Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 22:11 - ಕನ್ನಡ ಸತ್ಯವೇದವು C.L. Bible (BSI)

11 ರೂಬೇನ್ಯರು, ಗಾದ್ಯರು ಹಾಗು ಮನಸ್ಸೆಕುಲದ ಅರ್ಧಜನರು ಇಸ್ರಯೇಲ್ ನಾಡಾದ ಕಾನಾನಿನ ಪೂರ್ವಕ್ಕಿರುವ ಜೋರ್ಡನ್ ನದಿಯ ತೀರಪ್ರದೇಶದಲ್ಲಿ ಬಲಿಪೀಠವನ್ನು ಕಟ್ಟಿದ್ದಾರೆಂಬ ಸುದ್ದಿ ಮಿಕ್ಕ ಇಸ್ರಯೇಲರಿಗೆ ಮುಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ರೂಬೇನ್ಯರು, ಗಾದ್ಯರು ಹಾಗೂ ಮನಸ್ಸೆಯ ಅರ್ಧ ಜನರು ಇಸ್ರಾಯೇಲ ದೇಶವಾದ ಕಾನಾನಿನ ಪೂರ್ವಕ್ಕಿರುವ ಯೊರ್ದನ್ ನದಿಯ ತೀರಪ್ರದೇಶದಲ್ಲಿ ಯಜ್ಞವೇದಿಯನ್ನು ಕಟ್ಟಿದ್ದಾರೆಂಬ ವರ್ತಮಾನವು ಮಿಕ್ಕ ಇಸ್ರಾಯೇಲರಿಗೂ ತಿಳಿದಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ರೂಬೇನ್ಯರೂ ಗಾದ್ಯರೂ ಮನಸ್ಸೆಕುಲದ ಅರ್ಧಜನರೂ ಇಸ್ರಾಯೇಲ್‍ದೇಶವಾದ ಕಾನಾನಿನ ಪೂರ್ವಕ್ಕಿರುವ ಯೊರ್ದನ್‍ಹೊಳೆಯ ತೀರಪ್ರದೇಶದಲ್ಲಿ ವೇದಿಯನ್ನು ಕಟ್ಟಿದ್ದಾರೆಂಬ ವರ್ತಮಾನವು ವಿುಕ್ಕ ಇಸ್ರಾಯೇಲ್ಯರಿಗೆ ಮುಟ್ಟಿದಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಇನ್ನೂ ಶೀಲೋವಿನಲ್ಲಿದ್ದ ಇಸ್ರೇಲಿನ ಉಳಿದ ಜನರು, ಈ ಮೂರು ಕುಲದವರು ಕಟ್ಟಿಸಿದ ಯಜ್ಞವೇದಿಕೆಯ ಬಗ್ಗೆ ಕೇಳಿದರು. ಕಾನಾನಿನ ಗಡಿಯ ಬಳಿಯಿರುವ ಗೆಲಿಲೋತ್ ಎಂಬಲ್ಲಿ ಇದನ್ನು ಕಟ್ಟಲಾಗಿದೆ ಎಂಬುದು ಅವರಿಗೆ ತಿಳಿಯಿತು. ಇದು ಇಸ್ರೇಲರಿಗೆ ಸೇರಿದ ಜೋರ್ಡನ್ ನದಿಯ ಸಮೀಪದಲ್ಲಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ರೂಬೇನ್ಯರೂ ಗಾದ್ಯರೂ ಮನಸ್ಸೆಯ ಅರ್ಧ ಗೋತ್ರದವರೂ ಕಾನಾನ್ ದೇಶಕ್ಕೆ ಎದುರಾಗಿ ಇಸ್ರಾಯೇಲರು ದಾಟಿಬಂದ ಯೊರ್ದನ್ ನದಿ ಪ್ರಾಂತದಲ್ಲಿ ಬಲಿಪೀಠವನ್ನು ಕಟ್ಟಿದರೆಂಬ ಸುದ್ದಿ ಇಸ್ರಾಯೇಲರಿಗೆ ಮುಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 22:11
13 ತಿಳಿವುಗಳ ಹೋಲಿಕೆ  

ಯೋವಾನ್ನನು ಸ್ನಾನದೀಕ್ಷೆ ಕೊಡುತ್ತಿದ್ದ ಜೋರ್ಡನ್ ನದಿಯ ಆಚೆದಡದಲ್ಲಿದ್ದ ಬೆಥಾನಿಯ ಎಂಬಲ್ಲಿ ಇದೆಲ್ಲವೂ ನಡೆಯಿತು.


ಅರಸನ ಆಳುಗಳು ಜೋರ್ಡನ್ ದಾರಿ ಹಿಡಿದು ಹೋಗಿ ನದಿದಾಟುವ ಸ್ಥಳದವರೆಗೂ ಹುಡುಕಿದರು. ಹುಡುಕುವವರು ಹೊರಟಕೂಡಲೆ ಊರಬಾಗಿಲನ್ನು ಮುಚ್ಚಲಾಯಿತು.


ಅಂದು ಭಾನುವಾರ, ಮುಂಜಾನೆ. ಇನ್ನೂ ಕತ್ತಲಾಗಿತ್ತು. ಮಗ್ದಲದ ಮರಿಯಳು ಸಮಾಧಿಯ ಬಳಿಗೆ ಬಂದಳು. ಸಮಾಧಿಯ ಬಾಗಿಲಿಗೆ ಮುಚ್ಚಲಾಗಿದ್ದ ಕಲ್ಲು ಅಲ್ಲಿಂದ ತೆಗೆದುಹಾಕಿರುವುದನ್ನು ಕಂಡಳು.


ಇದಲ್ಲದೆ, ಅವರು ತಪ್ಪಿಸಿಕೊಂಡು ಹೋಗದಂತೆ ಎಫ್ರಯಿಮಿಗೆ ಹೋಗುವ ಜೋರ್ಡನಿನ ಹಾಯಗಡಗಳನ್ನೆಲ್ಲಾ ಹಿಡಿದರು. ತಪ್ಪಿಸಿಕೊಂಡ ಎಫ್ರಯಿಮ್ಯರಲ್ಲಿ ಒಬ್ಬನು ಅಲ್ಲಿಗೆ ಬಂದು ನನ್ನನ್ನು ದಾಟಗೊಡಿರಿ ಎಂದು ಅವರನ್ನು ಕೇಳಿದಾಗ ಅವರು, “ನೀನು ಎಫ್ರಯಿಮನೋ?’ ಎಂದು ಕೇಳುತ್ತಿದ್ದರು.


ರೂಬೇನ್ಯರು, ಗಾದ್ಯರು ಹಾಗೂ ಮನಸ್ಸೆಕುಲದ ಅರ್ಧಜನರು ಕಾನಾನ್ ನಾಡಿನಲ್ಲಿರುವ ಜೋರ್ಡನ್ ತೀರಪ್ರದೇಶಕ್ಕೆ ಬಂದಾಗ ಅಲ್ಲಿ ಒಂದು ಮಹಾಬಲಿಪೀಠವನ್ನು ಕಟ್ಟಿದರು.


“ಸರ್ವೇಶ್ವರನ ಸರ್ವಸಭೆ ಹೇಳುವ ಮಾತಿದು: ನೀವು ಇಸ್ರಯೇಲ್ ದೇವರಿಗೆ ವಿರುದ್ಧ ಇಂಥ ದ್ರೋಹ ಮಾಡಿದ್ದೇಕೆ? ನೀವು ನಿಮಗಾಗಿಯೇ ಒಂದು ಬಲಿಪೀಠವನ್ನು ಕಟ್ಟಿಕೊಂಡಿದ್ದೀರಿ. ಇದರಿಂದ ನೀವು ಸರ್ವೇಶ್ವರನಿಗೆ ವಿಮುಖವಾದಂತಾಯಿತು; ನೀವು ಇಂದು ಸರ್ವೇಶ್ವರನಿಗೆ ವಿರುದ್ಧ ತಿರುಗಿಬಿದ್ದಂತಾಯಿತು.


ನಿಮ್ಮ ನಾಡು ಅಶುದ್ಧವಾಗಿದೆಯೆಂದು ತೋರಿದರೆ ಸರ್ವೇಶ್ವರನ ಗುಡಾರವಿರುವ ಅವರ ಸ್ವಂತ ನಾಡಿಗೆ ಬಂದು ನಮ್ಮ ಮಧ್ಯೆಯಿರುವ ಸೊತ್ತನ್ನು ತೆಗೆದುಕೊಳ್ಳಿ. ನಮ್ಮ ದೇವರಾದ ಸರ್ವೇಶ್ವರನ ಬಲಿಪೀಠ ಒಂದನ್ನು ಬಿಟ್ಟು ನಿಮಗಾಗಿ ಇನ್ನೊಂದನ್ನು ಕಟ್ಟಿಕೊಂಡು ಸರ್ವೇಶ್ವರನಿಗೂ ನಮಗೂ ವಿರುದ್ಧ ತಿರುಗಿಬೀಳಬೇಡಿ.


ಆಗ ನೀವು ನಿರ್ಭಯರಾಗಿ ನಾನು ನಿಮಗೆ ಆಜ್ಞಾಪಿಸಿದ ಎಲ್ಲಾ ಕಾಣಿಕೆಗಳನ್ನು ಅಂದರೆ, ದಹನಬಲಿ ಮುಂತಾದ ಯಜ್ಞಪಶುಗಳನ್ನು, ಬೆಳೆಯ ದಶಮಾಂಶಗಳನ್ನು, ಸರ್ವೇಶ್ವರನಿಗಾಗಿ ಪ್ರತ್ಯೇಕಿಸುವ ಪದಾರ್ಥಗಳನ್ನು, ಹರಕೆಮಾಡಿದ ವಿಶೇಷ ಕಾಣಿಕೆಗಳನ್ನು, ಇವುಗಳನ್ನೆಲ್ಲ ನಿಮ್ಮ ದೇವರಾದ ಸರ್ವೇಶ್ವರ ತಮ್ಮ ನಾಮಸ್ಥಾಪನೆಗಾಗಿ ಆರಿಸಿಕೊಳ್ಳುವ ಸ್ಥಳಕ್ಕೇ ತರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು