Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 9:11 - ಕನ್ನಡ ಸತ್ಯವೇದವು C.L. Bible (BSI)

11 ಅವರು ನಮ್ಮನ್ನು ಇಲ್ಲಿಗೆ ಕಳಿಸುತ್ತಾ, ‘ನೀವು ಪ್ರಯಾಣಕ್ಕಾಗಿ ಬುತ್ತಿ ಕಟ್ಟಿಕೊಂಡು ಹೋಗಿ ಇಸ್ರಯೇಲರನ್ನು ಎದುರುಗೊಳ್ಳಿ - ನಾವು ನಿಮ್ಮ ಸೇವಕರು, ನೀವು ನಮ್ಮ ಸಂಗಡ ಒಪ್ಪಂದ ಮಾಡಿಕೊಳ್ಳಿ ಎಂದು ವಿನಂತಿಸಿ,’ ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ‘ನೀವು ಪ್ರಯಾಣಕ್ಕೋಸ್ಕರ ಬುತ್ತೀ ಕಟ್ಟಿಕೊಂಡು ಹೋಗಿ ಇಸ್ರಾಯೇಲ್ಯರನ್ನು ಎದುರುಗೊಂಡು “ನಾವು ನಿಮ್ಮ ಸೇವಕರು”, ನೀವು ನಮ್ಮ ಸಂಗಡ ಒಪ್ಪಂದ ಮಾಡಿಕೊಳ್ಳಬೇಕು ಎಂಬುದಾಗಿ ಅವರನ್ನು ಬೇಡಿಕೊಳ್ಳಿರಿ ಎಂದು ಹೇಳಿ ನಮ್ಮನ್ನು ಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ನೀವು ಪ್ರಯಾಣಕ್ಕೋಸ್ಕರ ಬುತ್ತೀ ಕಟ್ಟಿಕೊಂಡು ಹೋಗಿ ಇಸ್ರಾಯೇಲ್ಯರನ್ನು ಎದುರುಗೊಂಡು - ನಾವು ನಿಮ್ಮ ಸೇವಕರು; ನೀವು ನಮ್ಮ ಸಂಗಡ ಒಡಂಬಡಿಕೆ ಮಾಡಿಕೊಳ್ಳಿರಿ ಎಂಬದಾಗಿ ಅವರನ್ನು ಬೇಡಿಕೊಳ್ಳಿರಿ ಎಂದು ಹೇಳಿ ನಮ್ಮನ್ನು ಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಆದ್ದರಿಂದ ನಮ್ಮ ಹಿರಿಯರು ಮತ್ತು ನಮ್ಮ ಜನರು ನಮಗೆ, ‘ನಿಮ್ಮ ಪ್ರಯಾಣಕ್ಕೆ ಸಾಕಷ್ಟು ಆಹಾರವನ್ನು ತೆಗೆದುಕೊಂಡು ಹೋಗಿ ಇಸ್ರೇಲರನ್ನು ಭೇಟಿಮಾಡಿ, ನಾವು ನಿಮ್ಮ ಸೇವಕರು. ನಮ್ಮ ಜೊತೆ ಶಾಂತಿ ಒಪ್ಪಂದವನ್ನು ಮಾಡಿಕೊಳ್ಳಿರಿ ಎಂದು ಅವರಿಗೆ ತಿಳಿಸಿ’ ಎಂಬುದಾಗಿ ಹೇಳಿ ನಮ್ಮನ್ನು ಕಳುಹಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ನಮ್ಮ ಹಿರಿಯರೂ, ನಮ್ಮ ದೇಶವಾಸಿಗಳಾದ ಜನರೆಲ್ಲರೂ ನಮಗೆ ಹೇಳಿದ್ದೇನೆಂದರೆ, ‘ನೀವು ಪ್ರಯಾಣಕ್ಕಾಗಿ ರೊಟ್ಟಿಯನ್ನು ತೆಗೆದುಕೊಂಡು ಅವರೆದುರಿಗೆ ಹೋಗಿ, ಅವರಿಗೆ ನಾವು ನಿಮ್ಮ ಸೇವಕರು ಆದಕಾರಣ ಈಗ ನಮ್ಮ ಸಂಗಡ ಒಡಂಬಡಿಕೆ ಮಾಡಿಕೊಳ್ಳಿರಿ ಎಂದು ಹೇಳಿರಿ,’ ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 9:11
9 ತಿಳಿವುಗಳ ಹೋಲಿಕೆ  

ರಾಜನಿರ್ಣಯ ಶಾಸನಗಳು ಪ್ರಕಟವಾದ ಸಂಸ್ಥಾನಗಳಲ್ಲೂ ನಗರಗಳಲ್ಲೂ ವಾಸಿಸುತ್ತಿದ್ದ ಯೆಹೂದ್ಯರೆಲ್ಲರಿಗೆ ಶುಭದಿನ ಉದಯವಾಯಿತು. ಅವರು ಅದನ್ನು ಸಂತೋಷದ ಹಾಗೂ ಸಂಭ್ರಮದ ದಿನವನ್ನಾಗಿ ಆಚರಿಸಿದರು. ಜನರಲ್ಲಿ ಅನೇಕರು ಯೆಹೂದ್ಯರಿಗೆ ಭಯಪಟ್ಟು ಅವರ ಮತಕ್ಕೆ ಸೇರಿದರು.


ಅವರು ಯೆಹೋಶುವನಿಗೆ, “ನಾವು ನಿಮ್ಮ ಸೇವಕರು” ಎಂದರು. “ನೀವು ಯಾರು? ಎಲ್ಲಿಯವರು?” ಎಂದು ಆತ ವಿಚಾರಿಸಲು


ಕಳುಹಿಸುವಾಗ ಅವರಿಗೆ ಇಂತೆಂದರು, “ಪ್ರಯಾಣಕ್ಕೆಂದು ಏನನ್ನೂ ತೆಗೆದುಕೊಳ್ಳಬೇಡಿ; ದಂಡ, ಜೋಳಿಗೆ, ಬುತ್ತಿ ಅಥವಾ ಹಣ ಯಾವುದೂ ಬೇಡ. ಎರಡು ಅಂಗಿಗಳೂ ಬೇಕಾಗಿಲ್ಲ.


“ನೀವು ಪಾಳೆಯದ ಎಲ್ಲೆಡೆಗೆ ಹೋಗಿ ಜನರಿಗೆ, ‘ನೀವು ಇನ್ನು ಮೂರು ದಿನಗಳಲ್ಲಿ ಈ ಜೋರ್ಡನ್ ನದಿಯನ್ನು ದಾಟಿ ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಸ್ವಂತ ಸೊತ್ತಾಗಿ ಕೊಡುವ ನಾಡನ್ನು ವಶಪಡಿಸಿಕೊಳ್ಳಲು ಹೋಗಬೇಕು. ಆದುದರಿಂದ ನಿಮಗೆ ಬೇಕಾದ ಆಹಾರ ಪದಾರ್ಥಗಳನ್ನು ಸಿದ್ಧಮಾಡಿಕೊಳ್ಳಿ’ ಎಂದು ತಿಳಿಸಿರಿ,” ಎಂದನು.


ಅದೂ ಅಲ್ಲದೆ ಎರಡರಷ್ಟು ಹಣವನ್ನು ಕೈಯಲ್ಲಿ ತೆಗೆದುಕೊಂಡು ಹೋಗಿ; ಅವರು ನಿಮ್ಮ ಚೀಲಗಳ ಬಾಯಲ್ಲಿ ಹಾಕಿ ಹಿಂದಕ್ಕೆ ಕಳಿಸಿದ ಹಣವನ್ನು ತೆಗೆದುಕೊಂಡು ಹೋಗಿ; ಬಹುಶಃ ಅವರಿಗೆ ತಿಳಿಯದೆ ಅದು ನಿಮ್ಮ ಕೈಗೆ ಬಂದಿರಬಹುದು.


ಹೆಷ್ಬೋನಿನ ಅರಸ ಸೀಹೋನ್ ಮತ್ತು ಅಷ್ಟರೋತಿನಲ್ಲಿ ವಾಸವಾಗಿದ್ದ ಬಾಷಾನಿನ ಅರಸ ಓಗ್ ಎಂಬ ಈ ಇಬ್ಬರು ಅಮೋರಿಯರಿಗೆ ಆ ದೇವರು ಮಾಡಿದ್ದೆಲ್ಲವನ್ನು ಕೇಳಿದ್ದಾರೆ.


ನಾವು ನಿಮ್ಮನ್ನು ಭೇಟಿಯಾಗುವುದಕ್ಕಾಗಿ ಮನೆಬಿಟ್ಟು ಹೊರಟಾಗ ಪ್ರಯಾಣಕ್ಕೆಂದು ತೆಗೆದುಕೊಂಡ ಈ ರೊಟ್ಟಿ ಬಿಸಿಯಾಗಿತ್ತು. ಈಗ ಒಣಗಿ ಚೂರು ಚೂರಾಗಿದೆ ನೋಡಿ.


ಅನಂತರ ರಾಜಗೃಹಾಧಿಪತಿ, ಪುರಾಧಿಕಾರಿ, ಹಿರಿಯರು, ರಾಜಪುತ್ರಪಾಲಕರು ಇವರು ಎಲ್ಲರು ಕೂಡಿ ಯೇಹುವಿಗೆ, “ನಾವು ನಿಮ್ಮ ಆಜ್ಞಾಧಾರಕರಾದ ಸೇವಕರು, ನಾವಾಗಿ ನಮಗೊಬ್ಬ ಅರಸನನ್ನು ನೇಮಿಸಿಕೊಳ್ಳುವುದಿಲ್ಲ; ನಿಮ್ಮ ಚಿತ್ತವೇ ನೆರವೇರಲಿ,” ಎಂದು ಹೇಳಿಕಳುಹಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು