Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 23:2 - ಕನ್ನಡ ಸತ್ಯವೇದವು C.L. Bible (BSI)

2 ಆತ ಇಸ್ರಯೇಲರೆಲ್ಲರನ್ನು, ಅವರ ಹಿರಿಯರನ್ನು, ಮುಖ್ಯಸ್ಥರನ್ನು, ನ್ಯಾಯಾಧಿಪತಿಗಳನ್ನು ಹಾಗೂ ಅಧಿಕಾರಿಗಳನ್ನು ತನ್ನ ಬಳಿಗೆ ಕರೆಯಿಸಿದನು. ಅವರಿಗೆ, “ನಾನು ಮುಪ್ಪಿನ ಮುದುಕನಾದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆತನು ಇಸ್ರಾಯೇಲ್ಯರ ಹಿರಿಯ ಪ್ರಭುಗಳು, ನ್ಯಾಯಾಧಿಪತಿಗಳು, ಅಧಿಕಾರಿಗಳು ಅಲ್ಲದೆ ಎಲ್ಲಾ ಇಸ್ರಾಯೇಲರ ಜನರನ್ನು ತನ್ನ ಬಳಿಗೆ ಕರಿಸಿ ಅವರಿಗೆ, “ನಾನು ದಿನತುಂಬಿದ ಮುದುಕನಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ದಿನತುಂಬಿದ ಮುದುಕನಾದ ಯೆಹೋಶುವನು ಇಸ್ರಾಯೇಲ್ಯರ ಹಿರಿಯರು, ಪ್ರಭುಗಳು, ನ್ಯಾಯಾಧಿಪತಿಗಳು, ಅಧಿಕಾರಿಗಳು ಇವರನ್ನೂ ಎಲ್ಲಾ ಇಸ್ರಾಯೇಲ್ಯರನ್ನೂ ತನ್ನ ಬಳಿಗೆ ಕರಿಸಿ ಅವರಿಗೆ - ನಾನು ದಿನತುಂಬಿದ ಮುದುಕನಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಆಗ ಯೆಹೋಶುವನು ಎಲ್ಲಾ ಹಿರಿಯನಾಯಕರನ್ನು, ಕುಟುಂಬದ ಮುಖ್ಯಸ್ಥರನ್ನು, ನ್ಯಾಯಾಧೀಶರನ್ನು ಮತ್ತು ಇಸ್ರೇಲರ ಅಧಿಕಾರಿಗಳನ್ನು ಸಭೆ ಸೇರಿಸಿದನು. ಯೆಹೋಶುವನು ಅವರಿಗೆ, “ನಾನು ಬಹಳ ಮುದುಕನಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಒಂದು ದಿನ ಅವನು ಸಮಸ್ತ ಇಸ್ರಾಯೇಲರನ್ನೂ ಅವರ ಹಿರಿಯರನ್ನೂ ಅವರ ಮುಖ್ಯಸ್ಥರನ್ನೂ ಅವರ ನ್ಯಾಯಾಧಿಪತಿಗಳನ್ನೂ ಅವರ ಅಧಿಕಾರಿಗಳನ್ನೂ ಕರೆಯಿಸಿ ಅವರಿಗೆ, “ನಾನು ದಿನತುಂಬಿದ ವೃದ್ಧನಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 23:2
11 ತಿಳಿವುಗಳ ಹೋಲಿಕೆ  

ತರುವಾಯ ಯೆಹೋಶುವನು ಎಲ್ಲ ಇಸ್ರಯೇಲ ಕುಲದವರನ್ನು ಶೆಕೆಮಿನಲ್ಲಿ ಸಭೆ ಸೇರಿಸಿದನು. ಹಿರಿಯರು, ನಾಯಕರು, ನ್ಯಾಯಾಧಿಪತಿಗಳು, ಅಧಿಕಾರಿಗಳು ಬಂದು ದೇವರ ಸನ್ನಿಧಿಯಲ್ಲಿ ಉಪಸ್ಥಿತರಾದರು.


ದಾವೀದನು ಇಸ್ರಯೇಲರ ಎಲ್ಲ ಪದಾಧಿಕಾರಿಗಳನ್ನು ಅಂದರೆ, ಕುಲ ಅಧ್ಯಕ್ಷರುಗಳು, ಅರಸನ ಸೇವೆಮಾಡುತ್ತಿದ್ದ ವರ್ಗನಾಯಕರು, ಸಹಸ್ರಾಧಿಪತಿಗಳು, ಶತಾಧಿಪತಿಗಳು, ಅರಸನ ದನಕುರಿ ಮೊದಲಾದ ಸೊತ್ತಿನ ಮೇಲ್ವಿಚಾರಕರು, ರಾಜಪುತ್ರ ಪಾಲಕರು, ಕಂಚುಕಿಗಳು, ರಣವೀರರು ಹೀಗೆ ಎಲ್ಲ ಅಧಿಕಾರಿಗಳನ್ನು ಜೆರುಸಲೇಮಿಗೆ ಕರೆಸಿದನು.


ನಿಮ್ಮ ಕುಲಗಳ ಹಿರಿಯರನ್ನೂ ಅಧಿಪತಿಗಳನ್ನೂ ನನ್ನ ಬಳಿಗೆ ಸೇರಿಸಿರಿ. ನಾನು ಈ ಮಾತುಗಳನ್ನು ಅವರಿಗೆ ತಿಳಿಸಿ, ಅವರಿಗೆ ವಿರುದ್ಧ ಸಾಕ್ಷಿಗಳಾಗುವುದಕ್ಕೆ ಭೂಮ್ಯಾಕಾಶಗಳನ್ನೇ ಕರೆಯುವೆನು.


ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಪರವಾಗಿದ್ದು, ಈ ಜನಾಂಗಗಳಿಗೆ ಮಾಡಿದ್ದೆಲ್ಲವನ್ನು ನೀವು ಕಣ್ಣಾರೆ ನೋಡಿದ್ದೀರಿ. ಹೌದು, ನಿಮ್ಮ ಪರವಾಗಿ ಯುದ್ಧಮಾಡಿದಾತ ನಿಮ್ಮ ದೇವರಾದ ಸರ್ವೇಶ್ವರಸ್ವಾಮಿಯೇ.


ಯೆಹೋಶುವ ಹಣ್ಣುಹಣ್ಣು ಮುದುಕನಾದ. ಆಗ ಸರ್ವೇಶ್ವರ ಆತನಿಗೆ, “ನೀನೀಗ ಮುದುಕ. ಸ್ವಾಧೀನ ಮಾಡಿಕೊಳ್ಳಬೇಕಾದ ನಾಡುಗಳು ಇನ್ನೂ ಬಹಳ ಇವೆ.


ಇನ್ನು ಇವನೇ ನಿಮ್ಮನ್ನು ಮುನ್ನಡೆಸುವನು. ಚಿಕ್ಕಂದಿನಿಂದ ನಿಮ್ಮ ನಾಯಕನಾಗಿದ್ದ ನಾನು ಈಗ ತಲೆನರೆತ ಮುದುಕನಾಗಿದ್ದೇನೆ; ನನ್ನ ಮಕ್ಕಳು ನಿಮ್ಮ ಮಧ್ಯದಲ್ಲಿದ್ದಾರೆ.


ಅರಸ ದಾವೀದನು ಹಣ್ಣು ಹಣ್ಣು ಮುದುಕನಾದ; ಎಷ್ಟು ಕಂಬಳಿಗಳನ್ನು ಹೊದಿಸಿದರೂ ಅವನಿಗೆ ಬೆಚ್ಚಗಾಗುತ್ತಿರಲಿಲ್ಲ.


ಸರ್ವೇಶ್ವರನ ಒಡಂಬಡಿಕೆಯ ಮಂಜೂಷವನ್ನು ದಾವೀದನಗರವಾದ ಸಿಯೋನಿನಿಂದ ದೇವಾಲಯಕ್ಕೆ ತರುವುದಕ್ಕಾಗಿ, ಇಸ್ರಯೇಲರ ಹಿರಿಯರು, ಕುಲಗಳ ನಾಯಕರು, ಇವರೇ ಮೊದಲಾದ ಎಲ್ಲ ಇಸ್ರಯೇಲ್ ಪ್ರಮುಖ ವ್ಯಕ್ತಿಗಳು ಜೆರುಸಲೇಮಿಗೆ, ತನ್ನ ಆಸ್ಥಾನಕ್ಕೆ, ಬರಬೇಕೆಂದು ಅರಸ ಸೊಲೊಮೋನನು ಆಜ್ಞಾಪಿಸಿದನು.


ಆಗ ಇಸ್ರಯೇಲರ ಎಲ್ಲಾ ಅಧಿಪತಿಗಳನ್ನು, ಯಾಜಕರನ್ನು ಹಾಗು ಲೇವಿಯರನ್ನು ತನ್ನ ಬಳಿಯಲ್ಲಿ ಸಭೆ ಸೇರಿಸಿದನು.


ದ್ರಾಕ್ಷೀತೋಟಗಳ ಮೇಲೆ ರಾಮಾ ಊರಿನ ಶಿಮ್ಮೀ; ದ್ರಾಕ್ಷೀತೋಟಗಳಲ್ಲಿರುವ ದ್ರಾಕ್ಷಾರಸದ ಉಗ್ರಾಣಗಳ ಮೇಲೆ ಶಿಷ್ಮೀಯನಾದ ಜಬ್ದೀ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು