Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 9:25 - ಕನ್ನಡ ಸತ್ಯವೇದವು C.L. Bible (BSI)

25 ಇಗೋ, ಈಗ ನಾವು ನಿಮ್ಮ ಕೈಯಲ್ಲಿ ಇದ್ದೇವೆ. ನಿಮಗೆ ಯಾವುದು ಒಳ್ಳೆಯದು, ನ್ಯಾಯವಾದುದು ಎಂದು ತೋರುತ್ತದೋ ಅದರಂತೆ ನಮಗೆ ಮಾಡಿ,” ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಇಗೋ, ಈಗ ನಾವು ನಿನ್ನ ಕೈಯಲ್ಲಿದ್ದೇವೆ; ನಿನಗೆ ಯಾವುದು ಒಳ್ಳೆಯದು, ನ್ಯಾಯವಾದುದ್ದು ಎಂದು ತೋರುತ್ತದೋ ಅದರಂತೆ ನಮಗೆ ಮಾಡು” ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಇಗೋ, ಈಗ ನಾವು ನಿನ್ನ ಕೈಯಲ್ಲಿರುತ್ತೇವೆ; ನಿನಗೆ ಒಳ್ಳೇದೆಂದೂ ನ್ಯಾಯವೆಂದೂ ತೋರುವದನ್ನು ನಮಗೆ ಮಾಡು ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ನಾವು ಈಗ ನಿಮ್ಮ ಸೇವಕರು. ನಿಮಗೆ ಸರಿ ಎನಿಸಿದ್ದನ್ನು ನೀವು ಮಾಡಬಹುದು” ಎಂದು ಉತ್ತರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಇಗೋ, ಈಗಲೂ ನಾವು ನಿನ್ನ ಕೈಯಲ್ಲಿಯೇ ಇದ್ದೇವೆ. ನಿನ್ನ ದೃಷ್ಟಿಗೆ ಒಳ್ಳೆಯದಾಗಿಯೂ, ಸರಿಯಾಗಿಯೂ ತೋಚುವ ಹಾಗೆ ನಮಗೆ ಮಾಡು,” ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 9:25
12 ತಿಳಿವುಗಳ ಹೋಲಿಕೆ  

ಅದಕ್ಕೆ ಅಬ್ರಾಮನು, “ನಿನ್ನ ದಾಸಿ ನಿನ್ನ ಕೈಯಲ್ಲೇ ಇದ್ದಾಳೆ. ನಿನಗಿಷ್ಟ ಬಂದಂತೆ ಮಾಡು,” ಎಂದುಬಿಟ್ಟನು. ಬಳಿಕ ಸಾರಯಳು ಕೊಡುತ್ತಿದ್ದ ಕಿರುಕುಳವನ್ನು ತಾಳಲಾರದೆ ಹಾಗರಳು ಓಡಿಹೋದಳು.


ನಾನೋ ನಿಮ್ಮ ಕೈಯಲ್ಲಿದ್ದೇನೆ. ನಿಮಗೆ ಯಾವುದು ಒಳ್ಳೆಯದು, ಯಾವುದು ನ್ಯಾಯವಾದುದು ಎಂದು ತೋರುತ್ತದೆಯೋ ಅದನ್ನು ನನಗೆ ಮಾಡಿ.


ಇಸ್ರಯೇಲರು ಮರಳಿ ಸರ್ವೇಶ್ವರನಿಗೆ, “ಪಾಪ ಮಾಡಿದ್ದೇವೆ; ನಿಮಗೆ ಸರಿ ತೋರಿದಂತೆ ನಮಗೆ ಮಾಡಿ; ಆದರೆ ಈ ಸಾರಿ ಹೇಗೂ ನಮ್ಮನ್ನು ರಕ್ಷಿಸಬೇಕು,” ಎಂದು ಮೊರೆಯಿಟ್ಟರು. ಅನ್ಯದೇವತೆಗಳನ್ನು ಹೊರಗೆ ಹಾಕಿ ಸರ್ವೇಶ್ವರನನ್ನು ಪೂಜಿಸತೊಡಗಿದರು.


ಹೌದು, ಪಿತನೇ, ಇದೇ ನಿಮ್ಮ ಸುಪ್ರೀತ ಸಂಕಲ್ಪ.


ಅದಕ್ಕೆ ಅರಸ ಚಿದ್ಕೀಯನು, “ಇಗೋ, ಯೆರೆಮೀಯನು ನಿಮ್ಮ ಕೈಯಲ್ಲಿದ್ದಾನೆ. ಅರಸನು ನಿಮಗೆ ಅಡ್ಡಬಂದು ಏನೂ ಮಾಡಬಲ್ಲವನಲ್ಲ,” ಎಂದನು.


“ನಾ ರೋಷಗೊಂಡು ನನ್ನ ಜನರನ್ನೇ ನಿನ್ನ ಕೈವಶಮಾಡಿದೆ ನನಗೆ ಸ್ವಂತವಾದವರನ್ನೇ ಈ ಪರಿ ಹೊಲೆಗೆಡಿಸಿದೆ. ನೀನಾದರೋ ಕರುಣೆ ತೋರಿಸದೆಹೋದೆ ಮುದುಕರ ಮೇಲೂ ತೂಕದ ನೊಗವನು ಹೊರಿಸಿದೆ.


ಅದಕ್ಕೆ ದಾವೀದನು, “ನಾನು ಬಲು ಇಕ್ಕಟ್ಟಿಗೆ ಸಿಕ್ಕಿಕೊಂಡಿದ್ದೇನೆ. ಸರ್ವೇಶ್ವರನ ಕೈಯಲ್ಲೆ ಬೀಳುತ್ತೇನೆ; ಅವರು ಕೃಪಾಪೂರ್ಣರು. ಮನುಷ್ಯರ ಕೈಯಲ್ಲಿ ಬೀಳಲೊಲ್ಲೆ,” ಎಂದು ಹೇಳಿ ವ್ಯಾಧಿಯನ್ನು ಆಯ್ದುಕೊಂಡನು.


ಸಮುವೇಲನು ಮುಚ್ಚುಮರೆಯಿಲ್ಲದೆ ಎಲ್ಲವನ್ನೂ ತಿಳಿಸಿದನು. ಏಲಿ ಅದನ್ನು ಕೇಳಿ, “ಅವರೇ ಸರ್ವೇಶ್ವರ. ತಮಗೆ ಸರಿಕಂಡಂತೆ ಮಾಡಲಿ,” ಎಂದನು.


ಅನಂತರ ಅವನು ಸುಖೋತಿನವರ ಬಳಿಗೆ ಹೋಗಿ ಅವರಿಗೆ, “’ದಣಿದಿರುವ ನಿನ್ನ ಸೈನಿಕರಿಗಾಗಿ ನಾವು ರೊಟ್ಟಿ ಕೊಡುವುದಕ್ಕೆ ಜೆಬಹ ಮತ್ತು ಚಲ್ಮುನ್ನ ಎಂಬವರನ್ನು ಕೈಕಟ್ಟಿ ಸ್ವಾಧೀನ ಮಾಡಿಕೊಂಡಿದ್ದೀಯೋ?,’ ಎಂದು ನನ್ನನ್ನು ನಿಂದಿಸಿದಿರಲ್ಲವೆ;


ಯೆಹೋಶುವನು ತಾನು ಮೊದಲೇ ಹೇಳಿದಂತೆ ಮಾಡಿದನು. ಅವರನ್ನು ಇಸ್ರಯೇಲರ ಕೈಯಿಂದ ಹತರಾಗದಂತೆ ತಪ್ಪಿಸಿದನು.


‘ನಿನ್ನಲ್ಲಿ ನನಗೆ ಇಷ್ಟವಿಲ್ಲ,’ ಎಂದು ತೋರಿದರೆ ತಮಗೆ ಸರಿಕಂಡಂತೆ ಮಾಡಲಿ. ಅವರ ಚಿತ್ತದಂತೆ ಆಗಲಿ,” ಎಂದನು.


ಅನಂತರ ರಾಜಗೃಹಾಧಿಪತಿ, ಪುರಾಧಿಕಾರಿ, ಹಿರಿಯರು, ರಾಜಪುತ್ರಪಾಲಕರು ಇವರು ಎಲ್ಲರು ಕೂಡಿ ಯೇಹುವಿಗೆ, “ನಾವು ನಿಮ್ಮ ಆಜ್ಞಾಧಾರಕರಾದ ಸೇವಕರು, ನಾವಾಗಿ ನಮಗೊಬ್ಬ ಅರಸನನ್ನು ನೇಮಿಸಿಕೊಳ್ಳುವುದಿಲ್ಲ; ನಿಮ್ಮ ಚಿತ್ತವೇ ನೆರವೇರಲಿ,” ಎಂದು ಹೇಳಿಕಳುಹಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು