Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 23:1 - ಕನ್ನಡ ಸತ್ಯವೇದವು C.L. Bible (BSI)

1 ಸರ್ವೇಶ್ವರಸ್ವಾಮಿ ಸುತ್ತಮುತ್ತಲಿನ ಶತ್ರುಗಳನ್ನು ನಿರ್ಮೂಲಮಾಡಿ ಇಸ್ರಯೇಲರಿಗೆ ನೆಮ್ಮದಿಯಿತ್ತರು. ಬಹಳ ದಿನಗಳಾದ ತರುವಾಯ ಯೆಹೋಶುವ ಹಣ್ಣುಹಣ್ಣು ಮುದುಕನಾದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೋವನು ಸುತ್ತಮುತ್ತಲಿನ ಶತ್ರುಗಳನ್ನು ನಿರ್ಮೂಲಮಾಡಿ ಇಸ್ರಾಯೇಲ್ಯರಿಗೆ ವಿಶ್ರಾಂತಿ ಕೊಟ್ಟನು. ತರುವಾಯ ಬಹು ದಿನಗಳಾದ ಮೇಲೆ ಯೆಹೋಶುವನು ದಿನತುಂಬಿದ ಮುದುಕನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೆಹೋವನು ಸುತ್ತಣ ವಿರೋಧಿಗಳನ್ನು ನಿರ್ಮೂಲಮಾಡಿ ಇಸ್ರಾಯೇಲ್ಯರಿಗೆ ವಿಶ್ರಾಂತಿ ಕೊಟ್ಟನು. ತರುವಾಯ ಬಹುದಿನಗಳು ಗತಿಸಿದ ಮೇಲೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೆಹೋವನು ಇಸ್ರೇಲರ ಶತ್ರುಗಳನ್ನು ಸದೆಬಡೆದು ಅವರಿಗೆ ವಿಶ್ರಾಂತಿಯನ್ನು ಕೊಟ್ಟನು. ಯೆಹೋವನು ಇಸ್ರೇಲನ್ನು ಸುರಕ್ಷಿತಗೊಳಿಸಿದನು. ಅನೇಕ ವರ್ಷಗಳು ಕಳೆದವು. ಯೆಹೋಶುವನು ಬಹಳ ಮುದುಕನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೆಹೋವ ದೇವರು ಇಸ್ರಾಯೇಲರನ್ನು ಸುತ್ತಲಿರುವ ಎಲ್ಲಾ ಶತ್ರುಗಳಿಂದ ತಪ್ಪಿಸಿ, ಅವರಿಗೆ ವಿಶ್ರಾಂತಿಕೊಟ್ಟ ಬಹಳ ದಿವಸಗಳ ತರುವಾಯ ಯೆಹೋಶುವನ ದಿವಸಗಳು ಗತಿಸಿ ವೃದ್ಧನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 23:1
15 ತಿಳಿವುಗಳ ಹೋಲಿಕೆ  

ಯೆಹೋಶುವ ಹಣ್ಣುಹಣ್ಣು ಮುದುಕನಾದ. ಆಗ ಸರ್ವೇಶ್ವರ ಆತನಿಗೆ, “ನೀನೀಗ ಮುದುಕ. ಸ್ವಾಧೀನ ಮಾಡಿಕೊಳ್ಳಬೇಕಾದ ನಾಡುಗಳು ಇನ್ನೂ ಬಹಳ ಇವೆ.


ಸರ್ವೇಶ್ವರ ಅವರ ಪೂರ್ವಜರಿಗೆ ಆಣೆಯಿಟ್ಟು ಹೇಳಿದಂತೆ ಅವರಿಗೆ ಎಲ್ಲೆಡೆಯಲ್ಲೂ ಶಾಂತಿಸಮಾಧಾನವನ್ನು ಅನುಗ್ರಹಿಸಿದರು. ಶತ್ರುಗಳಾರು ಅವರನ್ನು ಪ್ರತಿಭಟಿಸಿ ನಿಲ್ಲಲಿಲ್ಲ. ಎಲ್ಲರೂ ಅವರ ಕೈವಶವಾದರು.


ಸರ್ವೇಶ್ವರ ಮೋಶೆಯ ಮುಖಾಂತರ ವಾಗ್ದಾನ ಮಾಡಿದ್ದ ಪ್ರದೇಶವನ್ನೆಲ್ಲಾ ಯೆಹೋಶುವ ಹಿಡಿದುಕೊಂಡನು, ಇಸ್ರಯೇಲ್ ಕುಲಭಾಗಗಳಿಗನುಸಾರ ಅದನ್ನು ಹಂಚಿಕೊಟ್ಟನು. ಯುದ್ಧ ನಿಂತಿತು. ದೇಶದಲ್ಲೆಲ್ಲಾ ಶಾಂತಿಸಮಾಧಾನ ನೆಲೆಸಿತು.


ಜಗದೆಲ್ಲೆಡೆ ಕದನ ಕಾಳಗ ನಿಲ್ಲಿಸಿಹನು I ಬಿಲ್ಲು ಭಲ್ಲೆಗಳನು ಮುರಿದು ಹಾಕಿದನು I ರಥಗಳನು ಬೆಂಕಿಯಿಂದ ಸುಟ್ಟುಹಾಕಿದನು II


ಅವರು ತಮ್ಮ ವಾಗ್ದಾನಕ್ಕನುಸಾರ ನಿಮ್ಮ ಸಹೋದರರಿಗೆ ಈಗ ನೆಮ್ಮದಿಯನ್ನು ದಯಪಾಲಿಸಿದ್ದಾರೆ. ಆದುದರಿಂದ ಸರ್ವೇಶ್ವರನ ದಾಸನಾದ ಮೋಶೆ ಜೋರ್ಡನಿನ ಆಚೆಕಡೆ ನಿಮಗೆ ಕೊಟ್ಟ ಆಸ್ತಿಯನ್ನು ಅನುಭವಿಸುತ್ತಿರುವ ನಿಮ್ಮ ನಿಮ್ಮ ನಿವಾಸಿಗಳ ಬಳಿಗೆ ನೀವು ಹೋಗಬಹುದು.


“ನಾನು ಈಗ ನೂರಿಪ್ಪತ್ತು ವರ್ಷದವನಾಗಿದ್ದೇನೆ; ವಿಶೇಷವಾದ ಕಾರ್ಯಗಳನ್ನು ನಿರ್ವಹಿಸುವುದು ಇನ್ನು ನನ್ನಿಂದಾಗದು; ಸರ್ವೇಶ್ವರ ನನಗೆ, ‘ನೀನು ಈ ಜೋರ್ಡನ್ ನದಿಯನ್ನು ದಾಟಕೂಡದು’ ಎಂದು ಆಜ್ಞಾಪಿಸಿದ್ದಾರೆ.


ಪೂರ್ಣ ಆಯುಷ್ಯವನ್ನು ಕಳೆದು, ಹಣ್ಣು ಹಣ್ಣು ಮುದುಕನಾಗಿ ಪ್ರಾಣಬಿಟ್ಟು ಅವನು ತನ್ನ ಪಿತೃಗಳ ಬಳಿಗೆ ಸೇರಿದನು.


ತಪ್ಪಲಿಗೆ ಇಳಿದ ದನಕರುಗಳಂತೆ ಆ ಜನರನ್ನು ಕರೆತಂದಿತು ಸ್ವಾಮಿಯ ಆತ್ಮ ಶಾಂತಿ ನಿಲಯಕೆ. ಹೀಗೆ, ಆ ಜನರಿಗೆ ಮಾರ್ಗದರ್ಶಕರಾಗಿ ತಮ್ಮ ನಾಮವನ್ನು ಘನಪಡಿಸಿಕೊಂಡರು ಸ್ವಾಮಿ.


ಇನ್ನು ಇವನೇ ನಿಮ್ಮನ್ನು ಮುನ್ನಡೆಸುವನು. ಚಿಕ್ಕಂದಿನಿಂದ ನಿಮ್ಮ ನಾಯಕನಾಗಿದ್ದ ನಾನು ಈಗ ತಲೆನರೆತ ಮುದುಕನಾಗಿದ್ದೇನೆ; ನನ್ನ ಮಕ್ಕಳು ನಿಮ್ಮ ಮಧ್ಯದಲ್ಲಿದ್ದಾರೆ.


ಅರಸ ದಾವೀದನು ಹಣ್ಣು ಹಣ್ಣು ಮುದುಕನಾದ; ಎಷ್ಟು ಕಂಬಳಿಗಳನ್ನು ಹೊದಿಸಿದರೂ ಅವನಿಗೆ ಬೆಚ್ಚಗಾಗುತ್ತಿರಲಿಲ್ಲ.


ಇಸ್ರಯೇಲ್ ದೇವರಾದ ಸರ್ವೇಶ್ವರ, ತಮ್ಮ ಪ್ರಜೆಗೆ ನೆಮ್ಮದಿಯನ್ನು ಅನುಗ್ರಹಿಸಿ, ಸದಾ ಜೆರುಸಲೇಮಿನಲ್ಲಿ ವಾಸಿಸುವವರಾದ ಕಾರಣ,


ಇಸ್ರಯೇಲರ ಕುಲಪ್ರಧಾನರು, ಸಹಸ್ರಾಧಿಪತಿಗಳು, ಶತಾಧಿಪತಿಗಳು, ಅರಸನ ವಿವಿಧ ಸೇವೆಯನ್ನು ಮಾಡಬೇಕಾಗಿದ್ದ ವರ್ಗಗಳ ಅಧಿಪತಿಗಳು ಹಾಗು ಇವರ ಕಾರ್ಯಕ್ರಮಗಳ ಪಟ್ಟಿ: ವರ್ಷದ ಎಲ್ಲಾ ತಿಂಗಳುಗಳಲ್ಲಿ, ತಿಂಗಳಿಗೆ ಒಂದು ವರ್ಗದಂತೆ, ಸರದಿಯ ಮೇಲೆ ಕೆಲಸಕ್ಕಾಗಿ ಬರುತ್ತಿದ್ದ ಪ್ರತಿಯೊಂದು ವರ್ಗದಲ್ಲಿ ಇಪ್ಪತ್ತನಾಲ್ಕು ಸಾವಿರ ಮಂದಿ ಇದ್ದರು.


ಅಬೀಯನು ಮೃತನಾಗಿ ಪಿತೃಗಳ ಬಳಿಗೆ ಸೇರಿದನು. ಅವನ ಶವವನ್ನು ದಾವೀದನಗರದಲ್ಲಿ ಸಮಾಧಿಮಾಡಿದರು. ಅವನ ಸ್ಥಾನದಲ್ಲಿ ಅವನ ಮಗ ಆಸನು ಅರಸನಾದನು. ಇವನ ಕಾಲದಲ್ಲಿ, ನಾಡಿನಲ್ಲಿ ಹತ್ತು ವರ್ಷ ಶಾಂತಿಸಮಾಧಾನವಿತ್ತು.


ಜುದೇಯದ ಎಲ್ಲ ಪಟ್ಟಣಗಳಿಂದ ಪೂಜಾಸ್ಥಳಗಳನ್ನೂ ಸೂರ್ಯಸ್ತಂಭಗಳನ್ನೂ ತೆಗೆದು ಹಾಕಿಸಿದನು. ಇವನ ಆಳ್ವಿಕೆಯಲ್ಲಿ ರಾಜ್ಯದೊಳಗೆ ಸಮಾಧಾನ ವಿತ್ತು.


ಹೀಗೆ ದೇವ ಅನುಗ್ರಹದಿಂದ ಸುತ್ತಮುತ್ತಲಿನ ವೈರಿಗಳ ಭಯ ತಪ್ಪಿ, ಯೆಹೋಷಾಫಾಟನ ರಾಜ್ಯಕ್ಕೆ ಸಮಾಧಾನ ಉಂಟಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು