Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 6:19 - ಕನ್ನಡ ಸತ್ಯವೇದವು C.L. Bible (BSI)

19 ಎಲ್ಲ ಬೆಳ್ಳಿ ಬಂಗಾರ ಹಾಗೂ ತಾಮ್ರ ಕಬ್ಬಿಣ ಪಾತ್ರೆಗಳು ಸರ್ವೇಶ್ವರಸ್ವಾಮಿಗೆ ಮೀಸಲಾಗಿದ್ದು ಅವರ ಭಂಡಾರಕ್ಕೆ ಸೇರತಕ್ಕವುಗಳು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಎಲ್ಲಾ ಬೆಳ್ಳಿ ಬಂಗಾರವೂ, ತಾಮ್ರ ಕಬ್ಬಿಣಗಳ ಪಾತ್ರೆಗಳೂ ಯೆಹೋವನಿಗೆ ಮೀಸಲಾಗಿದ್ದು ಆತನ ಭಂಡಾರಕ್ಕೆ ಸೇರತಕ್ಕವುಗಳು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಎಲ್ಲಾ ಬೆಳ್ಳಿಬಂಗಾರವೂ ತಾಮ್ರ ಕಬ್ಬಿಣಗಳ ಪಾತ್ರೆಗಳೂ ಯೆಹೋವನ ಮೀಸಲಾಗಿದ್ದು ಆತನ ಭಂಡಾರಕ್ಕೆ ಸೇರತಕ್ಕವುಗಳು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಬೆಳ್ಳಿ, ಬಂಗಾರ, ಕಂಚು ಮತ್ತು ಕಬ್ಬಿಣಗಳಿಂದ ಮಾಡಿದ ಎಲ್ಲಾ ವಸ್ತುಗಳು ಯೆಹೋವನ ಸ್ವತ್ತಾಗಿವೆ. ಆದ್ದರಿಂದ ಅವುಗಳನ್ನು ಆತನ ಭಂಡಾರಕ್ಕೆ ಸೇರಿಸಬೇಕು” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಎಲ್ಲಾ ಬೆಳ್ಳಿಬಂಗಾರ, ಕಂಚು, ಕಬ್ಬಿಣ ಪಾತ್ರೆಗಳು ಯೆಹೋವ ದೇವರಿಗೆ ಅರ್ಪಿತವಾಗಿರಬೇಕು. ಅವು ಯೆಹೋವ ದೇವರ ಭಂಡಾರಕ್ಕೆ ಸೇರಿರಬೇಕು,” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 6:19
25 ತಿಳಿವುಗಳ ಹೋಲಿಕೆ  

ಮುಖ್ಯಯಾಜಕರು ಆ ಹಣವನ್ನು ತೆಗೆದುಕೊಂಡು, “ಇದು ರಕ್ತದ ಕ್ರಯ. ಇದನ್ನು ಕಾಣಿಕೆ ಕೋಶದಲ್ಲಿ ಹಾಕುವುದು ಸರಿಯಲ್ಲ,” ಎಂದುಕೊಂಡರು.


ಮೇಲೆ ಕಂಡವರ ಕುಲಬಂಧುಗಳೂ ಹಾಗೂ ದೇವಾಲಯದ ಭಂಡಾರ, ಪರಿಶುದ್ಧ ವಸ್ತುಗಳ ಭಂಡಾರ ಇವುಗಳನ್ನು ಕಾಯುವ ಲೇವಿಯರ ಪಟ್ಟಿ:


ಯೇಸುಸ್ವಾಮಿ ದೇವಾಲಯದಲ್ಲಿ ಕಾಣಿಕೆಪೆಟ್ಟಿಗೆಗಳಿಗೆ ಎದುರಾಗಿ ಕುಳಿತಿದ್ದರು. ಜನರು ಅದರಲ್ಲಿ ಹಣಹಾಕುವ ರೀತಿ ಅವರ ಕಣ್ಣಿಗೆ ಬಿತ್ತು. ಧನವಂತರನೇಕರು ಹೆಚ್ಚು ಹೆಚ್ಚು ಹಣವನ್ನು ಹಾಕುತ್ತಿದ್ದರು.


ಅವರು ದಶಮಾಂಶವನ್ನು ಕೂಡಿಸುವಾಗ ಆರೋನನ ವಂಶದವನಾದ ಯಾಜಕನೊಬ್ಬನು ಅವರ ಸಂಗಡ ಇರಬೇಕು. ಲೇವಿಯರು ತಮಗೆ ದೊರಕಿದ ಭಾಗದ ದಶಮಾಂಶವನ್ನು ದೇವಾಲಯದ ಬಂಡಾರದಕೊಠಡಿಗಳಲ್ಲಿಡಬೇಕು;


ಅರಸ ದಾವೀದನು ಕಾಣಿಕೆಗಳನ್ನು ಮಾತ್ರವಲ್ಲದೆ ಎದೋಮ್ಯರು, ಮೋವಾಬ್ಯರು, ಅಮ್ಮೋನಿಯರು, ಫಿಲಿಷ್ಟಿಯರು ಹಾಗು ಅಮಾಲೇಕ್ಯರು ಎಂಬ ಸುತ್ತಮುತ್ತಿನ ಜನಾಂಗಗಳಿಂದ ಕಿತ್ತುಕೊಂಡ ಬೆಳ್ಳಿಬಂಗಾರವನ್ನೂ ಸರ್ವೇಶ್ವರನಿಗೆ ಪ್ರತಿಷ್ಠಾಪಿಸಿದನು.


ಇದಲ್ಲದೆ, ಸರ್ವೇಶ್ವರ ಮುಂತಿಳಿಸಿದ ಪ್ರಕಾರ, ಅವನು ಸರ್ವೇಶ್ವರನ ಆಲಯದ ಮತ್ತು ಅರಮನೆಯ ಭಂಡಾರಗಳಲ್ಲಿದ್ದ ದ್ರವ್ಯವನ್ನೆಲ್ಲಾ ದೋಚಿಕೊಂಡು ಹೋದನು. ಇಸ್ರಯೇಲರ ಅರಸನಾದ ಸೊಲೊಮೋನನು ಸರ್ವೇಶ್ವರನ ಆಲಯಕ್ಕಾಗಿ ಮಾಡಿಸಿದ್ದ ಬಂಗಾರದ ಎಲ್ಲಾ ಆಭರಣಗಳನ್ನು ಮುರಿದುಬಿಟ್ಟನು.


ಸೊಲೊಮೋನನು ಸರ್ವೇಶ್ವರನ ಆಲಯಕ್ಕೆ ಬೇಕಾದ ಎಲ್ಲಾ ಸಾಮಗ್ರಿಗಳನ್ನು ಸಿದ್ಧಮಾಡಿಸಿದ ನಂತರ ತನ್ನ ತಂದೆ ದಾವೀದನು ಸರ್ವೇಶ್ವರನಿಗೆ ಹರಕೆಹೊತ್ತು ಪ್ಟತಿಷ್ಠಿಸಿದ ಬೆಳ್ಳಿಬಂಗಾರವನ್ನೂ ಸಾಮಗ್ರಿಗಳನ್ನೂ ದೇವಾಲಯದ ಭಂಡಾರಕ್ಕೆ ಸೇರಿಸಿದನು.


ಅರಸನಾದ ದಾವೀದನು ಈ ಕಾಣಿಕೆಗಳನ್ನು ಮಾತ್ರವಲ್ಲದೆ, ತನ್ನಿಂದ ಅಪಜಯಹೊಂದಿದ್ದ ಅರಾಮ್ಯರು, ಮೋವಾಬ್ಯರು, ಅಮ್ಮೋನಿಯರು, ಫಿಲಿಷ್ಟಿಯರು ಹಾಗು ಅಮಾಲೇಕ್ಯರು ಎಂಬ ಸುತ್ತಮುತ್ತಿನ ಜನಾಂಗಗಳಿಂದಲೂ ಮತ್ತು ಚೋಬದ ಅರಸನಾದ ರೆಹೋಬನ ಮಗ ಹದದೆಜೆರನಿಂದಲೂ


ಸರ್ವೇಶ್ವರ ಇಂತೆನ್ನುತ್ತಾರೆ: “ಸಿಯೋನ್ ನಗರಿಯೇ, ಎದ್ದು ಒಕ್ಕಣೆಮಾಡು. ಇದಕ್ಕಾಗಿ ನಿನ್ನ ಕೊಂಬನ್ನು ಕಬ್ಬಿಣವಾಗಿಸುವೆನು. ನಿನ್ನ ಗೊರಸನ್ನು ಕಂಚನ್ನಾಗಿ ಮಾಡುವೆನು. ಅನೇಕ ರಾಷ್ಟ್ರಗಳನ್ನು ನೀನು ತುಳಿದು ಧ್ವಂಸಮಾಡುವೆ. ಅವುಗಳನ್ನು ಕೊಳ್ಳೆಹೊಡೆದು ತಂದ ಸ್ವತ್ತನ್ನು ಸರ್ವೇಶ್ವರಸ್ವಾಮಿಗೆ ಮೀಸಲಾಗಿಡುವೆ. ಅವುಗಳಿಂದ ಬಂದ ಆಸ್ತಿಯನ್ನು ಲೋಕದೊಡೆಯನಿಗೆ ಪ್ರತ್ಯೇಕಿಸಿಡುವೆ.”


ಅವು ಸಿದ್ಧವಾದ ಮೇಲೆ ಜನರು ಕಾಣಿಕೆಗಳನ್ನು, ತಮ್ಮ ಆದಾಯದ ದಶಮಾಂಶವನ್ನು ಹಾಗು ದೇವರಿಗೆ ಮುಡುಪಾಗಿ ಇಟ್ಟಿದ್ದನ್ನು ನಿರ್ವಂಚನೆಯಿಂದ ತಂದು ಅವುಗಳಲ್ಲಿ ಹಾಕುತ್ತಿದ್ದರು. ಈ ಎಲ್ಲಾ ಉಗ್ರಾಣಗಳ ಮೇಲ್ವಿಚಾರಣೆಯಲ್ಲಿ ಲೇವಿಯನಾದ ಕೋನನ್ಯನು ಮುಖ್ಯಸ್ಥನಾಗಿದ್ದನು; ಅವನ ತಮ್ಮ ಶಿಮ್ಮಿಯು ದ್ವಿತೀಯ ಸ್ಥಾನದವನಾಗಿದ್ದನು.


ತಾನೂ ತನ್ನ ತಂದೆಯೂ ತಾನೂ ಪ್ರತಿಷ್ಠಿಸಿದ ಬೆಳ್ಳಿ ಬಂಗಾರವನ್ನೂ ಪಾತ್ರೆಗಳನ್ನೂ ದೇವಾಲಯದಲ್ಲಿ ತಂದಿಟ್ಟನು.


ಸುತ್ತಣ ಕೋಣೆಗಳು, ದೇವಾಲಯದ ಭಂಡಾರಗಳು, ಪ್ರತಿಷ್ಠಿತ ವಸ್ತುಗಳ ಭಂಡಾರಗಳು ಇವುಗಳ ವಿಷಯವಾಗಿ ವಿವರಿಸಿದನು.


ಇವರಲ್ಲದೆ ದರ್ಶಿಯಾದ ಸಮುವೇಲನೂ ಕೀಷನ ಮಗ ಸೌಲನೂ ನೇರನ ಮಗ ಅಬ್ನೇರನೂ ಜೆರೂಯಳ ಮಗ ಯೋವಾಬನೂ ಹಾಗೆಯೇ ಮಾಡಿದ್ದರು. ಈ ಪ್ರಕಾರ ಪ್ರತಿಷ್ಠಿತವಾದದ್ದೆಲ್ಲವೂ ಶೆಲೋಮೋತನ ಮತ್ತು ಅವನ ಸಹೋದರರ ವಶದಲ್ಲಿತ್ತು.


ಜಿಕ್ರೀಯ ಮಗನೂ ಆಗಿರುವ ಶೆಕೋಮೋತನೂ ಅವನ ಸಹೋದರರೂ ಪ್ರತಿಷ್ಠಿತ ವಸ್ತುಗಳ ಭಂಡಾರವನ್ನು ಕಾಯುವವರು; ಇವರು ಶೆಬೂವೇಲನ ಗೋತ್ರ ಬಂಧುಗಳು.


ಸರ್ವೇಶ್ವರನ ಆಲಯದ ಮತ್ತು ಅರಮನೆಯ ಎಲ್ಲಾ ದ್ರವ್ಯವನ್ನು ಹಾಗು ಸೊಲೊಮೋನನು ಮಾಡಿಸಿದ ಬಂಗಾರದ ಗುರಾಣಿಗಳನ್ನು ದೋಚಿಕೊಂಡು ಹೋದನು.


ಕೂಡಲೇ ಸುಡಾನಿನ ಎಬೆದ್ಮೆಲೆಕನು ಆಳುಗಳನ್ನು ಕರೆದುಕೊಂಡು ಹೋಗಿ, ಅರಮನೆಯನ್ನು ಹೊಕ್ಕು, ಖಜಾನೆಯ ಕೆಳಗಣ ಕೋಣೆಯಿಂದ ಹಳೆಯ ಹರಕು ಚಿಂದಿಪಂದಿಗಳನ್ನು ತೆಗೆದುಕೊಂಡು, ಹಗ್ಗಕ್ಕೆ ಕಟ್ಟಿ ಬಾವಿಯೊಳಗಿದ್ದ ಯೆರೆಮೀಯನಿಗೆ ಮುಟ್ಟಿಸಿದನು.


ಬೆಂಕಿಯನ್ನು ತಡೆಯುವ ಚಿನ್ನ, ಬೆಳ್ಳಿ, ತಾಮ್ರ, ಕಬ್ಬಿಣ, ತವರ, ಸೀಸ ಮೊದಲಾದುವುಗಳನ್ನು ಬೆಂಕಿದಾಟಿಸಿ ಶುದ್ಧಿಮಾಡಬೇಕು.


ನಾಲ್ಕನೆಯ ವರ್ಷ ಅದರ ಎಲ್ಲಾ ಹಣ್ಣುಗಳೂ ದೇವರವಾಗಿರಬೇಕು; ಅವುಗಳನ್ನು ಸರ್ವೇಶ್ವರನಿಗೆ ಕೃತಜ್ಞತೆಯ ಕಾಣಿಕೆಯನ್ನಾಗಿ ಸಮರ್ಪಿಸಬೇಕು.


ನರಮಾನವರೆನ್ನದೆ, ಪಶುಪ್ರಾಣಿಗಳೆನ್ನದೆ ಏನನ್ನೂ ಬಿಡದೆ ಎಲ್ಲವನ್ನು ಕೊಳ್ಳೆಹೊಡೆದರು.


ಹೀಗೆ ಸೆರೆಯಾಳುಗಳನ್ನೂ ಪಶುಪ್ರಾಣಿಗಳನ್ನೂ ಆಸ್ತಿಪಾಸ್ತಿಯನ್ನೂ ತೆಗೆದುಕೊಂಡು ಜೆರಿಕೋ ಪಟ್ಟಣದ ಎದುರಿಗಿರುವ ಜೋರ್ಡನ್ ನದಿಯ ತೀರಕ್ಕೆ ಬಂದರು. ಅಲ್ಲಿ ಮೋವಾಬ್ಯರ ಮೈದಾನದ ಪಾಳೆಯದಲ್ಲಿದ್ದ ಮೋಶೆ, ಮಹಾಯಾಜಕ ಎಲ್ಲಾಜಾರ್ ಹಾಗು ಇಸ್ರಯೇಲರ ಸರ್ವಸಮಾಜದವರ ಬಳಿಗೆ ಬಂದರು.


ಇಸ್ರಯೇಲರು ನನ್ನ ಕಟ್ಟಳೆಯನ್ನು ಮೀರಿ ಪಾಪಿಷ್ಠರಾಗಿದ್ದಾರೆ. ಮೀಸಲಾದ ವಸ್ತುಗಳನ್ನು ತೆಗೆದುಕೊಂಡು ಕಳ್ಳರಾಗಿದ್ದಾರೆ. ಅವುಗಳನ್ನು ತಮ್ಮ ಸಲಕರಣೆಗಳಲ್ಲಿ ಬಚ್ಚಿಟ್ಟುಕೊಂಡು ವಂಚಕರಾಗಿದ್ದಾರೆ.


ಅರಸನಾದ ದಾವೀದನೂ ಗೋತ್ರ ಪ್ರಧಾನರೂ ಸಹಸ್ರ ಅಧಿಪತಿಗಳೂ ಶತಾಧಿಪತಿಗಳ ಸೇನಾನಾಯಕರೂ ಸರ್ವೇಶ್ವರನ ಆಲಯದ ವೃದ್ಧಿಗಾಗಿ ತಮಗೆ ಯುದ್ಧದಲ್ಲಿ ಸಿಕ್ಕಿದ ಕೊಳ್ಳೆಯ ಒಂದು ಭಾಗವನ್ನು ಸರ್ವೇಶ್ವರನಿಗೆಂದು ಮುಡಿಪಾಗಿಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು