Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 8:31 - ಕನ್ನಡ ಸತ್ಯವೇದವು C.L. Bible (BSI)

31 ಜನರು ಅದರ ಮೇಲೆ ಸರ್ವೇಶ್ವರನಿಗೆ ದಹನ ಹೋಮಬಲಿಗಳನ್ನೂ ಸಮಾಧಾನಬಲಿಗಳನ್ನೂ ಸಮರ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಜನರು ಅದರ ಮೇಲೆ ಯೆಹೋವನಿಗೆ ಸರ್ವಾಂಗಹೋಮಗಳನ್ನೂ ಸಮಾಧಾನ ಯಜ್ಞಗಳನ್ನೂ ಸಮರ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಜನರು ಅದರ ಮೇಲೆ ಯೆಹೋವನಿಗೆ ಸರ್ವಾಂಗಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಸಮರ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಯಜ್ಞವೇದಿಕೆಯನ್ನು ಹೇಗೆ ಕಟ್ಟಬೇಕೆಂಬುದನ್ನು ಯೆಹೋವನ ಸೇವಕನಾದ ಮೋಶೆಯು ಇಸ್ರೇಲರಿಗೆ ಹೇಳಿ ಕೊಟ್ಟಿದ್ದನು. ಆದ್ದರಿಂದ ಮೋಶೆಯ ಧರ್ಮಶಾಸ್ತ್ರದ ಗ್ರಂಥದಲ್ಲಿ ವಿವರಿಸಿದಂತೆ ಯೆಹೋಶುವನು ಯಜ್ಞವೇದಿಕೆಯನ್ನು ಕಟ್ಟಿಸಿದನು. ಯಜ್ಞವೇದಿಕೆಯನ್ನು ಕಡಿಯದ ಕಲ್ಲುಗಳಿಂದ ಮಾಡಲಾಯಿತು. ಆ ಕಲ್ಲುಗಳ ಮೇಲೆ ಯಾವ ಉಪಕರಣವನ್ನೂ ಉಪಯೋಗಿಸಿರಲಿಲ್ಲ. ಯೆಹೋವನಿಗೆ ಆ ಯಜ್ಞವೇದಿಕೆಯ ಮೇಲೆ ಸರ್ವಾಂಗಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಅರ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಸೇವಕನಾದ ಮೋಶೆಯು ಇಸ್ರಾಯೇಲರಿಗೆ ಆಜ್ಞಾಪಿಸಿದಂತೆ, ಮೋಶೆಯ ನಿಯಮದಲ್ಲಿ ಬರೆದಿರುವ ಪ್ರಕಾರ, ಯೆಹೋವ ದೇವರಿಗೆ ಉಳಿಮುಟ್ಟದ ಪೂರ್ಣವಾದ ಕಲ್ಲುಗಳಿಂದ ಬಲಿಪೀಠವನ್ನು ಕಟ್ಟಿದನು. ಆಗ ಅವರು ಅದರ ಮೇಲೆ ಯೆಹೋವ ದೇವರಿಗೆ ದಹನಬಲಿಗಳನ್ನೂ ಸಮಾಧಾನ ಸಮರ್ಪಣೆಗಳನ್ನೂ ಅರ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 8:31
16 ತಿಳಿವುಗಳ ಹೋಲಿಕೆ  

ಲೇವಿಯರು, ಚರ್ಮ ಸುಲಿದು ಹೋಮಕ್ಕಾಗಿ ತೆಗೆದಿಟ್ಟಿದ್ದನ್ನು ಪ್ರತ್ಯೇಕಿಸಿ, ಜನರಿಗೆ ಆಯಾ ಗೋತ್ರಶಾಖೆಗಳಿಗನುಸಾರ, ಕೊಟ್ಟರು. ಇವರು ಅದನ್ನು ಮೋಶೆಯ ಧರ್ಮಶಾಸ್ತ್ರವಿಧಿಯ ಮೇರೆಗೆ ಸರ್ವೇಶ್ವರನಿಗೆ ಸಮರ್ಪಿಸಬೇಕಾಯಿತು. ಹೋರಿಗಳ ವಿಷಯದಲ್ಲೂ ಅದೇ ಕ್ರಮವನ್ನು ಅನುಸರಿಸಿದರು.


ಈ ಧರ್ಮಶಾಸ್ತ್ರ ಸದಾ ನಿನ್ನ ಬಾಯಲ್ಲಿರಲಿ. ಹಗಲಿರುಳು ಅದನ್ನು ಧ್ಯಾನಿಸು. ಅದರಲ್ಲಿ ಬರೆದಿರುವುದನ್ನೆಲ್ಲಾ ಕೈಗೊಂಡು ನಡೆ. ಆಗ ನಿನ್ನ ಕಾರ್ಯವೆಲ್ಲಾ ಕೈಗೂಡುವುದು. ನೀನು ಕೃತಾರ್ಥನಾಗುವೆ.


ಇಸ್ರಯೇಲರ ಯೌವನಸ್ಥರು ಸರ್ವೇಶ್ವರ ಸ್ವಾಮಿಗೆ ದಹನಬಲಿಗಳನ್ನು ಅರ್ಪಿಸುವಂತೆಯೂ ಸಮಾಧಾನದ ಬಲಿಗಾಗಿ ಹೋರಿಗಳನ್ನು ಅರ್ಪಿಸುವಂತೆಯೂ ಅಪ್ಪಣೆಕೊಟ್ಟನು.


ಅದೂ ಅಲ್ಲದೆ ಮೋಶೆಯ ಮಾವ ಇತ್ರೋ ದೇವರಿಗೆ ದಹನ ಬಲಿಯನ್ನು ಹಾಗು ಇತರ ಬಲಿಗಳನ್ನು ಸಮರ್ಪಿಸಿದನು. ಆರೋನನು ಹಾಗು ಇಸ್ರಯೇಲರ ಹಿರಿಯರೆಲ್ಲರು ಬಂದು ಅವನ ಸಂಗಡ ದೇವರ ಸನ್ನಿಧಿಯಲ್ಲಿ ಸಹಭೋಜನ ಮಾಡಿದರು.


ಸೈತಾನನು ಸೈತಾನನನ್ನು ಹೊಡೆದೋಡಿಸುವುದಾದರೆ, ಸೈತಾನನ ಪಕ್ಷದವರೇ ಪರಸ್ಪರ ವಿರೋಧಿಗಳಾಗುತ್ತಾರೆ.


ಆ ಕಾಲದಲ್ಲಿ ಜನರ ಮುಂದೆ ಮೋಶೆಯ ಧರ್ಮಶಾಸ್ತ್ರ ಪಾರಾಯಣವು ನಡೆಯುತ್ತಿತ್ತು. ಅದರಲ್ಲಿ - ಅಮ್ಮೋನಿಯರಾಗಲಿ ಮೋವಾಬ್ಯರಾಗಲಿ ದೇವರ ಸಭೆಯಲ್ಲಿ ಎಂದಿಗೂ ಸೇರಬಾರದಿತ್ತು.


ಆಮೇಲೆ ಯಾಜಕರ ಮತ್ತು ಲೇವಿಯರ ಆಯಾ ವರ್ಗಗಳನ್ನು ಮೋಶೆಯ ಧರ್ಮಶಾಸ್ತ್ರನಿಯಮದ ಪ್ರಕಾರ, ಜೆರುಸಲೇಮಿನ ದೇವರ ಸೇವೆಗೆ ನೇಮಿಸಿದರು.


ಆದರೆ ‘ಮಕ್ಕಳು ಮಾಡಿದ ಪಾಪಕ್ಕೆ ತಂದೆಗಾಗಲಿ, ತಂದೆ ಮಾಡಿದ ಪಾಪಕ್ಕೆ ಮಕ್ಕಳಿಗಾಗಲಿ ಮರಣ ಶಿಕ್ಷೆಯಾಗಬಾರದು; ಪ್ರತಿಯೊಬ್ಬನೂ ತನ್ನ ಪಾಪದ ಫಲವನ್ನು ತಾನೇ ಅನುಭವಿಸಬೇಕು’ ಎಂಬುದಾಗಿ ಮೋಶೆಯ ಧರ್ಮಶಾಸ್ತ್ರದಲ್ಲಿರುವ ಸರ್ವೇಶ್ವರನ ಅಪ್ಪಣೆಯನ್ನು ನೆನಪುಮಾಡಿಕೊಂಡು, ಅವರ ಮಕ್ಕಳನ್ನು ಕೊಲ್ಲಿಸಲಿಲ್ಲ.


ಪ್ರಧಾನ ಯಾಜಕ ಹಿಲ್ಕೀಯನು ಲೇಖಕ ಶಾಫಾನನಿಗೆ, “ಸರ್ವೇಶ್ವರನ ಆಲಯದಲ್ಲಿ ನನಗೆ ಧರ್ಮೋಪದೇಶ ಗ್ರಂಥವು ಸಿಕ್ಕಿರುತ್ತದೆ,” ಎಂದು ಹೇಳಿ ಅದನ್ನು ಅವನ ಕೈಯಲ್ಲಿ ಕೊಟ್ಟನು; ಶಾಫಾನನು ಓದಿದನು.


ಆದರೆ, “ಮಕ್ಕಳು ಮಾಡಿದ ಪಾಪಕ್ಕೆ ತಂದೆಗಾಗಲಿ, ತಂದೆ ಮಾಡಿದ ಪಾಪದ ನಿಮಿತ್ತ ಮಕ್ಕಳಿಗಾಗಲಿ ಮರಣಶಿಕ್ಷೆಯಾಗಬಾರದು; ಪ್ರತಿಯೊಬ್ಬನೂ ತನ್ನ ಪಾಪಫಲವನ್ನು ತಾನೇ ಅನುಭವಿಸಬೇಕು,” ಎಂಬುದಾಗಿ ಮೋಶೆಯ ಧರ್ಮಶಾಸ್ತ್ರದಲ್ಲಿರುವ ಸರ್ವೇಶ್ವರನ ಆಜ್ಞೆಯನ್ನು ನೆನಪುಮಾಡಿಕೊಂಡು ಅವರ ಮಕ್ಕಳನ್ನು ಕೊಲ್ಲಿಸಲಿಲ್ಲ.


ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಕೊಡುವ ನಾಡನ್ನು ಪ್ರವೇಶಿಸುವುದಕ್ಕೆ ನೀವು ಜೋರ್ಡನ್ ನದಿಯನ್ನು ದಾಟುವಾಗ ಅಂದರೆ, ನಿಮ್ಮ ಪಿತೃಗಳ ದೇವರಾದ ಸರ್ವೇಶ್ವರ ತಾವು ವಾಗ್ದಾನ ಮಾಡಿದಂತೆ ನಿಮಗೆ ಕೊಡುವ ಹಾಲೂ ಜೇನೂ ಹರಿಯುವ ನಾಡನ್ನು ಪ್ರವೇಶಿಸುವುದಕ್ಕೆ ನೀವು ಜೋರ್ಡನ್ ನದಿಯನ್ನು ದಾಟುವಾಗ, ನೀವು ದೊಡ್ಡ ಕಲ್ಲುಗಳನ್ನು ನಿಲ್ಲಿಸಬೇಕು. ಅವುಗಳಿಗೆ ಗಿಲಾವು ಮಾಡಿಸಿ ಈ ಧರ್ಮಶಾಸ್ತ್ರದ ವಾಕ್ಯಗಳನ್ನೆಲ್ಲಾ ಅವುಗಳ ಮೇಲೆ ಬರೆಯಿಸಬೇಕು.


ನೀವು ಆ ಕಲ್ಲುಗಳ ಮೇಲೆ ಈ ಧರ್ಮಶಾಸ್ತ್ರದ ವಾಕ್ಯಗಳನ್ನೆಲ್ಲಾ ವಿರಳವಾಗಿ ಹಾಗು ಸ್ಪಷ್ಟವಾಗಿ ಬರೆಸಬೇಕು,” ಎಂದು ಆಜ್ಞಾಪಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು