Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 22:23 - ಕನ್ನಡ ಸತ್ಯವೇದವು C.L. Bible (BSI)

23 ನಾವು ಸರ್ವೇಶ್ವರನಿಂದ ವಿಮುಖರಾಗಿ ದಹನಬಲಿಯನ್ನಾಗಲಿ, ಸಮಾಧಾನ ಬಲಿಯನ್ನಾಗಲಿ, ಧಾನ್ಯನೈವೇದ್ಯವನ್ನಾಗಲಿ ಸಮರ್ಪಿಸುವುದಕ್ಕಾಗಿ ಈ ಬಲಿಪೀಠವನ್ನು ಕಟ್ಟಿದ್ದರೆ ಸರ್ವೇಶ್ವರನೇ ನಮ್ಮನ್ನು ಶಿಕ್ಷಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ನಾವು ಯೆಹೋವನಿಂದ ವಿಮುಖರಾಗಿ ಸರ್ವಾಂಗಹೋಮ, ಸಮಾಧಾನಯಜ್ಞ, ಧಾನ್ಯ ನೈವೇದ್ಯ ಇವುಗಳನ್ನು ಸಮರ್ಪಿಸುವುದಕ್ಕೋಸ್ಕರ ಈ ಯಜ್ಞವೇದಿಯನ್ನು ಕಟ್ಟಿದ್ದರೆ ಯೆಹೋವನು ತಾನೇ ನಮ್ಮನ್ನು ಶಿಕ್ಷಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ನಾವು ಯೆಹೋವನಿಂದ ವಿಮುಖರಾಗಿ ಸರ್ವಾಂಗಹೋಮ, ಸಮಾಧಾನಯಜ್ಞ, ಧಾನ್ಯ ನೈವೇದ್ಯ ಇವುಗಳನ್ನು ಸಮರ್ಪಿಸುವದಕ್ಕೋಸ್ಕರ ಈ ವೇದಿಯನ್ನು ಕಟ್ಟಿದ್ದರೆ ಯೆಹೋವನು ತಾನೇ ನಮ್ಮನ್ನು ಶಿಕ್ಷಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ನಾವು ದೇವರ ಕಟ್ಟಳೆಗಳನ್ನು ಉಲ್ಲಂಘಿಸಿದ್ದರೆ ಯೆಹೋವನೇ ನಮ್ಮನ್ನು ಶಿಕ್ಷಿಸಲಿ ಎಂದು ಆತನಲ್ಲಿ ಕೇಳಿಕೊಳ್ಳುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ನಾವು ಯೆಹೋವ ದೇವರ ಕಡೆಗೆ ತಿರುಗಿಕೊಂಡು ದಹನಬಲಿಗಳನ್ನಾದರೂ, ಧಾನ್ಯ ಸಮರ್ಪಣೆಯನ್ನಾದರೂ, ಸಮಾಧಾನದ ಸಮರ್ಪಣೆಗಳನ್ನಾದರೂ, ಅದರ ಮೇಲೆ ಅರ್ಪಿಸುವುದಕ್ಕೋಸ್ಕರ ಬಲಿಪೀಠವನ್ನು ನಮಗಾಗಿ ಕಟ್ಟಿದ್ದರೆ, ಯೆಹೋವ ದೇವರು ಅದನ್ನು ವಿಚಾರಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 22:23
10 ತಿಳಿವುಗಳ ಹೋಲಿಕೆ  

ಅಗಲಿದರೆ, ಸರ್ವೇಶ್ವರನೇ ಶತ್ರುಗಳ ಕೈಯಿಂದ ದಾವೀದನಿಗೆ ಮುಯ್ಯಿ ತೀರಿಸಲಿ!” ಎಂದು ಹೇಳಿ ಅವನ ಮನೆಯವರೊಡನೆ ಒಪ್ಪಂದ ಮಾಡಿಕೊಂಡನು.


ಅವನು ನನ್ನ ಹೆಸರಿನಲ್ಲಿ ಹೇಳಿದ ಮಾತುಗಳಿಗೆ ಯಾರು ಕಿವಿಕೊಡುವುದಿಲ್ಲವೋ ಅಂಥವರನ್ನು ನಾನು ಶಿಕ್ಷಿಸುವೆನು.


ನಾನು ದುಷ್ಟನಿಗೆ - ‘ದುಷ್ಟನೇ, ನೀನು ಸತ್ತೇಸಾಯುವೆ’ ಎಂದು ನುಡಿಯುವಾಗ ನೀನು ಆ ದುಷ್ಟನನ್ನು ತನ್ನ ದುರ್ಮಾರ್ಗದಿಂದ ತಪ್ಪಿಸಲು ಅವನನ್ನು ಎಚ್ಚರಪಡಿಸದೆಹೋದರೆ ಅವನು ತನ್ನ ಅಪರಾಧದಿಂದಲೇ ಸಾಯಬೇಕಾಗುವುದು; ಅವನ ಮರಣಕ್ಕೆ ಹೊಣೆಯಾದ ನಿನಗೆ ಮುಯ್ಯಿತೀರಿಸುವೆನು.


ಆದರೆ ಕಾವಲುಗಾರನೇ ಬೀಳುವ ಖಡ್ಗವನ್ನು ನೋಡಿಯೂ ಕೊಂಬನ್ನೂದದೆ, ಸಜ್ಜನರನ್ನು ಎಚ್ಚರಿಸದೆ ಹೋದರೆ ಖಡ್ಗ ಬಿದ್ದು ಆ ಜನರೊಳಗೆ ಯಾವನನ್ನೇ ಆಗಲಿ ನಾಶಮಾಡಿದರೆ, ತನ್ನ ಅಧರ್ಮದಲ್ಲೇ ನಾಶಗೊಂಡ ಆ ಮನುಷ್ಯನ ಮರಣಕ್ಕೆ, ಕಾವಲುಗಾರನೇ ಹೊಣೆ. ಅವನಿಗೆ ನಾನು ಮುಯ್ಯಿ ತೀರಿಸುವೆನು.


ನಾನು ದುಷ್ಟನಿಗೆ, “ನೀನು ಖಂಡಿತವಾಗಿ ಸಾಯುವೆ,” ಎಂದು ನುಡಿಯುವಾಗ ನೀನು ಅವನನ್ನು ಎಚ್ಚರಿಸದೆ ಹಾಗು ಅವನು ತನ್ನ ದುರ್ಮಾರ್ಗವನ್ನು ಬಿಟ್ಟು ತನ್ನ ಪ್ರಾಣವನ್ನು ಉಳಿಸಿಕೊಳ್ಳುವಂತೆ ಅವನಿಗೆ ಬುದ್ಧಿಹೇಳದೆ ಇದ್ದರೆ, ಆ ದುಷ್ಟನು ತನ್ನ ಅಪರಾಧಕ್ಕಾಗಿ ಸಾಯಬೇಕಾಗುವುದು; ಅವನ ಮರಣಕ್ಕೆ ನೀನೆ ಹೊಣೆಯಾಗುವೆ.


ಜೆಕರ್ಯನ ತಂದೆ ಯೆಹೋಯಾದನಿಂದ ತನಗಾದ ಉಪಕಾರವನ್ನು ನೆನಪುಮಾಡಿಕೊಳ್ಳದೆ ಈ ಯೆಹೋವಾಷನು ಅವನ ಮಗನನ್ನು ಕೊಲ್ಲಿಸಿದನು. ಜೆಕರೀಯನು ಸಾಯುವಾಗ, “ಸರ್ವೇಶ್ವರಸ್ವಾಮಿಯೇ ಇದನ್ನು ನೋಡಿ ತಕ್ಕ ಶಾಸ್ತಿಮಾಡಲಿ,” ಎಂದನು.


ಆಗ ನೀವು ನಿರ್ಭಯರಾಗಿ ನಾನು ನಿಮಗೆ ಆಜ್ಞಾಪಿಸಿದ ಎಲ್ಲಾ ಕಾಣಿಕೆಗಳನ್ನು ಅಂದರೆ, ದಹನಬಲಿ ಮುಂತಾದ ಯಜ್ಞಪಶುಗಳನ್ನು, ಬೆಳೆಯ ದಶಮಾಂಶಗಳನ್ನು, ಸರ್ವೇಶ್ವರನಿಗಾಗಿ ಪ್ರತ್ಯೇಕಿಸುವ ಪದಾರ್ಥಗಳನ್ನು, ಹರಕೆಮಾಡಿದ ವಿಶೇಷ ಕಾಣಿಕೆಗಳನ್ನು, ಇವುಗಳನ್ನೆಲ್ಲ ನಿಮ್ಮ ದೇವರಾದ ಸರ್ವೇಶ್ವರ ತಮ್ಮ ನಾಮಸ್ಥಾಪನೆಗಾಗಿ ಆರಿಸಿಕೊಳ್ಳುವ ಸ್ಥಳಕ್ಕೇ ತರಬೇಕು.


ಆದರೆ ಮಾಂಸವನ್ನು ಅದರ ಜೀವಸತ್ವವಾದ ರಕ್ತಸಮೇತ ತಿನ್ನಬಾರದು.


ನಾವು ಇದನ್ನು ಕಟ್ಟಿದ್ದು ಒಂದು ವಿಶೇಷ ಉದ್ದೇಶಕ್ಕಾಗಿ; ಮುಂದೆ ನಿಮ್ಮ ಮಕ್ಕಳು ನಮ್ಮ ಮಕ್ಕಳಿಗೆ, ‘ಇಸ್ರಯೇಲಿನ ದೇವರಾದ ಸರ್ವೇಶ್ವರನಲ್ಲಿ ನಿಮಗೇನು ಪಾಲಿದೆ?’


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು