Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 4:22 - ಕನ್ನಡ ಸತ್ಯವೇದವು C.L. Bible (BSI)

22 ‘ಇಸ್ರಯೇಲರು ಒಣನೆಲವಾಗಿದ್ದ ಈ ಜೋರ್ಡನನ್ನು ದಾಟಿ ಬಂದುದಕ್ಕಾಗಿ’ ಎಂದು ಹೇಳಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ‘ಇಸ್ರಾಯೇಲ್ಯರು ಒಣನೆಲವಾಗಿದ್ದ ಈ ಯೊರ್ದನನ್ನು ದಾಟಿ ಬಂದ್ದದರ ಗುರುತು’ ಎಂದು ಹೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಇಸ್ರಾಯೇಲ್ಯರು ಒಣನೆಲವಾಗಿದ್ದ ಈ ಯೊರ್ದನನ್ನು ದಾಟಿ ಬಂದದ್ದಕ್ಕಾಗಿ ಎಂದು ಹೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ‘ಇಸ್ರೇಲಿನ ಜನರು ಜೋರ್ಡನ್ ನದಿಯನ್ನು ಒಣನೆಲದ ಮೇಲೆ ಹೇಗೆ ದಾಟಿದರು ಎಂಬುದನ್ನು ನಮ್ಮ ನೆನಪಿಗೆ ತರಲು ಈ ಕಲ್ಲುಗಳು ಸಹಾಯಕವಾಗಿವೆ.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ನೀವು ಅವರಿಗೆ, ‘ಇಸ್ರಾಯೇಲರು ಒಣನೆಲದಲ್ಲಿ ಈ ಯೊರ್ದನ್ ನದಿಯನ್ನು ದಾಟಿ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 4:22
11 ತಿಳಿವುಗಳ ಹೋಲಿಕೆ  

ಸರ್ವೇಶ್ವರನ ಒಡಂಬಡಿಕೆಯ ಮಂಜೂಷವನ್ನು ಹೊತ್ತ ಯಾಜಕರು ಜೋರ್ಡನಿನ ನಡುವೆ ನೆಲದ ಮೇಲೆ ನಿಂತಿದ್ದರು. ಅಷ್ಟರಲ್ಲಿ ಇಸ್ರಯೇಲರೆಲ್ಲರೂ ಒಣನೆಲದ ಮೇಲೆ ನಡೆದು ಹೋದರು. ಹೀಗೆ ಜನರೆಲ್ಲರೂ ಜೋರ್ಡನಿನ ಆಚೆಗೆ ಸೇರಿದರು.


ಸಮುದ್ರ ಜನರಾಶಿಗಳನು ಬತ್ತಿಸಿದ ಬಾಹು ನೀನು ವಿಮುಕ್ತ ಜನ ಹಾಯುವಂತೆ ಸಮುದ್ರದಲಿ ದಾರಿಮಾಡಿದೆ ನೀನು.


ಆರನೆಯ ದೇವದೂತನು ತನ್ನ ಪಾತ್ರೆಯಲ್ಲಿದ್ದುದನ್ನು ಯೂಫ್ರೆಟಿಸ್ ಎಂಬ ಮಹಾನದಿಯ ಮೇಲೆ ಸುರಿದನು. ಕೂಡಲೇ ಅದರ ನೀರು ಬತ್ತಿಹೋಯಿತು. ಇದರ ಪರಿಣಾಮವಾಗಿ ಪೂರ್ವದೇಶದ ರಾಜರು ಬರುವುದಕ್ಕೆ ಮಾರ್ಗವಾಯಿತು.


‘ಬತ್ತಿಹೋಗು’ ಎಂದು ಜಲರಾಶಿಗಳಿಗೆ ‘ಒಣಗಿಹೋಗು’ ಎಂದು ನಿನ್ನ ಸೇರುವ ನದಿಗಳಿಗೆ ಅಪ್ಪಣೆ ಕೊಡುವಾತನು ನಾನೆ.


ಫರೋಹನ ಕುದುರೆಗಳು, ರಥಗಳು ಹಾಗು ರಾಹುತರು ಸಮುದ್ರವನ್ನು ಹೊಕ್ಕು ನಡೆಯಲಾರಂಭಿಸಿದಾಗ ಸರ್ವೇಶ್ವರ ಸ್ವಾಮಿ ಸಮುದ್ರದ ನೀರನ್ನು ಮೊದಲಿನಂತೆ ಬರಮಾಡಿ ಅವರನ್ನು ಮುಳುಗಿಸಿಬಿಟ್ಟರು. ಇಸ್ರಯೇಲರಾದರೋ, ಸಮುದ್ರದ ನಡುವೆ ಒಣನೆಲದಲ್ಲಿ ನಡೆದು ಹೋದರು.


ಇಸ್ರಯೇಲರಾದರೋ, ಸಮುದ್ರದೊಳಗೆ ಒಣ ನೆಲದಲ್ಲೇ ನಡೆದುಹೋದರು. ನೀರು ಅವರ ಎಡಬಲಗಳಲ್ಲಿ ಗೋಡೆಯಂತೆ ನಿಂತಿತ್ತು.


ಇಸ್ರಯೇಲರು ಸಮುದ್ರದ ಮಧ್ಯದಲ್ಲಿ ಒಣನೆಲದಲ್ಲೇ ನಡೆದುಹೋದರು. ನೀರು ಅವರ ಎಡಗಡೆ ಬಲಗಡೆಗಳಲ್ಲಿ ಗೋಡೆಯಂತೆ ನಿಂತಿತು.


ಆತ ಇಸ್ರಯೇಲರಿಗೆ, “ಮುಂದಿನ ಕಾಲದಲ್ಲಿ ನಿಮ್ಮ ಮಕ್ಕಳು ಈ ಕಲ್ಲುಗಳನ್ನು ಏಕೆ ನೆಟ್ಟಿದ್ದಾರೆಂದು ಕೇಳಿದರೆ ನೀವು ಅವರಿಗೆ,


ಮೇಲಿಂದ ಬರುತ್ತಿದ್ದ ನೀರು ಬಹು ದೂರದಲ್ಲಿದ್ದ ಚಾರೆತಾನಿನ ಬಳಿಯಿರುವ ಆದಾಮ್ ಊರಿನ ತನಕ ರಾಶಿಯಾಗಿ ನಿಂತುಕೊಂಡಿತು. ಕೆಳಗಿನ ನೀರು ಅರಾಬಾ ತಗ್ಗಿನಲ್ಲಿರುವ ಲವಣಸಮುದ್ರಕ್ಕೆ ಹರಿದುಹೋಯಿತು. ಜನರು ಜೆರಿಕೋವಿನ ಎದುರಿನಲ್ಲಿ ನದಿ ದಾಟಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು