ಯೆಹೋಶುವ 22:25 - ಕನ್ನಡ ಸತ್ಯವೇದವು C.L. Bible (BSI)25 ರೂಬೇನ್ಯರೇ, ಗಾದ್ಯರೇ, ಸರ್ವೇಶ್ವರ ನಿಮಗೂ ನಮಗೂ ನಡುವೆ ಈ ಜೋರ್ಡನ್ ನದಿಯನ್ನು ಸರಹದ್ದಾಗಿ ಇಟ್ಟಿದ್ದಾರೆ. ಸರ್ವೇಶ್ವರನಲ್ಲಿ ನಿಮಗೆ ಯಾವ ಪಾಲೂ ಇಲ್ಲ, ಎಂದು ಹೇಳಿ ನಿಮ್ಮ ಮಕ್ಕಳು ನಮ್ಮ ಮಕ್ಕಳನ್ನು ದೇವಭಕ್ತಿಯಿಂದ ಬೇರ್ಪಡಿಸಿಯಾರೆಂದು ಭಯಪಟ್ಟೆವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ರೂಬೇನ್ಯರೇ, ಗಾದ್ಯರೇ, ಯೆಹೋವನು ನಿಮಗೂ ನಮಗೂ ನಡುವೆ ಈ ಯೊರ್ದನ್ ನದಿಯನ್ನು ಮೇರೆಯಾಗಿ ಇಟ್ಟಿದ್ದಾನೆ. ಯೆಹೋವನಲ್ಲಿ ನಿಮಗೆ ಯಾವ ಪಾಲೂ ಇಲ್ಲ ಎಂದು ಹೇಳಿ ನಿಮ್ಮ ಮಕ್ಕಳು ನಮ್ಮ ಮಕ್ಕಳನ್ನು ದೈವಭಕ್ತಿಯಿಂದ ಬೇರ್ಪಡಿಸಿಯಾರೆಂದು ಭಯಪಟ್ಟೆವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ರೂಬೇನ್ಯರೇ, ಗಾದ್ಯರೇ, ಯೆಹೋವನು ನಮಗೂ ನಿಮಗೂ ನಡುವೆ ಯೊರ್ದನ್ ಹೊಳೆಯನ್ನು ಮೇರೆಯಾಗಿಟ್ಟಿದ್ದಾನೆ. ಆತನಲ್ಲಿ ನಿಮಗೇನೂ ಪಾಲಿಲ್ಲ ಎಂದು ಹೇಳಿ ಅವರನ್ನು ದೇವಭಕ್ತಿಯಿಂದ ತೊಲಗಿಸಿ ಬಿಟ್ಟಾರು ಎಂಬ ಭಯದಿಂದ ನಾವು - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ದೇವರು ನಮಗೆ ಜೋರ್ಡನ್ ನದಿಯ ಮತ್ತೊಂದು ದಡದಲ್ಲಿ ಭೂಮಿಯನ್ನು ಕೊಟ್ಟಿದ್ದಾನೆ. ಅಂದರೆ ಜೋರ್ಡನ್ ನದಿಯು ನಮ್ಮನ್ನು ಬೇರ್ಪಡಿಸುತ್ತದೆ. ನಿಮ್ಮ ಮಕ್ಕಳು ದೊಡ್ಡವರಾಗಿ ನಿಮ್ಮ ಭೂಮಿಯನ್ನು ಆಳುವಾಗ, ನಾವು ನಿಮ್ಮ ಜನರೆಂಬುದನ್ನು ಮರೆತುಬಿಡಬಹುದು. ‘ರೂಬೇನ್ಯರು, ಗಾದ್ಯರು ಆದ ನೀವು ಇಸ್ರೇಲಿನ ಅಂಗವಾಗಿಲ್ಲ’ ಎಂದು ಹೇಳಿ ನಮ್ಮ ಮಕ್ಕಳು ಯೆಹೋವನನ್ನು ಆರಾಧಿಸದಂತೆ ನಿಮ್ಮ ಮಕ್ಕಳು ತಡೆಯಬಹುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ರೂಬೇನ್ಯರೇ, ಗಾದ್ಯರೇ ಯೆಹೋವ ದೇವರು ನಿಮಗೂ ನಮಗೂ ನಡುವೆ ಯೊರ್ದನ್ ನದಿಯನ್ನು ಮೇರೆಯಾಗಿ ಇಟ್ಟಿದ್ದರಿಂದ ಯೆಹೋವ ದೇವರ ಕಾರ್ಯಗಳಲ್ಲಿ ನಿಮಗೆ ಭಾಗವು ಇಲ್ಲ,’ ಎಂದು ಹೇಳಿ, ನಮ್ಮ ಮಕ್ಕಳನ್ನು ಯೆಹೋವ ದೇವರಿಗೆ ಭಯಪಡದ ಹಾಗೆ ಮಾಡುವರೆಂದು ಅಂಜಿಕೊಂಡು ಇದನ್ನು ಮಾಡಿದೆವು. ಅಧ್ಯಾಯವನ್ನು ನೋಡಿ |
ನನ್ನ ಅರಸನಾದ ಒಡೆಯರು ದಯವಿಟ್ಟು ತಮ್ಮ ಸೇವಕನ ಮಾತುಗಳನ್ನು ಆಲಿಸಬೇಕು. ನಿಮ್ಮನ್ನು ನನಗೆ ವಿರೋಧವಾಗಿ ಎತ್ತಿ ಕಟ್ಟಿದವರು ಸರ್ವೇಶ್ವರನೇ ಆಗಿರುವ ಪಕ್ಷದಲ್ಲಿ ಅವರಿಗೆ ಗಮಗಮಿಸುವ ನೈವೇದ್ಯವನ್ನು ಸಮರ್ಪಿಸಬೇಕು. ಮನುಷ್ಯರಾಗಿದ್ದರೆ, ಈಗ ಅವರು ನನಗೆ ಸರ್ವೇಶ್ವರನ ಸೌಭಾಗ್ಯದಲ್ಲಿ ಪಾಲುಸಿಕ್ಕದಂತೆ, ‘ಹೋಗಿ ಅನ್ಯದೇವತೆಗಳನ್ನು ಪೂಜಿಸು’ ಎಂದು ನನ್ನನ್ನು ತಳ್ಳಿಬಿಟ್ಟಿದ್ದಾರೆ. ಆದುದರಿಂದ ಸರ್ವೇಶ್ವರನ ದೃಷ್ಟಿಯಲ್ಲಿ ಅವರು ಶಾಪಗ್ರಸ್ತರಾಗಲಿ!
ಆದರೆ ಸರ್ವೇಶ್ವರನ ಸನ್ನಿಧಿಯಲ್ಲಿ ದಹನಬಲಿ, ಸಮರ್ಪಣಬಲಿ, ಶಾಂತಿಸಮಾಧಾನದ ಬಲಿ ಮುಂತಾದುವುಗಳನ್ನು ಅರ್ಪಿಸಿ ಆರಾಧಿಸುವುದಕ್ಕೆ ನಿಮಗೆ ಹಕ್ಕು ಉಂಟೆಂಬುದಕ್ಕೆ ಇದು ಗುರುತಾಗಿರಲಿ. ನಮಗೂ ನಿಮಗೂ ನಮ್ಮ ಸಂತಾನಕ್ಕೂ ನಿಮ್ಮ ಸಂತಾನಕ್ಕೂ ಇದು ಸಾಕ್ಷಿಯಾಗಿರಲಿ.’ ಇದರಿಂದ ಮುಂದೆ ನಿಮ್ಮ ಮಕ್ಕಳು ನಮ್ಮ ಮಕ್ಕಳಿಗೆ, ‘ಸರ್ವೇಶ್ವರನಲ್ಲಿ ನಿಮಗೆ ಪಾಲಿಲ್ಲ’ ಎಂದು ಹೇಳುವುದಕ್ಕೆ ಆಸ್ಪದವಿರದು.