Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 22:6 - ಕನ್ನಡ ಸತ್ಯವೇದವು C.L. Bible (BSI)

6 ಇದಲ್ಲದೆ ಅವರನ್ನು ಆಶೀರ್ವದಿಸಿ ಕಳಿಸಿದನು. ಅವರು ತಮ್ಮ ತಮ್ಮ ನಿವಾಸಗಳಿಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅವರನ್ನು ಆಶೀರ್ವದಿಸಿ ಕಳುಹಿಸಿದನು. ಅವರು ತಮ್ಮ ನಿವಾಸಗಳಿಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಅವರನ್ನು ಆಶೀರ್ವದಿಸಿ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಯೆಹೋಶುವನು ಅವರನ್ನು ಆಶೀರ್ವದಿಸಿ ಬೀಳ್ಕೊಟ್ಟನು. ಅವರು ತಮ್ಮತಮ್ಮ ಮನೆಗಳಿಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಯೆಹೋಶುವನು ಅವರನ್ನು ಆಶೀರ್ವದಿಸಿ ಕಳುಹಿಸಿಬಿಟ್ಟಾಗ ಅವರು ತಮ್ಮ ಗುಡಾರಗಳಿಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 22:6
18 ತಿಳಿವುಗಳ ಹೋಲಿಕೆ  

ಆಗ ಯೆಹೋಶುವನು ಯೆಫುನ್ನೆಯ ಮಗನಾದ ಕಾಲೇಬನನ್ನು ಆಶೀರ್ವದಿಸಿ, ಹೆಬ್ರೋನ್ ನಗರವನ್ನು ಅವನಿಗೆ ಸೊತ್ತಾಗಿ ಕೊಟ್ಟನು.


ಕಟ್ಟಕಡೆಗೆ ಯೇಸುಸ್ವಾಮಿ ಶಿಷ್ಯರನ್ನು ಬೆಥಾನಿಯ ಎಂಬ ಊರಿನವರೆಗೆ ಕರೆದುಕೊಂಡು ಹೋದರು. ಅಲ್ಲಿ ತಮ್ಮ ಕರಗಳನ್ನೆತ್ತಿ ಆಶೀರ್ವದಿಸಿದರು.


ಇದಾದ ಮೇಲೆ ಅವನು ಸೇನಾಧೀಶ್ವರ ಸರ್ವೇಶ್ವರನ ಹೆಸರಿನಲ್ಲಿ ಎಲ್ಲರನ್ನೂ ಆಶೀರ್ವದಿಸಿದನು.


ಅವರು ಮಾಡಿದ್ದ ಕೆಲಸವನ್ನು ಮೋಶೆ ಪರೀಕ್ಷಿಸಲಾಗಿ ಕರ್ತನ ಅಪ್ಪಣೆಯಂತೆಯೇ ಅವರು ಎಲ್ಲವನ್ನು ಮಾಡಿ ಮುಗಿಸಿದರೆಂದು ತಿಳಿದುಕೊಂಡು ಅವರನ್ನು ಆಶೀರ್ವದಿಸಿದನು.


ಬಳಿಕ ಜೋಸೆಫನು ತನ್ನ ತಂದೆ ಯಕೋಬನನ್ನು ಕರೆದುಕೊಂಡು ಬಂದು ಫರೋಹನ ಸನ್ನಿಧಿಯಲ್ಲಿ ನಿಲ್ಲಿಸಿದನು. ಯಕೋಬನು ಫರೋಹನನ್ನು ಆಶೀರ್ವದಿಸಿದನು.


ಅವರನ್ನು ಸಿಮೆಯೋನನು ಆಶೀರ್ವದಿಸಿದನು. ತಾಯಿ ಮರಿಯಳಿಗೆ, “ಇಗೋ, ಈ ಮಗು ಇಸ್ರಯೇಲರಲ್ಲಿ ಅನೇಕರ ಉನ್ನತಿಗೂ ಅನೇಕರ ಅವನತಿಗೂ ಕಾರಣನಾಗುವನು. ಅನೇಕರು ಪ್ರತಿಭಟಿಸುವ ದೈವಸಂಕೇತವಾಗುವನು. ಇದರಿಂದ ಅನೇಕರ ಹೃದಯದಾಳದ ಭಾವನೆಗಳು ಬಯಲಾಗುವುವು.


ಜನರಲ್ಲಿ ಅನೇಕಾನೇಕರು ಅಂದರೆ, ಹೆಚ್ಚಾಗಿ ಎಫ್ರಯಿಮ್, ಮನಸ್ಸೆ, ಇಸ್ಸಾಕಾರ್ ಹಾಗು ಜೆಬಲೂನ್ ಪ್ರಾಂತಗಳವರು, ತಮ್ಮನ್ನು ಶುದ್ಧಪಡಿಸಿಕೊಳ್ಳದೆ, ಧರ್ಮಶಾಸ್ತ್ರಕ್ಕೆ ವಿರುದ್ಧವಾದ ರೀತಿಯಿಂದ, ಪಾಸ್ಕಭೋಜನವನ್ನು ಮಾಡಿದರು. ಆದರೆ ಹಿಜ್ಕೀಯನು, “ಸರ್ವೇಶ್ವರಾ, ದಯಾಪರರಾದ ದೇವರೇ, ಈ ದೇವಾಲಯಕ್ಕೆ ಯಾತ್ರಿಕರಾಗಿ ಬಂದಿರುವವರಲ್ಲಿ ಇರಬೇಕಾದ ಪರಿಶುದ್ಧತೆ ಅನೇಕರಲ್ಲಿ ಇಲ್ಲ.


ಅನಂತರ ದಾವೀದನು ತನ್ನ ಮನೆಯವರನ್ನು ಆಶೀರ್ವದಿಸುವುದಕ್ಕೆ ಹೋದಾಗ ಸೌಲನ ಮಗಳಾದ ಮೀಕಲಳು ಅವನೆದುರಿಗೆ ಬಂದಳು. “ಈ ದಿನ ಇಸ್ರಯೇಲರ ಅರಸರು ಎಂಥ ಅಗೌರವದಿಂದ ನಡೆದುಕೊಂಡರು! ಹುಚ್ಚರಲ್ಲಿ ಒಬ್ಬರಂತೆ ತಮ್ಮ ಜನಸಾಮಾನ್ಯರಾದ ದಾಸಿಯರ ಮುಂದೆ ಬೆತ್ತಲೆಯಾಗಿದ್ದರಲ್ಲಾ!” ಎಂದಳು.


ಎಲ್ಕಾನನಿಗೆ ಏಲಿ, “ನೀನು ಸರ್ವೇಶ್ವರನಿಗೆ ಸಮರ್ಪಿಸಿಬಿಟ್ಟ ಈ ಮಗನಿಗೆ ಬದಲಾಗಿ ಈ ಹನ್ನಳಿಂದ ನಿನಗೆ ಬೇರೆ ಮಕ್ಕಳಾಗಲಿ!” ಎಂದು ಹೇಳಿ ಅವನನ್ನೂ ಅವನ ಹೆಂಡತಿಯನ್ನೂ ಆಶೀರ್ವದಿಸುತ್ತಿದ್ದನು. ಅನಂತರ ಅವರು ಸ್ವಗ್ರಾಮಕ್ಕೆ ಹಿಂದಿರುಗುತ್ತಿದ್ದರು.


ಫರೋಹನನ್ನು ಆಶೀರ್ವದಿಸಿ, ಅವನ ಸನ್ನಿಧಿಯಿಂದ ಹೊರಟುಹೋದನು.


“ಭೂಮ್ಯಾಕಾಶಗಳನ್ನು ಉಂಟುಮಾಡಿದ ಪರಾತ್ಪರ ದೇವರ ಆಶೀರ್ವಾದ ಅಬ್ರಾಮನಿಗಿರಲಿ; ನಿನ್ನ ಶತ್ರುಗಳನ್ನು ನಿನ್ನ ಕೈವಶಮಾಡಿದ ಆ ಪರಾತ್ಪರ ದೇವರಿಗೆ ಸ್ತೋತ್ರವಾಗಲಿ!”


ಆದ್ದರಿಂದ ನೀವು ನಿಮ್ಮ ದೇವರಾದ ಅವರನ್ನು ಅಲ್ಲಗಳೆದದ್ದೇ ಆದರೆ ಈ ಕಲ್ಲೇ ನಿಮಗೆ ಸಾಕ್ಷಿಯಾಗಿರುವುದು,” ಎಂದು ಹೇಳಿ ಆ ಜನರನ್ನು ಅವರವರ ಸೊತ್ತಿದ್ದಲ್ಲಿಗೆ ಕಳುಹಿಸಿಬಿಟ್ಟನು.


ತರುವಾಯ ಸಮುವೇಲನು ಜನರಿಗೆ ರಾಜನೀತಿಯನ್ನು ಬೋಧಿಸಿ, ಅದನ್ನು ಒಂದು ಪುಸ್ತಕದಲ್ಲಿ ಬರೆದು, ಸರ್ವೇಶ್ವರನ ಸನ್ನಿಧಿಯಲ್ಲಿಟ್ಟನು; ಆಮೇಲೆ ಜನರನ್ನು ಅವರವರ ಮನೆಗಳಿಗೆ ಕಳುಹಿಸಿಬಿಟ್ಟನು.


ಅವನು ಅವರಲ್ಲಿ ಮೂರು ಸಾವಿರ ಜನರನ್ನು ಮಿಕ್ಮಾಷಿನಲ್ಲೂ ಬೇತೇಲಿನ ಗುಡ್ಡದಲ್ಲೂ ಇಟ್ಟುಕೊಂಡನು. ಉಳಿದ ಸಾವಿರ ಜನರನ್ನು ಬೆನ್ಯಾಮೀನ್ಯರ ಗೆಬೆಯದಲ್ಲಿದ್ದ ಯೋನಾತಾನನ ವಶಕ್ಕೆ ಕೊಟ್ಟನು. ಬೇರೆ ಇಸ್ರಯೇಲರನ್ನು ಅವರವರ ಮನೆಗಳಿಗೆ ಕಳುಹಿಸಿದನು.


ನೆರೆದುಬಂದು ಸಭೆ ಸೇರಿದ್ದ ಇಸ್ರಯೇಲರಲ್ಲಿ ಪ್ರತಿಯೊಬ್ಬ ಗಂಡಸಿಗೂ ಹೆಂಗಸಿಗೂ ಒಂದು ರೊಟ್ಟಿಯನ್ನೂ, ಒಂದು ತುಂಡು ಮಾಂಸವನ್ನು ಹಾಗು ದ್ರಾಕ್ಷಿ ಹಣ್ಣಿನಿಂದ ಮಾಡಿದ ಉಂಡೆಯನ್ನು ಕೊಡಿಸಿದನು. ತರುವಾಯ ಜನರೆಲ್ಲರೂ ತಮ್ಮ ತಮ್ಮ ಮನೆಗಳಿಗೆ ಹೋದರು.


ಎಂಟನೆಯ ದಿವಸ ಜನರಿಗೆ ಹೋಗುವುದಕ್ಕೆ ಅಪ್ಪಣೆಯಾಯಿತು. ಅವರು ಅರಸನನ್ನು ವಂದಿಸಿ, ಸರ್ವೇಶ್ವರ ತಮ್ಮ ದಾಸ ದಾವೀದನಿಗೂ ತಮ್ಮ ಪ್ರಜೆಗಳಾದ ಇಸ್ರಯೇಲರಿಗೂ ಮಾಡಿದ ಸರ್ವೋಪಕಾರಗಳನ್ನು ಸ್ಮರಿಸಿ, ಆನಂದಚಿತ್ತರಾಗಿ ಹರ್ಷಿಸುತ್ತಾ, ತಮ್ಮ ತಮ್ಮ ನಿವಾಸಗಳಿಗೆ ತೆರಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು