Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 24:7 - ಕನ್ನಡ ಸತ್ಯವೇದವು C.L. Bible (BSI)

7 ಆಗ ನಿಮ್ಮ ಪೂರ್ವಜರು ನನಗೆ ಮೊರೆಯಿಟ್ಟರು. ನಾನು ಅವರಿಗೂ ಈಜಿಪ್ಟಿನವರಿಗೂ ಮಧ್ಯೆ ಕಾರ್ಗತ್ತಲೆಯನ್ನು ಉಂಟುಮಾಡಿದೆ. ಇದಲ್ಲದೆ ಈಜಿಪ್ಟಿನವರ ಮೇಲೆ ಸಮುದ್ರವನ್ನು ಬರಮಾಡಿ ಅವರನ್ನು ಮುಳುಗಿಸಿಬಿಟ್ಟೆ. ನಾನು ಈಜಿಪ್ಟಿನಲ್ಲಿ ಏನೇನು ಮಾಡಿದೆನೆಂಬುದಕ್ಕೆ ನೀವೇ ಸಾಕ್ಷಿಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅವರು ಯೆಹೋವನಾದ ನನಗೆ ಮೊರೆಯಿಡಲು ನಾನು ಅವರಿಗೂ, ಐಗುಪ್ತರಿಗೂ ಮಧ್ಯದಲ್ಲಿ ಕಾರ್ಗತ್ತಲೆಯನ್ನು ಉಂಟುಮಾಡಿದೆನು. ಇದಲ್ಲದೆ ನಾನು ಐಗುಪ್ತರ ಮೇಲೆ ಸಮುದ್ರವನ್ನು ಬರಮಾಡಿ ಅವರನ್ನು ಮುಳುಗಿಸಿಬಿಟ್ಟೆನು. ನಾನು ಐಗುಪ್ತದಲ್ಲಿ ಏನೇನು ಮಾಡಿದೆನೆಂಬುದಕ್ಕೆ ನೀವು ಸಾಕ್ಷಿಗಳಾಗಿದ್ದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಆಗ ಅವರು ಯೆಹೋವನಾದ ನನಗೆ ಮೊರೆಯಿಡಲು ನಾನು ಅವರಿಗೂ ಐಗುಪ್ತ್ಯರಿಗೂ ಮಧ್ಯದಲ್ಲಿ ಕಾರ್ಗತ್ತಲೆಯನ್ನುಂಟುಮಾಡಿದೆನು. ಇದಲ್ಲದೆ ನಾನು ಐಗುಪ್ತ್ಯರ ಮೇಲೆ ಸಮುದ್ರವನ್ನು ಬರಮಾಡಿ ಅವರನ್ನು ಮುಚ್ಚಿಬಿಟ್ಟೆನು. ನಾನು ಐಗುಪ್ತದಲ್ಲಿ ಏನೇನು ಮಾಡಿದೆನೆಂಬದಕ್ಕೆ ನೀವು ಸಾಕ್ಷಿಗಳಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆಗ ನಿಮ್ಮ ಜನರು ಯೆಹೋವನಾದ ನನ್ನ ಸಹಾಯ ಕೋರಿದರು. ನಾನು ಈಜಿಪ್ಟಿನ ಜನರಿಗೂ ಅವರಿಗೂ ಮಧ್ಯದಲ್ಲಿ ಕತ್ತಲೆಯಾಗುವಂತೆ ಮಾಡಿದೆ; ಸಮುದ್ರವು ಅವರನ್ನು ಮುಚ್ಚಿಬಿಡುವಂತೆ ಮಾಡಿದೆ. ಈಜಿಪ್ಟಿನ ಸೈನ್ಯಕ್ಕೆ ನಾನು ಮಾಡಿದ್ದನ್ನು ನೀವೇ ನೋಡಿದ್ದೀರಿ. “‘ತರುವಾಯ ಬಹಳ ಕಾಲದವರೆಗೆ ನೀವು ಅರಣ್ಯದಲ್ಲಿ ಪ್ರವಾಸ ಮಾಡಿಕೊಂಡಿದ್ದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆಗ, ಅವರು ಯೆಹೋವ ದೇವರಾಗಿರುವ ನನಗೆ ಕೂಗಿದಾಗ ನಾನು ನಿಮಗೂ ಈಜಿಪ್ಟಿನವರಿಗೂ ಮಧ್ಯದಲ್ಲಿ ಅಂಧಕಾರವನ್ನು ಇಟ್ಟು, ಸಮುದ್ರವನ್ನು ಅವರ ಮೇಲೆ ಬರಮಾಡಿ, ಅವರನ್ನು ಮುಚ್ಚಿಬಿಟ್ಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 24:7
14 ತಿಳಿವುಗಳ ಹೋಲಿಕೆ  

ಬೇರೆ ಯಾವ ದೇವರು ತಾನೆ ಪರಿಶೋಧನೆ, ಪವಾಡ, ಮಹತ್ಕಾರ್ಯ, ಯುದ್ಧ, ಭುಜಪರಾಕ್ರಮ, ಶಿಕ್ಷಾಹಸ್ತ, ಭಯಂಕರಕಾರ್ಯ ಇವುಗಳನ್ನು ಪ್ರಯೋಗಿಸಿ ಒಂದು ಜನಾಂಗವನ್ನು ಮತ್ತೊಂದು ಜನಾಂಗದ ಕೈಯಿಂದ ತಪ್ಪಿಸಲು ಪ್ರಯತ್ನಿಸಿದ್ದಾರೆ? ನಿಮ್ಮ ದೇವರಾದ ಸರ್ವೇಶ್ವರ ಸ್ವಾಮಿಯಾದರೊ ಈಜಿಪ್ಟಿನಲ್ಲಿ ನಿಮ್ಮ ಪರವಾಗಿ, ಇದನ್ನೆಲ್ಲ ನಿಮ್ಮ ಕಣ್ಮುಂದೆಯೇ, ನಡೆಸಿದರಲ್ಲವೆ?


ಆ ಮೇಘಸ್ತಂಭವು ಈಜಿಪ್ಟಿನವರ ಪಡೆಗೂ ಇಸ್ರಯೇಲರ ಪಡೆಗೂ ನಡುವೆ ಬಂದು ಈಜಿಪ್ಟಿನವರಿಗೆ ಕತ್ತಲೆಯನ್ನುಂಟುಮಾಡಿತು; ಇಸ್ರಯೇಲರಿಗೆ ರಾತ್ರಿಯನ್ನು ಬೆಳಕಾಗಿಸಿತು. ಈ ಕಾರಣ ಆ ರಾತ್ರಿಯೆಲ್ಲಾ ಒಂದು ಪಡೆಯವರು ಇನ್ನೊಂದು ಪಡೆಯವರ ಬಳಿಗೆ ಬರಲಾಗಲಿಲ್ಲ.


ಫರೋಹನು ಸಮೀಪಿಸುತ್ತಿರುವುದನ್ನು ಇಸ್ರಯೇಲರು ಕಣ್ಣೆತ್ತಿ ನೋಡಿದರು. ತಮ್ಮನ್ನು ಬೆನ್ನಟ್ಟಿ ಬಂದಿದ್ದ ಈಜಿಪ್ಟಿನವರನ್ನು ಕಂಡು ಬಹಳವಾಗಿ ಭಯಪಟ್ಟು ಸರ್ವೇಶ್ವರನಿಗೆ ಮೊರೆಯಿಟ್ಟರು.


ಸರ್ವೇಶ್ವರ ಈಜಿಪ್ಟಿನವರಲ್ಲಿ ಮಾಡಿದ ಈ ಪರಾಕ್ರಮ ಕಾರ್ಯವನ್ನು ಇಸ್ರಯೇಲರು ನೋಡಿ ಸರ್ವೇಶ್ವರನಿಗೆ ಭಯಪಟ್ಟು ಅವರಲ್ಲೂ ಅವರ ದಾಸ ಮೋಶೆಯಲ್ಲೂ ನಂಬಿಕೆಯಿಟ್ಟರು.


ಈಜಿಪ್ಟಿನಿಂದ ಬಂದ ಇಸ್ರಯೇಲರು ಸರ್ವೇಶ್ವರನ ಮಾತನ್ನು ಕೇಳದೆಹೋದುದರಿಂದ ಅವರು, ತಮ್ಮ ಯೋಧರೆಲ್ಲರು ಸಂಹಾರವಾಗುವ ತನಕ ನಾಲ್ವತ್ತು ವರ್ಷ ಅರಣ್ಯದಲ್ಲೇ ಅಲೆಯುತ್ತಿರಬೇಕಾಯಿತು. ಸರ್ವೇಶ್ವರ, ತಾವು ಅವರ ಪೂರ್ವಿಕರಿಗೆ ವಾಗ್ದಾನಮಾಡಿದ್ದ ಹಾಲೂ ಜೇನೂ ಹರಿಯುವ ದೇಶದಲ್ಲಿ ಅವರನ್ನು ಸೇರಿಸುವುದಿಲ್ಲವೆಂದು ಆಣೆಯಿಟ್ಟಿದ್ದರು.


ಮೋಶೆ ಇಸ್ರಯೇಲರೆಲ್ಲರನ್ನು ಕರೆದು ಹೀಗೆಂದನು, “ಸರ್ವೇಶ್ವರ ಈಜಿಪ್ಟ್ ದೇಶದಲ್ಲಿ ನಿಮ್ಮ ಕಣ್ಣಮುಂದೆ ಫರೋಹನಿಗೂ ಅವನ ಪರಿವಾರದವರಿಗೂ


“ಆಮೇಲೆ ನೀವು ಕಾದೇಶಿನಲ್ಲಿ ಬಹುಕಾಲ ವಾಸವಾಗಿದ್ದಿರಿ.


ನಲವತ್ತು ವರ್ಷಗಳು ದೇವರು ಸಿಟ್ಟುಗೊಂಡದ್ದು ಯಾರ ಮೇಲೆ? ಪಾಪಮಾಡಿದವರ ಮೇಲಲ್ಲವೇ? ಅವರ ಶವಗಳು ಬಿದ್ದುದು ಮರುಭೂಮಿಯಲ್ಲಲ್ಲವೇ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು