Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 9:3 - ಕನ್ನಡ ಸತ್ಯವೇದವು C.L. Bible (BSI)

3 ಜೆರಿಕೋದವರನ್ನು ಮತ್ತು ಆಯಿ ಜನರನ್ನು ಯೆಹೋಶುವನು ಸಂಹರಿಸಿದ ಸುದ್ದಿ ಗಿಬ್ಯೋನಿನ ನಿವಾಸಿಗಳಿಗೆ ಮುಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಯೆರಿಕೋವಿನವರನ್ನೂ ಮತ್ತು ಆಯಿ ಎಂಬ ಊರಿನವರನ್ನೂ ಯೆಹೋಶುವನು ಸಂಹರಿಸಿದ ಸುದ್ದಿಯು ಗಿಬ್ಯೋನಿನ ನಿವಾಸಿಗಳಿಗೆ ಮುಟ್ಟಿತು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಯೆರಿಕೋವಿನವರನ್ನೂ ಆಯಿ ಎಂಬ ಊರಿನವರನ್ನೂ ಯೆಹೋಶುವನು ಸಂಹರಿಸಿದ ಸುದ್ದಿಯನ್ನು ಗಿಬ್ಯೋನಿನ ನಿವಾಸಿಗಳು ಕೇಳಿ ಅವರೂ ಒಂದು ಯುಕ್ತಿಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಯೆಹೋಶುವನು “ಜೆರಿಕೊ” ಮತ್ತು “ಆಯಿ” ನಗರಗಳನ್ನು ಸ್ವಾಧೀನಪಡಿಸಿಕೊಂಡ ಬಗೆಯನ್ನು ಗಿಬ್ಯೋನ್ ನಗರದ ಜನರು ಕೇಳಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆದರೆ ಗಿಬ್ಯೋನಿನ ನಿವಾಸಿಗಳು ಯೆಹೋಶುವನು ಯೆರಿಕೋವಿಗೂ ಆಯಿಗೂ ಮಾಡಿದ್ದನ್ನು ಕೇಳಿದಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 9:3
17 ತಿಳಿವುಗಳ ಹೋಲಿಕೆ  

ಆಯಿ ನಗರಕ್ಕಿಂತ ದೊಡ್ಡದೂ ಒಂದು ರಾಜಧಾನಿಯಷ್ಟು ಶ್ರೇಷ್ಠವೂ ಆಗಿದ್ದ ಗಿಬ್ಯೋನ್ ನಗರದಲ್ಲಿ ಇರುವ ಜನರೆಲ್ಲರು ಯುದ್ಧವೀರರಾಗಿದ್ದರೂ ಇಸ್ರಯೇಲರ ನಡುವೆ ಜೀವದಿಂದುಳಿಯಲು ಅವರ ಸಂಗಡ ಸಂಧಾನ ಮಾಡಿಕೊಂಡಿದ್ದಾರೆ ಎಂಬುದನ್ನು ಕೂಡ ಕೇಳಿ ಅವನು ಬಹಳವಾಗಿ ಭಯಪಟ್ಟನು.


ಹೇಗೆಂದರೆ - ಮೂರನೆಯ ದಿನದಂದು ಇಸ್ರಯೇಲರು ಹೊರಟು ಗಿಬ್ಯೋನ್, ಕೆಫೀರಾ, ಬೇರೋತ್, ಕಿರ್ಯತ್ಯಾರೀಮ್ ಎಂಬ ಊರುಗಳನ್ನು ಸೇರಿದರು. ಆಗ ಆ ಊರುಗಳು ಆ ಜನರದ್ದೇ ಎಂದು ಗೊತ್ತಾಯಿತು.


ಅವರು ಒಂದು ಉಪಾಯವನ್ನು ಹೂಡಿದರು. ಅದೇನೆಂದರೆ - ಅವರು ತಮ್ಮ ಕತ್ತೆಗಳ ಮೇಲೆ ಹಳೆಯ ಗೋಣಿತಟ್ಟುಗಳನ್ನು ಹಾಕಿ ಅವುಗಳ ಮೇಲೆ ತೇಪೆ ಹಾಕಿದ ದ್ರಾಕ್ಷಾರಸದ ಹಳೆಯ ಬುದ್ದಲಿಗಳನ್ನು ಹೇರಿದರು.


ಯೆಹೋಶುವನು ಗಿಬ್ಯೋನ್ಯರನ್ನು ಕರೆಸಿ, “ನೀವು ನಮ್ಮ ನಡುವೆ ವಾಸಿಸುವವರಾಗಿದ್ದರೂ ಬಹುದೂರದವರೆಂದು ಹೇಳಿ ನಮ್ಮನ್ನು ವಂಚಿಸಿದ್ದೇಕೆ?


ಗಿಬ್ಯೋನಿನ ನಿವಾಸಿಗಳಾದ ಹಿವ್ವಿಯರ ಹೊರತು ಯಾವ ನಗರದವರೂ ಇಸ್ರಯೇಲರೊಡನೆ ಒಪ್ಪಂದ ಮಾಡಿಕೊಳ್ಳಲಿಲ್ಲ. ಎಲ್ಲರನ್ನೂ ಯುದ್ಧದಿಂದಲೇ ವಶಮಾಡಿಕೊಳ್ಳಬೇಕಾಯಿತು.


ಹಾಗೂ ಬೆನ್ಯಾಮೀನ್ ಕುಲದಿಂದ


ಅದೇ ವರ್ಷದಲ್ಲಿ, ಅಂದರೆ ಜುದೇಯದ ಅರಸ ಚಿದ್ಕೀಯನ ಆಳ್ವಿಕೆಯಲ್ಲಿ ನಾಲ್ಕನೆಯ ವರ್ಷದ ಐದನೆಯ ತಿಂಗಳಲ್ಲಿ, ಪ್ರವಾದಿಯಾದ ಅಜ್ಜೂರನ ಮಗನು ಹಾಗು ಗಿಬ್ಯೋನ್ ಊರಿನವನು ಆದ ಹನನ್ಯನು ಸರ್ವೇಶ್ವರನ ಆಲಯದೊಳಗೆ ಬಂದು ಯಾಜಕರ ಮತ್ತು ಸಕಲ ಜನರ ಮುಂದೆ ನಿಂತು ನನಗೆ ಹೀಗೆ ಹೇಳಿದ -


ಯೆಹೋಶುವನು ಆಯಿ ನಗರವನ್ನು ಅದರ ಅರಸನನ್ನು ಹಿಡಿದು ಜೆರಿಕೋವನ್ನೂ ಅದರ ಅರಸನನ್ನೂ ಹೇಗೋ ಹಾಗೆ ಸಂಹರಿಸಿಬಿಟ್ಟನೆಂದು ಜೆರುಸಲೇಮಿನ ಅರಸ ಅದೋನೀಚೆದೆಕನು ತಿಳಿದುಕೊಂಡನು.


ಅದೇ ದಿನ ಯೆಹೋಶುವನು ಮಕ್ಕೆದವನ್ನು ಸ್ವಾಧೀನಪಡಿಸಿಕೊಂಡನು. ಅದರ ರಾಜನನ್ನೂ ಪ್ರಜೆಗಳೆಲ್ಲರನ್ನೂ ಕತ್ತಿಗೆ ತುತ್ತಾಗಿಸಿದನು.


ಸರ್ವೇಶ್ವರ ಅದನ್ನೂ ಅದರ ಅರಸನನ್ನೂ ಇಸ್ರಯೇಲರ ಕೈವಶಮಾಡಿದರು. ಅವರು ಅದರಲ್ಲಿದ್ದ ಜನರಲ್ಲಿ ಒಬ್ಬನನ್ನೂ ಉಳಿಸದೆ ಎಲ್ಲರನ್ನೂ ಕತ್ತಿಗೆ ತುತ್ತಾಗಿಸಿದರು. ಜೆರಿಕೋವಿನ ಅರಸನಿಗಾದ ಗತಿಯೇ ಇವರ ಅರಸನಿಗೂ ಆಯಿತು.


ಗಿಬ್ಯೋನ್, ರಾಮಾ, ಬೇರೋತ್,


ಒಂದು ದಿನ ನೇರನ ಮಗ ಅಬ್ನೇರನು ಮತ್ತು ಸೌಲನ ಮಗ ಈಷ್ಬೋಶೆತನ ಸೇವಕರು ಮಹನಯಿಮಿನಿಂದ ಹೊರಟು ಗಿಬ್ಯೋನಿಗೆ ಬಂದರು.


ಸರ್ವೇಶ್ವರನ ದಾಸನಾದ ಮೋಶೆ ಮರುಭೂಮಿಯಲ್ಲಿ ಮಾಡಿಸಿದ್ದ ದೇವದರ್ಶನದ ಗುಡಾರ ಅಲ್ಲಿಯೇ ಇತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು