Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 9:27 - ಕನ್ನಡ ಸತ್ಯವೇದವು C.L. Bible (BSI)

27 ಸಭೆಗೂ ಸರ್ವೇಶ್ವರ ಆಯ್ದುಕೊಂಡ ಸ್ಥಳದಲ್ಲಿ ಕಟ್ಟಲಾಗುವ ಬಲಿಪೀಠಕ್ಕೂ ಕಟ್ಟಿಗೆ ಕಡಿಯುವವರನ್ನಾಗಿ ಹಾಗೂ ನೀರು ತರುವವರನ್ನಾಗಿ ನೇಮಿಸಿದನು. ಅವರು ಇಂದಿನವರೆಗೂ ಅದೇ ಊಳಿಗದಲ್ಲಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಇಸ್ರಾಯೇಲ್ಯರಿಗಾಗಿ ಯೆಹೋವನು ಆರಿಸಿಕೊಂಡ ಸ್ಥಳದಲ್ಲಿ ಕಟ್ಟಲಾಗುವ ಆತನ ಯಜ್ಞವೇದಿಗೂ ಕಟ್ಟಿಗೆ ಕಡಿಯುವವರನ್ನಾಗಿ ಹಾಗೂ ನೀರು ಹೊರುವವರನ್ನಾಗಿ ಅವರನ್ನು ನೇಮಿಸಿದನು. ಅವರು ಇಂದಿನವರೆಗೂ ಅದೇ ಕೆಲಸವನ್ನು ಮಾಡಿಕೊಂಡು ಇಸ್ರಾಯೇಲ್ಯರೊಂದಿಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಸಮೂಹಕ್ಕೋಸ್ಕರವೂ ಯೆಹೋವನು ಆದುಕೊಳ್ಳುವ ಸ್ಥಳದಲ್ಲಿ ಆತನ ಯಜ್ಞವೇದಿಗೋಸ್ಕರವೂ ಕಟ್ಟಿಗೆ ಒಡೆಯುವವರನ್ನಾಗಿಯೂ ನೀರು ತರುವವರನ್ನಾಗಿಯೂ ನೇವಿುಸಿದನು. ಅವರು ಇಂದಿನವರೆಗೂ ಅದೇ ಕೆಲಸ ಮಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಯೆಹೋಶುವನು ಗಿಬ್ಯೋನಿನ ಜನರನ್ನು ಇಸ್ರೇಲರ ಸೇವಕರನ್ನಾಗಿ ಮಾಡಿಕೊಂಡನು. ತನ್ನ ನಿವಾಸಕ್ಕಾಗಿ ಯೆಹೋವನು ಆರಿಸಿಕೊಳ್ಳುವ ಸ್ಥಳಗಳಲ್ಲಿ ಅವರು ಇಸ್ರೇಲರಿಗಾಗಿಯೂ ಯೆಹೋವನ ಯಜ್ಞವೇದಿಕೆಗಾಗಿಯೂ ಮರವನ್ನು ಕಡಿಯುತ್ತಿದ್ದರು ಮತ್ತು ನೀರನ್ನು ಹೊರುತ್ತಿದ್ದರು. ಆ ಜನರು ಇಂದಿಗೂ ಗುಲಾಮರಾಗಿಯೇ ಇದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಯೆಹೋಶುವನು ಆ ದಿನ ಇರುವ ಹಾಗೆ ಗಿಬ್ಯೋನಿನವರ ಸಮೂಹಕ್ಕೂ ಯೆಹೋವ ದೇವರು ಆಯ್ದುಕೊಳ್ಳುವ ಸ್ಥಳದಲ್ಲಿರುವ ಅವರ ಬಲಿಪೀಠಕ್ಕೂ ಕಟ್ಟಿಗೆ ಕಡಿಯುವವರಾಗಿಯೂ ನೀರು ತರುವವರಾಗಿಯೂ ನೇಮಿಸಿದನು. ಅವರು ಇಂದಿನವರೆಗೂ ಅದೇ ಕೆಲಸ ಮಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 9:27
9 ತಿಳಿವುಗಳ ಹೋಲಿಕೆ  

ನಿಮ್ಮ ದೇವರಾದ ಸರ್ವೇಶ್ವರ ತಮ್ಮ ಹೆಸರನ್ನು ಸ್ಥಾಪಿಸಿಕೊಳ್ಳಲು ಹಾಗು ತಾವು ವಾಸಮಾಡಲು ನಿಮ್ಮ ಎಲ್ಲಾ ಕುಲಗಳಿಂದ ಆರಿಸಿಕೊಳ್ಳುವ ಸ್ಥಳದಲ್ಲೇ ನೀವು ಅವರ ದರ್ಶನಕ್ಕಾಗಿ ಸಭೆಸೇರಬೇಕು.


ಆದರೆ ನಮ್ಮ ಜನರಿಗೆ ಅವರು ಕಟ್ಟಿಗೆ ಕಡಿಯುವವರೂ ನೀರು ತರುವವರೂ ಆಗಿರಲಿ,” ಎಂದು ಹೇಳಿದರು. ನಾಯಕರ ಮಾತಿನಂತೆಯೇ ಆಯಿತು.


ಯೆಹೋಶುವನು ತಾನು ಮೊದಲೇ ಹೇಳಿದಂತೆ ಮಾಡಿದನು. ಅವರನ್ನು ಇಸ್ರಯೇಲರ ಕೈಯಿಂದ ಹತರಾಗದಂತೆ ತಪ್ಪಿಸಿದನು.


ಯುದ್ಧಕ್ಕೆ ಹೋಗಿದ್ದ ಸೈನಿಕರಿಗೆ ಬರುವ ಭಾಗದಿಂದ ಸೆರೆಯಾಳು, ದನ, ಕತ್ತೆ, ಆಡು, ಕುರಿ


ಮಿಕ್ಕ ಇಸ್ರಯೇಲರಿಗೆ ಬರುವ ಭಾಗದಿಂದ ಸೆರೆಯಾಳು, ದನ, ಕತ್ತೆ, ಆಡು, ಕುರಿ ಇವುಗಳಲ್ಲಿ ಐವತ್ತರಲ್ಲಿ ಒಂದರ ಮೇರೆಗೆ ತೆಗೆದುಕೊಂಡು ಸರ್ವೇಶ್ವರನ ಗುಡಾರವನ್ನು ನೋಡಿಕೊಳ್ಳುವ ಲೇವಿಯರಿಗೆ ಕೊಡಿ,” ಎಂದು ಆಜ್ಞಾಪಿಸಿದರು.


ಇವುಗಳಲ್ಲಿ ಮೋಶೆ ಸರ್ವೇಶ್ವರನ ಅಪ್ಪಣೆಯ ಪ್ರಕಾರ ಐವತ್ತರಲ್ಲಿ ಒಂದರ ಮೇರೆಗೆ ತೆಗೆದುಕೊಂಡು ಸರ್ವೇಶ್ವರನ ಗುಡಾರವನ್ನು ನೋಡಿಕೊಳ್ಳುವ ಲೇವಿಯರಿಗೆ ಕೊಟ್ಟನು.


ಆಗ ನೀವು ನಿರ್ಭಯರಾಗಿ ನಾನು ನಿಮಗೆ ಆಜ್ಞಾಪಿಸಿದ ಎಲ್ಲಾ ಕಾಣಿಕೆಗಳನ್ನು ಅಂದರೆ, ದಹನಬಲಿ ಮುಂತಾದ ಯಜ್ಞಪಶುಗಳನ್ನು, ಬೆಳೆಯ ದಶಮಾಂಶಗಳನ್ನು, ಸರ್ವೇಶ್ವರನಿಗಾಗಿ ಪ್ರತ್ಯೇಕಿಸುವ ಪದಾರ್ಥಗಳನ್ನು, ಹರಕೆಮಾಡಿದ ವಿಶೇಷ ಕಾಣಿಕೆಗಳನ್ನು, ಇವುಗಳನ್ನೆಲ್ಲ ನಿಮ್ಮ ದೇವರಾದ ಸರ್ವೇಶ್ವರ ತಮ್ಮ ನಾಮಸ್ಥಾಪನೆಗಾಗಿ ಆರಿಸಿಕೊಳ್ಳುವ ಸ್ಥಳಕ್ಕೇ ತರಬೇಕು.


ನಿಮ್ಮ ಯಾವುದಾದರೊಂದು ಕುಲದಲ್ಲಿ ಸರ್ವೇಶ್ವರ ಆರಿಸಿಕೊಳ್ಳುವ ಸ್ಥಳದಲ್ಲೇ ನಿಮ್ಮ ದಹನಬಲಿಗಳನ್ನು ಸಮರ್ಪಿಸಬೇಕು; ಅಲ್ಲಿಯೇ ನಾನು ಆಜ್ಞಾಪಿಸುವ ಎಲ್ಲಾ ಆಚಾರಗಳನ್ನು ನಡೆಸಬೇಕು.


ನಾವಾದರೋ ತಮಗೆ ಬೇಕಾದ ಎಲ್ಲಾ ಮರಗಳನ್ನು ಲೆಬನೋನಿನಲ್ಲಿ ಕಡಿದು, ತೆಪ್ಪಗಳಾಗಿ ಕಟ್ಟಿ, ಸಮುದ್ರಮಾರ್ಗವಾಗಿ ಜೊಪ್ಪಕ್ಕೆ ಕಳುಹಿಸುವೆವು; ಅಲ್ಲಿಂದ ನೀವು ಅವುಗಳನ್ನು ಜೆರುಸಲೇಮಿಗೆ ತರಿಸಿಕೊಳ್ಳಬಹುದು,” ಎಂದು ಉತ್ತರಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು