Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 8:4 - ಕನ್ನಡ ಸತ್ಯವೇದವು C.L. Bible (BSI)

4 ಅವರಿಗೆ, “ನೀವು ನಗರದ ಹಿಂಭಾಗದಲ್ಲಿ ಹೊಂಚುಹಾಕಿ ಕುಳಿತಿರಬೇಕು. ನಗರದಿಂದ ಬಹುದೂರವಾಗಿರಬೇಡಿ. ಎಲ್ಲರೂ ಸಿದ್ಧವಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 “ನೀವು ಪಟ್ಟಣದ ಹಿಂಭಾಗದಲ್ಲಿ ಹೊಂಚುಹಾಕಿ ಕುಳಿತಿರಬೇಕು. ಪಟ್ಟಣಕ್ಕೆ ಬಹುದೂರವಾಗಿರಬೇಡಿರಿ; ಎಲ್ಲರೂ ಸಿದ್ಧವಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಮೂವತ್ತು ಸಾವಿರ ಯುದ್ಧವೀರರನ್ನು ಆರಿಸಿ ಅವರಿಗೆ - ನೀವು ಪಟ್ಟಣದ ಹಿಂಭಾಗದಲ್ಲಿ ಹೊಂಚುಹಾಕಿಕೊಂಡಿರ್ರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಯೆಹೋಶುವನು ಅವರಿಗೆ, “ಗಮನಕೊಟ್ಟು ಕೇಳಿರಿ. ನೀವು ನಗರದ ಹಿಂಭಾಗದ ಸ್ಥಳದಲ್ಲಿ ಅಡಗಿಕೊಂಡಿದ್ದು ಆಕ್ರಮಣಮಾಡಲು ಸಿದ್ಧರಾಗಿರಿ. ನಗರದಿಂದ ಬಹಳ ದೂರ ಹೋಗಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಅವರಿಗೆ ಆಜ್ಞಾಪಿಸಿ, “ಪಟ್ಟಣದ ಹಿಂದೆ ನೀವು ಹೊಂಚಿಕೊಂಡಿರಿ, ಪಟ್ಟಣಕ್ಕೆ ಬಹುದೂರ ಹೋಗಬೇಡಿರಿ. ನೀವೆಲ್ಲರೂ ಸಿದ್ಧವಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 8:4
14 ತಿಳಿವುಗಳ ಹೋಲಿಕೆ  

ಆಗ ಇಸ್ರಯೇಲರು ಗಿಬೆಯದ ಸುತ್ತಲೂ ಕೆಲವರನ್ನು ಹೊಂಚುಹಾಕುವುದಕ್ಕೆ ಇರಿಸಿ,


ಆದರೆ ನೀವು ಅವರ ಮಾತನ್ನು ನಂಬಬೇಡಿ. ಏಕೆಂದರೆ, ನಾಲ್ವತ್ತಕ್ಕೂ ಹೆಚ್ಚು ಮಂದಿ ಅವನಿಗಾಗಿ ಹೊಂಚುಹಾಕಿ ಕಾದುಕೊಂಡಿರುತ್ತಾರೆ. ತಾವು ಅವನನ್ನು ಕೊಲ್ಲುವ ತನಕ ಅನ್ನಪಾನವೇನೂ ಮುಟ್ಟುವುದಿಲ್ಲವೆಂದು ಶಪಥಮಾಡಿದ್ದಾರೆ. ಈಗ ಅವರು ನಿಮ್ಮ ಅನುಮತಿಯನ್ನು ಎದುರು ನೋಡುತ್ತಾ ಕಾಯುತ್ತಿದ್ದಾರೆ,” ಎಂದನು.


ಇದನ್ನು ನೋಡಿದ ನಾನು, ಶಕ್ತಿಗಿಂತ ಜ್ಞಾನವೇ ಶ್ರೇಷ್ಠ; ಆದರೆ ಜನರು ಆ ಬಡವನ ಜ್ಞಾನವನ್ನು ತಾತ್ಸಾರ ಮಾಡುತ್ತಾರೆ, ಅವನ ಮಾತುಗಳನ್ನು ಗಮನಿಸುವುದಿಲ್ಲ, ಎಂದುಕೊಂಡೆ.


ಹತ್ತು ಅಧಿಕಾರಿಗಳಿಂದ ಪಟ್ಟಣಕ್ಕೆ ಉಂಟಾಗುವ ದೃಢತೆಗಿಂತ ಜ್ಞಾನಿಗೆ ಜ್ಞಾನದಿಂದ ದೊರಕುವ ದೃಢತೆ ಹೆಚ್ಚು.


ಅವನು ಇವರೊಡನೆ ಅಮಾಲೇಕ್ಯರ ರಾಜಧಾನಿಯ ಬಳಿಗೇ ಹೋಗಿ ಅಲ್ಲಿನ ಒಂದು ತಗ್ಗಿನಲ್ಲಿ ಹೊಂಚುಹಾಕುತ್ತಿದ್ದನು.


“ಇಸ್ರಯೇಲರು ಈಜಿಪ್ಟಿನಿಂದ ಬರುತ್ತಿರುವಾಗ ದಾರಿಯಲ್ಲಿ ಅಮಾಲೇಕ್ಯರು ಅವರಿಗೆ ವಿರೋಧವಾಗಿ ನಿಂತು ತೊಂದರೆಪಡಿಸಿದರು. ಆದ್ದರಿಂದ ನಾನು ಅವರಿಗೆ ಮುಯ್ಯಿತೀರಿಸುವೆನು.


ತಾವು ಸೋತುಹೋದೆವೆಂಬುದು ಬೆನ್ಯಾಮೀನ್ಯರಿಗೆ ಆಗ ತಿಳಿಯಿತು. (ಇಸ್ರಯೇಲರಿಗೆ ತಾವು ಗಿಬೆಯದ ಸಮೀಪದಲ್ಲಿ ಹೊಂಚುಹಾಕುವುದಕ್ಕಾಗಿ ಇಟ್ಟ ಜನರಲ್ಲಿ ಭರವಸೆಯಿತ್ತು. ಆದುದರಿಂದ ತಮ್ಮ ಸ್ಥಳವನ್ನು ಬಿಟ್ಟು ಬೆನ್ಯಾಮೀನ್ಯರ ಮುಂದೆ ಓಡಿಹೋದರು.


ತಾವು ಮೊದಲು ನಿಂತ ಸ್ಥಳದಿಂದ ಓಡತೊಡಗಿದರು. ಬಾಳ್ ತಾಮಾರಿಗೆ ಮುಟ್ಟಿದ ಕೂಡಲೆ ಅಲ್ಲಿ ನಿಂತು ಮತ್ತೆ ಯುದ್ಧವನ್ನು ಪ್ರಾರಂಭಿಸಿದರು. ಅಷ್ಟರಲ್ಲಿ ಹೊಂಚುಹಾಕುತ್ತಿದ್ದವರು ತಾವು ಅಡಗಿಕೊಂಡಿದ್ದ ಗಿಬೆಯದ ಮೈದಾನಿನಿಂದ ಎದ್ದು ಪಟ್ಟಣದ ಮುಂದೆ ಬಂದರು;


ಶೆಕೆಮಿನವರು ಅಬೀಮೆಲೆಕನಿಗೆ ವಿರೋಧವಾಗಿ ಪರ್ವತಶಿಖರಗಳಲ್ಲಿ ಹೊಂಚುಗಾರರನ್ನಿಟ್ಟರು. ಇವರು ಆ ದಾರಿಗಳಲ್ಲಿ ಸಂಚರಿಸುವ ಪ್ರಯಾಣಿಕರನ್ನು ಸುಲಿಗೆಮಾಡುತ್ತಿದ್ದರು. ಈ ವರ್ತಮಾನ ಅಬೀಮೆಲೆಕನಿಗೆ ಮುಟ್ಟಿತು.


ಆಯಿ ನಗರದವರು ಊರಿನಲ್ಲಿದ್ದ ತಮ್ಮ ಎಲ್ಲ ಜನರನ್ನು ಕರೆದುಕೊಂಡು ಯೆಹೋಶುವನನ್ನು ಹಿಂದಟ್ಟುತ್ತಾ ನಗರದಿಂದ ದೂರದೂರ ಆದರು.


ಅಂತೆಯೇ ಯೆಹೋಶುವನು ಯೋಧರೆಲ್ಲರ ಸಹಿತವಾಗಿ ಆಯಿಗೆ ಹೊರಡಲು ಸಿದ್ಧನಾದನು. ಮೂವತ್ತು ಸಾವಿರ ಯುದ್ಧವೀರರನ್ನು ಆರಿಸಿಕೊಂಡನು.


ಅರಸನು ರಾತ್ರಿಯಲ್ಲೇ ಎದ್ದು ತನ್ನ ಪರಿವಾರದವರಿಗೆ, “ಸಿರಿಯಾದವರ ಹಂಚಿಕೆಯನ್ನು ಹೇಳುತ್ತೇನೆ ಕೇಳಿ; ನಾವು ಹಸಿವೆಯಿಂದ ಸಾಯುವವರಾಗಿದ್ದೇವೆ ಎಂಬುದನ್ನು ಅವರು ಬಲ್ಲರು. ಆದುದರಿಂದ ಪಾಳೆಯವನ್ನು ಬಿಟ್ಟುಹೋಗಿ ಅಡವಿಯಲ್ಲಿ ಅಡಗಿಕೊಂಡಿದ್ದಾರೆ; ನಾವು ಪಟ್ಟಣದಿಂದ ಹೊರಗೆ ಹೋದ ಕೂಡಲೆ ನಮ್ಮನ್ನು ಸಜೀವಿಗಳನ್ನಾಗಿಯೇ ಹಿಡಿದು ಪಟ್ಟಣವನ್ನು ಪ್ರವೇಶಿಸಬೇಕೆಂದಿದ್ದಾರೆ,” ಎಂದನು.


ಯಾರೊಬ್ಬಾಮನು ಯೆಹೂದ್ಯರ ಹಿಂದೆ ಹೊಂಚುಹಾಕುವುದಕ್ಕಾಗಿ ತನ್ನ ಸೈನ್ಯದ ಒಂದು ಗುಂಪನ್ನು ಕಳುಹಿಸಿದನು. ಹೀಗೆ ಶತ್ರುಸೈನ್ಯ ಯೆಹೂದ್ಯರ ಮುಂದೆಯೂ ಹೊಂಚುಹಾಕುವವರು ಅವರ ಹಿಂದೆಯೂ ಇದ್ದರು.


ಆದುದರಿಂದ ನೀನು ಈ ರಾತ್ರಿಯಲ್ಲೇ ಸೈನ್ಯವನ್ನು ತೆಗೆದುಕೊಂಡು ಬಂದು ಹೊಲಗಳಲ್ಲಿ ಹೊಂಚುಹಾಕಿಕೊಂಡಿರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು