Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 22:15 - ಕನ್ನಡ ಸತ್ಯವೇದವು C.L. Bible (BSI)

15 ಇವರು ಗಿಲ್ಯಾದಿನಲ್ಲಿದ್ದ ರೂಬೇನ್ಯರ, ಗಾದ್ಯರ ಹಾಗು ಮನಸ್ಸೆಕುಲದ ಅರ್ಧಜನರ ಬಳಿಗೆ ಬಂದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಇವರು ಗಿಲ್ಯಾದನಲ್ಲಿದ್ದ ರೂಬೇನ್ಯರ, ಗಾದ್ಯರ ಹಾಗೂ ಮನಸ್ಸೆ ಕುಲದ ಅರ್ಧಜನರ ಬಳಿಗೆ ಬಂದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಅವರು ಗಿಲ್ಯಾದಿನಲ್ಲಿದ್ದ ರೂಬೇನ್ಯರು, ಗಾದ್ಯರು ಮನಸ್ಸೆ ಕುಲದ ಅರ್ಧಜನರು ಇವರ ಬಳಿಗೆ ಬಂದು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಈ ಹತ್ತು ಮಂದಿ ಗಿಲ್ಯಾದಿಗೆ ಹೋಗಿ ರೂಬೇನ್ಯರ, ಗಾದ್ಯರ ಮತ್ತು ಮನಸ್ಸೆಕುಲದ ಅರ್ಧಜನರ ಜೊತೆಗೆ ಮಾತನಾಡಿ ಹೀಗೆಂದರು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಇವರು ಗಿಲ್ಯಾದ್ ನಾಡಿನಲ್ಲಿ ರೂಬೇನ್ಯರ, ಗಾದ್ಯರ ಹಾಗು ಮನಸ್ಸೆಯ ಅರ್ಧ ಗೋತ್ರದವರ ಬಳಿಗೆ ಬಂದು,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 22:15
31 ತಿಳಿವುಗಳ ಹೋಲಿಕೆ  

ಆದ್ದರಿಂದ ನಿಮ್ಮೊಡನೆ ಮಾತಾಡುವ ದೇವರ ಧ್ವನಿಯನ್ನು ಕಡೆಗಣಿಸಬೇಡಿ. ಭೂಮಿಯ ಮೇಲೆ ತಮಗೆ ಬುದ್ಧಿವಾದ ಹೇಳಿದವರನ್ನು ಕಡೆಗಣಿಸಿದವರು ದಂಡನೆಯಿಂದ ತಪ್ಪಿಸಿಕೊಳ್ಳಲಿಲ್ಲ. ಹೀಗಿರುವಲ್ಲಿ, ನಮಗೆ ಸ್ವರ್ಗಲೋಕದಿಂದ ಬುದ್ಧಿವಾದ ಹೇಳಿದಾತನನ್ನು ಕಡೆಗಣಿಸಿದರೆ ಹೇಗೆತಾನೆ ದಂಡನೆಯಿಂದ ತಪ್ಪಿಸಿಕೊಂಡೇವು?


ಅದೇನೆಂದರೆ: ನೀವು ಸಭೆಸೇರಿ, ಪ್ರಭು ಯೇಸುವಿನ ಶಕ್ತಿಯ ಆಧಾರದ ಮೇಲೆ ಅವನನ್ನು ಸೈತಾನನಿಗೆ ಒಪ್ಪಿಸಿಬಿಡಬೇಕು. ನಾನು ಆತ್ಮಿಕವಾಗಿ ನಿಮ್ಮ ಮಧ್ಯೆಯಿರುತ್ತೇನೆ.


ಸಹೋದರರೇ, ನಮ್ಮ ಪ್ರಭು ಯೇಸುಕ್ರಿಸ್ತರ ಹೆಸರಿನಲ್ಲಿ ನಾನು ಕೇಳಿಕೊಳ್ಳುವುದೇನೆಂದರೆ: ವಾದವಿವಾದವಿಲ್ಲದೆ, ಭಿನ್ನಭೇದಗಳಿಲ್ಲದೆ ಒಂದೇ ಮನಸ್ಸಿನಿಂದಲೂ ಒಂದೇ ಉದ್ದೇಶದಿಂದಲೂ ನೀವು ಐಕಮತ್ಯದಿಂದ ಬಾಳಿರಿ.


ಅವರಿಗೂ ಅವನು ಕಿವಿಗೊಡದೆಹೋದಲ್ಲಿ ಧರ್ಮಸಭೆಗೆ ತಿಳಿಸು. ಧರ್ಮಸಭೆಗೂ ಅವನು ಕಿವಿಗೊಡದೆಹೋದರೆ ಅವನನ್ನು ಧರ್ಮಭ್ರಷ್ಟನೆಂದು ಹಾಗೂ ಬಹಿಷ್ಕೃತನೆಂದು ಪರಿಗಣಿಸು.


ಅವರಾದರೋ ಬಂಡಾಯವೆದ್ದರು; ಸ್ವಾಮಿಯ ಪವಿತ್ರಾತ್ಮನನ್ನು ದುಃಖಪಡಿಸಿದರು. ಎಂತಲೇ ಸರ್ವೇಶ್ವರ ಅವರಿಗೆ ಶತ್ರುವಾಗಿ ಮಾರ್ಪಟ್ಟರು, ತಾವೇ ಅವರಿಗೆ ವಿರುದ್ಧವಾಗಿ ಹೋರಾಡಿದರು.


ಮರೆಯರು ನನ್ನ ಮಹತ್ಕಾರ್ಯಗಳನು I ಇಡುವರು ನನ್ನಲ್ಲೇ ಭರವಸೆಯನು I ಕೈಗೊಳ್ಳುವರು ನನ್ನ ಆಜ್ಞೆಗಳನು II


ಸರ್ವೇಶ್ವರಾ, ಇಸ್ರಯೇಲ್ ದೇವರೇ, ಈಗಿರುವಷ್ಟು ಜನರನ್ನು ನಮ್ಮಲ್ಲಿ ಉಳಿಸಿದ್ದರಿಂದ ನೀವು ಧರ್ಮಸ್ವರೂಪರೆಂದು ಸ್ಪಷ್ಟವಾಯಿತು. ನಾವಾದರೋ ನಿಮ್ಮ ದೃಷ್ಟಿಯಲ್ಲಿ ಅಪರಾಧಿಗಳು, ಈ ನಮ್ಮ ದುಷ್ಕೃತ್ಯದ ಸಲುವಾಗಿ ನಿಮ್ಮೆದುರಿನಲ್ಲಿ ನಿಲ್ಲಲಾರೆವು.”


ಇಸ್ರಯೇಲರಲ್ಲಿ ಸಾಧಾರಣಜನರು, ಯಾಜಕರು, ಲೇವಿಯರು ತಮಗೆ ಹಾಗು ತಮ್ಮ ಗಂಡುಮಕ್ಕಳಿಗೆ ಅವರಿಂದ ಹೆಣ್ಣುಗಳನ್ನು ತೆಗೆದುಕೊಳ್ಳುತ್ತಿದ್ದಾರೆ. ದೇವಕುಲವು ಅನ್ಯದೇಶಗಳವರೊಡನೆ ಮಿಶ್ರವಾಗುತ್ತಿದೆ; ನಾಯಕರೇ, ಮುಖ್ಯಸ್ಥರೇ, ಈ ದ್ರೋಹಕ್ಕೆ ಮುಂದಾಳುಗಳಾಗುತ್ತಿದ್ದಾರೆ,” ಎಂದು ತಿಳಿಸಿದರು.


“ನೀವು ಸೆರೆಹಿಡಿದವರನ್ನು ಇಲ್ಲಿಗೆ ತರಬೇಡಿ; ನೀವು ನಮ್ಮ ಪಾಪಾಪರಾಧಗಳ ಜೊತೆಗೆ ಸರ್ವೇಶ್ವರನಿಗೆ ವಿರುದ್ಧ ಮತ್ತೊಂದು ಅಪರಾಧವನ್ನು ಸೇರಿಸಬೇಕೆಂದಿರುತ್ತೀರೋ? ನಮ್ಮ ಅಪರಾಧ ದೊಡ್ಡದು; ಇಸ್ರಯೇಲರ ಮೇಲಿರುವ ದೈವಕೋಪ ಉಗ್ರವಾಗಿದೆ!” ಎಂದು ಹೇಳಿದರು.


“ಉಜ್ಜೀಯರೇ, ಸರ್ವೇಶ್ವರನಿಗೆ ಧೂಪಾರತಿ ಎತ್ತುವುದು ನಿಮ್ಮ ಕೆಲಸವಲ್ಲ; ಅದಕ್ಕೆ ಆರೋನನ ಸಂತಾನದವರ ಯಾಜಕರು ಪ್ರತಿಷ್ಠಿತರಾಗಿದ್ದಾರೆ. ಪವಿತ್ರಾಲಯವನ್ನು ಬಿಟ್ಟು ಹೋಗಿ; ನೀವು ಮಾಡುತ್ತಿರುವುದು ದ್ರೋಹ. ಇದಕ್ಕೆ ದೇವರಾದ ಸರ್ವೇಶ್ವರನಿಂದ ನಿಮಗೆ ಮರ್ಯಾದೆ ದೊರಕಲಾರದು,” ಎಂದರು.


ಅಮಚ್ಯನು ಸರ್ವೇಶ್ವರನ ಭಕ್ತಿಯನ್ನು ಬಿಟ್ಟಂದಿನಿಂದ ಜೆರುಸಲೇಮಿನವರು ಅವನಿಗೆ ವಿರುದ್ಧ ಒಳಸಂಚು ಮಾಡುತ್ತಿದ್ದರು. ಆದುದರಿಂದ ಅವನು ಲಾಕೀಷಿಗೆ ಓಡಿಹೋದನು. ಆದರೆ ಅವರು ಆಳುಗಳನ್ನು ಕಳುಹಿಸಿ ಅವನನ್ನು ಅಲ್ಲಿಯೇ ಕೊಲ್ಲಿಸಿದರು.


ಇಸ್ರಯೇಲರು ಅಂದಿನಿಂದ ಇಂದಿನವರೆಗೂ ದಾವೀದನ ಕುಟುಂಬದವರೊಡನೆ ಸಮಾಧಾನವಾಗಲೇ ಇಲ್ಲ.


ಆಗ ಯೋವಾಬನು, “ನನ್ನ ಒಡೆಯರಾದ ಅರಸರೇ, ಸರ್ವೇಶ್ವರ ತಮ್ಮ ಪ್ರಜೆಗಳನ್ನು ನೂರರಷ್ಟು ಹೆಚ್ಚಿಸಲಿ; ಅವರೆಲ್ಲರೂ ನನ್ನ ಒಡೆಯರ ಸೇವಕರಷ್ಟೇ. ಆದರೆ ಒಡೆಯರು ಇಂಥದನ್ನು ಅಪೇಕ್ಷಿಸಿದ್ದೇಕೆ? ಇಸ್ರಯೇಲರನ್ನು ಅಪರಾಧಕ್ಕೆ ಗುರಿಮಾಡುವುದೇಕೆ?” ಎಂದನು.


ತಂತ್ರಮಂತ್ರಗಳಷ್ಟೇ ಕೆಟ್ಟದು ಪ್ರತಿಭಟನೆ ಕಳ್ಳಭಕ್ತಿಗೂ ವಿಗ್ರಹಾರಾಧನೆಗೂ ಸಮಾನ ಹಟಮಾರಿತನ. ನೀ ತಳ್ಳಿಬಿಟ್ಟೆ ಸರ್ವೇಶ್ವರನ ಆದೇಶವನ್ನು; ತಳ್ಳಿಬಿಟ್ಟರವರು ನಿನ್ನ ಅರಸುತನವನ್ನು,” ಎಂದು ನುಡಿದನು.


ಇಂತಿರುವಲ್ಲಿ ನೀವು ಮತ್ತೆ ಸರ್ವೇಶ್ವರನನ್ನು ಬಿಟ್ಟುಬಿಡುತ್ತೀರೋ? ನೀವು ಇಂದು ಸರ್ವೇಶ್ವರನಿಗೆ ವಿರುದ್ಧ ತಿರುಗಿಬಿದ್ದರೆ ನಾಳೆಯೇ ಅವರ ಕೋಪಾಗ್ನಿ ಇಸ್ರಯೇಲ್ ಸರ್ವಸಭೆಯ ಮೇಲೆ ಉರಿಯತೊಡಗುವುದು.


ಅವರೆಲ್ಲರು ಶಿಲೋವಿನಲ್ಲಿ ಕೂಡಿಬಂದು ಬಲಿಪೀಠಸ್ಥಾಪಕರ ವಿರುದ್ಧ ಯುದ್ಧಕ್ಕೆ ಹೋರಾಡಲು ಸಿದ್ಧರಾದರು.


ಆದರೆ ನೀವು ಅವರನ್ನು ಬಿಟ್ಟು, ಅವರ ಮಾತನ್ನು ಕೇಳಲೊಲ್ಲದೆ, ಮೋಸಹೋಗಿ,


ಹಾಗೆ ಮಾಡಿದರೆ ಅವರು ನಿಮ್ಮ ಮಕ್ಕಳನ್ನು ಸರ್ವೇಶ್ವರನಿಂದ ವಿಮುಖಗೊಳಿಸಿ ಇತರ ದೇವರುಗಳನ್ನು ಪೂಜಿಸುವಂತೆ ಮಾಡಬಹುದು. ಆಗ ಸರ್ವೇಶ್ವರ ನಿಮ್ಮ ಮೇಲೆ ಕೋಪಗೊಂಡು ಬೇಗನೆ ನಿಮ್ಮನ್ನು ನಾಶಮಾಡುವರು.


ನೀವು ವಿಧೇಯರಾಗಿ ನಡೆಯದೆ ಹೋದರೆ ಸರ್ವೇಶ್ವರ ಈ ಜನರನ್ನು ಇನ್ನೂ ಮರುಭೂಮಿಯಲ್ಲೇ ಇರಿಸುವರು; ಈ ಸಮಸ್ತ ಜನಾಂಗದ ನಾಶಕ್ಕೆ ನೀವೇ ಕಾರಣರು ಆಗುವಿರಿ,” ಎಂದನು.


ಅಲ್ಲಿ ಅಮಾಲೇಕ್ಯರು ಹಾಗೂ ಕಾನಾನ್ಯರು ನಿಮಗೆ ಎದುರಾಗುವರು; ನೀವು ಅವರ ಕತ್ತಿಗೆ ತುತ್ತಾಗುವಿರಿ. ನೀವು ಸರ್ವೇಶ್ವರನ ಮಾತನ್ನು ಅನುಸರಿಸದೆ ಪ್ರತಿಭಟಿಸಿದ್ದೀರಿ. ಕತ್ತಿಗೆ ತುತ್ತಾಗುವಿರಿ. ಈ ಕಾರಣ ಅವರು ನಿಮ್ಮೊಂದಿಗೆ ಇರುವುದಿಲ್ಲ,” ಎಂದು ಹೇಳಿದನು.


ಯಾವ ಗಂಡಸೇ ಆಗಲಿ ಹೆಂಗಸೇ ಆಗಲಿ, ಮತ್ತೊಬ್ಬನನ್ನು ಮೋಸಗೊಳಿಸಿ ಸರ್ವೇಶ್ವರನಲ್ಲಿ ವಿಶ್ವಾಸ ಕಳೆದುಕೊಳ್ಳುವಂತೆ ಮಾಡಿದರೆ, ಅಂಥವರು ಅಪರಾಧಿಗಳು.


“ಆದರೆ ಅವರು ತಾವೂ ತಮ್ಮ ಪಿತೃಗಳೂ ನನಗೆ ದ್ರೋಹಿಗಳಾಗಿ ಪಾಪ ಮಾಡಿದವರೆಂದು ಒಪ್ಪಿಕೊಂಡು, ನನಗೆ ವಿರೋಧವಾಗಿ ನಡೆದದ್ದರಿಂದಲೇ


ಅವರು ಅಪರಾಧಿಗಳಾದುದರಿಂದ ಸರ್ವೇಶ್ವರನ ಸನ್ನಿಧಿಯಲ್ಲಿ ಈ ಪರಿಹಾರ ಬಲಿಯನ್ನು ಅರ್ಪಿಸಬೇಕು.


ನಾನು ಅವರಿಗೆ ಆಜ್ಞಾಪಿಸಿದ ಮಾರ್ಗವನ್ನು ಇಷ್ಟು ಬೇಗನೆ ತೊರೆದುಬಿಟ್ಟು ತಮಗೇ ಲೋಹದ ಹೋರಿಕರುವನ್ನು ಮಾಡಿಸಿಕೊಂಡು, ಅದಕ್ಕೆ ಅಡ್ಡಬಿದ್ದು, ಬಲಿಗಳನ್ನರ್ಪಿಸಿ, ‘ಇಸ್ರಯೇಲರೇ ನೋಡಿ, ನಿಮ್ಮನ್ನು ಈಜಿಪ್ಟಿನಿಂದ ಕರೆದುತಂದ ದೇವರು’ ಎಂದು ಹೇಳಿಕೊಳ್ಳುತ್ತಿದ್ದಾರೆ.


ಮತ್ತು ಕುಲಕ್ಕೆ ಒಬ್ಬನಂತೆ ಹತ್ತುಮಂದಿ ನಾಯಕರನ್ನೂ ಕಳಿಸಿದರು. ಇವರಲ್ಲಿ ಪ್ರತಿಯೊಬ್ಬನು ತನ್ನ ತನ್ನ ಕುಲಗೋತ್ರ-ಕುಟುಂಬಗಳಲ್ಲಿ ಮುಖ್ಯಸ್ಥನಾಗಿದ್ದನು.


“ಸರ್ವೇಶ್ವರನ ಸರ್ವಸಭೆ ಹೇಳುವ ಮಾತಿದು: ನೀವು ಇಸ್ರಯೇಲ್ ದೇವರಿಗೆ ವಿರುದ್ಧ ಇಂಥ ದ್ರೋಹ ಮಾಡಿದ್ದೇಕೆ? ನೀವು ನಿಮಗಾಗಿಯೇ ಒಂದು ಬಲಿಪೀಠವನ್ನು ಕಟ್ಟಿಕೊಂಡಿದ್ದೀರಿ. ಇದರಿಂದ ನೀವು ಸರ್ವೇಶ್ವರನಿಗೆ ವಿಮುಖವಾದಂತಾಯಿತು; ನೀವು ಇಂದು ಸರ್ವೇಶ್ವರನಿಗೆ ವಿರುದ್ಧ ತಿರುಗಿಬಿದ್ದಂತಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು