Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 22:29 - ಕನ್ನಡ ಸತ್ಯವೇದವು C.L. Bible (BSI)

29 ನಮ್ಮ ದೇವರಾದ ಸರ್ವೇಶ್ವರನ ಗುಡಾರದ ಮುಂದಿರುವ ಬಲಿಪೀಠದ ಹೊರತು ದಹನಬಲಿ, ಧಾನ್ಯನೈವೇದ್ಯ, ಸಮಾಧಾನಬಲಿ ಮೊದಲಾದವುಗಳನ್ನು ಸಮರ್ಪಿಸಲು ಬೇರೊಂದು ಬಲಿಪೀಠವನ್ನು ಕಟ್ಟಿ ಸರ್ವೇಶ್ವರನಿಗೆ ವಿಮುಖರಾಗಿ ದ್ರೋಹಿಗಳಾಗುವುದು ನಮಗೆ ದೂರ ಆಗಿರಲಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ನಮ್ಮ ದೇವರಾದ ಯೆಹೋವನ ಗುಡಾರದ ಮುಂದಿರುವ ಯಜ್ಞವೇದಿಯ ಹೊರತು ಸರ್ವಾಂಗಹೋಮ, ಧಾನ್ಯನೈವೇದ್ಯ, ಸಮಾಧಾನಯಜ್ಞ, ಮೊದಲಾದವುಗಳನ್ನು ಸಮರ್ಪಿಸುವುದಕ್ಕೋಸ್ಕರ ಬೇರೊಂದು ಯಜ್ಞವೇದಿಯನ್ನು ಕಟ್ಟಿ ಯೆಹೋವನಿಗೆ ವಿರುದ್ಧವಾಗಿ ದ್ರೋಹಿಗಳಾಗಿರದಂತಾಗಲಿ. ಹಾಗೆ ನಮಗೆ ಎಂದಿಗೂ ಆಗದಿರಲಿ” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ನಮ್ಮ ದೇವರಾದ ಯೆಹೋವನ ಗುಡಾರದ ಮುಂದಿರುವ ಯಜ್ಞವೇದಿಯ ಹೊರತು ಸರ್ವಾಂಗಹೋಮ, ಧಾನ್ಯನೈವೇದ್ಯ, ಸಮಾಧಾನಯಜ್ಞ ಮೊದಲಾದವುಗಳನ್ನು ಸಮರ್ಪಿಸುವದಕ್ಕೋಸ್ಕರ ಬೇರೊಂದು ವೇದಿಯನ್ನು ಕಟ್ಟಿ ಯೆಹೋವನಿಗೆ ವಿಮುಖರಾಗಿ ದ್ರೋಹಿಗಳಾಗುವದು ನಮಗೆ ದೂರವಾಗಿರಲಿ ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 “ಯೆಹೋವನಿಗೆ ವಿರೋಧಿಗಳಾಗಲು ನಮಗೆ ನಿಜವಾಗಿಯೂ ಇಷ್ಟವಿಲ್ಲ. ಆತನಿಗೆ ಅವಿಧೇಯರಾಗುವುದಕ್ಕೂ ಇಷ್ಟವಿಲ್ಲ. ನಿಜವಾದ ಯಜ್ಞವೇದಿಕೆಯು ಪವಿತ್ರಗುಡಾರದ ಎದುರಿಗೆ ಮಾತ್ರ ಇದೆ. ಆ ಯಜ್ಞವೇದಿಕೆಯು ನಮ್ಮ ದೇವರಾದ ಯೆಹೋವನದು ಎಂಬುದನ್ನು ನಾವು ಬಲ್ಲೆವು” ಎಂಬುದಾಗಿ ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 “ಆದರೆ ನಮ್ಮ ದೇವರಾದ ಯೆಹೋವ ದೇವರ ಗುಡಾರದ ಮುಂದೆ ಇರುವ ಅವರ ಯಜ್ಞವೇದಿಯನ್ನು ಅಲ್ಲದೆ ನಾವು ದಹನಬಲಿ, ಧಾನ್ಯ ನೈವೇದ್ಯ ಮತ್ತು ಇತರ ಬಲಿಗೋಸ್ಕರವಾಗಿಯೂ ಮತ್ತೊಂದು ಬಲಿಪೀಠವನ್ನು ಕಟ್ಟಿ, ಯೆಹೋವ ದೇವರಿಗೆ ವಿರೋಧವಾಗಿ ವಿಮುಖರಾಗಿ ತಿರುಗಿಬೀಳುವುದು ನಮಗೆ ದೂರವಾಗಿರಲಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 22:29
16 ತಿಳಿವುಗಳ ಹೋಲಿಕೆ  

ಅದಕ್ಕೆ ಜನರು, “ಸರ್ವೇಶ್ವರನನ್ನು ಬಿಟ್ಟು ಅನ್ಯದೇವತೆಗಳಿಗೆ ಸೇವೆಸಲ್ಲಿಸುವುದು ನಮ್ಮಿಂದ ದೂರವಿರಲಿ.


ಹೀಗಿರಲಾಗಿ, ನಾವು ಏನೆಂದು ಹೇಳೋಣ? ದೇವರಲ್ಲಿ ಅನ್ಯಾಯವಿದೆಯೆಂದು ಹೇಳೋಣವೆ? ಎಂದಿಗೂ ಅಲ್ಲ.


ಖಂಡಿತವಾಗಿಯೂ ಕೂಡದು. ಪಾಪದ ಪಾಲಿಗೆ ಸತ್ತಿರುವ ನಾವು ಅದರಲ್ಲೇ ಜೀವಿಸುವುದು ಹೇಗೆ ತಾನೆ ಸಾಧ್ಯ?


ಎಂದಿಗೂ ಇಲ್ಲ! ದೇವರು ನ್ಯಾಯವಂತರಲ್ಲದಿದ್ದರೆ ಲೋಕಕ್ಕೆ ನ್ಯಾಯತೀರ್ಪು ಕೊಡಲು ಹೇಗೆ ತಾನೆ ಸಾಧ್ಯ?


ಹಿಜ್ಕೀಯನು ಒಂದೇ ಬಲಿಪೀಠದ ಮುಂದೆ ಆರಾಧನೆಮಾಡಿ ಅದರ ಮೇಲೆಯೇ ಧೂಪಹಾಕಬೇಕೆಂಬುದಾಗಿ ಯೆಹೂದ್ಯರಿಗೂ ಜೆರುಸಲೇಮಿಗೂ ಆಜ್ಞಾಪಿಸಿ, ದೇವರ ಬೇರೆ ಎಲ್ಲ ಪೂಜಾಸ್ಥಳಗಳನ್ನೂ ಯಜ್ಞವೇದಿಗಳನ್ನೂ ಹಾಳುಮಾಡಿದನು ಅಲ್ಲವೆ?


“ಬಹುಶಃ, ನೀವು ‘ನಮ್ಮ ದೇವರಾದ ಸರ್ವೇಶ್ವರನನ್ನೇ ನಂಬಿಕೊಂಡಿದ್ದೇವೆ,’ ಎಂದು ಹೇಳಬಹುದು. ಜೆರುಸಲೇಮಿನ ಬಲಿಪೀಠದ ಮುಂದೆಯೇ ಆರಾಧನೆಮಾಡಬೇಕು ಎಂದು ಯೆಹೂದ್ಯರಿಗೂ ಮತ್ತು ಜೆರುಸಲೇಮಿನವರಿಗೂ ಹಿಜ್ಕೀಯನು ಆಜ್ಞಾಪಿಸಿ ಆ ಸರ್ವೇಶ್ವರ ಸ್ವಾಮಿಯ ಪೂಜಾಸ್ಥಳಗಳನ್ನೂ ಬೇರೆ ಎಲ್ಲಾ ಬಲಿಪೀಠಗಳನ್ನೂ ಹಾಳುಮಾಡಿದನಲ್ಲವೆ?


ಅದಕ್ಕೆ ನಾಬೋತನು, “ಪಿತ್ರಾರ್ಜಿತ ಸೊತ್ತನ್ನು ನಿಮಗೆ ಮಾರದಂತೆ ಸರ್ವೇಶ್ವರ ನನ್ನನ್ನು ತಡೆಯಲಿ!” ಎಂದು ಉತ್ತರಕೊಟ್ಟನು.


ನಾನಾದರೋ ನಿಮ್ಮ ಪರವಾಗಿ ಸರ್ವೇಶ್ವರನನ್ನು ಪ್ರಾರ್ಥಿಸುತ್ತೇನೆ; ಅವರ ನೀತಿಯುತ ಉತ್ತಮ ಮಾರ್ಗವನ್ನು ನಿಮಗೆ ತೋರಿಸಿಕೊಡುವುದನ್ನು ಬಿಡುವುದಿಲ್ಲ; ಬಿಟ್ಟರೆ ದೇವರ ದೃಷ್ಟಿಯಲ್ಲಿ ನಾನೂ ಪಾಪಿಯಾಗುತ್ತೇನೆ.


ಈ ಕಾರಣದಿಂದಲೇ, ‘ಬನ್ನಿ, ಒಂದು ಬಲಿಪೀಠವನ್ನು ಕಟ್ಟೋಣ, ಅದು ದಹನಬಲಿ ಅಥವಾ ಬೇರೆ ಬಲಿಗಳನ್ನು ಸಮರ್ಪಿಸುವುದಕ್ಕಲ್ಲ,


ನಾವು ಸರ್ವೇಶ್ವರನಿಂದ ವಿಮುಖರಾಗಿ ದಹನಬಲಿಯನ್ನಾಗಲಿ, ಸಮಾಧಾನ ಬಲಿಯನ್ನಾಗಲಿ, ಧಾನ್ಯನೈವೇದ್ಯವನ್ನಾಗಲಿ ಸಮರ್ಪಿಸುವುದಕ್ಕಾಗಿ ಈ ಬಲಿಪೀಠವನ್ನು ಕಟ್ಟಿದ್ದರೆ ಸರ್ವೇಶ್ವರನೇ ನಮ್ಮನ್ನು ಶಿಕ್ಷಿಸಲಿ.


ಜೋಸೆಫನು, “ಹಾಗೆ ಎಂದಿಗೂ ಆಗಬಾರದು; ಆ ಪಾತ್ರೆ ಯಾರ ಬಳಿಯಲ್ಲಿ ಸಿಕ್ಕಿತೋ ಅವನು ಮಾತ್ರ ನನಗೆ ಗುಲಾಮನಾಗಬೇಕು; ನೀವಾದರೋ ಅಡ್ಡಿಯಿಲ್ಲದೆ ನಿಮ್ಮ ತಂದೆಯ ಬಳಿಗೆ ಹೋಗಬಹುದು,” ಎಂದನು.


ಅದಕ್ಕೆ ಅವರು, “ಅಯ್ಯಾ, ನೀವು ಇಂಥಾ ಮಾತುಗಳನ್ನು ಆಡಬಹುದೆ! ನಿಮ್ಮ ಸೇವಕರಾದ ನಾವು ಇಂಥ ಕೃತ್ಯವನ್ನು ಎಂದಿಗೂ ಮಾಡುವವರಲ್ಲ.


ಒಂದು ವೇಳೆ ಅವರು ಮುಂದೆ ನಮಗಾಗಲಿ, ನಮ್ಮ ಸಂತಾನದವರಿಗಾಗಲಿ ಈ ಪ್ರಕಾರ ಹೇಳಿದ್ದೇ ಆದರೆ ನಾವು ಅವರಿಗೆ ‘ಸರ್ವೇಶ್ವರನ ಬಲಿಪೀಠವನ್ನು ಹೋಲುವ ಈ ವೇದಿಕೆಯನ್ನು ನೋಡಿ: ನಮ್ಮ ಪೂರ್ವಜರು ಇದನ್ನು ದಹನಬಲಿ, ಸಮರ್ಪಣ ಬಲಿಗಳನ್ನು ಅರ್ಪಿಸುವುದಕ್ಕಾಗಿ ಕಟ್ಟಲಿಲ್ಲ; ಇದು ನಮಗೂ ನಿಮಗೂ ಮಧ್ಯೆ ಸಾಕ್ಷಿಯಾಗಿದೆಯಷ್ಟೆ,’ ಎಂದು ಹೇಳುವೆವು.


ಯಾಜಕ ಫೀನೆಹಾಸನು ಮತ್ತು ಅವನ ಜೊತೆಯಲ್ಲಿ ಬಂದಿದ್ದ ಕುಲಾಧಿಪತಿಗಳು, ಇಸ್ರಯೇಲಿನ ಮುಖ್ಯಸ್ಥರು ರೂಬೇನ್, ಗಾದ್ ಹಾಗೂ ಮನಸ್ಸೆಕುಲಗಳವರ ಈ ಮಾತುಗಳನ್ನು ಕೇಳಿ ಸಂತೋಷಪಟ್ಟರು.


ಆಗ ನೀವು ನಿರ್ಭಯರಾಗಿ ನಾನು ನಿಮಗೆ ಆಜ್ಞಾಪಿಸಿದ ಎಲ್ಲಾ ಕಾಣಿಕೆಗಳನ್ನು ಅಂದರೆ, ದಹನಬಲಿ ಮುಂತಾದ ಯಜ್ಞಪಶುಗಳನ್ನು, ಬೆಳೆಯ ದಶಮಾಂಶಗಳನ್ನು, ಸರ್ವೇಶ್ವರನಿಗಾಗಿ ಪ್ರತ್ಯೇಕಿಸುವ ಪದಾರ್ಥಗಳನ್ನು, ಹರಕೆಮಾಡಿದ ವಿಶೇಷ ಕಾಣಿಕೆಗಳನ್ನು, ಇವುಗಳನ್ನೆಲ್ಲ ನಿಮ್ಮ ದೇವರಾದ ಸರ್ವೇಶ್ವರ ತಮ್ಮ ನಾಮಸ್ಥಾಪನೆಗಾಗಿ ಆರಿಸಿಕೊಳ್ಳುವ ಸ್ಥಳಕ್ಕೇ ತರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು