Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 22:8 - ಕನ್ನಡ ಸತ್ಯವೇದವು C.L. Bible (BSI)

8 “ನೀವು ಬಹಳ ಆಸ್ತಿಯುಳ್ಳವರಾಗಿ ದನಕರು, ಬೆಳ್ಳಿಬಂಗಾರ, ಕಂಚು ಕಬ್ಬಿಣ, ವಸ್ತ್ರ ಮೊದಲಾದ ವಸ್ತುಗಳನ್ನು ತೆಗೆದುಕೊಂಡು ನಿಮ್ಮ ನಿಮ್ಮ ನಿವಾಸಗಳಿಗೆ ತೆರಳಿರಿ. ನೀವು ಶತ್ರುಗಳಿಂದ ಪಡೆದ ಕೊಳ್ಳೆಯಲ್ಲಿ ನಿಮ್ಮ ಸಹೋದರರಿಗೂ ಪಾಲುಕೊಡಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅವರನ್ನು ಆಶೀರ್ವದಿಸಿ “ನೀವು ಬಹಳ ಸಮೃದ್ಧಿಯುಳ್ಳವರಾಗಿ ದನಕುರಿ, ಬೆಳ್ಳಿಬಂಗಾರ, ತಾಮ್ರ, ಕಬ್ಬಿಣ, ವಸ್ತ್ರ, ಮೊದಲಾದ ವಸ್ತುಗಳನ್ನು ತೆಗೆದುಕೊಂಡು ನಿಮ್ಮನಿಮ್ಮ ನಿವಾಸಗಳಿಗೆ ಹೋಗಿರಿ. ನಿಮ್ಮ ಶತ್ರುಗಳಿಂದ ತೆಗೆದುಕೊಂಡ ಕೊಳ್ಳೆಯಲ್ಲಿ ನಿಮ್ಮ ಸಹೋದರರಿಗೂ ಪಾಲು ಕೊಡಿರಿ” ಎಂದನು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ನೀವು ಬಹಳ ದನ, ಕುರಿ, ಬೆಳ್ಳಿ, ಬಂಗಾರ, ತಾಮ್ರ, ಕಬ್ಬಿಣ, ವಸ್ತ್ರ ಮೊದಲಾದ ವಸ್ತು ಸಮೃದ್ಧಿಯುಳ್ಳವರಾಗಿ ನಿಮ್ಮ ನಿವಾಸಗಳಿಗೆ ಹೋಗಿರಿ; ನೀವು ಶತ್ರುಗಳಿಂದ ತೆಗೆದುಕೊಂಡ ಕೊಳ್ಳೆಯಲ್ಲಿ ನಿಮ್ಮ ಸಹೋದರರಿಗೂ ಪಾಲು ಕೊಡಿರಿ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಅವನು, “ನೀವು ಬಹಳ ಶ್ರೀಮಂತರಾಗಿದ್ದೀರಿ, ನಿಮ್ಮಲ್ಲಿ ಬಹಳ ಪಶುಗಳಿವೆ; ನಿಮ್ಮಲ್ಲಿ ಚಿನ್ನ, ಬೆಳ್ಳಿ ಮತ್ತು ಬೆಲೆಬಾಳುವ ರತ್ನಾಭರಣಗಳಿವೆ. ನಿಮ್ಮಲ್ಲಿ ಸುಂದರವಾದ ಅನೇಕ ಬಟ್ಟೆಗಳಿವೆ. ನೀವು ನಿಮ್ಮ ಶತ್ರುಗಳಿಂದ ಹಲವಾರು ವಸ್ತುಗಳನ್ನು ತೆಗೆದುಕೊಂಡಿದ್ದೀರಿ. ಈ ವಸ್ತುಗಳನ್ನು ನಿಮ್ಮ ಸಹೋದರರೊಂದಿಗೂ ಹಂಚಿಕೊಳ್ಳಿರಿ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 “ನೀವು ಬಹು ಆಸ್ತಿಯುಳ್ಳವರಾಗಿ ಪಶುಗಳು, ಬೆಳ್ಳಿ, ಬಂಗಾರ, ಕಂಚು, ಕಬ್ಬಿಣ, ಬಹು ಹೆಚ್ಚಾದ ವಸ್ತ್ರಗಳೊಂದಿಗೆ ಹಿಂದಿರುಗಿ, ನಿಮ್ಮ ಗುಡಾರಗಳಿಗೆ ಹೋಗಿರಿ. ನಿಮ್ಮ ಶತ್ರುಗಳ ಕೊಳ್ಳೆಯನ್ನು ನಿಮ್ಮ ಸಹೋದರರ ಸಂಗಡ ಹಂಚಿಕೊಳ್ಳಿರಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 22:8
12 ತಿಳಿವುಗಳ ಹೋಲಿಕೆ  

ಅದನ್ನು ಎರಡು ಭಾಗಮಾಡಿ ಯುದ್ಧಕ್ಕೆ ಹೋಗಿದ್ದ ಸೈನಿಕರಿಗೆ ಅರ್ಧವನ್ನೂ ಮಿಕ್ಕ ಸಮಾಜದವರಿಗೆ ಅರ್ಧವನ್ನೂ ಹಂಚಿಕೊಡಿ.


ದೀರ್ಘಾಯುಷ್ಯ, ಜ್ಞಾನವೆಂಬ ಆಕೆಯ ಬಲಗೈಯಲ್ಲಿದೆ; ಘನತೆ, ಶ್ರೀಮಂತಿಕೆಯೂ ಆಕೆಯ ಎಡಗೈಯಲ್ಲಿವೆ.


ಈ ವಿಷಯದಲ್ಲಿ ನಿಮ್ಮ ಮಾತನ್ನು ಯಾರೂ ಕೇಳಬಾರದು. ಯುದ್ಧಮಾಡಿದವನಿಗೆ ಸಿಕ್ಕುವಷ್ಟು ಪಾಲು ಸಾಧನಸಾಮಗ್ರಿಗಳನ್ನು ಕಾಯ್ದವನಿಗೂ ಸಿಕ್ಕಬೇಕು. ಉಭಯತ್ರರಿಗೂ ಸಮಪಾಲಾಗಬೇಕು,” ಎಂದು ಉತ್ತರಕೊಟ್ಟನು.


ಈಜಿಪ್ಟಿನ ಸಕಲ ಐಶ್ವರ್ಯಕ್ಕಿಂತಲೂ ‘ಕ್ರಿಸ್ತ'ನಿಗೋಸ್ಕರ ನಿಂದೆಯನ್ನು ಅನುಭವಿಸುವುದು ದೊಡ್ಡ ಭಾಗ್ಯವೆಂದು ಆತನು ಎಣಿಸಿದನು. ಏಕೆಂದರೆ, ದೇವರಿಂದ ದೊರಕಲಿದ್ದ ಪ್ರತಿಫಲದ ಮೇಲೆಯೇ ಆತನ ಮನಸ್ಸು ನಾಟಿತ್ತು.


ನನ್ನ ಪ್ರಿಯ ಸಹೋದರರೇ, ಸ್ಥಿರಚಿತ್ತರಾಗಿರಿ; ನಿಶ್ಚಲರಾಗಿರಿ. ಪ್ರಭುವಿನ ಸೇವೆಯಲ್ಲಿ ನೀವು ಪಡುವ ಪ್ರಯಾಸ ಎಂದಿಗೂ ನಿಷ್ಫಲವಾಗದು. ಆದ್ದರಿಂದ ಅವರ ಸೇವೆಯಲ್ಲಿ ನಿರಂತರ ಶ್ರದ್ಧೆಯುಳ್ಳವರಾಗಿರಿ.


ಓಡಿದರು, ದಂಡೊಡನೆ ಓಡಿದರು ದೊರೆಗಳು I ದೋಚಿಕೊಂಡರು ಕೊಳ್ಳೆಯನು ಗೃಹಿಣಿಯರು II


ಆದುದರಿಂದ ಸರ್ವೇಶ್ವರ ಇವನ ರಾಜ್ಯಾಧಿಕಾರವನ್ನು ಸ್ಥಿರಪಡಿಸಿದರು; ಯೆಹೂದ್ಯರೆಲ್ಲರೂ ಯೆಹೋಷಾಫಾಟನಿಗೆ ಕಾಣಿಕೆ ಕೊಡುತ್ತಿದ್ದುದರಿಂದ ಇವನ ಧನಘನತೆಗಳು ಹೆಚ್ಚಾದವು.


ಅವರು ಅಲ್ಲಿಗೆ ಹೋದಾಗ ಆ ದಾಳಿಕಾರರು ತಮಗೆ ಫಿಲಿಷ್ಟಿಯ ಹಾಗು ಯೆಹೂದ ಪ್ರಾಂತ್ಯಗಳಲ್ಲಿ ದೊರಕಿದ್ದ ದೊಡ್ಡಕೊಳ್ಳೆಯ ನಿಮಿತ್ತ ಸಂತೋಷಿಸಿ, ತಿಂದು, ಕುಡಿದು, ಕುಣಿದಾಡುತ್ತಾ ಅಲ್ಲಿನ ಬಯಲಿನಲ್ಲಿ ವ್ಯಾಪಿಸಿಕೊಂಡಿದ್ದರು.


ಹಿಜ್ಕೀಯನಿಗೆ ಅತ್ಯಧಿಕವಾದ ಧನಘನತೆಗಳು ಒದಗಿದವು; ಅವನು ಬೆಳ್ಳಿಬಂಗಾರ, ರತ್ನ, ಪರಿಮಳ ದ್ರವ್ಯ, ಗುರಾಣಿ ಮುಂತಾದ ಶ್ರೇಷ್ಠಾಯುಧಗಳನ್ನು ಇಡುವುದಕ್ಕಾಗಿ ಭಂಡಾರಗಳನ್ನು ಏರ್ಪಡಿಸಿದನು. ಧಾನ್ಯ, ದ್ರಾಕ್ಷಾರಸ, ಎಣ್ಣೆ, ಇವುಗಳನ್ನು ಸಂಗ್ರಹಿಸುವುದಕ್ಕಾಗಿ ಉಗ್ರಾಣಗಳನ್ನು ಕಟ್ಟಿಸಿದನು;


ಅವರಿಗೆ ಗಿಲ್ಯಾದಿನ ಪ್ರದೇಶದಲ್ಲಿ ಅನೇಕ ಕುರಿಮಂದೆಗಳು ಇದ್ದವು. ಆದುದರಿಂದ ಯುಫ್ರೆಟಿಸ್ ನದಿಯವರೆಗೆ ಹಬ್ಬಿಕೊಂಡಿದ್ದ ಪರ್ವತದಲ್ಲಿನ ಕಾಡಿನವರೆಗೆ ಎಲ್ಲಾ ಪ್ರದೇಶವನ್ನು ವಶಪಡಿಸಿಕೊಂಡಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು