ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಕೊಡುವ ನಾಡನ್ನು ಪ್ರವೇಶಿಸುವುದಕ್ಕೆ ನೀವು ಜೋರ್ಡನ್ ನದಿಯನ್ನು ದಾಟುವಾಗ ಅಂದರೆ, ನಿಮ್ಮ ಪಿತೃಗಳ ದೇವರಾದ ಸರ್ವೇಶ್ವರ ತಾವು ವಾಗ್ದಾನ ಮಾಡಿದಂತೆ ನಿಮಗೆ ಕೊಡುವ ಹಾಲೂ ಜೇನೂ ಹರಿಯುವ ನಾಡನ್ನು ಪ್ರವೇಶಿಸುವುದಕ್ಕೆ ನೀವು ಜೋರ್ಡನ್ ನದಿಯನ್ನು ದಾಟುವಾಗ, ನೀವು ದೊಡ್ಡ ಕಲ್ಲುಗಳನ್ನು ನಿಲ್ಲಿಸಬೇಕು. ಅವುಗಳಿಗೆ ಗಿಲಾವು ಮಾಡಿಸಿ ಈ ಧರ್ಮಶಾಸ್ತ್ರದ ವಾಕ್ಯಗಳನ್ನೆಲ್ಲಾ ಅವುಗಳ ಮೇಲೆ ಬರೆಯಿಸಬೇಕು.