Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 9:6 - ಕನ್ನಡ ಸತ್ಯವೇದವು C.L. Bible (BSI)

6 ತಾವೂ ರಾಯಭಾರಿಗಳೆಂದು ಗಿಲ್ಗಾಲಿನಲ್ಲಿದ್ದ ಯೆಹೋಶುವನ ಪಾಳೆಯಕ್ಕೆ ಬಂದರು. ಅವನಿಗೂ ಇಸ್ರಯೇಲರಿಗೂ, “ನಾವು ದೂರದೇಶದಿಂದ ಬಂದವರು. ನೀವು ನಮ್ಮ ಸಂಗಡ ಒಂದು ಒಪ್ಪಂದ ಮಾಡಿಕೊಳ್ಳಿ,” ಎಂದು ಕೇಳಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ತಾವು ರಾಯಭಾರಿಗಳೆಂದು ಗಿಲ್ಗಾಲಿನಲ್ಲಿದ್ದ ಯೆಹೋಶುವನ ಪಾಳೆಯಕ್ಕೆ ಬಂದರು. ಅವನಿಗೂ ಇಸ್ರಾಯೇಲ್ಯರಿಗೂ “ನಾವು ದೂರದೇಶದಿಂದ ಬಂದವರು. ನೀವು ನಮ್ಮ ಸಂಗಡ ಒಂದು ಒಪ್ಪಂದ ಮಾಡಿಕೊಳ್ಳಬೇಕು” ಎಂದು ಕೇಳಿ ಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ತಾವು ರಾಯಭಾರಿಗಳೆಂದು ಗಿಲ್ಗಾಲಿನಲ್ಲಿದ್ದ ಯೆಹೋಶುವನ ಪಾಳೆಯಕ್ಕೆ ಬಂದು ಅವನಿಗೂ ಇಸ್ರಾಯೇಲ್ಯರಿಗೂ - ನಾವು ದೂರದೇಶದಿಂದ ಬಂದೆವು; ನೀವು ನಮ್ಮ ಸಂಗಡ ಒಡಂಬಡಿಕೆಮಾಡಿಕೊಳ್ಳಿರಿ ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಅವರು ಇಸ್ರೇಲರ ಪಾಳೆಯಕ್ಕೆ ಹೋದರು. ಈ ಪಾಳೆಯವು ಗಿಲ್ಗಾಲಿನ ಹತ್ತಿರ ಇತ್ತು. ಅವರು ಯೆಹೋಶುವನ ಬಳಿಗೆ ಹೋಗಿ ಅವನಿಗೆ, “ನಾವು ಬಹುದೂರ ದೇಶದಿಂದ ಪ್ರಯಾಣ ಮಾಡಿ ಬಂದಿದ್ದೇವೆ. ನಾವು ನಿಮ್ಮ ಜೊತೆ ಶಾಂತಿ ಒಪ್ಪಂದವನ್ನು ಮಾಡಿಕೊಳ್ಳಲು ಇಚ್ಛಿಸುತ್ತೇವೆ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಅನಂತರ ಅವರು ಗಿಲ್ಗಾಲಿನಲ್ಲಿ ಇರುವ ಪಾಳೆಯಕ್ಕೆ ಸೇರಿ ಯೆಹೋಶುವನ ಬಳಿಗೆ ಬಂದರು. ಅವರು ಅವನಿಗೂ ಇಸ್ರಾಯೇಲರಿಗೂ, “ನಾವು ದೂರದೇಶದಿಂದ ಬಂದೆವು. ಈಗ ನಮ್ಮ ಸಂಗಡ ಒಡಂಬಡಿಕೆ ಮಾಡಿಕೊಳ್ಳಿರಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 9:6
9 ತಿಳಿವುಗಳ ಹೋಲಿಕೆ  

ಇಸ್ರಯೇಲರು ಗಿಲ್ಗಾಲಿನಲ್ಲಿ ತಂಗಿದ್ದಾಗ ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದ ಸಂಜೆ ಜೆರಿಕೋವಿನ ಬಯಲಿನಲ್ಲಿ ಪಾಸ್ಕಹಬ್ಬವನ್ನಾಚರಿಸಿದರು.


ಆಗ ಪ್ರವಾದಿ ಯೆಶಾಯನು ಹಿಜ್ಕೀಯನ ಬಳಿಗೆ ಬಂದು, “ಆ ಮನುಷ್ಯರು ಎಲ್ಲಿಯವರು, ಏನು ಹೇಳಿದರು?” ಎಂದು ಕೇಳಿದನು. ಅದಕ್ಕೆ ಹಿಜ್ಕೀಯನು, “ಅವರು ಬಹುದೂರದ ದೇಶವಾದ ಬಾಬಿಲೋನಿನಿಂದ ಬಂದವರು,” ಎಂದು ಉತ್ತರಕೊಟ್ಟನು.


“ನಿಮ್ಮ ನಾಮಮಹತ್ತು, ಭುಜಬಲ, ಶಿಕ್ಷಾಹಸ್ತ, ಇವುಗಳ ಸಂದೇಶ ಪರರಾಜ್ಯಗಳವರಿಗೂ ಗೊತ್ತಾಗುವುದು.


ಇದಾದ ಮೇಲೆ ಯೆಹೋಶುವನು ಎಲ್ಲ ಇಸ್ರಯೇಲರೊಡನೆ ಗಿಲ್ಗಾಲಿನಲ್ಲಿದ್ದ ತನ್ನ ಪಾಳೆಯಕ್ಕೆ ಹಿಂದಿರುಗಿದನು.


ಅವರು, “ನಿಮ್ಮ ಸೇವಕರಾದ ನಾವು ನಿಮ್ಮ ದೇವರಾದ ಸರ್ವೇಶ್ವರನ ನಾಮ ಮಹತ್ತನ್ನು ಕೇಳಿ ಬಹುದೂರ ದೇಶದಿಂದ ಬಂದಿದ್ದೇವೆ. ಆ ನಿಮ್ಮ ದೇವರು ಈಜಿಪ್ಟಿನಲ್ಲಿ ನಡೆಸಿದ ಮಹತ್ಕಾರ್ಯಗಳ ಸುದ್ದಿಯನ್ನು ನಮ್ಮ ಹಿರಿಯರೂ ದೇಶನಿವಾಸಿಗಳೂ ಕೇಳಿದ್ದಾರೆ.


ಹರಿದುಹೋಗಿದ್ದ ಹಳೆಯ ಕೆರಗಳನ್ನು ಮೆಟ್ಟಿಕೊಂಡರು. ಹಳೆಯ ಬಟ್ಟೆಬರೆಗಳನ್ನು ಹಾಕಿಕೊಂಡರು. ಒಣರೊಟ್ಟಿ ಚೂರುಗಳನ್ನು ಬುತ್ತಿಯಾಗಿ ಕಟ್ಟಿಕೊಂಡರು.


ಜನರು ಮೊದಲನೇ ತಿಂಗಳಿನ ಹತ್ತನೆಯ ದಿನ ಜೋರ್ಡನನ್ನು ದಾಟಿ ಜೆರಿಕೋವಿನ ಪೂರ್ವಗಡಿಯಲ್ಲಿರುವ ಗಿಲ್ಗಾಲೆಂಬಲ್ಲಿಗೆ ಬಂದು ತಂಗಿದರು.


ಗಿಬ್ಯೋನ್ಯರು ಗಿಲ್ಗಾಲಿನಲ್ಲಿದ್ದ ಯೆಹೋಶುವನ ಪಾಳೆಯಕ್ಕೆ ದೂತರನ್ನು ಕಳಿಸಿದರು. “ನಿಮ್ಮ ಸೇವಕರಾದ ನಮ್ಮನ್ನು ಕೈಬಿಡಬೇಡಿ, ಬೇಗನೆ ಬಂದು ಸಹಾಯ ಮಾಡಿ. ನಮಗೆ ವಿರುದ್ಧ ಕೂಡಿಬಂದಿರುವ ಈ ಬೆಟ್ಟದ ಸೀಮೆಯ ಎಲ್ಲ ಅಮೋರಿಯ ರಾಜರಿಂದ ನಮ್ಮನ್ನು ತಪ್ಪಿಸಿ,” ಎಂದು ಬೇಡಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು