Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 9:24 - ಕನ್ನಡ ಸತ್ಯವೇದವು C.L. Bible (BSI)

24 ಅವರು ಯೆಹೋಶುವನಿಗೆ, “ನಿಮ್ಮ ದೇವರಾದ ಸರ್ವೇಶ್ವರ ತಮ್ಮ ದಾಸ ಮೋಶೆಗೆ, ‘ನಾನು ನಿಮಗೆ ಈ ದೇಶವನ್ನೆಲ್ಲ ಕೊಡುವಾಗ ನೀವು ಇದರ ನಿವಾಸಿಗಳನ್ನೆಲ್ಲಾ ಸಂಹರಿಸಬೇಕು’ ಎಂದು ಆಜ್ಞಾಪಿಸಿದ್ದಾರೆಂದು ಕೇಳಿ ನಮ್ಮ ಪ್ರಾಣ ತೆಗೆಯುವಿರೆಂದು ಹೆದರಿ ಹೀಗೆ ಮಾಡಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಅವರು ಯೆಹೋಶುವನಿಗೆ “ನಿನ್ನ ದೇವರಾದ ಯೆಹೋವನು ತನ್ನ ಸೇವಕನಾದ ಮೋಶೆಗೆ ‘ನಾನು ನಿಮಗೆ ಈ ದೇಶವನ್ನೆಲ್ಲಾ ಕೊಡುವಾಗ ನೀವು ಇದರ ಎಲ್ಲಾ ನಿವಾಸಿಗಳನ್ನು ಸಂಹರಿಸಿ ಬಿಡಬೇಕೆಂದು’ ಆಜ್ಞಾಪಿಸಿದ್ದನ್ನು ಕೇಳಿ ನಮ್ಮ ಪ್ರಾಣ ತೆಗೆಯುವಿರೆಂದು ಹೆದರಿ ಹೀಗೆ ಮಾಡಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಅವರು ಯೆಹೋಶುವನಿಗೆ - ನಿನ್ನ ದೇವರಾದ ಯೆಹೋವನು ತನ್ನ ಸೇವಕನಾದ ಮೋಶೆಗೆ - ನಾನು ನಿಮಗೆ ಈ ದೇಶವನ್ನೆಲ್ಲಾ ಕೊಡುವಾಗ ನೀವು ಇದರ ಎಲ್ಲಾ ನಿವಾಸಿಗಳನ್ನು ಸಂಹರಿಸಿಬಿಡಬೇಕೆಂದು ಆಜ್ಞಾಪಿಸಿದ್ದನ್ನು ಕೇಳಿ ನಮ್ಮ ಪ್ರಾಣ ತೆಗೆಯುವಿರೆಂದು ಹೆದರಿ ಹೀಗೆ ಮಾಡಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಗಿಬ್ಯೋನ್ಯರು, “ನೀವು ನಮ್ಮನ್ನು ಕೊಲ್ಲಬಹುದೆಂಬ ಭಯದಿಂದ ನಾವು ನಿಮಗೆ ಸುಳ್ಳು ಹೇಳಿದೆವು; ದೇವರು ತನ್ನ ಸೇವಕನಾದ ಮೋಶೆಗೆ ಈ ಎಲ್ಲ ಭೂಪ್ರದೇಶವನ್ನು ನಿಮಗೆ ಕೊಡಬೇಕೆಂದು ಆಜ್ಞಾಪಿಸಿರುವುದನ್ನೂ ಈ ಪ್ರದೇಶದ ಎಲ್ಲ ಜನರನ್ನು ಕೊಂದುಬಿಡಬೇಕೆಂದು ನಿಮಗೆ ಹೇಳಿರುವನೆಂದೂ ನಾವು ಕೇಳಿದ್ದೆವು. ಆದ್ದರಿಂದ ನಾವು ನಿಮಗೆ ಸುಳ್ಳು ಹೇಳಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಅದಕ್ಕವರು ಯೆಹೋಶುವನಿಗೆ, “ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ದೇಶವನ್ನೆಲ್ಲಾ ಒಪ್ಪಿಸಿಕೊಡುವುದಕ್ಕೂ, ದೇಶದ ನಿವಾಸಿಗಳನ್ನೆಲ್ಲಾ ನಿಮ್ಮ ಮುಂದೆ ನಾಶಮಾಡುವುದಕ್ಕೂ ತಮ್ಮ ಸೇವಕ ಮೋಶೆಗೆ ಆಜ್ಞಾಪಿಸಿದ್ದಾರೆಂದು, ನಿಮ್ಮ ಸೇವಕರಾದ ನಾವು ಕೇಳಿದೆವು. ಆದ್ದರಿಂದ ನಾವು ನಮ್ಮ ಪ್ರಾಣಕ್ಕಾಗಿ ಬಹಳ ಭಯಪಟ್ಟು ಈ ಕಾರ್ಯವನ್ನು ಮಾಡಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 9:24
14 ತಿಳಿವುಗಳ ಹೋಲಿಕೆ  

ದೇಹವನ್ನು ಕೊಂದು ಹಾಕುವವರಿಗೆ ಭಯಪಡಬೇಡಿ; ಏಕೆಂದರೆ, ಅವರಿಂದ ಆತ್ಮವನ್ನು ಕೊಲ್ಲಲು ಆಗದು. ಆದರೆ ದೇಹಾತ್ಮಗಳೆರಡನ್ನೂ ನರಕದಲ್ಲಿ ನಾಶಮಾಡಬಲ್ಲ ದೇವರಿಗೆ ಭಯಪಡಿ.


ಅದಕ್ಕೆ ಸೈತಾನನು, “ಚರ್ಮಕ್ಕೆ ಚರ್ಮ, ಎಂದ ಹಾಗೆ ಒಬ್ಬ ಮನುಷ್ಯ ಪ್ರಾಣ ಉಳಿಸಿಕೊಳ್ಳಲು ತನ್ನ ಸರ್ವಸ್ವವನ್ನೂ ತೊರೆದುಬಿಡುತ್ತಾನೆ.


ಅವರು, “ನಿಮ್ಮ ಸೇವಕರಾದ ನಾವು ನಿಮ್ಮ ದೇವರಾದ ಸರ್ವೇಶ್ವರನ ನಾಮ ಮಹತ್ತನ್ನು ಕೇಳಿ ಬಹುದೂರ ದೇಶದಿಂದ ಬಂದಿದ್ದೇವೆ. ಆ ನಿಮ್ಮ ದೇವರು ಈಜಿಪ್ಟಿನಲ್ಲಿ ನಡೆಸಿದ ಮಹತ್ಕಾರ್ಯಗಳ ಸುದ್ದಿಯನ್ನು ನಮ್ಮ ಹಿರಿಯರೂ ದೇಶನಿವಾಸಿಗಳೂ ಕೇಳಿದ್ದಾರೆ.


“ಸರ್ವೇಶ್ವರ ಈ ನಾಡನ್ನು ನಿಮಗೆ ಕೊಟ್ಟಿದ್ದಾರೆಂದು ನಾನು ಬಲ್ಲೆ; ನಿಮ್ಮ ವಿಷಯದಲ್ಲಿ ನಮಗೆ ಮಹಾಭೀತಿ ಉಂಟಾಗಿದೆ. ನಾಡಿನ ನಿವಾಸಿಗಳೆಲ್ಲರೂ ಕಂಗೆಟ್ಟು ಹೋಗಿದ್ದಾರೆ.


ಇದನ್ನೆಲ್ಲಾ ಕೇಳಿ ನಮ್ಮ ಎದೆ ಒಡೆದುಹೋಗಿದೆ. ನಿಮ್ಮನ್ನು ಎದುರಿಸುವ ಧೈರ್ಯ ಯಾರಿಗೂ ಇಲ್ಲ. ನಿಮ್ಮ ದೇವರಾದ ಸರ್ವೇಶ್ವರರೊಬ್ಬರೇ ಪರಲೋಕದಲ್ಲೂ ಭೂಲೋಕದಲ್ಲೂ ದೇವರು.


ಅಲ್ಲಿದ್ದ ಗಂಡಸರು, ಹೆಂಗಸರು, ಯುವಕರು, ಮುದುಕರು, ದನ ಕುರಿ, ಕತ್ತೆ ಇವುಗಳನ್ನೆಲ್ಲಾ ನಿಶ್ಯೇಷವಾಗಿ ಕತ್ತಿಯಿಂದ ಸಂಹರಿಸಿಬಿಟ್ಟರು.


ಆಯಿ ನಗರಕ್ಕಿಂತ ದೊಡ್ಡದೂ ಒಂದು ರಾಜಧಾನಿಯಷ್ಟು ಶ್ರೇಷ್ಠವೂ ಆಗಿದ್ದ ಗಿಬ್ಯೋನ್ ನಗರದಲ್ಲಿ ಇರುವ ಜನರೆಲ್ಲರು ಯುದ್ಧವೀರರಾಗಿದ್ದರೂ ಇಸ್ರಯೇಲರ ನಡುವೆ ಜೀವದಿಂದುಳಿಯಲು ಅವರ ಸಂಗಡ ಸಂಧಾನ ಮಾಡಿಕೊಂಡಿದ್ದಾರೆ ಎಂಬುದನ್ನು ಕೂಡ ಕೇಳಿ ಅವನು ಬಹಳವಾಗಿ ಭಯಪಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು