Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 8:28 - ಕನ್ನಡ ಸತ್ಯವೇದವು C.L. Bible (BSI)

28 ಯೆಹೋಶುವನು ಆಯಿ ನಗರವನ್ನು ಸುಟ್ಟು ಅದು ಎಂದಿಗೂ ಮರಳಿ ಕಟ್ಟಲಾಗದಂತೆ ಹಾಳುದಿಬ್ಬವಾಗಿಸಿಬಿಟ್ಟನು. ಅದು ಇಂದಿನವರೆಗೂ ಹಾಗೆಯೆ ಉಳಿದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಯೆಹೋಶುವನು ಆಯಿ ಎಂಬ ಪಟ್ಟಣವನ್ನು ಸುಟ್ಟು ಅದು ಎಂದಿಗೂ ತಿರುಗಿ ಕಟ್ಟಲು ಸಾಧ್ಯವಾಗದಂತೆ ಹಾಳುದಿಬ್ಬವನ್ನಾಗಿ ಮಾಡಿದನು. ಅದು ಇಂದಿನ ವರೆಗೂ ಹಾಗೆಯೇ ಉಳಿದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಯೆಹೋಶುವನು ಆಯಿ ಎಂಬ ಪಟ್ಟಣವನ್ನು ಸುಟ್ಟು ಅದು ಯಾವ ಕಾಲಕ್ಕೂ ತಿರಿಗಿ ಕಟ್ಟಲ್ಪಡದಂತೆ ಹಾಳುದಿಬ್ಬವಾಗ ಮಾಡಿದನು. ಅದು ಇಂದಿನವರೆಗೂ ಹಾಗೆಯೇ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಅನಂತರ ಯೆಹೋಶುವನು “ಆಯಿ” ನಗರವನ್ನು ಸುಟ್ಟುಹಾಕಿದನು. ಆ ನಗರವು ಕೇವಲ ಕಲ್ಲುಬಂಡೆಗಳ ದಿಬ್ಬವಾಯಿತು. ಅದು ಇಂದಿಗೂ ಹಾಗೆಯೇ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಯೆಹೋಶುವನು ಆಯಿ ಎಂಬ ಪಟ್ಟಣವನ್ನು ಸುಟ್ಟುಬಿಟ್ಟು, ಅದನ್ನು ಮರಳಿ ಕಟ್ಟಲಾಗದಂತೆ ಹಾಳು ದಿಬ್ಬವಾಗಿ ಮಾಡಿದನು. ಅದು ಇಂದಿನವರೆಗೂ ಹಾಗೆಯೇ ಉಳಿದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 8:28
11 ತಿಳಿವುಗಳ ಹೋಲಿಕೆ  

ಅದರಲ್ಲಿ ಇರುವ ಎಲ್ಲ ಸಾಮಗ್ರಿಗಳನ್ನು ಗ್ರಾಮಮಧ್ಯದಲ್ಲಿ ಕೂಡಿಸಿ, ಊರನ್ನೂ, ಅದರಲ್ಲಿರುವ ಎಲ್ಲ ಸಾಮಾನುಗಳನ್ನೂ ನಿಮ್ಮ ದೇವರಾದ ಸರ್ವೇಶ್ವರನಿಗೆ ನಿಶ್ಯೇಷವಾಗಿ ಸುಟ್ಟುಬಿಡಬೇಕು. ಅದು ಪುನಃ ಯಾವಾಗಲೂ ಹಾಳುದಿಬ್ಬವಾಗಿರಬೇಕು. ಅದನ್ನು ಪುನಃ ಕಟ್ಟಬಾರದು.


ಆದುದರಿಂದ ನಿಮ್ಮ ದೆಸೆಯಿಂದಲೇ ಸಿಯೋನ್ ಪಟ್ಟಣವನ್ನು ಹೊಲದಂತೆ ಉಳಲಾಗುವುದು. ಜೆರುಸಲೇಮ್ ನಗರ ಹಾಳುದಿಬ್ಬವಾಗುವುದು. ದೇವಾಲಯದ ಪರ್ವತ ಕಾಡುಗುಡ್ಡದಂತಾಗುವುದು.


ಲೋಕದ ಕಟ್ಟಕಡೆಯಿಂದ ಬಾಬಿಲೋನಿಗೆ ಬನ್ನಿ. ಅದರ ಕಣಜಗಳನ್ನು ತೆರೆಯಿರಿ. ಆ ನಗರವನ್ನು ಹಾಳುದಿಬ್ಬವನ್ನಾಗಿ ಮಾಡಿ ಪೂರ್ತಿಯಾಗಿ ನಾಶಪಡಿಸಿರಿ. ಅದರಲ್ಲಿ ಏನೂ ಉಳಿಯದಿರಲಿ.


ಆದುದರಿಂದ ಇಗೋ ಕೇಳಿ: ನನ್ನ ಅಪ್ಪಣೆಯ ಮೇರೆಗೆ ಶತ್ರುಗಳು ರಬ್ಬಾ ಎಂಬ ಅಮ್ಮೋನ್ಯರ ನಗರದ ಮೇಲೆ ಬಿದ್ದು ಯುದ್ಧ ಘೋಷಣೆ ಮಾಡುವ ದಿನಗಳು ಬರುವುವು. ಆ ನಗರ ಹಾಳುದಿಬ್ಬವಾಗುವುದು. ಅದಕ್ಕೆ ಸೇರಿದ ಗ್ರಾಮಗಳು ಬೆಂಕಿಯಿಂದ ಸುಟ್ಟುಹೋಗುವುವು. ಆಗ ಇಸ್ರಯೇಲ್ ತನ್ನನ್ನು ವಶಮಾಡಿಕೊಂಡವರನ್ನು ತಾನು ವಶಮಾಡಿಕೊಳ್ಳುವುದು. ಇದು ಸರ್ವೇಶ್ವರನಾದ ನನ್ನ ನುಡಿ.


ಸರ್ವೇಶ್ವರ : “ಹಾಳು ದಿಬ್ಬಗಳನ್ನಾಗಿಸುವೆನು ಜೆರುಸಲೇಮನ್ನು ನರಿಗಳ ಹಕ್ಕೆಯನ್ನಾಗಿಸುವೆನು ಜುದೇಯ ಪಟ್ಟಣಗಳನ್ನು ಜನರಿಲ್ಲದ ಬೀಳುಭೂಮಿಯನ್ನಾಗಿಸುವೆನು ಅವುಗಳನ್ನು.”


ನಾಶಪಡಿಸಿದೆ ನೀ ನಗರವನು, ದಿಬ್ಬವಾಗಿಸಿದೆ ದುರ್ಗವನು, ಕೆಡವಿದೆ ವಿದೇಶೀಯರ ಕೋಟೆಯನು, ಮರಳಿ ಕಟ್ಟಲಾಗದ ಹಾಳೂರನ್ನಾಗಿಸಿದೆ ಅದನು.


ದಮಸ್ಕಸ್ ವಿಷಯವಾಗಿ ದೈವೋಕ್ತಿ : “ಇದೋ, ದಮಸ್ಕಸ್ ಊರಾಗಿ ಉಳಿಯದು, ಅದೊಂದು ಹಾಳುದಿಬ್ಬವಾಗುವುದು.


“ಕೇಳು, ಇದನ್ನೆಲ್ಲಾ ಬಹುಕಾಲದ ಹಿಂದೆ ಗೊತ್ತುಮಾಡಿದವನು ನಾನೇ, ಪೂರ್ವಕಾಲದಲ್ಲಿ ನಿರ್ಣಯಿಸಿದುದನ್ನು ಈಗ ನೆರವೇರಿಸಿದ್ದೇನೆ. ಕೋಟೆ ನಗರಗಳನ್ನು ನೀನು ಹಾಳುದಿಬ್ಬಗಳನ್ನಾಗಿಸಿದೆ. ಆದರೆ ಸಾಧ್ಯವಾಯಿತಿದು ನನ್ನಿಂದಲೇ; ನಿನಗಿದು ತಿಳಿಯದೆ ಹೋಯಿತೆ?


ಇದಲ್ಲದೆ ಯೆಹೋಶುವನು ಹನ್ನೆರಡು ಕಲ್ಲುಗಳನ್ನು ತೆಗೆದುಕೊಂಡು, ಜೋರ್ಡನಿನ ಮಧ್ಯೆ ಒಡಂಬಡಿಕೆಯ ಮಂಜೂಷವನ್ನು ಹೊತ್ತ ಯಾಜಕರು ನಿಂತಿದ್ದ ಸ್ಥಳದಲ್ಲಿ ನಿಲ್ಲಿಸಿದನು. ಅವು ಇಂದಿನವರೆಗೂ ಅಲ್ಲೇ ಇವೆ.


ಆಯಿಯ ಅರಸನನ್ನು ಸಂಜೆಯವರೆಗೂ ಮರಕ್ಕೆ ನೇತುಹಾಕಿಸಿದನು. ಸೂರ್ಯನು ಅಸ್ತಮಿಸುತ್ತಲೆ ಅವನ ಶವವನ್ನು ಕೆಳಗಿಳಿಸಿ ಅದನ್ನು ಊರಬಾಗಿಲಿನಲ್ಲಿ ಹಾಕಿಸಿ ಅದರ ಮೇಲೆ ಕಲ್ಲಿನ ದೊಡ್ಡ ರಾಶಿಯನ್ನು ಮಾಡಿಸಿದನು. ಅದು ಇಂದಿನವರೆಗೂ ಹಾಗೆಯೇ ಇದೆ.


ಆ ಶಾಪಗ್ರಸ್ತ ವಸ್ತುಗಳಲ್ಲಿ ನೀವು ಸ್ವಲ್ಪವನ್ನಾದರೂ ತೆಗೆದುಕೊಳ್ಳಬಾರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು