Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 3:1 - ಕನ್ನಡ ಸತ್ಯವೇದವು C.L. Bible (BSI)

1 ಯೆಹೋಶುವನು ಬೆಳಗಿನ ಜಾವದಲ್ಲೇ ಎದ್ದನು. ಅವನೊಂದಿಗೆ ಇಸ್ರಯೇಲರು ಎಲ್ಲರೂ ಶಿಟ್ಟೀಮನ್ನು ಬಿಟ್ಟು ಜೋರ್ಡನ್ನಿನ ಹತ್ತಿರಕ್ಕೆ ಬಂದು ಅದನ್ನು ದಾಟುವ ಮೊದಲು ಅಲ್ಲೇ ಇಳಿದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೋಶುವನು ಬೆಳಗಿನ ಜಾವದಲ್ಲೇ ಎದ್ದನು; ಅವನೊಂದಿಗೆ ಇಸ್ರಾಯೇಲ್ಯರೆಲ್ಲರೂ ಶಿಟ್ಟೀಮನ್ನು ಬಿಟ್ಟು ಯೊರ್ದನಿಗೆ ಬಂದು ಅದನ್ನು ದಾಟುವ ಮೊದಲು ಅಲ್ಲೇ ಇಳಿದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೆಹೋಶುವನು ಬೆಳಿಗ್ಗೆ ಎದ್ದನು; ಅವನೂ ಇಸ್ರಾಯೇಲ್ಯರೆಲ್ಲರೂ ಶಿಟ್ಟೀಮನ್ನು ಬಿಟ್ಟು ಯೊರ್ದನಿಗೆ ಬಂದು ಅದನ್ನು ದಾಟುವ ಮೊದಲು ಅಲ್ಲಿ ಇಳುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಮರುದಿನ, ಬೆಳಗಿನ ಜಾವದಲ್ಲಿ ಯೆಹೋಶುವನು ಮತ್ತು ಎಲ್ಲಾ ಇಸ್ರೇಲರು ಎದ್ದು ಆಕಾಶಿಯದಿಂದ ಹೊರಟು ಜೋರ್ಡನ್ ನದಿಯವರೆಗೆ ಬಂದರು. ಅವರು ಜೋರ್ಡನ್ ನದಿಯನ್ನು ದಾಟುವ ಮೊದಲು ಅಲ್ಲಿ ಪಾಳೆಯ ಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೆಹೋಶುವನು ಬೆಳಿಗ್ಗೆ ಎದ್ದು, ಅವನೂ, ಇಸ್ರಾಯೇಲರೆಲ್ಲರೂ ಶಿಟ್ಟೀಮಿನಿಂದ ಪ್ರಯಾಣಮಾಡಿ, ಯೊರ್ದನ್ ನದಿ ಬಳಿಗೆ ಬಂದು, ದಾಟುವುದಕ್ಕಿಂತ ಮುಂಚೆ ಅಲ್ಲಿ ಇಳಿದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 3:1
16 ತಿಳಿವುಗಳ ಹೋಲಿಕೆ  

ನೂನನ ಮಗನಾದ ಯೆಹೋಶುವನು ಕಾನಾನ್ ನಾಡನ್ನೂ ಜೆರಿಕೋ ನಗರವನ್ನೂ ನೋಡುವುದಕ್ಕೋಸ್ಕರ ಶಿಟ್ಟೀಮಿನಿಂದ ಇಬ್ಬರು ಗೂಢಚಾರರನ್ನು ಕಳುಹಿಸಿದನು. ಅವರು ಹೊರಟುಹೋಗಿ ರಾಹಾಬಳೆಂಬ ವೇಶ್ಯೆಯ ಮನೆಯಲ್ಲಿ ಇಳಿದುಕೊಂಡರು.


ಮುಂಜಾನೆ ಬೆಳಕುಹರಿಯುವ ಮುನ್ನ ಯೇಸುಸ್ವಾಮಿ ಎದ್ದು ಏಕಾಂತ ಪ್ರದೇಶಕ್ಕೆ ಹೋಗಿ ಪ್ರಾರ್ಥನೆಮಾಡುತ್ತಿದ್ದರು.


ನನ್ನ ಜನರೇ, ಮೋವಾಬಿನ ಅರಸನಾದ ಬಾಲಾಕನು ಕೊಟ್ಟ ಸಲಹೆಯನ್ನು ನೆನಪಿಗೆ ತಂದುಕೊಳ್ಳಿ. ಬೆಯೋರನ ಮಗನಾದ ಬಿಳಾಮನು ಕೊಟ್ಟ ಉತ್ತರವನ್ನು ಜ್ಞಾಪಿಸಿಕೊಳ್ಳಿ. ನೀವು ತಿಟ್ಟೀಮನ್ನು ಬಿಟ್ಟಂದಿನಿಂದ ಗಿಲ್ಗಾಲನ್ನು ಸೇರುವ ತನಕ ನಡೆದುದನೆಲ್ಲಾ ಸ್ಮರಿಸಿಕೊಳ್ಳಿ. ಆಗ ಸರ್ವೇಶ್ವರ ನಿಮ್ಮನ್ನು ರಕ್ಷಿಸಲು ಮಾಡಿದ ಮಹತ್ಕಾರ್ಯಗಳು ನಿಮಗೆ ಮನದಟ್ಟಾಗುವುವು.”


ಹಾಗು ನೀವು ಕೇಳದಿದ್ದರೂ ನಿಮ್ಮ ಬಳಿಗೆ ನಾನು ಪದೇಪದೇ ಕಳಿಸುತ್ತಾ ಬಂದಿರುವ ನನ್ನ ದಾಸರಾದ ಪ್ರವಾದಿಗಳ ಮಾತುಗಳನ್ನೂ ಆಲಿಸದೆಹೋದರೆ,


“ಆಮೋನನ ಮಗನೂ ಜುದೇಯದ ಅರಸನೂ ಆದ ಯೋಷೀಯನ ಆಳ್ವಿಕೆಯ ಹದಿಮೂರನೇ ವರ್ಷದಿಂದ ಈ ದಿನದವರೆಗೆ, ಅಂದರೆ ಕಳೆದ ಇಪ್ಪತ್ತು ಮೂರು ವರ್ಷಗಳಿಂದ ಸರ್ವೇಶ್ವರ ಸ್ವಾಮಿ ತಮ್ಮ ವಾಕ್ಯವನ್ನು ನನಗೆ ತಿಳಿಸಿದ್ದಾರೆ. ಅದನ್ನು ನಾನು ನಿಮಗೆ ತಡಮಾಡದೆ ಪ್ರಕಟಿಸುತ್ತಾ ಬಂದಿದ್ದೇನೆ. ಆದರೆ ನೀವು ಅದಕ್ಕೆ ಕಿವಿಗೊಡಲಿಲ್ಲ.


ನಾನು ತಡಮಾಡದೆ ನುಡಿದ ಮಾತುಗಳನ್ನು ನೀವು ಕೇಳದೆ, ನಿಮ್ಮನ್ನು ಕರೆದ ನನಗೆ ಓಗೊಡದೆ, ಈ ಕೃತ್ಯಗಳನ್ನೆಲ್ಲ ಮಾಡಿದ್ದೀರಿ.


ನಿನ್ನ ಆಜ್ಞೆಯನು ನಾನು ಅನುಸರಿಸುವಲ್ಲಿ I ಆಲಸಿಯಲ್ಲ, ಆಸಕ್ತ ನಾನು ಅದರಲ್ಲಿ II


ಇಸ್ರಯೇಲರು ಶಿಟ್ಟೀಮಿನಲ್ಲಿ ವಾಸಮಾಡುತ್ತಿದ್ದಾಗ ಮೋವಾಬ್ ಮಹಿಳೆಯರೊಡನೆ ಸಹವಾಸ ಮಾಡತೊಡಗಿದರು.


ಅಬ್ರಹಾಮನು ಮುಂಜಾನೆಯೇ ಎದ್ದು ತನ್ನ ಹೇಸರಗತ್ತೆಗೆ ತಡಿಹಾಕಿಸಿ ಹೋಮಬಲಿಗೆ ಬೇಕಾದ ಕಟ್ಟಿಗೆಯನ್ನು ಸಿಗಿದು ಸಿದ್ಧಮಾಡಿಕೊಂಡು ಸೇವಕರಿಬ್ಬರನ್ನು ಹಾಗೂ ತನ್ನ ಮಗ ಇಸಾಕನನ್ನು ಕರೆದುಕೊಂಡು ದೇವರು ಹೇಳಿದ ಸ್ಥಳಕ್ಕೆ ಹೊರಟನು.


ಮಾರನೆಯ ದಿನ ಬೆಳಿಗ್ಗೆ ಅಬ್ರಹಾಮನು ಹಾಗರಳಿಗೆ ಬುತ್ತಿಯನ್ನೂ ನೀರಿನ ತಿತ್ತಿಯನ್ನೂ ಕೊಟ್ಟು, ಹೆಗಲ ಮೇಲೆ ಮಗುವನ್ನು ಕೂರಿಸಿ ಕಳುಹಿಸಿಬಿಟ್ಟನು. ಅವಳು ಹೊರಟು ಬೇರ್ಷೆಬದ ಕಾಡಿನಲ್ಲಿ ಅಲೆಯುತ್ತಿದ್ದಳು.


ಯೆಹೋಶುವನು ಬೆಳಗಿನ ಜಾವದಲ್ಲೇ ಎದ್ದನು. ಯಾಜಕರು ಮಂಜೂಷವನ್ನು ಹೊತ್ತುಕೊಂಡು ಹೊರಟರು.


ಏಳನೆಯ ದಿನದಲ್ಲಿ ಅವರು ಸೂರ್ಯೋದಯವಾಗುತ್ತಲೇ ಎದ್ದು ಅದೇ ಕ್ರಮದಲ್ಲಿ ನಗರವನ್ನು ಏಳುಸಾರಿ ಸುತ್ತಿದರು.


ಯೆಹೋಶುವನು ಬೆಳಿಗ್ಗೆ ಎದ್ದು ಇಸ್ರಯೇಲ್ ಕುಲಗಳನ್ನು ಒಂದೊಂದಾಗಿ ಬರಮಾಡಿದನು. ಯೆಹೂದಕುಲ ಸಿಕ್ಕಿಕೊಂಡಿತು.


ಬೆಳಿಗ್ಗೆ ಅವನೆದ್ದು ಇಸ್ರಯೇಲರ ಹಿರಿಯರ ಸಂಗಡ ಸೈನ್ಯವನ್ನು ಕೂಡಿಸಿ ಅವರ ಮುಂದೆ ಆಯಿಗೆ ಹೊರಟನು.


ಇಸ್ರಯೇಲರು ಬೆಳಿಗ್ಗೆ ಹೊರಟುಹೋಗಿ ಗಿಬೆಯರ ಎದುರಿನಲ್ಲಿ ಪಾಳೆಯಮಾಡಿಕೊಂಡರು.


ದಾವೀದನು ಮರುದಿನ ಬೆಳಿಗ್ಗೆ ಎದ್ದು ಕುರಿಗಾಹಿಗೆ ಕುರಿಗಳನ್ನು ಒಪ್ಪಿಸಿ, ತನ್ನ ತಂದೆ ಜೆಸ್ಸೆಯನು ಹೇಳಿದವುಗಳನ್ನು ತೆಗೆದುಕೊಂಡು ಪಾಳೆಯದ ಬಂಡಿಗಳು ನಿಂತಿದ್ದ ಸ್ಥಳಕ್ಕೆ ಬಂದನು. ಸೈನ್ಯಗಳು ಯುದ್ಧಘೋಷಣೆಗಳನ್ನು ಹಾಕುವ ಸಮಯ ಅದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು