Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 4:14 - ಕನ್ನಡ ಸತ್ಯವೇದವು C.L. Bible (BSI)

14 ಆ ದಿನ ಸರ್ವೇಶ್ವರ ಯೆಹೋಶುವನನ್ನು ಇಸ್ರಯೇಲರೆಲ್ಲರ ದೃಷ್ಟಿಯಲ್ಲಿ ಇಷ್ಟು ಘನಪಡಿಸಿದ್ದರಿಂದ ಅವರು ಮೋಶೆಯಲ್ಲಿ ಹೇಗೋ ಹಾಗೆಯೇ ಇವನಲ್ಲಿಯೂ, ಇವನು ಜೀವದಿಂದಿದ್ದ ಕಾಲವೆಲ್ಲ ಗೌರವವುಳ್ಳವರು ಆಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆ ದಿನದಲ್ಲಿ ಯೆಹೋವನು ಯೆಹೋಶುವನನ್ನು ಎಲ್ಲಾ ಇಸ್ರಾಯೇಲ್ಯರ ಮುಂದೆ ಘನಪಡಿಸಿದನು. ಅವರು ಮೋಶೆಗೆ ಹೇಗೆ ನಡೆದುಕೊಂಡರೋ ಹಾಗೆಯೇ ಯೆಹೋಶುವನು ಭಯ ಮತ್ತು ಗೌರವದಿಂದ ನಡೆದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಆ ದಿವಸ ಯೆಹೋವನು ಯೆಹೋಶುವನನ್ನು ಇಸ್ರಾಯೇಲ್ಯರೆಲ್ಲರ ದೃಷ್ಟಿಯಲ್ಲಿ ಘನಪಡಿಸಿದ್ದರಿಂದ ಅವರು ಮೋಶೆಯಲ್ಲಿ ಹೇಗೋ ಹಾಗೆಯೇ ಇವನಲ್ಲಿಯೂ ಇವನು ಜೀವದಿಂದಿದ್ದ ಕಾಲವೆಲ್ಲಾ ಭಯಭಕ್ತಿಯುಳ್ಳವರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಯೆಹೋವನು ಆ ದಿನ ಇಸ್ರೇಲಿನ ಎಲ್ಲಾ ಜನರ ದೃಷ್ಟಿಯಲ್ಲಿ ಯೆಹೋಶುವನನ್ನು ಘನವಂತನನ್ನಾಗಿ ಮಾಡಿದನು. ಆ ಹೊತ್ತಿನಿಂದ ಜನರು ಯೆಹೋಶುವನನ್ನು ಗೌರವಿಸತೊಡಗಿದರು. ಅವರು ಮೋಶೆಯನ್ನು ಗೌರವಿಸಿದಂತೆ ಯೆಹೋಶುವನನ್ನು ಅವನ ಜೀವಮಾನವೆಲ್ಲಾ ಗೌರವಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಆ ದಿನದಲ್ಲಿ ಯೆಹೋವ ದೇವರು ಯೆಹೋಶುವನನ್ನು ಇಸ್ರಾಯೇಲರೆಲ್ಲರ ಮುಂದೆ ಘನಪಡಿಸಿದರು. ಅವರು ಮೋಶೆಯನ್ನು ಗೌರವಿಸಿದ ಹಾಗೆಯೇ, ಅವನಿಗೂ ಅವನು ಬದುಕಿದ ದಿನಗಳಲ್ಲೆಲ್ಲಾ ಗೌರವ ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 4:14
14 ತಿಳಿವುಗಳ ಹೋಲಿಕೆ  

ಆಗ ಸರ್ವೇಶ್ವರ, ಯೆಹೋಶುವನಿಗೆ: “ನಾನು ಇಂದಿನಿಂದ ನಿನ್ನನ್ನು ಇಸ್ರಯೇಲರ ಮುಂದೆ ಮಹಾತ್ಮನನ್ನಾಗಿಸುವೆನು. ನಾನು ಮೋಶೆಯ ಸಂಗಡ ಇದ್ದಹಾಗೆ ನಿನ್ನ ಸಂಗಡವೂ ಇರುವೆನೆಂದು ಅವರಿಗೆ ಗೊತ್ತಾಗುವುದು.


ಯೆಹೂದ್ಯರಾದರೋ ದೇವರ ಕೃಪಾಹಸ್ತದಿಂದ, ಅವರ ಪ್ರೇರಣೆಯಿಂದ, ಏಕಮನಸ್ಸುಳ್ಳವರಾಗಿ, ಸರ್ವೇಶ್ವರನ ಧರ್ಮಶಾಸ್ತ್ರಾನುಸಾರ, ಅರಸನಿಂದಲೂ ಅಧಿಕಾರಿಗಳಿಂದಲೂ ಹೊರಟ ಆಜ್ಞೆಯನ್ನು ಕೈಕೊಂಡರು.


ಆತನು ನಿನ್ನ ಹಿತಕ್ಕಾಗಿ ದೇವರಿಂದ ನೇಮಕಗೊಂಡ ದಾಸನಾಗಿದ್ದಾನೆ. ಆದರೆ ನೀನು ಕೆಟ್ಟದ್ದನ್ನು ಮಾಡಿದೆ ಆದರೆ ಭಯಪಡಲೇಬೇಕು. ಏಕೆಂದರೆ, ಆತನ ಕೈಯಲ್ಲಿರುವ ಅಧಿಕಾರದಂಡವು ವ್ಯರ್ಥವಾದುದೇನೂ ಅಲ್ಲ. ದೇವರ ದಾಸನಾಗಿರುವ ಆತನು ಕೆಟ್ಟದ್ದನ್ನು ಮಾಡುವವರಿಗೆ ದೇವರದಂಡನೆಯನ್ನು ವಿಧಿಸುತ್ತಾನೆ.


ಇಸ್ರಯೇಲರೆಲ್ಲರೂ ಅರಸನ ಈ ತೀರ್ಪನ್ನು ಕೇಳಿದರು. ನ್ಯಾಯನಿರ್ಣಯಿಸುವುದಕ್ಕೆ ಈತನಲ್ಲಿ ದೇವದತ್ತ ಜ್ಞಾನವಿದೆ ಎಂದು ತಿಳಿದು ಅವನ ಬಗ್ಗೆ ಅಪಾರ ಗೌರವ ಉಳ್ಳವರಾದರು.


ಮಗನೇ, ಸರ್ವೇಶ್ವರನಿಗೂ ರಾಜನಿಗೂ ಭಯಪಡು; ಅವರನ್ನು ವಿರೋಧಿಸುವವರ ಗೊಡವೆಗೆ ಹೋಗಬೇಡ.


ಅಂತೆಯೇ ಸಮುವೇಲನು ಮೊರೆ ಇಡಲು ಸರ್ವೇಶ್ವರ ಗುಡುಗು ಮಳೆಗಳನ್ನು ಕಳುಹಿಸಿದರು. ಜನರೆಲ್ಲರು ಸರ್ವೇಶ್ವರನಿಗೂ ಸಮುವೇಲನಿಗೂ ಬಹಳವಾಗಿ ಭಯಪಟ್ಟು,


ಸರ್ವೇಶ್ವರ ಈಜಿಪ್ಟಿನವರಲ್ಲಿ ಮಾಡಿದ ಈ ಪರಾಕ್ರಮ ಕಾರ್ಯವನ್ನು ಇಸ್ರಯೇಲರು ನೋಡಿ ಸರ್ವೇಶ್ವರನಿಗೆ ಭಯಪಟ್ಟು ಅವರಲ್ಲೂ ಅವರ ದಾಸ ಮೋಶೆಯಲ್ಲೂ ನಂಬಿಕೆಯಿಟ್ಟರು.


ಹೀಗೆ ಅವರು ಮೋಡದಲ್ಲಿಯೂ ಸಮುದ್ರದಲ್ಲಿಯೂ ಸ್ನಾನದೀಕ್ಷೆಯನ್ನು ಪಡೆದು ಮೋಶೆಗೆ ಶಿಷ್ಯರಾದರು.


ಸುಮಾರು ನಾಲ್ವತ್ತು ಸಾವಿರ ಯೋಧರಿಂದ ಕೂಡಿದ ಅವರು ಸರ್ವೇಶ್ವರನ ಸಮ್ಮುಖದಲ್ಲಿ ನದಿ ದಾಟಿ ಯುದ್ಧ ಮಾಡುವುದಕ್ಕಾಗಿ ಜೆರಿಕೋವಿನ ಬಯಲಿಗೆ ಬಂದರು.


ಸರ್ವೇಶ್ವರ ಯೆಹೋಶುವನಿಗೆ:


ಈಜಿಪ್ಟಿನವರಿಗೆ ಇಸ್ರಯೇಲರ ಮೇಲೆ ಕನಿಕರ ಉಂಟಾಗುವಂತೆ ಮಾಡಿದರು ಸರ್ವೇಶ್ವರ. ಇದಲ್ಲದೆ ಈಜಿಪ್ಟ್ ದೇಶದ ಫರೋಹನ ಪರಿವಾರದವರು ಮೋಶೆಯನ್ನು ಮಹಾಪುರುಷನೆಂದು ಭಾವಿಸಿದರು.


ದೂರದಲ್ಲಿ ನಿಂತಿದ್ದ ಜೆರಿಕೋವಿನ ಪ್ರವಾದಿಮಂಡಲಿಯವರು ಇದನ್ನು ಕಂಡು, “ಎಲೀಯನಿಗಿದ್ದ ಆತ್ಮಶಕ್ತಿ ಎಲೀಷನ ಮೇಲೆ ಬಂದು ನೆಲಸಿದೆ,” ಎಂದು ತಿಳಿದುಕೊಂಡರು. ಅವನನ್ನು ಎದುರುಗೊಂಡು ಅವನಿಗೆ ಸಾಷ್ಟಾಂಗ ನಮಸ್ಕಾರ ಮಾಡಿದರು.


ಸರ್ವೇಶ್ವರ ಇಸ್ರಯೇಲರೆಲ್ಲರಿಗೆ ಗೊತ್ತಾಗುವಂತೆ ಸೊಲೊಮೋನನನ್ನು ಅಭಿವೃದ್ಧಿಪಡಿಸಿದರು; ಅವನಿಗಿಂತ ಮೊದಲು ಇಸ್ರಯೇಲರನ್ನಾಳಿದ ಎಲ್ಲಾ ಅರಸರ ವೈಭವಕ್ಕಿಂತಲೂ ಹೆಚ್ಚಿನ ವೈಭವವನ್ನು ಅವನಿಗೆ ಅನುಗ್ರಹಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು