Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 24:13 - ಕನ್ನಡ ಸತ್ಯವೇದವು C.L. Bible (BSI)

13 ನೀವು ಕೃಷಿಮಾಡದ, ಬೆಳೆ ತುಂಬಿದ ಭೂಮಿಯನ್ನು ನಿಮಗೆ ಕೊಟ್ಟೆ, ನೀವು ಕಟ್ಟದ ನಗರಗಳಲ್ಲಿ ವಾಸಮಾಡುತ್ತಿದ್ದೀರಿ. ನೀವು ನೆಟ್ಟು ಬೆಳೆಸದ ದ್ರಾಕ್ಷಿ ಹಾಗೂ ಎಣ್ಣೆಮರಗಳ ತೋಟಗಳನ್ನು ಅನುಭವಿಸುತ್ತಿದ್ದೀರಿ’.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನೀವು ವ್ಯವಸಾಯ ಮಾಡದೆ ಬೆಳೆದಿರುವ ಭೂಮಿಯನ್ನು ನಿಮಗೆ ಕೊಟ್ಟೆನು. ನೀವು ಕಟ್ಟದೆ ಇರುವ ಪಟ್ಟಣಗಳಲ್ಲಿ ವಾಸಿಸುತ್ತಿದ್ದೀರಿ. ನೀವು ನೆಟ್ಟು ಬೆಳೆಸದೆ ಇರುವ ದ್ರಾಕ್ಷಿ, ಎಣ್ಣೆಮರ ಇವುಗಳ ಫಲಗಳನ್ನು ಅನುಭವಿಸುತ್ತೀದ್ದೀರಿ”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ನೀವು ವ್ಯವಸಾಯಮಾಡದೆ ಬೆಳೆದಿರುವ ಭೂವಿುಯನ್ನು ನಿಮಗೆ ಕೊಟ್ಟೆನು. ನೀವು ಕಟ್ಟದೆ ಇರುವ ಪಟ್ಟಣಗಳಲ್ಲಿ ನೀವು ವಾಸಿಸುತ್ತೀರಿ. ನೀವು ನೆಟ್ಟು ಬೆಳಸದೆ ಇರುವ ದ್ರಾಕ್ಷೆ, ಎಣ್ಣೇಮರ ಇವುಗಳ ತೋಟಗಳನ್ನು ಅನುಭವಿಸುತ್ತಿದ್ದೀರಿ ಎಂಬದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 “‘ಯೆಹೋವನಾದ ನಾನು ನಿಮಗೆ ಆ ದೇಶವನ್ನು ಕೊಟ್ಟಿದ್ದೇನೆ. ನೀವು ಆ ದೇಶಕ್ಕಾಗಿ ಏನನ್ನೂ ಮಾಡಿಲ್ಲ. ನಿಮಗೆ ಅದನ್ನು ಕೊಟ್ಟವನು ನಾನೇ. ನೀವು ಆ ನಗರಗಳನ್ನು ಕಟ್ಟಲೇ ಇಲ್ಲ. ಅವುಗಳನ್ನು ನಿಮಗೆ ಕೊಟ್ಟವನು ನಾನೇ. ಈಗ ನೀವು ಆ ಪ್ರದೇಶದಲ್ಲಿ ಮತ್ತು ಆ ನಗರಗಳಲ್ಲಿ ವಾಸಮಾಡುತ್ತಿದ್ದೀರಿ. ನೀವು ದ್ರಾಕ್ಷಿ ಮತ್ತು ಆಲಿವ್ ಮರದ ತೋಟಗಳನ್ನು ಹೊಂದಿರುವಿರಿ. ಆದರೆ ಆ ತೋಟಗಳನ್ನು ನೀವು ಬೆಳೆಸಲಿಲ್ಲ.’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ನೀವು ವ್ಯವಸಾಯಮಾಡದ ಭೂಮಿಯನ್ನೂ ನೀವು ಕಟ್ಟದ ಪಟ್ಟಣಗಳನ್ನೂ ನಾನು ನಿಮಗೆ ಕೊಟ್ಟೆನು. ನೀವು ಅವುಗಳಲ್ಲಿ ವಾಸವಾಗಿದ್ದೀರಿ. ನೀವು ನೆಟ್ಟು ಬೆಳೆಸದ ದ್ರಾಕ್ಷಿತೋಟಗಳ ಫಲವನ್ನೂ ಹಿಪ್ಪೆತೋಪುಗಳ ಫಲವನ್ನೂ ಅನುಭವಿಸುತ್ತಿದ್ದೀರಿ,’ ಎಂಬುದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 24:13
7 ತಿಳಿವುಗಳ ಹೋಲಿಕೆ  

“ನಿಮ್ಮ ದೇವರಾದ ಸರ್ವೇಶ್ವರ ಉತ್ತಮವಾದ ನಾಡಿಗೆ ನಿಮ್ಮನ್ನು ಸೇರಿಸುತ್ತಾರೆ. ಆ ನಾಡಿನ ಹಳ್ಳಗಳಲ್ಲಿ ನೀರು ಯಾವಾಗಲೂ ಹರಿಯುತ್ತಿರುತ್ತದೆ; ತಗ್ಗುಗಳಲ್ಲಾಗಲಿ, ಗುಡ್ಡಗಳಲ್ಲಿ ಆಗಲಿ, ಎಲ್ಲಾ ಕಡೆಯು ಬಾವಿಗಳಿಂದಲೂ ಬುಗ್ಗೆಗಳಿಂದಲೂ ನೀರು ಉಕ್ಕುತ್ತಿರುತ್ತದೆ.


ಒಳ್ಳೆಯವನ ಆಸ್ತಿ ಸಂತತಿಯವರಿಗೆ ಬಾಧ್ಯದ ಸೊತ್ತು; ಪಾಪಿಯ ಸೊತ್ತು ಸತ್ಪುರುಷರಿಗೆ ಸೇರುವ ಸಂಪತ್ತು.


ಸರ್ವೇಶ್ವರ ಇಸ್ರಯೇಲರಿಗೆ ಮಾಡಿದ ಅತ್ಯುನ್ನತ ವಾಗ್ದಾನಗಳಲ್ಲಿ ಒಂದೂ ತಪ್ಪಿಹೋಗಲಿಲ್ಲ. ಎಲ್ಲವೂ ನೆರವೇರಿದವು.


ಯೆಹೋಶುವನು ಸುಟ್ಟ ಹಾಚೋರ್ ಒಂದನ್ನು ಬಿಟ್ಟರೆ ಇಸ್ರಯೇಲರು ಮಲೆನಾಡಿನ ಬೇರೆ ಯಾವ ನಗರವನ್ನೂ ಸುಡಲಿಲ್ಲ.


ಇದಲ್ಲದೆ ಅಬ್ರಹಾಮ, ಇಸಾಕ ಮತ್ತು ಯಕೋಬರಿಗೆ ಕೊಡುವೆನೆಂದು ಪ್ರಮಾಣ ಪೂರ್ವಕವಾಗಿ ಹೇಳಿದ ನಾಡಿಗೆ ನಿಮ್ಮನ್ನು ಸೇರಿಸುವೆನು. ಅದನ್ನು ನಿಮಗೆ ಸ್ವಂತ ನಾಡಾಗಿ ಕೊಡುವೆನು. ಸರ್ವೇಶ್ವರನು ನಾನೇ’ ಎಂದು ಅವರಿಗೆ ಹೇಳು,” ಎಂದರು.


“ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಕೊಡುವ ನಾಡಿನಲ್ಲಿರುವ ಜನಾಂಗಗಳನ್ನು ಅಲ್ಲಿಂದ ತೆಗೆದುಹಾಕಿಬಿಡುವರು. ತರುವಾಯ ನೀವು ಆ ನಾಡನ್ನು ಸ್ವಾಧೀನಕ್ಕೆ ತೆಗೆದುಕೊಳ್ಳುವಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು