Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 3:5 - ಕನ್ನಡ ಸತ್ಯವೇದವು C.L. Bible (BSI)

5 ಇದಲ್ಲದೆ, ಯೆಹೋಶುವನು ಜನರಿಗೆ, “ಸರ್ವೇಶ್ವರ ನಾಳೆ ನಿಮ್ಮ ಮಧ್ಯೆ ಅದ್ಭುತಗಳನ್ನು ಮಾಡಲಿದ್ದಾರೆ. ಆದುದರಿಂದ ನಿಮ್ಮನ್ನೇ ಶುದ್ಧೀಕರಿಸಿಕೊಳ್ಳಿ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಇದಲ್ಲದೆ ಯೆಹೋಶುವನು ಜನರಿಗೆ “ನಿಮ್ಮನ್ನು ಶುದ್ಧಮಾಡಿಕೊಳ್ಳಿರಿ; ಯೆಹೋವನು ನಾಳೆ ನಿಮ್ಮ ಮಧ್ಯದಲ್ಲಿ ಅದ್ಭುತಗಳನ್ನು ನಡಿಸುವನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಇದಲ್ಲದೆ ಯೆಹೋಶುವನು ಜನರಿಗೆ - ನಿಮ್ಮನ್ನು ಶುದ್ಧಮಾಡಿಕೊಳ್ಳಿರಿ; ಯೆಹೋವನು ನಾಳೆ ನಿಮ್ಮ ಮಧ್ಯದಲ್ಲಿ ಅದ್ಭುತಗಳನ್ನು ನಡಿಸುವನು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 “ನಿಮ್ಮನ್ನು ನೀವು ಶುದ್ಧೀಕರಿಸಿಕೊಳ್ಳಿರಿ. ನಾಳೆ ನಿಮ್ಮ ದೇವರಾದ ಯೆಹೋವನು ನಿಮ್ಮ ಮಧ್ಯದಲ್ಲಿ ಅದ್ಭುತಗಳನ್ನು ಮಾಡುತ್ತಾನೆ” ಎಂದು ಯೆಹೋಶುವನು ಜನರಿಗೆ ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಯೆಹೋಶುವನು ಜನರಿಗೆ, “ಇಂದು ನಿಮ್ಮನ್ನು ಶುದ್ಧಮಾಡಿಕೊಳ್ಳಿರಿ, ನಾಳೆ ಯೆಹೋವ ದೇವರು ನಿಮ್ಮ ಮಧ್ಯದಲ್ಲಿ ಅದ್ಭುತಗಳನ್ನು ಮಾಡುವರು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 3:5
16 ತಿಳಿವುಗಳ ಹೋಲಿಕೆ  

ನೀನೆದ್ದು ಜನರನ್ನು ಶುದ್ಧೀಕರಿಸು. ನೀನು ಅವರಿಗೆ, ‘ಇಸ್ರಯೇಲರೇ, ನಾಳೆ ನಿಮ್ಮನ್ನೇ ಶುದ್ಧೀಕರಿಸಿಕೊಳ್ಳಿ. ನಿಮ್ಮ ಮಧ್ಯೆ ಶಾಪಕ್ಕೆ ಕಾರಣವಾದದ್ದು ಉಂಟು. ಅದನ್ನು ನೀವು ತೆಗೆದು ಹಾಕುವ ತನಕ ಶತ್ರುಗಳ ಮುಂದೆ ನಿಲ್ಲಲಾರಿರಿ ಎಂದು ನಿಮ್ಮ ದೇವರಾದ ಸರ್ವೇಶ್ವರಸ್ವಾಮಿಯೇ ಹೇಳಿದ್ದಾರೆ.


ನಾನು ನಿಮ್ಮ ದೇವರಾದ ಸರ್ವೇಶ್ವರನಾಗಿರುವ ಕಾರಣ ನೀವು ನನ್ನವರಾಗಿ ಪರಿಶುದ್ಧರಾಗಿರಬೇಕು.


ಜನರನ್ನು ಒಟ್ಟುಗೂಡಿಸಿರಿ; ಸಭೆಯನ್ನು ಏರ್ಪಡಿಸಿರಿ; ವೃದ್ಧರನ್ನು, ಮಕ್ಕಳನ್ನು, ಮೊಲೆಗೂಸುಗಳನ್ನು ಕರೆತನ್ನಿರಿ. ವಧೂವರರು ತಮ್ಮ ಕಲ್ಯಾಣಗೃಹದಿಂದ ಹೊರಟುಬರಲಿ.


ಹೌದು, ಶುಭಕರವಾಗಿದೆ; ಸರ್ವೇಶ್ವರನಿಗೆ ಬಲಿಯನ್ನರ್ಪಿಸುವುದಕ್ಕೆ ಬಂದಿದ್ದೇನೆ. ನೀವು ಶುದ್ಧರಾಗಿ ನನ್ನ ಜೊತೆಯಲ್ಲಿ ಬಲಿಯರ್ಪಣೆಗೆ ಬನ್ನಿ,” ಎಂದು ಹೇಳಿ ಜೆಸ್ಸೆಯನನ್ನೂ ಅವನ ಮಕ್ಕಳನ್ನೂ ಶುದ್ಧೀಕರಿಸಿ ಅವರನ್ನೂ ಬಲಿಯರ್ಪಣೆಗೆ ಆಮಂತ್ರಿಸಿದನು. ಅವರು ಬಂದರು.


ಸತ್ಯಸಂಧರಾಗಿ ಇವರು ನಿಮ್ಮ ಸೇವೆಗೆ ಮೀಸಲಾಗಬೇಕೆಂದು ನನ್ನನ್ನು ನಾನೇ ಮೀಸಲಾಗಿಸಿಕೊಂಡಿದ್ದೇನೆ.


ಆಗ ಮೋಶೆ ಆರೋನನಿಗೆ: “’ನನ್ನ ಬಳಿಯಿರುವವರ ಮುಖಾಂತರವೆ ನನ್ನ ಪರಿಶುದ್ಧತೆಯನ್ನು ತೋರ್ಪಡಿಸುವೆ ಜನರೆಲ್ಲರ ಸಮ್ಮುಖದಲೆ ನನ್ನ ಮಹಿಮೆಯನು ಶೃತಪಡಿಸುವೆ, ಎಂಬ ಸರ್ವೇಶ್ವರನ ನುಡಿಗೆ ಇದೊಂದು ದೃಷ್ಟಾಂತವೇ ಸರಿ,” ಎಂದನು. ಅದಕ್ಕೆ ಆರೋನನು ಮೌನವಾಗಿದ್ದನು.


ಪ್ರಭು, ನೀನೊಬ್ಬನೇ ದೇವನು I ಅದ್ಭುತಶಾಲಿ, ಮಹೋನ್ನತನು II


ಔತಣದ ಸರದಿ ತೀರಿದ ಬಳಿಕ, ಯೋಬನು ತನ್ನ ಮಕ್ಕಳು ಒಂದು ವೇಳೆ ಪಾಪಮಾಡಿ ಮನದಲ್ಲೇ ದೇವರನ್ನು ದೂಷಿಸಿರಬಹುದೆಂದುಕೊಂಡು, ಅವರನ್ನು ಕರೆಸಿ ಶುದ್ಧೀಕರಣ ಮಾಡಿಸುತ್ತಿದ್ದನು. ಬೆಳಿಗ್ಗೆ ಎದ್ದು ಅವರೊಬ್ಬೊಬ್ಬರಿಗಾಗಿ ದಹನಬಲಿಗಳನ್ನು ಅರ್ಪಿಸುತ್ತಿದ್ದನು; ಇದು ಯೋಬನ ದೈನಂದಿನ ವಾಡಿಕೆಯಾಗಿತ್ತು.


ಸರ್ವಲೋಕದ ಒಡೆಯನಾದ ಸರ್ವೇಶ್ವರನ ಒಡಂಬಡಿಕೆಯ ಮಂಜೂಷವನ್ನು ಹೊರುವ ಯಾಜಕರು ತಮ್ಮ ಕಾಲುಗಳನ್ನು ಜೋರ್ಡನ್ ನದಿಯ ನೀರಿನಲ್ಲಿ ಇಡುತ್ತಲೇ ಮೇಲಿಂದ ಹರಿದುಬರುವ ನೀರು ಮುಂದೆ ಸಾಗದೆ ಅಲ್ಲೇ ರಾಶಿಯಾಗಿ ನಿಂತುಕೊಳ್ಳುವುದು,” ಎಂದು ತಿಳಿಸಿದನು.


ಮಂಜೂಷವನ್ನು ಹೊತ್ತ ಯಾಜಕರು ಜೋರ್ಡನಿಗೆ ಬಂದರು. ಅದು ಸುಗ್ಗಿಯ ಕಾಲ ನದಿ ದಡಮೀರಿ ಹರಿಯುತ್ತಿತ್ತು. ಯಾಜಕರು ಬಂದು ನೀರಿನಲ್ಲಿ ತಮ್ಮ ಕಾಲುಗಳನ್ನು ಇಡುತ್ತಲೇ ಹರಿಯುತ್ತಿದ್ದ ಜೋರ್ಡನ್ ನದಿಯ ನೀರು ನಿಂತುಹೋಯಿತು.


ಜನರು ಹೊರಗೆ ಹೋಗಿ ಅದನ್ನು ಕೂಡಿಸಿಕೊಂಡು ಬಂದು ಬೀಸುವ ಕಲ್ಲುಗಳಿಂದ ಬೀಸಿ, ಇಲ್ಲವೆ ಒರಳಲ್ಲಿ ಕುಟ್ಟಿ, ಮಡಕೆಗಳಲ್ಲಿ ಬೇಯಿಸಿ ರೊಟ್ಟಿಗಳನ್ನು ಮಾಡಿಕೊಳ್ಳುತ್ತಿದ್ದರು. ಅದರ ರುಚಿ ಎಣ್ಣೆಬೆರೆಸಿ ಮಾಡಿದ ತಿಂಡಿಯಂತೆ ಇರುತ್ತಿತ್ತು.


ಆದರೆ ಅದರ ಹತ್ತಿರ ನೀವು ಹೋಗಬಾರದು. ನಿಮಗೂ ಮಂಜೂಷಕ್ಕೂ ಸುಮಾರು ಒಂದು ಕಿಲೋಮೀಟರ್ ಅಂತರವಿರಬೇಕು. ಹೀಗೆ ನೀವು ಹೋಗಬೇಕಾದ ಮಾರ್ಗ ನಿಮಗೆ ಗೊತ್ತಾಗುವುದು. ಏಕೆಂದರೆ ನೀವು ಆ ಮಾರ್ಗವಾಗಿ ಇಲ್ಲಿಯವರೆಗೆ ಪ್ರಯಾಣ ಮಾಡಿದ್ದಿಲ್ಲ,” ಎಂದು ತಿಳಿಸಿದರು.


ಯಾಜಕರಿಗೆ, “ಒಡಂಬಡಿಕೆಯ ಮಂಜೂಷವನ್ನು ಹೊತ್ತುಕೊಂಡು ಜನರ ಮುಂದಾಗಿ ನಡೆದು ನದಿದಾಟಿರಿ,” ಎಂದು ಆಜ್ಞಾಪಿಸಿದನು. ಅವರು ಅಂತೆಯೇ ಮಂಜೂಷವನ್ನು ಹೊತ್ತುಕೊಂಡು ಹೋದರು.


ನಿನ್ನ ಭುಜಬಲದಿಂದ ಯಕೋಬ, ಜೋಸೆಫ್ ವಂಶಜರನು I ಉದ್ಧಾರ ಮಾಡಿದೆ ನಿನ್ನ ಪ್ರಜೆಗಳಾಗಿಹ ಆ ಜನರನು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು