Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 21:45 - ಕನ್ನಡ ಸತ್ಯವೇದವು C.L. Bible (BSI)

45 ಸರ್ವೇಶ್ವರ ಇಸ್ರಯೇಲರಿಗೆ ಮಾಡಿದ ಅತ್ಯುನ್ನತ ವಾಗ್ದಾನಗಳಲ್ಲಿ ಒಂದೂ ತಪ್ಪಿಹೋಗಲಿಲ್ಲ. ಎಲ್ಲವೂ ನೆರವೇರಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

45 ಯೆಹೋವನು ಇಸ್ರಾಯೇಲ್ಯರಿಗೆ ಮಾಡಿದ ಅತಿ ಶ್ರೇಷ್ಠ ವಾಗ್ದಾನಗಳಲ್ಲಿ ಒಂದೂ ತಪ್ಪಿ ಹೋಗಲಿಲ್ಲ. ಎಲ್ಲವೂ ನೆರವೇರಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

45 ಆತನು ಇಸ್ರಾಯೇಲ್ಯರಿಗೆ ಮಾಡಿದ ಅತಿ ಶ್ರೇಷ್ಠವಾಗ್ದಾನಗಳಲ್ಲಿ ಒಂದೂ ತಪ್ಪಿಹೋಗಲಿಲ್ಲ. ಎಲ್ಲಾ ನೆರವೇರಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

45 ಯೆಹೋವನು ಇಸ್ರೇಲರಿಗೆ ಮಾಡಿದ ಪ್ರತಿಯೊಂದು ವಾಗ್ದಾನವನ್ನು ನೆರವೇರಿಸಿದನು. ಆತನು ಕಾರ್ಯರೂಪಕ್ಕೆ ತರದ ವಾಗ್ದನವೇ ಉಳಿಯಲಿಲ್ಲ. ಪ್ರತಿಯೊಂದು ವಾಗ್ದಾನವೂ ನೆರವೇರಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

45 ಯೆಹೋವ ದೇವರು ಇಸ್ರಾಯೇಲರಿಗೆ ಹೇಳಿದ ಅತಿ ಶ್ರೇಷ್ಠವಾಗ್ದಾನಗಳಲ್ಲಿ ಒಂದಾದರೂ ಬಿದ್ದು ಹೋಗಲಿಲ್ಲ. ಎಲ್ಲಾ ನೆರವೇರಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 21:45
13 ತಿಳಿವುಗಳ ಹೋಲಿಕೆ  

“ತಾವು ವಾಗ್ದಾನ ಮಾಡಿದಂತೆ ತಮ್ಮ ಪ್ರಜೆಗಳಾದ ಇಸ್ರಯೇಲರಿಗೆ ವಿಶ್ರಾಂತಿಯನ್ನು ಅನುಗ್ರಹಿಸಿದ ಸರ್ವೇಶ್ವರನಿಗೆ ಸ್ತೋತ್ರವಾಗಲಿ! ಅವರು ತಮ್ಮ ದಾಸ ಮೋಶೆಯ ಮುಖಾಂತರ ಮಾಡಿದ ಅತಿಶ್ರೇಷ್ಠ ವಾಗ್ದಾನಗಳಲ್ಲಿ ಒಂದೂ ತಪ್ಪಿಹೋಗಲಿಲ್ಲ.


ನರಮಾನವರಂತೆ ದೇವರು ಎರಡು ಮಾತಿನವರಲ್ಲ ನರಪುತ್ರರಂತೆ ಮನಸ್ಸನ್ನು ಬದಲಾಯಿಸಿಕೊಳ್ಳುವವರಲ್ಲ. ಆತ ನುಡಿದಂತೆ ನಡೆಯದಿರುತ್ತಾನೋ?


ನಿಮ್ಮನ್ನು ಕರೆದ ದೇವರು ಇದನ್ನು ಈಡೇರಿಸುವರು; ಏಕೆಂದರೆ, ದೇವರು ನಂಬಿಕಸ್ಥರು.


ತಮ್ಮ ಪುತ್ರನೂ ನಮ್ಮ ಪ್ರಭುವೂ ಆದ ಯೇಸುಕ್ರಿಸ್ತರ ಅನ್ಯೋನ್ಯತೆಗೆ ನಿಮ್ಮನ್ನು ಕರೆದಿರುವ ದೇವರು ನಿಜಕ್ಕೂ ವಿಶ್ವಾಸಪಾತ್ರರು.


ದೇವರ ವಾಗ್ದಾನ ಮತ್ತು ಶಪಥ ಇವೆರಡೂ ಅಚಲವಾದ ಆಧಾರಗಳು. ಇವುಗಳ ವಿಷಯವಾಗಿ ದೇವರು ನಮಗೆ ಮೋಸಮಾಡುವವರೇ ಅಲ್ಲ. ಇದರಿಂದಾಗಿ, ದೇವರ ಆಶ್ರಯಕ್ಕಾಗಿ ಧಾವಿಸಿಬಂದಿರುವ ನಾವು, ನಮ್ಮ ಮುಂದಿರಿಸಿರುವ ನಂಬಿಕೆ ನಿರೀಕ್ಷೆಯಲ್ಲಿ ಸ್ಥಿರವಾಗಿ ನಿಲ್ಲಲು ಬಲವಾದ ಪ್ರೋತ್ಸಾಹ ದೊರೆತಂತಾಯಿತು.


“ಕೇಳು, ಎಲೈ ಯಕೋಬ ಮನೆತನವೇ, ನಿನಗೆ ತಿಳಿಸಿದೆ ಈವರೆಗೆ ನಡೆದ ಸಂಗತಿಗಳನು ಪೂರ್ವದಲೇ. ಹೌದು ಪ್ರಕಟಿಸಿದೆ ನಾನು, ಹೊರಡಿಸಿದೆ ನನ್ನ ಬಾಯಿಂದಲೇ ಕೈಗೂಡುವಂತೆ ಮಾಡಿದೆ ನಾನವುಗಳನು ಕೂಡಲೆ.


ಸಮುವೇಲನು ದೊಡ್ಡವನಾಗುತ್ತಾ ಬಂದನು. ಸರ್ವೇಶ್ವರ ಅವನೊಡನೆ ಇದ್ದರು. ಆದುದರಿಂದಲೆ ಅವನು ಪ್ರವಾದನೆ ಮಾಡಿದವುಗಳಲ್ಲಿ ಒಂದೂ ತಪ್ಪಿಹೋಗಲಿಲ್ಲ.


“ಇಸ್ರಯೇಲ್ ದೇವರಾದ ಸರ್ವೇಶ್ವರನಿಗೆ ಸ್ತೋತ್ರವಾಗಲಿ! ಅವರು ನನ್ನ ತಂದೆ ದಾವೀದನಿಗೆ ಬಾಯಿಂದ ನುಡಿದದ್ದನ್ನು ಈಗ ಕೈಯಿಂದ ನೆರವೇರಿಸಿದ್ದಾರೆ.


ಸರ್ವೇಶ್ವರ ತಾವು ಕೊಟ್ಟ ಮಾತನ್ನು ನೆರವೇರಿಸಿದ್ದಾರೆ. ಅವರ ವಾಗ್ದಾನದಂತೆ ನಾನು ನನ್ನ ತಂದೆ ದಾವೀದರ ಸ್ಥಾನದಲ್ಲಿ ಇಸ್ರಯೇಲ್ ಸಿಂಹಾಸನದ ಮೇಲೆ ಅರಸನಾಗಿ ಕುಳಿತುಕೊಂಡಿದ್ದೇನೆ; ಇಸ್ರಯೇಲ್ ದೇವರಾದ ಸರ್ವೇಶ್ವರನ ಹೆಸರಿಗೋಸ್ಕರ ಈ ಆಲಯವನ್ನು ಕಟ್ಟಿಸಿದ್ದೇನೆ;


ನಿಮ್ಮ ದಾಸನೂ ನನ್ನ ತಂದೆಯೂ ಆದ ದಾವೀದನಿಗೆ ಕೊಟ್ಟ ಮಾತನ್ನು ಈಡೇರಿಸಿದ್ದೀರಿ; ನಿಮ್ಮ ಬಾಯಿ ನುಡಿದದ್ದನ್ನು ನಿಮ್ಮ ಕೈ ಈಗ ನೆರವೇರಿಸಿತು.


ಆತ ಪ್ರಾಮಾಣಿಕ ವ್ಯಕ್ತಿಯೆಂದು ಗುರುತಿಸಿದಿರಿ ಕಾನಾನ್ಯರ, ಹಿತ್ತಿಯರ, ಅಮೋರಿಯರ, ಪೆರಿಜ್ಜೀಯರ, ಯೆಬೂಸಿಯರ, ಗಿರ್ಗಾಷಿಯರ ನಾಡನು ಆತನ ಸಂತಾನದವರಿಗೆ ವಾಗ್ದಾನ ಮಾಡಿದಿರಿ. ಅಂತೆಯೇ ಸತ್ವ ಸ್ವರೂಪರಾದ ನೀವು ಅದನು ಈಡೇರಿಸಿದಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು