Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 23:3 - ಕನ್ನಡ ಸತ್ಯವೇದವು C.L. Bible (BSI)

3 ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಪರವಾಗಿದ್ದು, ಈ ಜನಾಂಗಗಳಿಗೆ ಮಾಡಿದ್ದೆಲ್ಲವನ್ನು ನೀವು ಕಣ್ಣಾರೆ ನೋಡಿದ್ದೀರಿ. ಹೌದು, ನಿಮ್ಮ ಪರವಾಗಿ ಯುದ್ಧಮಾಡಿದಾತ ನಿಮ್ಮ ದೇವರಾದ ಸರ್ವೇಶ್ವರಸ್ವಾಮಿಯೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನಿಮ್ಮ ದೇವರಾದ ಯೆಹೋವನು ನಿಮಗೋಸ್ಕರ ಜನಾಂಗಗಳಿಗೆ ಮಾಡಿದೆಲ್ಲವನ್ನೂ ನೀವೆಲ್ಲರೂ ನೋಡಿದ್ದೀರಷ್ಟೇ. ಹೌದು, ನಿಮಗಾಗಿ ಯುದ್ಧ ಮಾಡಿದಾತನು ನಿಮ್ಮ ದೇವರಾದ ಯೆಹೋವನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ನಿಮ್ಮ ದೇವರಾದ ಯೆಹೋವನು ನಿಮಗೋಸ್ಕರ ಈ ಜನಾಂಗಗಳಿಗೆಲ್ಲಾ ಮಾಡಿದ್ದೆಲ್ಲವನ್ನೂ ನೋಡಿದ್ದೀರಷ್ಟೆ; ಹೌದು, ನಿಮಗಾಗಿ ಯುದ್ಧ ಮಾಡಿದಾತನು ನಿಮ್ಮ ದೇವರಾದ ಯೆಹೋವನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಯೆಹೋವನು ನಮ್ಮ ಶತ್ರುಗಳಿಗೆ ಏನು ಮಾಡಿದನೆಂಬುದು ನೀವು ನೋಡಿದ್ದೀರಿ. ನಮಗೆ ಸಹಾಯ ಮಾಡುವುದಕ್ಕಾಗಿ ನಮ್ಮ ದೇವರಾದ ಯೆಹೋವನು ನಮಗಾಗಿ ಯುದ್ಧಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆದರೆ ನಿಮ್ಮ ದೇವರಾದ ಯೆಹೋವ ದೇವರು ನಿಮಗೋಸ್ಕರ ಈ ಸಕಲ ಜನಾಂಗಗಳಿಗೆ ಮಾಡಿದ ಎಲ್ಲವನ್ನೂ ನೋಡಿದ್ದೀರಿ. ನಿಮಗೋಸ್ಕರವಾಗಿ ಯುದ್ಧ ಮಾಡಿದವರು ನಿಮ್ಮ ದೇವರಾದ ಯೆಹೋವ ದೇವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 23:3
13 ತಿಳಿವುಗಳ ಹೋಲಿಕೆ  

ಸರ್ವೇಶ್ವರ ಸ್ವಾಮಿಯೇ ನಿಮ್ಮ ಪರವಾಗಿ ಯುದ್ಧಮಾಡುವರು. ನೀವು ನೆಮ್ಮದಿಯಿಂದಿರಿ,” ಎಂದು ಹೇಳಿದನು.


ಇಸ್ರಯೇಲ್ ದೇವರಾದ ಸರ್ವೇಶ್ವರ ಅವರ ಪರವಾಗಿ ಯುದ್ಧಮಾಡಿದ್ದರಿಂದ ಯೆಹೋಶುವನು ಈ ಎಲ್ಲಾ ರಾಜರನ್ನೂ ರಾಜ್ಯಗಳನ್ನೂ ಏಕಕಾಲದಲ್ಲಿ ವಶಮಾಡಿಕೊಂಡನು.


ಆ ಪ್ರಕಾರ ಹಿಂದೆಯಾಗಲಿ ಮುಂದೆಯಾಗಲಿ ಸರ್ವೇಶ್ವರ ಒಬ್ಬ ಮನುಷ್ಯನ ಮಾತಿಗೆ ಕಿವಿಗೊಟ್ಟಂಥ ದಿವಸ ಇಲ್ಲವೇ ಇಲ್ಲ! ಸರ್ವೇಶ್ವರಸ್ವಾಮಿ ತಾವೇ ಇಸ್ರಯೇಲರ ಪರವಾಗಿ ಯುದ್ಧಮಾಡುತ್ತಿದ್ದರು.


ಇಸ್ರಯೇಲಿನ ಜನರಾದ ನೀವು ಇದನ್ನು ಕಣ್ಣಾರೆ ಕಂಡು, “ಸರ್ವೇಶ್ವರ ಇಸ್ರಯೇಲಿನ ಹೊರಗೂ ಮಹಾಮಹಿಮೆಯುಳ್ಳವರು!” ಎಂದು ಹೇಳಿಕೊಳ್ಳುವಿರಿ.


ನಿಮ್ಮ ದೇವರಾದ ಸರ್ವೇಶ್ವರನೇ ನಿಮ್ಮ ಸಂಗಡ ಇದ್ದು ಶತ್ರುಗಳೊಡನೆ ನಿಮ್ಮ ಪರವಾಗಿ ಯುದ್ಧಮಾಡಿ, ನಿಮಗೆ ಜಯವನ್ನುಂಟುಮಾಡುವರು’ ಎಂದು ಹೇಳಬೇಕು


ಹೀಗಿರುವಲ್ಲಿ, ನೀವು ಬಹಳ ಜಾಗರೂಕತೆಯಿಂದಿರಿ; ನಿಮ್ಮ ಕಣ್ಣುಗಳಿಂದಲೇ ನೋಡಿದ ಘಟನೆಗಳನ್ನು ಎಷ್ಟು ಮಾತ್ರಕ್ಕೂ ಮರೆಯದಿರಿ; ಜೀವಮಾನಪರ್ಯಂತ ಇವುಗಳನ್ನು ನೆನಪಿನಲ್ಲಿ ಇಡಿ; ನಿಮ್ಮ ಮಕ್ಕಳಿಗೂ ಮೊಮ್ಮಕ್ಕಳಿಗೂ ತಿಳಿಸುತ್ತಾ ಹೋಗಿ,


ನಿಮ್ಮ ಮುಂದುಗಡೆಯಲ್ಲೇ ಹೋಗುವ ನಿಮ್ಮ ದೇವರಾದ ಸರ್ವೇಶ್ವರ ಈಜಿಪ್ಟ್ ದೇಶದಲ್ಲೂ ನೀವು ನೋಡಿದ ಮರುಭೂಮಿಯಲ್ಲೂ ಪ್ರತ್ಯಕ್ಷರಾಗಿ ನಿಮ್ಮ ಪರವಾಗಿ ಯುದ್ಧಮಾಡಿದಂತೆಯೇ, ಈಗಲೂ ನಿಮ್ಮ ಕಡೆಯವರಾಗಿದ್ದು ಯುದ್ಧಮಾಡುವರು.


ನಿಮ್ಮ ದೇವರಾದ ಸರ್ವೇಶ್ವರ ತಮ್ಮ ವಾಗ್ದಾನದಂತೆ ನಿಮ್ಮ ಪರವಾಗಿ ಯುದ್ಧಮಾಡಿದರು. ಆದ್ದರಿಂದಲೇ ನಿಮ್ಮಲ್ಲಿ ಒಬ್ಬನು ಸಾವಿರ ಜನರನ್ನು ಓಡಿಸುವಷ್ಟು ಶಕ್ತನಾದ.


ನಾನು ಪ್ರಮಾಣಪೂರ್ವಕವಾಗಿ ಅವರಿಗೆ ವಾಗ್ದಾನಮಾಡಿದ ನಾಡಿಗೆ ಅವರನ್ನು ಸೇರಿಸಿದ ಮೇಲೆ, ಅವರು ಎತ್ತರವಾದ ಎಲ್ಲ ಗುಡ್ಡಗಳನ್ನೂ ಸೊಂಪಾಗಿ ಬೆಳೆದಿರುವ ಎಲ್ಲ ಮರಗಳನ್ನೂ ನೋಡಿ, ಅಲ್ಲಿ ಯಜ್ಞಪಶುಗಳನ್ನು ವಧಿಸಿ, ನನ್ನನ್ನು ರೇಗಿಸುವ ನೈವೇದ್ಯವನ್ನರ್ಪಿಸಿ, ಸುಗಂಧಹೋಮಮಾಡಿ, ಪಾನದ್ರವ್ಯವನ್ನು ಸುರಿದು, ಬಲಿ ಒಪ್ಪಿಸುತ್ತಿದ್ದರು.


'ನಾನು ಈಜಿಪ್ಟಿನವರಿಗೆ ಏನು ಮಾಡಿದೆನೆಂದು ನೀವು ನೋಡಿದ್ದೀರಿ. ಹದ್ದು ತನ್ನ ಮರಿಗಳನ್ನು ರೆಕ್ಕೆಗಳ ಮೇಲೆ ಹೊತ್ತುಕೊಳ್ಳುವಂತೆ ನಾನು ನಿಮ್ಮನ್ನು ಹೊತ್ತು ಈ ನನ್ನ ಸ್ಥಳಕ್ಕೆ ಸೇರಿಸಿದ್ದೇನೆ. ಇದೆಲ್ಲಾ ನಿಮಗೆ ಗೊತ್ತಿದೆ.


‘ಆ ಜನರು ನಮಗಿಂತ ಹೆಚ್ಚುಮಂದಿ ಇದ್ದಾರೆ; ಅವರನ್ನು ಹೊರದೂಡಲು ನಮ್ಮಿಂದ ಹೇಗಾದೀತು? ಎಂದುಕೊಳ್ಳುತ್ತೀರೋ?


ಈ ಜನರ ಅರಸುಗಳು ನಿಮ್ಮ ಕೈಗೆಸಿಕ್ಕುವಂತೆ ಮಾಡುವರು. ನೀವು ಅವರ ಹೆಸರುಗಳೇ ಭೂಮಿಯ ಮೇಲೆ ಉಳಿಯದಂತೆ ಮಾಡಬೇಕು. ಯಾರೂ ನಿಮ್ಮ ಮುಂದೆ ನಿಲ್ಲರು; ಎಲ್ಲರನ್ನು ನೀವು ನಾಶಮಾಡುವಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು