿಶ್ರಾಂತಿಕೊಟ್ಟರು. ಅವರ ಎಲ್ಲಾ ಶತ್ರುಗಳಲ್ಲಿ ಒಬ್ಬನಾದರೂ ಅವರ ಮುಂದೆ ನಿಲ್ಲಲಿಲ್ಲ. ಅವರ ಶತ್ರುಗಳನ್ನೆಲ್ಲಾ ಯೆಹೋವ ದೇವರು ಅವರ ಕೈಗಳಿಗೆ ಒಪ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 21:44
19 ತಿಳಿವುಗಳ ಹೋಲಿಕೆ  

ಸರ್ವೇಶ್ವರ ಮೋಶೆಯ ಮುಖಾಂತರ ವಾಗ್ದಾನ ಮಾಡಿದ್ದ ಪ್ರದೇಶವನ್ನೆಲ್ಲಾ ಯೆಹೋಶುವ ಹಿಡಿದುಕೊಂಡನು, ಇಸ್ರಯೇಲ್ ಕುಲಭಾಗಗಳಿಗನುಸಾರ ಅದನ್ನು ಹಂಚಿಕೊಟ್ಟನು. ಯುದ್ಧ ನಿಂತಿತು. ದೇಶದಲ್ಲೆಲ್ಲಾ ಶಾಂತಿಸಮಾಧಾನ ನೆಲೆಸಿತು.


ಆದಕಾರಣ, ದೇವಜನರು ಅನುಭವಿಸುವುದಕ್ಕಿರುವ ಸಬ್ಬತ್ತೆಂಬ ವಿಶ್ರಾಂತಿ ಇನ್ನೂ ಉಳಿದಿದೆ.


ಕೆಂಪು ಸಮುದ್ರದಿಂದ ಫಿಲಿಷ್ಟಿಯರ ದೇಶದ ಬಳಿಯಿರುವ ಸಮುದ್ರದವರೆಗೂ ಮತ್ತು ಈ ಮರುಭೂಮಿಯಿಂದ ಯೂಫ್ರೆಟೀಸ್ ಮಹಾ ನದಿಯವರೆಗೂ ಇರುವ ನಾಡನ್ನೆಲ್ಲಾ ನಿಮಗೆ ನೇಮಿಸಿ ಅದರಲ್ಲಿರುವ ನಿವಾಸಿಗಳನ್ನು ನಿಮಗೆ ಅಧೀನಪಡಿಸುವೆನು.


ಆಗ ರೂಬೇನ್ಯರು, ಗಾದ್ಯರು ಹಾಗೂ ಮನಸ್ಸೆಕುಲದ ಅರ್ಧಜನರು ಕಾನಾನ್ ನಾಡಿನ ಶಿಲೋವಿನಲ್ಲಿದ್ದ ಇಸ್ರಯೇಲರನ್ನು ಬಿಟ್ಟು ಸರ್ವೇಶ್ವರನ ಆಜ್ಞೆಗನುಸಾರ ಮೋಶೆಯಿಂದ ತಮಗೆ ದೊರಕಿದ ಸೊತ್ತಾದ ಗಿಲ್ಯಾದ್ ನಾಡಿಗೆ ಹೋದರು.


ಅವರು ತಮ್ಮ ವಾಗ್ದಾನಕ್ಕನುಸಾರ ನಿಮ್ಮ ಸಹೋದರರಿಗೆ ಈಗ ನೆಮ್ಮದಿಯನ್ನು ದಯಪಾಲಿಸಿದ್ದಾರೆ. ಆದುದರಿಂದ ಸರ್ವೇಶ್ವರನ ದಾಸನಾದ ಮೋಶೆ ಜೋರ್ಡನಿನ ಆಚೆಕಡೆ ನಿಮಗೆ ಕೊಟ್ಟ ಆಸ್ತಿಯನ್ನು ಅನುಭವಿಸುತ್ತಿರುವ ನಿಮ್ಮ ನಿಮ್ಮ ನಿವಾಸಿಗಳ ಬಳಿಗೆ ನೀವು ಹೋಗಬಹುದು.


ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಹಾಗೆಯೇ ನಿಮ್ಮ ಸಹೋದರರನ್ನೂ ನೆಮ್ಮದಿಪಡಿಸಿ, ಸರ್ವೇಶ್ವರನಾದ ದೇವರು ತಮಗೆ ನೀಡುವ ನಾಡನ್ನು ಅವರು ಸ್ವತಂತ್ರಿಸಿಕೊಳ್ಳುವ ವರೆಗೆ ಅವರಿಗೆ ಸಹಾಯ ಮಾಡಲಿ. ತರುವಾಯ ಸರ್ವೇಶ್ವರನ ದಾಸ ಮೋಶೆ ಜೋರ್ಡನ್ನಿಗೆ ಈಚೆ ಸೂರ್ಯೋದಯದ ದಿಕ್ಕಿನಲ್ಲಿ, ನಿಮಗೆ ಕೊಟ್ಟ ಸ್ವಂತ ನಾಡಿಗೆ ಹಿಂದಿರುಗಿ ಬಂದು ಅದನ್ನು ಅನುಭವಿಸಬಹುದು.”


“ಸರ್ವೇಶ್ವರ ಸ್ವಾಮಿಯ ದಾಸ ಮೋಶೆ ನಿಮಗೆ ಆಜ್ಞಾಪಿಸಿದ್ದನ್ನು ನೆನಪಿಗೆ ತಂದುಕೊಳ್ಳಿ: ನಿಮ್ಮ ದೇವರಾದ ಸರ್ವೇಶ್ವರ ಈ ನಾಡನ್ನು ನಿಮಗೆ ಕೊಟ್ಟು ನೆಮ್ಮದಿಯನ್ನು ಉಂಟುಮಾಡಿದ್ದಾರೆ.


ಅದಕ್ಕೆ ಸರ್ವೇಶ್ವರ, “ನನ್ನ ಪ್ರಸನ್ನತೆ ನಿನ್ನ ಜೊತೆಯಲ್ಲಿ ಬರುವುದು. ನಾನು ನಿನಗೆ ವಿಶ್ರಾಂತಿ ನೀಡುವೆನು,” ಎಂದರು.


“ನೀವು ಶತ್ರುಗಳ ವಿರುದ್ಧ ಯುದ್ಧಮಾಡಿ ನಿಮ್ಮ ದೇವರಾದ ಸರ್ವೇಶ್ವರನ ಅನುಗ್ರಹದಿಂದ ಅವರನ್ನು ಸೋಲಿಸಿದಿರಿ ಎಂದು ಇಟ್ಟುಕೊಳ್ಳೋಣ.


ಸರ್ವೇಶ್ವರಸ್ವಾಮಿ ಸುತ್ತಮುತ್ತಲಿನ ಶತ್ರುಗಳನ್ನು ನಿರ್ಮೂಲಮಾಡಿ ಇಸ್ರಯೇಲರಿಗೆ ನೆಮ್ಮದಿಯಿತ್ತರು. ಬಹಳ ದಿನಗಳಾದ ತರುವಾಯ ಯೆಹೋಶುವ ಹಣ್ಣುಹಣ್ಣು ಮುದುಕನಾದ.


ತಪ್ಪಲಿಗೆ ಇಳಿದ ದನಕರುಗಳಂತೆ ಆ ಜನರನ್ನು ಕರೆತಂದಿತು ಸ್ವಾಮಿಯ ಆತ್ಮ ಶಾಂತಿ ನಿಲಯಕೆ. ಹೀಗೆ, ಆ ಜನರಿಗೆ ಮಾರ್ಗದರ್ಶಕರಾಗಿ ತಮ್ಮ ನಾಮವನ್ನು ಘನಪಡಿಸಿಕೊಂಡರು ಸ್ವಾಮಿ.


ಅರ್ನೋನ್ ಕಣಿವೆಯ ಅಂಚಿನಲ್ಲಿರುವ ಅರೋಯೇರ್ ಪಟ್ಟಣ ಮತ್ತು ಕಣಿವೆಯಲ್ಲೇ ಇರುವ ಪಟ್ಟಣ ಇವುಗಳನ್ನು ಮೊದಲುಗೊಂಡು ಗಿಲ್ಯಾದ್ ಸೀಮೆಯವರೆಗೆ ಯಾವ ಪಟ್ಟಣವನ್ನು ಜಯಿಸಲೂ ನಮಗೆ ಅಸಾಧ್ಯವಾಗಲಿಲ್ಲ. ನಮ್ಮ ದೇವರಾದ ಸರ್ವೇಶ್ವರ ಅವುಗಳೆಲ್ಲ ನಮ್ಮ ಕೈಗೆ ಸಿಕ್ಕುವಂತೆ ಮಾಡಿದರು.


ನಿನ್ನ ಜೀವಮಾನವಿಡೀ ಯಾರೊಬ್ಬನು ನಿನ್ನನ್ನು ಎದುರಿಸಿ ನಿಲ್ಲನು. ನಾನು ಮೋಶೆಯ ಸಂಗಡ ಇದ್ದ ಹಾಗೆ ನಿನ್ನ ಸಂಗಡವೂ ಇರುವೆನು. ನಿನ್ನನ್ನು ಕೈಬಿಡುವುದಿಲ್ಲ, ನಿನ್ನನ್ನು ತೊರೆದುಬಿಡುವುದಿಲ್ಲ.


ಇದಲ್ಲದೆ, ಅವರು ಯೆಹೋಶುವನಿಗೆ, “ಸರ್ವೇಶ್ವರಸ್ವಾಮಿ ನಿಜವಾಗಿ ಈ ನಾಡನ್ನೆಲ್ಲಾ ನಮಗೆ ಕೊಟ್ಟಿದ್ದಾರೆ. ಅದರ ನಿವಾಸಿಗಳೆಲ್ಲ ನಮ್ಮನ್ನು ಕಂಡು ನಡುಗುತ್ತ ಇದ್ದಾರೆ,” ಎಂದು ತಿಳಿಸಿದರು.


ಸರ್ವೇಶ್ವರ ಅವರನ್ನು ಇಸ್ರಯೇಲರ ಕೈವಶ ಮಾಡಿದರು. ಇವರು ಅವರನ್ನು ದೊಡ್ಡ ಚೀದೋನ್ ಹಾಗು ಮಿಸ್ರೆಫೋತ್ಮಯಿಮ್ ಎಂಬ ಊರುಗಳವರೆಗೂ ಮತ್ತು ಪೂರ್ವ ದಿಕ್ಕಿನಲ್ಲಿರುವ ಮಿಚ್ಫೆಯ ಬಯಲಿನವರೆಗೂ ಹಿಂದಟ್ಟಿ, ಒಬ್ಬನೂ ಉಳಿಯದಂತೆ ಸದೆಬಡಿದರು.


ಯೆಹೋಶುವನು ಆ ಬೇರೆ ಅರಸರನ್ನು, ಅವರ ಎಲ್ಲ ನಗರಗಳನ್ನು ಹಿಡಿದು ಸರ್ವೇಶ್ವರನ ದಾಸ ಮೋಶೆಯ ಆಜ್ಞೆಯಂತೆ ಅವರನ್ನು ಕತ್ತಿಯಿಂದ ನಾಶಮಾಡಿದನು.


ಹೀಗಾಗಿ ಇಸ್ರಯೇಲರು ಯೆಹೂದ್ಯರ ಎದುರಿನಿಂದ ಓಡಿಹೋದರು. ದೇವರು ಅವರನ್ನು ಯೆಹೂದ್ಯರ ಕೈಗೆ ಒಪ್ಪಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು