Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 6:24 - ಕನ್ನಡ ಸತ್ಯವೇದವು C.L. Bible (BSI)

24 ಬಳಿಕ ನಗರವನ್ನೂ - ಅದರಲ್ಲಿದ್ದುದೆಲ್ಲವನ್ನೂ ಬೆಂಕಿಯಿಂದ ಸುಟ್ಟುಹಾಕಿದರು. ಆದರೆ ಬೆಳ್ಳಿ ಬಂಗಾರವನ್ನು, ಕಂಚುಕಬ್ಬಿಣಗಳ ಪಾತ್ರೆ ಸರ್ವೇಶ್ವರನ ಆಲಯದ ಭಂಡಾರಕ್ಕೆ ಒಪ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಇಸ್ರಾಯೇಲ್ಯರು ಪಟ್ಟಣವನ್ನೂ ಅದರಲ್ಲಿರುವುದೆಲ್ಲವನ್ನೂ ಬೆಂಕಿಯಿಂದ ಸುಟ್ಟುಬಿಟ್ಟರು. ಆದರೆ ಬೆಳ್ಳಿಬಂಗಾರವನ್ನೂ, ತಾಮ್ರ ಕಬ್ಬಿಣಗಳ ಪಾತ್ರೆಗಳನ್ನೂ, ಯೆಹೋವನ ಆಲಯದ ಭಂಡಾರಕ್ಕೆ ಒಪ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಇಸ್ರಾಯೇಲ್ಯರು ಪಟ್ಟಣವನ್ನೂ ಅದರಲ್ಲಿರುವದೆಲ್ಲವನ್ನೂ ಬೆಂಕಿಯಿಂದ ಸುಟ್ಟರು. ಆದರೆ ಬೆಳ್ಳಿಬಂಗಾರವನ್ನೂ ತಾಮ್ರ ಕಬ್ಬಿಣಗಳ ಪಾತ್ರೆಗಳನ್ನೂ ಯೆಹೋವನ ಆಲಯದ ಭಂಡಾರಕ್ಕೆ ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಬಳಿಕ ಇಸ್ರೇಲರು ಇಡೀ ನಗರವನ್ನು ಸುಟ್ಟು ಹಾಕಿದರು. ಅವರು ಬೆಳ್ಳಿ, ಬಂಗಾರ, ಕಂಚು ಮತ್ತು ಕಬ್ಬಿಣಗಳಿಂದ ಮಾಡಿದ ವಸ್ತುಗಳನ್ನು ಬಿಟ್ಟು ನಗರದಲ್ಲಿನ ಉಳಿದೆಲ್ಲವನ್ನು ಸುಟ್ಟು ಹಾಕಿದರು. ಅವರು ಆ ವಸ್ತುಗಳನ್ನು ಯೆಹೋವನಿಗಾಗಿ ಉಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಆದರೆ ಪಟ್ಟಣವನ್ನೂ ಅದರಲ್ಲಿರುವ ಸಮಸ್ತವನ್ನೂ ಬೆಂಕಿಯಿಂದ ಸುಟ್ಟುಬಿಟ್ಟರು. ಬೆಳ್ಳಿಬಂಗಾರವನ್ನೂ ಕಂಚು ಕಬ್ಬಿಣ ಪಾತ್ರೆಗಳನ್ನು ಮಾತ್ರ ಯೆಹೋವ ದೇವರ ಮನೆಯ ಭಂಡಾರದಲ್ಲಿ ಇಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 6:24
13 ತಿಳಿವುಗಳ ಹೋಲಿಕೆ  

ಯೆಹೋಶುವನು ಆಯಿ ನಗರವನ್ನು ಸುಟ್ಟು ಅದು ಎಂದಿಗೂ ಮರಳಿ ಕಟ್ಟಲಾಗದಂತೆ ಹಾಳುದಿಬ್ಬವಾಗಿಸಿಬಿಟ್ಟನು. ಅದು ಇಂದಿನವರೆಗೂ ಹಾಗೆಯೆ ಉಳಿದಿದೆ.


ನೀನು ಕಂಡ ಮೃಗವೂ ಅದರ ಹತ್ತು ಕೊಂಬುಗಳೂ ಆ ವೇಶ್ಯೆಯನ್ನು ದ್ವೇಷಿಸುವವರನ್ನು ಸೂಚಿಸುತ್ತದೆ. ಅವರು ಅವಳನ್ನು ನಿರ್ಗತಿಕಳನ್ನಾಗಿ ಮಾಡುವರು, ಬೆತ್ತಲೆಯಾಗಿಸುವರು; ಅವಳ ಮಾಂಸವನ್ನು ಕಿತ್ತು ತಿನ್ನುವರು; ಅವಳನ್ನೇ ಬೆಂಕಿಯಲ್ಲಿ ಸುಟ್ಟುಬಿಡುವರು.


ಸರ್ವೇಶ್ವರನ ಆಲಯವನ್ನೂ ಅರಮನೆಯನ್ನೂ ಜೆರುಸಲೇಮಿನ ಎಲ್ಲ ದೊಡ್ಡ ಮನೆಗಳನ್ನೂ ಸುಟ್ಟುಬಿಟ್ಟನು.


ಈ ಕಾರಣ, ಒಂದೇ ದಿನದಲಿ ಬಂದೆರಗುವುವು ಸಾವು ನೋವು ಕ್ಷಾಮಡಾಮರಗಳು ಬೆಂಕಿಯಲ್ಲವಳು ಭಸ್ಮವಾಗುವಳು ಅವಳ ದಂಡಿಪ ಪ್ರಭುವು ಬಲಾಢ್ಯ ದೇವನು.”


ಅದರಲ್ಲಿ ಇರುವ ಎಲ್ಲ ಸಾಮಗ್ರಿಗಳನ್ನು ಗ್ರಾಮಮಧ್ಯದಲ್ಲಿ ಕೂಡಿಸಿ, ಊರನ್ನೂ, ಅದರಲ್ಲಿರುವ ಎಲ್ಲ ಸಾಮಾನುಗಳನ್ನೂ ನಿಮ್ಮ ದೇವರಾದ ಸರ್ವೇಶ್ವರನಿಗೆ ನಿಶ್ಯೇಷವಾಗಿ ಸುಟ್ಟುಬಿಡಬೇಕು. ಅದು ಪುನಃ ಯಾವಾಗಲೂ ಹಾಳುದಿಬ್ಬವಾಗಿರಬೇಕು. ಅದನ್ನು ಪುನಃ ಕಟ್ಟಬಾರದು.


ಎಲ್ಲ ಬೆಳ್ಳಿ ಬಂಗಾರ ಹಾಗೂ ತಾಮ್ರ ಕಬ್ಬಿಣ ಪಾತ್ರೆಗಳು ಸರ್ವೇಶ್ವರಸ್ವಾಮಿಗೆ ಮೀಸಲಾಗಿದ್ದು ಅವರ ಭಂಡಾರಕ್ಕೆ ಸೇರತಕ್ಕವುಗಳು,” ಎಂದನು.


ಆದರೆ ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಸ್ವಂತಕ್ಕಾಗಿ ಕೊಡುವ ಈ ಜನಾಂಗಗಳ ಪಟ್ಟಣಗಳ ವಿಷಯದಲ್ಲಿ ಹಾಗೆ ಮಾಡದೆ ಉಸಿರಾಡುವ ಒಬ್ಬರನ್ನಾದರೂ ಉಳಿಸಬಾರದು.


ವೇಶ್ಯೆಯಾದ ರಾಹಾಬಳು, ಜೆರಿಕೋ ನಗರದಲ್ಲಿ ಸಂಚರಿಸಿ ನೋಡಲು ಬಂದಿದ್ದ ಯೆಹೋಶುವನ ಗೂಢಚಾರರನ್ನು ಬಚ್ಚಿಟ್ಟಿದ್ದರಿಂದ ಅವಳನ್ನೂ ಅವಳ ತಂದೆಯ ಮನೆಯವರನ್ನೂ ಅವಳಿಗಿದ್ದುದೆಲ್ಲವನ್ನೂ ಉಳಿಸಿದರು. ಅವಳು ಇಂದಿನವರೆಗೂ ಇಸ್ರಯೇಲರಲ್ಲೇ ವಾಸವಾಗಿದ್ದಾಳೆ.


ಅವರಿದ್ದ ಊರುಕೇರಿಗಳನ್ನು ಸುಟ್ಟುಹಾಕಿದರು.


ಆ ಶಾಪಗ್ರಸ್ತ ವಸ್ತುಗಳಲ್ಲಿ ನೀವು ಸ್ವಲ್ಪವನ್ನಾದರೂ ತೆಗೆದುಕೊಳ್ಳಬಾರದು.


ಇಸ್ರಯೇಲರು ಅದರಲ್ಲಿದ್ದ ಜನರನ್ನೆಲ್ಲಾ ಕತ್ತಿಗೆ ಈಡಾಗಿಸಿ ಹಾಚೋರ್ ನಗರವನ್ನು, ಪ್ರಾಣಿಯೊಂದೂ ಉಳಿಯದಂತೆ ಸುಟ್ಟುಬಿಟ್ಟರು.


ಆವರು ಈ ವರ್ತಮಾನವನ್ನು ದಾವೀದನಿಗೆ ಹೇಳಿಕಳುಹಿಸಿದರು. ಬಹಳವಾಗಿ ಅಪಮಾನ ಹೊಂದಿದ ಅವರಿಗೆ ದಾವೀದನು ಆಳುಗಳ ಮುಖಾಂತರ, “ನಿಮ್ಮ ಗಡ್ಡ ಬೆಳೆಯುವವರೆಗೆ ನೀವು ಜೆರಿಕೋವಿನಲ್ಲಿದ್ದು ಅನಂತರ ಬನ್ನಿ,” ಎಂದು ಹೇಳಿಸಿದನು.


ಅರಸ ದಾವೀದನು ಕಾಣಿಕೆಗಳನ್ನು ಮಾತ್ರವಲ್ಲದೆ ಎದೋಮ್ಯರು, ಮೋವಾಬ್ಯರು, ಅಮ್ಮೋನಿಯರು, ಫಿಲಿಷ್ಟಿಯರು ಹಾಗು ಅಮಾಲೇಕ್ಯರು ಎಂಬ ಸುತ್ತಮುತ್ತಿನ ಜನಾಂಗಗಳಿಂದ ಕಿತ್ತುಕೊಂಡ ಬೆಳ್ಳಿಬಂಗಾರವನ್ನೂ ಸರ್ವೇಶ್ವರನಿಗೆ ಪ್ರತಿಷ್ಠಾಪಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು