Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 3:7 - ಕನ್ನಡ ಸತ್ಯವೇದವು C.L. Bible (BSI)

7 ಆಗ ಸರ್ವೇಶ್ವರ, ಯೆಹೋಶುವನಿಗೆ: “ನಾನು ಇಂದಿನಿಂದ ನಿನ್ನನ್ನು ಇಸ್ರಯೇಲರ ಮುಂದೆ ಮಹಾತ್ಮನನ್ನಾಗಿಸುವೆನು. ನಾನು ಮೋಶೆಯ ಸಂಗಡ ಇದ್ದಹಾಗೆ ನಿನ್ನ ಸಂಗಡವೂ ಇರುವೆನೆಂದು ಅವರಿಗೆ ಗೊತ್ತಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆಗ ಯೆಹೋವನು ಯೆಹೋಶುವನಿಗೆ “ನಾನು ಈ ದಿನ ನಿನ್ನನ್ನು ಇಸ್ರಾಯೇಲ್ಯರೆಲ್ಲರ ಮುಂದೆ ಘನಪಡಿಸುವೆನು; ನಾನು ಮೋಶೆಯ ಸಂಗಡ ಇದ್ದ ಹಾಗೆ ನಿನ್ನ ಸಂಗಡಲೂ ಇರುವೆನೆಂದು ಅವರಿಗೆ ಗೊತ್ತಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಆಗ ಯೆಹೋವನು ಯೆಹೋಶುವನಿಗೆ - ನಾನು ಇಂದಿನಿಂದ ನಿನ್ನನ್ನು ಇಸ್ರಾಯೇಲ್ಯರೆಲ್ಲರ ಮುಂದೆ ಘನಪಡಿಸುವೆನು; ನಾನು ಮೋಶೆಯ ಸಂಗಡ ಇದ್ದ ಹಾಗೆ ನಿನ್ನ ಸಂಗಡಲೂ ಇರುವೆನೆಂಬದು ಅವರಿಗೆ ಗೊತ್ತಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆಗ ಯೆಹೋವನು ಯೆಹೋಶುವನಿಗೆ, “ನಾನು ನಿನ್ನನ್ನು ಇಂದಿನಿಂದ ಎಲ್ಲಾ ಇಸ್ರೇಲರ ಮುಂದೆ ಘನವಂತನನ್ನಾಗಿ ಮಾಡುವೆನು. ನಾನು ಮುಂಚೆ ಮೋಶೆಯ ಸಂಗಡ ಇದ್ದಂತೆಯೇ ನಿನ್ನ ಸಂಗಡವೂ ಇದ್ದೇನೆಂಬುದು ಆಗ ಜನರಿಗೆ ತಿಳಿಯುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಯೆಹೋವ ದೇವರು ಯೆಹೋಶುವನಿಗೆ, “ನಾನು ಮೋಶೆಯ ಸಂಗಡ ಇದ್ದ ಪ್ರಕಾರ, ನಿನ್ನ ಸಂಗಡ ಇರುವುದನ್ನು ಇಸ್ರಾಯೇಲರೆಲ್ಲರೂ ತಿಳಿಯುವಂತೆ, ನಾನು ಈ ದಿನ ನಿನ್ನನ್ನು ಅವರ ಮುಂದೆ ಉನ್ನತಗೊಳಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 3:7
13 ತಿಳಿವುಗಳ ಹೋಲಿಕೆ  

ಆ ದಿನ ಸರ್ವೇಶ್ವರ ಯೆಹೋಶುವನನ್ನು ಇಸ್ರಯೇಲರೆಲ್ಲರ ದೃಷ್ಟಿಯಲ್ಲಿ ಇಷ್ಟು ಘನಪಡಿಸಿದ್ದರಿಂದ ಅವರು ಮೋಶೆಯಲ್ಲಿ ಹೇಗೋ ಹಾಗೆಯೇ ಇವನಲ್ಲಿಯೂ, ಇವನು ಜೀವದಿಂದಿದ್ದ ಕಾಲವೆಲ್ಲ ಗೌರವವುಳ್ಳವರು ಆಗಿದ್ದರು.


ನಿನ್ನ ಜೀವಮಾನವಿಡೀ ಯಾರೊಬ್ಬನು ನಿನ್ನನ್ನು ಎದುರಿಸಿ ನಿಲ್ಲನು. ನಾನು ಮೋಶೆಯ ಸಂಗಡ ಇದ್ದ ಹಾಗೆ ನಿನ್ನ ಸಂಗಡವೂ ಇರುವೆನು. ನಿನ್ನನ್ನು ಕೈಬಿಡುವುದಿಲ್ಲ, ನಿನ್ನನ್ನು ತೊರೆದುಬಿಡುವುದಿಲ್ಲ.


ಸರ್ವೇಶ್ವರ ಇಸ್ರಯೇಲರೆಲ್ಲರಿಗೆ ಗೊತ್ತಾಗುವಂತೆ ಸೊಲೊಮೋನನನ್ನು ಅಭಿವೃದ್ಧಿಪಡಿಸಿದರು; ಅವನಿಗಿಂತ ಮೊದಲು ಇಸ್ರಯೇಲರನ್ನಾಳಿದ ಎಲ್ಲಾ ಅರಸರ ವೈಭವಕ್ಕಿಂತಲೂ ಹೆಚ್ಚಿನ ವೈಭವವನ್ನು ಅವನಿಗೆ ಅನುಗ್ರಹಿಸಿದರು.


ನನ್ನ ಪರ ನೀನೇ ಗುರಾಣಿ ಹಿಡಿದು ರಕ್ಷಿಸಿದೆ I ನಿನ್ನ ಬಲಗೈ ನನಗೆ ಆಧಾರವಾಗಿದೆ I ನಿನ್ನ ಕೃಪಾವರ ತಂದಿತು ನನಗೆ ದೊಡ್ಡಸ್ತಿಕೆ II


ಮೋಶೆಯ ಮಾತುಗಳನ್ನೆಲ್ಲ ಕೇಳಿದಂತೆ ನಿಮ್ಮ ಮಾತುಗಳನ್ನೂ ಕೇಳುತ್ತೇವೆ. ದೇವರಾದ ಸರ್ವೇಶ್ವರ ಮೋಶೆಯ ಸಂಗಡ ಇದ್ದ ಹಾಗೆ ನಿಮ್ಮ ಸಂಗಡವೂ ಇರಲಿ.


ಮನುಷ್ಯನಾದವನು ಎಷ್ಟರವನು ನೀನವನಿಗೆ ಘನತೆ ನೀಡಲು? ನೀನವನ ಮೇಲೆ ಗಮನ ಹರಿಸಲು?


ದಾವೀದನ ಮಗ ಸೊಲೊಮೋನನು ತನ್ನ ರಾಜ್ಯದ ಮೇಲೆ ಸಂಪೂರ್ಣ ಪ್ರಭುತ್ವ ಹೊಂದಿದನು. ಅವನ ದೇವರಾದ ಸರ್ವೇಶ್ವರಸ್ವಾಮಿ ಅವನನ್ನು ಹರಸಿ ಮಹಾ ಬಲಾಢ್ಯನಾಗುವಂತೆ ಮಾಡಿದರು.


ಯೇಸು ಸ್ವಾಮಿ ಅವರೊಡನೆ ಹೀಗೆ ಮಾತನಾಡಿದ ಮೇಲೆ ಆಕಾಶದತ್ತ ಕಣ್ಣೆತ್ತಿ ನೋಡಿ, “ಪಿತನೇ, ನಿರೀಕ್ಷಿಸಿದ ಗಳಿಗೆ ಬಂದಿದೆ. ನಿಮ್ಮ ಪುತ್ರನು ನಿಮ್ಮ ಮಹಿಮೆಯನ್ನು ಬೆಳಗಿಸುವಂತೆ ನೀವು ಆತನ ಮಹಿಮೆಯನ್ನು ಬೆಳಗಿಸಿರಿ.


ನನ್ನ ಕರ್ತವ್ಯಪಾಲನೆಯಲ್ಲಿ ನಾಚುವಂಥ ಸಂದರ್ಭವು ನನಗೆಂದಿಗೂ ಬರದೆಂದು ಬಲ್ಲೆ; ನಾನು ಬದುಕಿದರೂ ಸರಿ, ಸತ್ತರೂ ಸರಿ; ನನ್ನ ದೇಹದ ಮೂಲಕ ಕ್ರಿಸ್ತಯೇಸುವಿಗೆ ಎಂದಿನಂತೆ ಈಗಲೂ ಮಹಿಮೆ ಉಂಟಾಗಬೇಕೆಂಬುದೇ ನನ್ನ ಉತ್ಕಟ ಆಕಾಂಕ್ಷೆ ಹಾಗೂ ನಿರೀಕ್ಷೆ.


ಯಾಜಕರಿಗೆ, “ಒಡಂಬಡಿಕೆಯ ಮಂಜೂಷವನ್ನು ಹೊತ್ತುಕೊಂಡು ಜನರ ಮುಂದಾಗಿ ನಡೆದು ನದಿದಾಟಿರಿ,” ಎಂದು ಆಜ್ಞಾಪಿಸಿದನು. ಅವರು ಅಂತೆಯೇ ಮಂಜೂಷವನ್ನು ಹೊತ್ತುಕೊಂಡು ಹೋದರು.


ಒಡಂಬಡಿಕೆಯ ಮಂಜೂಷವನ್ನು ಹೊತ್ತ ಯಾಜಕರು ಜೋರ್ಡನ್ ನದಿಯ ಅಂಚಿಗೆ ಬಂದ ಕೂಡಲೆ ಅಲ್ಲೇ ನಿಲ್ಲಬೇಕೆಂದು ಆಜ್ಞಾಪಿಸು,” ಎಂದರು.


ನಾನು ನಿನಗೆ ಆಜ್ಞಾಪಿಸಿದಂತೆ ಸ್ಥಿರಚಿತ್ತನಾಗಿರು, ಧೈರ್ಯದಿಂದಿರು, ಅಂಜಬೇಡ, ಕಳವಳಗೊಳ್ಳಬೇಡ. ನೀನು ಹೋಗುವ ಎಡೆಗಳಲ್ಲೆಲ್ಲ ನಿನ್ನ ದೇವರೂ ಸರ್ವೇಶ್ವರನೂ ಆದ ನಾನು ನಿನ್ನ ಸಂಗಡ ಇರುತ್ತೇನೆ,” ಎಂದು ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು