Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 22:24 - ಕನ್ನಡ ಸತ್ಯವೇದವು C.L. Bible (BSI)

24 ನಾವು ಇದನ್ನು ಕಟ್ಟಿದ್ದು ಒಂದು ವಿಶೇಷ ಉದ್ದೇಶಕ್ಕಾಗಿ; ಮುಂದೆ ನಿಮ್ಮ ಮಕ್ಕಳು ನಮ್ಮ ಮಕ್ಕಳಿಗೆ, ‘ಇಸ್ರಯೇಲಿನ ದೇವರಾದ ಸರ್ವೇಶ್ವರನಲ್ಲಿ ನಿಮಗೇನು ಪಾಲಿದೆ?’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಒಂದು ವಿಶೇಷವಾದ ಉದ್ದೇಶದಿಂದ ಈ ಕೆಲಸವನ್ನು ಮಾಡಿದ್ದೇವಷ್ಟೇ, ಮುಂದೆ ನಿಮ್ಮ ಮಕ್ಕಳು ನಮ್ಮ ಮಕ್ಕಳಿಗೆ, ‘ಇಸ್ರಾಯೇಲ್ ದೇವರಾದ ಯೆಹೋವನಲ್ಲಿ ನಿಮಗೇನು ಪಾಲಿದೆ?’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಒಂದು ವಿಶೇಷವಾದ ಉದ್ದೇಶದಿಂದ ಈ ಕೆಲಸವನ್ನು ಮಾಡಿದೆವು. ಮುಂದೆ ನಿಮ್ಮ ಮಕ್ಕಳು ನಮ್ಮ ಮಕ್ಕಳಿಗೆ - ಇಸ್ರಾಯೇಲ್ ದೇವರಾದ ಯೆಹೋವನಲ್ಲಿ ನಿಮಗೇನು ಪಾಲಿದೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ನಾವು ಈ ಯಜ್ಞವೇದಿಕೆಯನ್ನು ಸರ್ವಾಂಗಹೋಮ, ಸಮಾಧಾನಯಜ್ಞ, ಧಾನ್ಯಸಮರ್ಪಣೆ ಇವುಗಳನ್ನು ಸಮರ್ಪಿಸುವುದಕ್ಕೋಸ್ಕರ ಕಟ್ಟಿದ್ದೇವೆ ಎಂದು ನೀವು ತಿಳಿದಿರುವಿರೇನು? ಇಲ್ಲ! ನಾವು ಆ ಕಾರಣಕ್ಕಾಗಿ ಇದನ್ನು ಕಟ್ಟಲಿಲ್ಲ. ನಾವು ಈ ಯಜ್ಞವೇದಿಕೆಯನ್ನು ಕಟ್ಟಿರುವುದಕ್ಕೆ ಕಾರಣವೇನೆಂದರೆ ಮುಂದಿನ ಕಾಲದಲ್ಲಿ ನಿಮ್ಮ ಜನರು ನಮ್ಮನ್ನು ತಮ್ಮ ಜನಾಂಗದ ಒಂದು ಭಾಗವೆಂದು ಸ್ವೀಕರಿಸದೆ ಇಸ್ರೇಲಿನ ದೇವರಾದ ಯೆಹೋವನನ್ನು ಆರಾಧಿಸಲು ಅವಕಾಶಕೊಡದಿರಬಹುದು ಎಂಬ ಭಯ ನಮಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 “ಒಂದು ವಿಶೇಷವಾದ ಉದ್ದೇಶದಿಂದ ಈ ಕೆಲಸವನ್ನು ಮಾಡಿದೆವು. ಮುಂದೆ ನಿಮ್ಮ ಮಕ್ಕಳು ನಮ್ಮ ಮಕ್ಕಳಿಗೆ, ‘ಇಸ್ರಾಯೇಲ್ ದೇವರಾದ ಯೆಹೋವ ದೇವರಲ್ಲಿ ನಿಮಗೇನು ಪಾಲಿದೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 22:24
7 ತಿಳಿವುಗಳ ಹೋಲಿಕೆ  

ಅವು ನಿಮ್ಮ ಮಧ್ಯೆ ಸ್ಮಾರಕ ಆಗಿರುವುವು. ಮುಂದಿನ ಕಾಲದಲ್ಲಿ ನಿಮ್ಮ ಮಕ್ಕಳು, ‘ಈ ಕಲ್ಲುಗಳು ಏನನ್ನು ಸೂಚಿಸುತ್ತವೆ?’ ಎಂದು ಕೇಳುವಾಗ ನೀವು ಅವರಿಗೆ,


“ಇನ್ನು ಮುಂದೆ ನಿಮ್ಮ ಮಕ್ಕಳು, ‘ಈ ಆಜ್ಞಾವಿಧಿನಿರ್ಣಯಗಳನ್ನು ನಮ್ಮ ದೇವರಾದ ಸರ್ವೇಶ್ವರ ಏಕೆ ನೇಮಿಸಿದರು?’ ಎಂದು ವಿಚಾರಿಸುವರು.


ಇನ್ನು ಮುಂದೆ ನಿಮ್ಮ ಮಕ್ಕಳು, ಇದರ ಅರ್ಥವೇನೆಂದು ವಿಚಾರಿಸುವಾಗ ನೀವು ಅವರಿಗೆ, ‘ನಾವು ಗುಲಾಮತನದಲ್ಲಿದ್ದಾಗ ಸರ್ವೇಶ್ವರ ತಮ್ಮ ಭುಜಬಲವನ್ನು ಪ್ರದರ್ಶಿಸಿ ಈಜಿಪ್ಟಿನಿಂದ ನಮ್ಮನ್ನು ಬಿಡುಗಡೆ ಮಾಡಿದರು.


ಇನ್ನು ಮೇಲೆ ನೀವು ಬಂದು ನನ್ನವುಗಳನ್ನು ಪರೀಕ್ಷಿಸುವಾಗ ನಾನು ಪ್ರಮಾಣಿಕನೋ ಇಲ್ಲವೋ ಎಂಬುದು ಪ್ರತ್ಯಕ್ಷವಾಗುವುದು. ಆಡುಗಳಲ್ಲಿ ಚುಕ್ಕೆ ಮಚ್ಚೆ ಇಲ್ಲದ್ದೂ ಕುರಿಗಳಲ್ಲಿ ಕಪ್ಪಲ್ಲದ್ದೂ ನನ್ನವುಗಳಲ್ಲಿ ಸಿಕ್ಕಿದರೆ, ಅದನ್ನು ಕದ್ದು ತಂದದ್ದೆಂದು ಎಣಿಸಬಹುದು,” ಎಂದನು.


ಅವನು ತನ್ನ ಪುತ್ರಪೌತ್ರರಿಗೆ, ‘ನೀವು ನ್ಯಾಯನೀತಿಯನ್ನು ಪಾಲಿಸುತ್ತಾ ಸರ್ವೇಶ್ವರ ಸ್ವಾಮಿಯ ಮಾರ್ಗದಲ್ಲೇ ನಡೆಯಬೇಕು; ಹಾಗೆ ಮಾಡಿದರೆ ವಾಗ್ದಾನ ಮಾಡಿದುದನ್ನೆಲ್ಲ ಈಡೇರಿಸುವರು,’ ಎಂದು ಬೋಧಿಸಲೆಂದೇ ನಾನು ಅವನನ್ನು ಆರಿಸಿಕೊಂಡಿದ್ದೇನೆ".


ನಾವು ಸರ್ವೇಶ್ವರನಿಂದ ವಿಮುಖರಾಗಿ ದಹನಬಲಿಯನ್ನಾಗಲಿ, ಸಮಾಧಾನ ಬಲಿಯನ್ನಾಗಲಿ, ಧಾನ್ಯನೈವೇದ್ಯವನ್ನಾಗಲಿ ಸಮರ್ಪಿಸುವುದಕ್ಕಾಗಿ ಈ ಬಲಿಪೀಠವನ್ನು ಕಟ್ಟಿದ್ದರೆ ಸರ್ವೇಶ್ವರನೇ ನಮ್ಮನ್ನು ಶಿಕ್ಷಿಸಲಿ.


ರೂಬೇನ್ಯರೇ, ಗಾದ್ಯರೇ, ಸರ್ವೇಶ್ವರ ನಿಮಗೂ ನಮಗೂ ನಡುವೆ ಈ ಜೋರ್ಡನ್ ನದಿಯನ್ನು ಸರಹದ್ದಾಗಿ ಇಟ್ಟಿದ್ದಾರೆ. ಸರ್ವೇಶ್ವರನಲ್ಲಿ ನಿಮಗೆ ಯಾವ ಪಾಲೂ ಇಲ್ಲ, ಎಂದು ಹೇಳಿ ನಿಮ್ಮ ಮಕ್ಕಳು ನಮ್ಮ ಮಕ್ಕಳನ್ನು ದೇವಭಕ್ತಿಯಿಂದ ಬೇರ್ಪಡಿಸಿಯಾರೆಂದು ಭಯಪಟ್ಟೆವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು