Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 24:18 - ಕನ್ನಡ ಸತ್ಯವೇದವು C.L. Bible (BSI)

18 ಈ ನಾಡಿನ ನಿವಾಸಿಗಳಾಗಿದ್ದ ಅಮೋರಿಯರು ಮೊದಲಾದ ಎಲ್ಲಾ ಜನಾಂಗಗಳನ್ನು ಇಲ್ಲಿಂದ ಹೊರಡಿಸಿಬಿಟ್ಟವರು ಅವರೇ. ಆದುದರಿಂದ ನಾವು ಕೂಡ ಸರ್ವೇಶ್ವರನಿಗೆ ಸೇವೆಸಲ್ಲಿಸುತ್ತೇವೆ. ಅವರೇ ನಮ್ಮ ದೇವರು,” ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಈ ದೇಶದ ನಿವಾಸಿಗಳಾಗಿದ್ದ ಅಮೋರಿಯರು ಮೊದಲಾದ ಸರ್ವ ಜನಾಂಗಗಳನ್ನು ನಮ್ಮ ಎದುರಿನಿಂದ ಹೊರಡಿಸಿ ಬಿಟ್ಟವನು ಆತನೇ. ಆದುದರಿಂದ ನಾವು ಯೆಹೋವನನ್ನೇ ಸೇವಿಸುವೆವು. ಆತನೇ ನಮ್ಮ ದೇವರು” ಎಂದು ಉತ್ತರ ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಈ ದೇಶವಾಸಿಗಳಾಗಿದ್ದ ಅಮೋರಿಯರು ಮೊದಲಾದ ಸರ್ವಜನಾಂಗಗಳನ್ನು ನಮ್ಮ ಮುಂದೆ ಹೊರಡಿಸಿ ಬಿಟ್ಟವನು ಆತನೇ. ಆದದರಿಂದ ನಾವೂ ಯೆಹೋವನನ್ನೇ ಸೇವಿಸುವೆವು; ಆತನೇ ನಮ್ಮ ದೇವರು ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಆ ದೇಶಗಳ ಜನರನ್ನು ಸೋಲಿಸಲು ಯೆಹೋವನು ನಮಗೆ ಸಹಾಯ ಮಾಡಿದನು. ಈಗ ನಾವಿರುವ ಸ್ಥಳದಲ್ಲಿ ಮುಂಚೆ ವಾಸಮಾಡಿಕೊಂಡಿದ್ದ ಅಮೋರಿಯರನ್ನು ಸೋಲಿಸಲು ಯೆಹೋವನು ನಮಗೆ ಸಹಾಯ ಮಾಡಿದ್ದಾನೆ. ಅದಕ್ಕಾಗಿ ನಾವು ಯೆಹೋವನ ಸೇವೆಯನ್ನು ಮುಂದುವರಿಸುತ್ತೇವೆ; ಏಕೆಂದರೆ ಆತನು ನಮ್ಮ ದೇವರು” ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಇದಲ್ಲದೆ ದೇಶದಲ್ಲಿ ವಾಸವಾಗಿದ್ದ ಅಮೋರಿಯರ ಸಕಲ ಜನರನ್ನು ಯೆಹೋವ ದೇವರು ನಮ್ಮ ಮುಂದೆ ಹೊರಡಿಸಿಬಿಟ್ಟರು. ಆದ್ದರಿಂದ ನಾವು ಯೆಹೋವ ದೇವರನ್ನೇ ಸೇವಿಸುವೆವು. ಏಕೆಂದರೆ ಅವರು ನಮ್ಮ ದೇವರು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 24:18
13 ತಿಳಿವುಗಳ ಹೋಲಿಕೆ  

ಆ ದಿನದಲ್ಲಿ ವಿವಿಧ ಭಾಷೆಗಳನ್ನಾಡುವ ರಾಷ್ಟ್ರಗಳಿಂದ ಹತ್ತು ಹತ್ತು ಮಂದಿ ಬಂದು ಯೆಹೂದ್ಯನೊಬ್ಬನ ಸೆರಗನ್ನು ಹಿಡಿದುಕೊಂಡು, ‘ನಾವೂ ನಿಮ್ಮೊಂದಿಗೆ ಬರುತ್ತೇವೆ. ಏಕೆಂದರೆ ದೇವರು ನಿಮ್ಮೊಡನೆ ಇದ್ದಾರೆ ಎಂಬ ಸುದ್ದಿಯನ್ನು ಕೇಳಿದ್ದೇವೆ’ ಎಂದು ಹೇಳುವರು. ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ.”


ಈ ಪರಿ ಬಂದ ಹಲವು ನಾಡಿಗರು ಪೇಳ್ವರು ಜನರಿಗೆ; ಬನ್ನಿ, ಹೋಗೋಣ, ಸರ್ವೇಶ್ವರನ ಪರ್ವತಕೆ ಯಕೋಬ್ಯರಾ ದೇವರ ಮಂದಿರಕೆ. ಬೋಧಿಸುವನಾತ ತನ್ನ ಮಾರ್ಗವನು ನಮಗೆ ನಡೆಯುವೆವು ನಾವು ಆತನ ದಾರಿಗನುಗುಣವಾಗ್ಗೆ. ಬರುವುದು ಧರ್ಮೋಪದೇಶ ಸಿಯೋನಿಂದ ಸರ್ವೇಶ್ವರನಾ ವಾಕ್ಯ ಜೆರುಸಲೇಮಿನಿಂದ.


ಹೇ ಪ್ರಭು, ಕರುಣಿಸು, ನಾ ನಿನ್ನ ಕಿಂಕರನು I ನಿನ್ನ ದಾಸಿಯ ಮಗನು, ನಿನ್ನ ಸೇವಕನು I ಬಿಡಿಸಿರುವೆ ನೀನು ನನ್ನ ಬಂಧನಗಳನು II


ಸರ್ವೇಶ್ವರನೇ ನನ್ನ ಶಕ್ತಿ, ನನ್ನ ಗೀತೆ! ಆತನಿಂದಲೇ ನನಗೆ ದೊರಕಿತು ರಕ್ಷಣೆ. ಆತನನ್ನು ವರ್ಣಿಸುವೆನು, ಆತನೆನ್ನ ದೇವನು ಆತನನ್ನು ಸ್ತುತಿಸುವೆನು, ಆತನೆನ್ನ ಪಿತೃಗಳ ದೇವನು.


ಇಸ್ರಯೇಲರು ತಮ್ಮ ಮಕ್ಕಳಿಗೂ ಮೊಮ್ಮಕ್ಕಳಿಗೂ ಈ ಸೂಚಕಕಾರ್ಯಗಳನ್ನು ತಿಳಿಸಬೇಕು; ಅಲ್ಲದೆ ಸರ್ವೇಶ್ವರ ಆದ ನಾನು ಈಜಿಪ್ಟಿನವರನ್ನು ಇಷ್ಟಬಂದ ಹಾಗೆ ಆಡಿಸಿ ದಂಡಿಸಿದೆನೆಂದು ತಿಳಿಸಬೇಕು. ಹೀಗೆ ನಾನೇ ಸರ್ವೇಶ್ವರನೆಂದು ಈ ಸೂಚಕಕಾರ್ಯಗಳಿಂದ ನೀವು ತಿಳಿದುಕೊಳ್ಳುವಿರಿ,” ಎಂದರು.


ಅನಂತರ ಬಂದ ನಮ್ಮ ಪಿತೃಗಳು ಅದನ್ನು ಸ್ವಾಸ್ತ್ಯವಾಗಿ ಪಡೆದರು. ದೇವರು ಅನ್ಯಜನಾಂಗಗಳನ್ನು ಓಡಿಸಿ ಸ್ವಾಧೀನಮಾಡಿಕೊಟ್ಟ ನಾಡಿಗೆ, ಅವರು ಯೆಹೋಶುವನ ಮುಖಂಡತ್ವದಲ್ಲಿ ಹೋದಾಗ, ಆ ಗುಡಾರವನ್ನೂ ತೆಗೆದುಕೊಂಡು ಹೋದರು. ದಾವೀದನ ಕಾಲದವರೆಗೂ ಅದು ಅಲ್ಲೇ ಇತ್ತು.


ಕೆಂಪು ಸಮುದ್ರದಿಂದ ಫಿಲಿಷ್ಟಿಯರ ದೇಶದ ಬಳಿಯಿರುವ ಸಮುದ್ರದವರೆಗೂ ಮತ್ತು ಈ ಮರುಭೂಮಿಯಿಂದ ಯೂಫ್ರೆಟೀಸ್ ಮಹಾ ನದಿಯವರೆಗೂ ಇರುವ ನಾಡನ್ನೆಲ್ಲಾ ನಿಮಗೆ ನೇಮಿಸಿ ಅದರಲ್ಲಿರುವ ನಿವಾಸಿಗಳನ್ನು ನಿಮಗೆ ಅಧೀನಪಡಿಸುವೆನು.


ಆದಿಯಿಂದ ದೇವರೇ ನಿಮಗೆ ಶ್ರೀನಿವಾಸ ಆತನ ಹಸ್ತವೇ ನಿಮಗೆ ನಿತ್ಯಾಧಾರ! ಶತ್ರುಗಳನು ಹೊರಡಿಸುವನು ನಿಮ್ಮ ಬಳಿಯಿಂದ ಅವರನು ಸಂಹರಿಸಲು ಆಜ್ಞಾಪಿಸಿಹನು ಆತ.


ನಾವು ದಾಸತ್ವದಲ್ಲಿದ್ದ ಈಜಿಪ್ಟಿನಿಂದ ನಮ್ಮನ್ನೂ ನಮ್ಮ ಪೂರ್ವಜರನ್ನೂ ಹೊರತಂದವರು ನಮ್ಮ ದೇವರಾದ ಸರ್ವೇಶ್ವರಸ್ವಾಮಿಯೇ. ನಮ್ಮೆದುರಿನಲ್ಲೇ ಅವರು ಮಾಡಿದ ಅದ್ಭುತಕಾರ್ಯಗಳನ್ನು ನೋಡಿದ್ದೇವೆ. ನಮ್ಮ ಎಲ್ಲಾ ಪ್ರಯಾಣಗಳಲ್ಲೂ ನಾವು ದಾಟಿಬಂದ ಜನಾಂಗಗಳಿಂದ ನಮ್ಮನ್ನು ಕಾಪಾಡಿದವರು ಅವರೇ.


ಆಗ ಯೆಹೋಶುವನು ಅವರಿಗೆ, “ನೀವು ಸರ್ವೇಶ್ವರನಿಗೆ ಸೇವೆಸಲ್ಲಿಸಲು ಶಕ್ತರಲ್ಲ. ಸರ್ವೇಶ್ವರಸ್ವಾಮಿ ಪರಿಶುದ್ಧರು; ತಮಗೆ ಸಲ್ಲಬೇಕಾದ ಗೌರವವನ್ನು ಮತ್ತೊಬ್ಬರಿಗೆ ಸಲ್ಲಗೊಡಿಸದ ದೇವರು; ಅವರು ನಿಮ್ಮ ಪಾಪ, ಅಪರಾಧಗಳನ್ನು ಕ್ಷಮಿಸರು.


ಅವರೊಬ್ಬರೇ ನಿಮ್ಮ ಸ್ತುತಿಸ್ತೋತ್ರಕ್ಕೆ ಪಾತ್ರರು; ಅವರು ನಿಮ್ಮ ದೇವರು; ನೀವು ನೋಡಿದ ಆ ಮಹಾಭಯಂಕರವಾದ ಮಹತ್ಕಾರ್ಯಗಳನ್ನು ನಿಮ್ಮ ಪರವಾಗಿ ನಡೆಸಿದವರು ಅವರೇ.


ಸರ್ವೇಶ್ವರ ಮಹಾಪರಾಕ್ರಮಿಗಳಾದ ಜನಾಂಗಗಳನ್ನು ನಮ್ಮೆದುರಿನಿಂದ ಓಡಿಸಿಬಿಟ್ಟಿದ್ದಾರೆ. ನಮ್ಮನ್ನು ಪ್ರತಿಭಟಿಸಿ ನಿಂತವನು ಒಬ್ಬನೂ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು