Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 3:4 - ಕನ್ನಡ ಸತ್ಯವೇದವು C.L. Bible (BSI)

4 ಆದರೆ ಅದರ ಹತ್ತಿರ ನೀವು ಹೋಗಬಾರದು. ನಿಮಗೂ ಮಂಜೂಷಕ್ಕೂ ಸುಮಾರು ಒಂದು ಕಿಲೋಮೀಟರ್ ಅಂತರವಿರಬೇಕು. ಹೀಗೆ ನೀವು ಹೋಗಬೇಕಾದ ಮಾರ್ಗ ನಿಮಗೆ ಗೊತ್ತಾಗುವುದು. ಏಕೆಂದರೆ ನೀವು ಆ ಮಾರ್ಗವಾಗಿ ಇಲ್ಲಿಯವರೆಗೆ ಪ್ರಯಾಣ ಮಾಡಿದ್ದಿಲ್ಲ,” ಎಂದು ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಆದರೆ ನಿಮಗೂ ಮಂಜೂಷಕ್ಕೂ ಸುಮಾರು ಎರಡು ಸಾವಿರ ಮೊಳ ಅಂತರವಿರಬೇಕು; ಹತ್ತಿರ ಹೋಗಬಾರದು. ಹೀಗೆ ನೀವು ಹೋಗಬೇಕಾದ ಮಾರ್ಗವು ನಿಮಗೆ ಗೊತ್ತಾಗುವುದು; ಏಕೆಂದರೆ ನೀವು ಆ ಮಾರ್ಗವಾಗಿ ಇಲ್ಲಿಯವರೆಗೆ ಪ್ರಯಾಣ ಮಾಡಿರುವುದಿಲ್ಲ” ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಆದರೆ ನಿಮಗೂ ಮಂಜೂಷಕ್ಕೂ ಸುಮಾರು ಎರಡು ಸಾವಿರ ಮೊಳ ಅಂತರವಿರಬೇಕು; ಹತ್ತಿರ ಹೋಗಬಾರದು. ಹೀಗೆ ನೀವು ಹೋಗತಕ್ಕ ಮಾರ್ಗವು ನಿಮಗೆ ಗೊತ್ತಾಗುವದು; ಆ ಮಾರ್ಗದಲ್ಲಿ ನೀವು ಮುಂಚೆ ಬರಲಿಲ್ಲವಲ್ಲಾ ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನಿಮಗೂ ಒಡಂಬಡಿಕೆಯ ಪೆಟ್ಟಿಗೆಗೂ ಮೂರು ಸಾವಿರ ಅಡಿ ಅಂತರವಿರಲಿ. ಅದರ ಸಮೀಪ ನೀವು ಹೋಗಕೂಡದು. ಈ ದಾರಿಯಲ್ಲಿ ನೀವು ಹಿಂದೆಂದೂ ಪ್ರಯಾಣ ಮಾಡಿಲ್ಲ. ಆದರೆ ನೀವು ಅವರನ್ನು ಹಿಂಬಾಲಿಸಿದರೆ ಎಲ್ಲಿಗೆ ಹೋಗಬೇಕೆಂದು ನಿಮಗೆ ತಿಳಿಯುತ್ತದೆ” ಎಂದು ಸಾರಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆದರೆ ನಿಮಗೂ ಅದಕ್ಕೂ ಸುಮಾರು ಎರಡು ಸಾವಿರ ಮೊಳ ಅಂತರ ಇರಬೇಕು. ಅದರ ಹತ್ತಿರ ಬರಬೇಡಿರಿ. ನೀವು ಹೋಗಬೇಕಾದ ಮಾರ್ಗ ನಿಮಗೆ ತಿಳಿಯುವುದು. ಏಕೆಂದರೆ ನೀವು ಆ ಮಾರ್ಗವಾಗಿ ಇದುವರೆಗೆ ಪ್ರಯಾಣ ಮಾಡಿರುವುದಿಲ್ಲ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 3:4
12 ತಿಳಿವುಗಳ ಹೋಲಿಕೆ  

ಸ್ವರ್ಗೀಯ ಸಭೆಯಲಿ ಪ್ರತಿಭಾವಂತನು ದೇವನು II ಸುತ್ತಣದೆಲ್ಲ ಪರಿವಾರಕ್ಕಿಂತ ಬಹು ಭೀಕರನು II


ಅರಸ ಸೌಲ ನಮ್ಮನ್ನು ಆಳುತ್ತಿದ್ದಾಗ ನೀವು ಇಸ್ರಯೇಲರ ದಳಪತಿಯಾಗಿ ಯುದ್ಧ ನಡೆಸಿದಿರಿ. ನಮ್ಮ ದೇವರಾದ ಸರ್ವೇಶ್ವರ, ‘ನೀನು ನನ್ನ ಪ್ರಜೆಗಳಾದ ಇಸ್ರಯೇಲರ ನಾಯಕನೂ ಪಾಲಕನೂ ಆಗುವೆ,’ ಎಂದು ವಾಗ್ದಾನ ಮಾಡಿದ್ದು ನಿಮ್ಮನ್ನು ಕುರಿತೇ” ಎಂದು ಹೇಳಿ ವಂದಿಸಿದರು.


ದೇವರು ಅವನಿಗೆ, “ಹತ್ತಿರ ಬರಬೇಡ! ನಿನ್ನ ಕಾಲಿನ ಕೆರಗಳನ್ನು ತೆಗೆದುಹಾಕು; ಏಕೆಂದರೆ ನೀನು ನಿಂತಿರುವ ಸ್ಥಳ ಪವಿತ್ರಭೂಮಿ,” ಎಂದು ಹೇಳಿದರು.


ಜನರು ಹತ್ತಿರಕ್ಕೆ ಬಾರದಂತೆ ನೀನು ಬೆಟ್ಟದ ಸುತ್ತಲೂ ಒಂದು ಮೇರೆಯನ್ನು ಏರ್ಪಡಿಸು. ಮತ್ತು ಜನರಿಗೆ ‘ಎಚ್ಚರಿಕೆ, ನೀವು ಈ ಬೆಟ್ಟವನ್ನು ಏರಕೂಡದು; ಅದರ ಅಂಚನ್ನೂ ಮುಟ್ಟಕೂಡದು. ಮುಟ್ಟಿದವನಿಗೆ ಮರಣ ಶಿಕ್ಷೆಯಾಗುವುದು ನಿಶ್ಚಯ.


ಆದರೆ ಮೋಶೆ ಸರ್ವೇಶ್ವರನಿಗೆ, “ಸ್ವಾಮಿ, ನಾನು ವಾಕ್ಚಾತುರ್ಯ ಇಲ್ಲದವನು; ಮೊದಲಿನಿಂದಲೂ ಹಾಗು ತಾವು ನಿಮ್ಮ ದಾಸನ ಸಂಗಡ ಮಾತಾಡಿದ ಮೇಲೆಯೂ ಹಾಗೆಯೇ ಇದ್ದೇನೆ. ನನ್ನ ಮಾತು ತೊದಲು, ನನ್ನ ನಾಲಿಗೆ ಮಂದ,” ಎಂದನು.


ಇದಲ್ಲದೆ, ಯಕೋಬನ ಕಣ್ಣಿಗೆ ಲಾಬಾನನ ಮನೋಭಾವವು ಮೊದಲಿದ್ದಂತೆ ತೋರಲಿಲ್ಲ.


ಪುರಾತನ ಕಾಲದಿಂದಲೇ ಅಸ್ಸೀರಿಯದ ಅರಸನಿಗೆ ಅಗ್ನಿಕುಂಡವು ಅಣಿಯಾಗಿದೆ. ಅದನ್ನು ಆಳವಾಗಿಯೂ ಅಗಲವಾಗಿಯೂ ಮಾಡಲಾಗಿದೆ. ಅದರಲ್ಲಿನ ಚಿತೆಯೊಳಗೆ ಬೆಂಕಿಯೂ ಸೌದೆಯೂ ತುಂಬಿದೆ. ಗಂಧಕದ ಪ್ರವಾಹದೋಪಾದಿಯಲ್ಲಿ ಸರ್ವೇಶ್ವರ ಸ್ವಾಮಿ ತಮ್ಮ ಶ್ವಾಸವನ್ನೂದಿ ಅದನ್ನು ಭುಗಿಲೆಬ್ಬಿಸುವರು.


“ನಿಮ್ಮ ದೇವರಾದ ಸರ್ವೇಶ್ವರನ ಒಡಂಬಡಿಕೆಯ ಮಂಜೂಷವನ್ನು ಯಾಜಕರಾದ ಲೇವಿಯರು ಹೊತ್ತಿರುವುದನ್ನು ನೀವು ಕಂಡಕೂಡಲೆ ನೀವು ಕೂಡ ನಿಮ್ಮ ನಿಮ್ಮ ಸ್ಥಳವನ್ನು ಬಿಟ್ಟು ಅದರ ಹಿಂದೆ ಹೋಗಿ.


ಇದಲ್ಲದೆ, ಯೆಹೋಶುವನು ಜನರಿಗೆ, “ಸರ್ವೇಶ್ವರ ನಾಳೆ ನಿಮ್ಮ ಮಧ್ಯೆ ಅದ್ಭುತಗಳನ್ನು ಮಾಡಲಿದ್ದಾರೆ. ಆದುದರಿಂದ ನಿಮ್ಮನ್ನೇ ಶುದ್ಧೀಕರಿಸಿಕೊಳ್ಳಿ,” ಎಂದು ಹೇಳಿದನು.


ಪ್ರಭುವಿನ ಭಯಭಕುತಿಯುಳ್ಳವನಿಗೆ I ಲಭಿಪುದು ಖಚಿತ ಋಜುಮಾರ್ಗದ ಕಲಿಕೆ II


ನಿನ್ನ ಜೀವೋದ್ಧಾರಕನು ಇಸ್ರಯೇಲಿನ ಪರಮಪಾವನನು ಆದ ಸರ್ವೇಶ್ವರ ಸ್ವಾಮಿಯೆ ನುಡಿದಿಹನು : “ನಿನಗೆ ಕ್ಷೇಮ‍ಕರವಾದ ಮಾರ್ಗವನು ಬೋಧಿಸುವವನೂ ನೀ ಹೋಗಬೇಕಾದ ಹಾದಿಯಲಿ ನಡೆಯಿಸುವವನೂ ಆದಂಥ ಸರ್ವೇಶ್ವರ ಸ್ವಾಮಿ ದೇವರು ನಾನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು