Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 22:10 - ಕನ್ನಡ ಸತ್ಯವೇದವು C.L. Bible (BSI)

10 ರೂಬೇನ್ಯರು, ಗಾದ್ಯರು ಹಾಗೂ ಮನಸ್ಸೆಕುಲದ ಅರ್ಧಜನರು ಕಾನಾನ್ ನಾಡಿನಲ್ಲಿರುವ ಜೋರ್ಡನ್ ತೀರಪ್ರದೇಶಕ್ಕೆ ಬಂದಾಗ ಅಲ್ಲಿ ಒಂದು ಮಹಾಬಲಿಪೀಠವನ್ನು ಕಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ರೂಬೇನ್ಯರೂ ಗಾದ್ಯರೂ ಹಾಗೂ ಮನಸ್ಸೆ ಕುಲದ ಅರ್ಧ ಜನರೂ ಕಾನಾನ್ ದೇಶದಲ್ಲಿರುವ ಯೊರ್ದನಿನ ತೀರಪ್ರದೇಶಕ್ಕೆ ಬಂದಾಗ ಅಲ್ಲಿ ಒಂದು ದೊಡ್ಡ ಯಜ್ಞವೇದಿಯನ್ನು ಕಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ರೂಬೇನ್ಯರೂ ಗಾದ್ಯರೂ ಮನಸ್ಸೆಕುಲದ ಅರ್ಧಜನರೂ ಕಾನಾನ್ ದೇಶದಲ್ಲಿರುವ ಯೊರ್ದನ್ ತೀರ ಪ್ರದೇಶಕ್ಕೆ ಬಂದಾಗ ಅಲ್ಲಿ ಒಂದು ಮಹಾವೇದಿಯನ್ನು ಕಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಆಗ ರೂಬೇನ್ಯರು, ಗಾದ್ಯರು ಮತ್ತು ಮನಸ್ಸೆಕುಲದ ಅರ್ಧಜನರು ಗೆಲಿಲೋತ್ ಎಂಬ ಸ್ಥಳಕ್ಕೆ ಹೋದರು. ಇದು ಕಾನಾನ್ ಪ್ರದೇಶದಲ್ಲಿ ಜೋರ್ಡನ್ ನದಿಯ ಹತ್ತಿರ ಇತ್ತು. ಆ ಸ್ಥಳದಲ್ಲಿ ಅವರು ಸುಂದರವಾದ ಒಂದು ಯಜ್ಞವೇದಿಕೆಯನ್ನು ಕಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ರೂಬೇನ್ಯರೂ ಗಾದ್ಯರೂ ಮನಸ್ಸೆಯ ಅರ್ಧ ಗೋತ್ರದವರು ಕಾನಾನ್ ದೇಶದಲ್ಲಿರುವ ಯೊರ್ದನ್ ನದಿ ಪ್ರಾಂತಕ್ಕೆ ಬಂದಾಗ, ಅಲ್ಲಿ ದೊಡ್ಡ ಬಲಿಪೀಠವನ್ನು ಕಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 22:10
10 ತಿಳಿವುಗಳ ಹೋಲಿಕೆ  

ಯಕೋಬನು ಬೆಳಗಿನ ಜಾವದಲ್ಲಿ ಎದ್ದು ತಾನು ತಲೆದಿಂಬಾಗಿ ಇಟ್ಟುಕೊಂಡಿದ್ದ ಆ ಕಲ್ಲನ್ನು ಸ್ಮಾರಕಸ್ತಂಭವಾಗಿ ನೆಟ್ಟನು. ಅದರ ಮೇಲೆ ಎಣ್ಣೆ ಹೊಯ್ದು ಅಭ್ಯಂಗಿಸಿದನು.


ಆಗ ರೂಬೇನ್ಯರು, ಗಾದ್ಯರು ಹಾಗೂ ಮನಸ್ಸೆಕುಲದ ಅರ್ಧಜನರು ಕಾನಾನ್ ನಾಡಿನ ಶಿಲೋವಿನಲ್ಲಿದ್ದ ಇಸ್ರಯೇಲರನ್ನು ಬಿಟ್ಟು ಸರ್ವೇಶ್ವರನ ಆಜ್ಞೆಗನುಸಾರ ಮೋಶೆಯಿಂದ ತಮಗೆ ದೊರಕಿದ ಸೊತ್ತಾದ ಗಿಲ್ಯಾದ್ ನಾಡಿಗೆ ಹೋದರು.


ರೂಬೇನ್ಯರು, ಗಾದ್ಯರು ಹಾಗು ಮನಸ್ಸೆಕುಲದ ಅರ್ಧಜನರು ಇಸ್ರಯೇಲ್ ನಾಡಾದ ಕಾನಾನಿನ ಪೂರ್ವಕ್ಕಿರುವ ಜೋರ್ಡನ್ ನದಿಯ ತೀರಪ್ರದೇಶದಲ್ಲಿ ಬಲಿಪೀಠವನ್ನು ಕಟ್ಟಿದ್ದಾರೆಂಬ ಸುದ್ದಿ ಮಿಕ್ಕ ಇಸ್ರಯೇಲರಿಗೆ ಮುಟ್ಟಿತು.


ಆ ದಿನದಂದು ಈಜಿಪ್ಟಿನ ನಡುವೆ ಸರ್ವೇಶ್ವರ ಸ್ವಾಮಿಗೆ ಒಂದು ಬಲಿಪೀಠವಿರುವುದು ಮತ್ತು ನಾಡಿನ ಗಡಿಯಲ್ಲಿ ಸ್ವಾಮಿಯ ಸ್ಥಂಭ ಇರುವುದು.


ಅಲ್ಲಿ ಸರ್ವೇಶ್ವರ ಸ್ವಾಮಿ ಅಬ್ರಾಮನಿಗೆ ದರ್ಶನವಿತ್ತು - “ಈ ನಾಡನ್ನು ನಾನು ನಿನ್ನ ಸಂತಾನಕ್ಕೆ ಕೊಡುತ್ತೇನೆ” ಎಂದು ಹೇಳಿದರು. ತನಗೆ ದರ್ಶನಕೊಟ್ಟ ಸರ್ವೇಶ್ವರನಿಗೆ ಅಬ್ರಾಮನು ಅಲ್ಲಿ ಒಂದು ಬಲಿಪೀಠವನ್ನು ಕಟ್ಟಿಸಿದನು.


ಬಳಿಕ ಅವನು ಅಲ್ಲಿಂದ ದಕ್ಷಿಣಕ್ಕೆ ಹೊರಟು ಬೇತೇಲಿಗೆ ಪೂರ್ವಕ್ಕಿರುವ ಗುಡ್ಡಗಾಡಿಗೆ ಬಂದು ಗುಡಾರ ಹಾಕಿ ನೆಲಸಿದನು. ಪಶ್ಚಿಮಕ್ಕೆ ಬೇತೇಲೂ ಪೂರ್ವಕ್ಕೆ ಆಯಿ ಎಂಬ ಊರು ಇದ್ದವು. ಅಲ್ಲೂ ಸರ್ವೇಶ್ವರ ಸ್ವಾಮಿಗೆ ಒಂದು ಬಲಿಪೀಠವನ್ನು ಕಟ್ಟಿಸಿ ಅವರ ನಾಮಸ್ಮರಣೆಮಾಡಿ ಆರಾಧಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು