Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋನನು 2:7 - ಕನ್ನಡ ಸತ್ಯವೇದವು C.L. Bible (BSI)

7 ನಂದಿದಂತಾಗಲು ಎನ್ನ ಪ್ರಾಣ ದೀವಿಗೆ ಮೊರೆಯಿಟ್ಟೆ, ಸರ್ವೇಶ್ವರಾ, ನಾ ನಿನಗೆ ನಿನ್ನ ಪರಿಶುದ್ಧ ಆಲಯದಲಿ ನೀನಾಸೀನನಿದ್ದೆ ಎನ್ನ ಪ್ರಾರ್ಥನೆಯನು ನೀನಾಲಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 “ನನ್ನ ಆತ್ಮವು ನನ್ನಲ್ಲಿ ಕುಂದಿಹೋದಾಗ ಯೆಹೋವನಾದ ನಿನ್ನನ್ನು ನೆನಪು ಮಾಡಿಕೊಂಡು ಸ್ಮರಿಸಿದೆನು; ನನ್ನ ಬಿನ್ನಹವು ನಿನಗೆ ಮುಟ್ಟಿತು, ಅದು ನಿನ್ನ ಪರಿಶುದ್ಧಾಲಯವನ್ನು ಬಂದು ಸೇರಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ನನ್ನ ಆತ್ಮವು ನನ್ನಲ್ಲಿ ಕುಂದಿದಾಗ ಯೆಹೋವನಾದ ನಿನ್ನನ್ನು ಸ್ಮರಿಸಿದೆನು; ನನ್ನ ಬಿನ್ನಹವು ನಿನಗೆ ಮುಟ್ಟಿತು, ನಿನ್ನ ಪರಿಶುದ್ಧಾಲಯಕ್ಕೆ ಸೇರಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 “ನನ್ನ ಆತ್ಮಕ್ಕೆ ಯಾವ ನಿರೀಕ್ಷೆಯೂ ಇರಲಿಲ್ಲ. ಆಗ ನಾನು ಯೆಹೋವನನ್ನು ಸ್ಮರಿಸಿದೆನು. ಯೆಹೋವನೇ, ನಾನು ನಿನಗೆ ಪ್ರಾರ್ಥಿಸಿದೆನು. ನೀನು ನಿನ್ನ ಪವಿತ್ರ ಆಲಯದಿಂದ ನನ್ನ ಪ್ರಾರ್ಥನೆಯನ್ನು ಕೇಳಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 “ನನ್ನ ಪ್ರಾಣವು ನನ್ನಲ್ಲಿ ಕುಂದಿ ಹೋದಾಗ, ಯೆಹೋವ ದೇವರೇ ನಿಮ್ಮನ್ನು ಜ್ಞಾಪಕಮಾಡಿಕೊಂಡೆನು. ನನ್ನ ಪ್ರಾರ್ಥನೆಯು ನಿಮ್ಮ ಬಳಿಗೆ ನಿಮ್ಮ ಪರಿಶುದ್ಧ ಮಂದಿರದೊಳಗೆ ಬಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋನನು 2:7
23 ತಿಳಿವುಗಳ ಹೋಲಿಕೆ  

ಇಂಥಾ ದುಸ್ಥಿತಿಯಲಿ ನಾ ಮೊರೆಯಿಟ್ಟೆ ಪ್ರಭುವಿಗೆ I ಪ್ರಾರ್ಥನೆ ಮಾಡಿದೆ ಆ ನನ್ನ ದೇವನಲಿ I ನನ್ನ ಪ್ರಾರ್ಥನೆ ಬಿದ್ದಿತು ಆತನ ಕಿವಿಯಲಿ II


ಯಾಜಕರು ಆಗಿದ್ದ ಲೇವಿಯರು ಆಮೇಲೆ ಎದ್ದು ನಿಂತು ಜನರನ್ನು ಆಶೀರ್ವದಿಸಿದರು. ಅವರ ಸ್ವರ ದೇವರಿಗೆ ಕೇಳಿಸಿತು; ಅವರ ಪ್ರಾರ್ಥನೆ ಪರಲೋಕದಲ್ಲಿರುವ ಆ ದೇವರ ಪರಿಶುದ್ಧ ನಿವಾಸಕ್ಕೆ ಮುಟ್ಟಿತು.


ನೆನಸಿಕೊಳ್ಳುತಿಹೆನು ಹಳೆಯ ಕಾಲವನು I ಧ್ಯಾನಿಸುತಿಹೆನು ನಿನ್ನ ಕಾರ್ಯಗಳನು I ಸ್ಮರಿಸುತಿಹೆನು ನಿನ್ನ ಕೈಕೆಲಸಗಳನು II


ಪ್ರಭು ಪ್ರಸನ್ನವಿರುವನು ಪವಿತ್ರಾಲಯದಲಿ I ಸ್ಥಾಪಿಸಿಹನು ಸಿಂಹಾಸನವನು ಪರದಲಿ I ನರಮಾನವರನು ನೋಡುತಿಹನು ನೇತ್ರಗಳಲಿ I ಪರೀಕ್ಷಿಸುತಿಹನು ಅವರನು ಸೂಕ್ಷ್ಮರೀತಿಯಲಿ II


ಇದಲ್ಲದೆ ಜನರು ತಮ್ಮ ಗಂಡುಹೆಣ್ಣು ಮಕ್ಕಳಿಗಾಗಿ ಮನಸ್ಸಿನಲ್ಲಿ ಬಹಳವಾಗಿ ನೊಂದುಕೊಂಡರು. ಮಾತ್ರವಲ್ಲ, ದಾವೀದನನ್ನು ಕಲ್ಲೆಸೆದು ಕೊಲ್ಲಬೇಕೆಂದಿದ್ದರು. ಆದುದರಿಂದ ಅವನು ಬಲು ಇಕ್ಕಟ್ಟಿಗೆ ಸಿಕ್ಕಿಕೊಂಡಿದ್ದನು.


ಪ್ರಭುವಿನೊಳಿತನು ನಾ ಕಾಣುವೆ ಜೀವಲೋಕದೊಳು I ನಾನಿಟ್ಟಿರುವೆ ನಂಬಿಕೆ ನಿರೀಕ್ಷೆ ಅದರೊಳು II


ಹೆಚ್ಚಳಪಡುತಿಹರು ಕೆಲವರು ರಥಗಳಲಿ, ಹಲವರು ಅಶ್ವಗಳಲಿ I ಹೆಮ್ಮೆಪಡುತಿಹೆವು ನಾವಾದರೋ, ನಮ್ಮ ದೇವರ ನಾಮದಲಿ II


ನಿನ್ನ ಆಸ್ಥಾನದಲಿ ನೆಲೆಸಲು ನೀನಾಯ್ದು ತಂದ ದೈವಭಕ್ತ ಧನ್ಯ I ನಮಗೆ ತರಲಿ ತೃಪ್ತಿ ನೀ ವಾಸಿಸುವ ಪವಿತ್ರಾಲಯದ ಸೌಭಾಗ್ಯ II


ಪಾಪಿಗಳಿಂದ ತಮಗುಂಟಾದ ಕಠಿಣ ವಿರೋಧವನ್ನು ಯೇಸುಸ್ವಾಮಿ ಹೇಗೆ ಸಹಿಸಿಕೊಂಡರೆಂಬುದನ್ನು ಮನಸ್ಸಿನಲ್ಲಿಡಿ. ಆಗ ನೀವು ಬೇಸತ್ತು ಎದೆಗುಂದಲಾರಿರಿ.


ಸರ್ವೇಶ್ವರ ಪ್ರಸನ್ನನಾಗಿಹನು ಪವಿತ್ರಾಲಯದಲ್ಲಿ; ಜಗವೆಲ್ಲ ಮೌನತಾಳಲಿ ಆತನ ಸನ್ನಿಧಿಯಲ್ಲಿ.


ಕೇಳಿರಿ ಸರ್ವಜನಾಂಗಗಳೇ ಕಿವಿಗೊಡಿ ಬುವಿಯ ಸರ್ವನಿವಾಸಿಗಳೇ.


ನಿನ್ನ ಸನ್ನಿಧಿಯಿಂದ ನಾನಿನ್ನು ಬಹಿಷ್ಕೃತ ಕಾಣೆನೆಂದೂ ನಿನ್ನ ಪವಿತ್ರಾಲಯ ನಿರುತ. ಈ ಭಾಗ್ಯಗಳೆಲ್ಲ ಎನಗಿಲ್ಲವೆಂದು ಪರಿಪರಿಯಾಗಿ ಮರುಗುತಿರುವೆನಿಂದು.


ಸರ್ವೇಶ್ವರನ ದಾಸನಾದ ನನ್ನ ಮಾತುಗಳನು ಕೇಳಿ : ಭಯಭಕ್ತಿಯುಳ್ಳವನಾರು ನಿಮ್ಮೊಳು ಆ ಸರ್ವೇಶ್ವರನಲಿ? ಬೆಳಕಿಲ್ಲದೆ ಕತ್ತಲಲಿ ನಡೆಯುವವನು ಭರವಸೆಯಿಡಲಿ ಆ ಸರ್ವೇಶ್ವರನ ನಾಮದಲಿ; ಆಶ್ರಯ ಪಡೆಯಲಿ ತನ್ನಾ ದೇವನಲಿ.


ಎನ್ನ ಮನವೆ, ಚಿಂತಿಸುವೆಯೇಕೆ? ವ್ಯಥೆಪಡುವುದೇಕೆ? ದೇವನಲ್ಲಿಡು ನಂಬಿಕೆ I ಮತ್ತೆ ಸ್ತುತಿಸುವೆ ನಾನಾತನನು, ಮುಕ್ತಿದಾತ ಪರಮಾತ್ಮ ಆತನೆನಗೆ II


ಎನ್ನ ಮನವೆ, ಚಿಂತಿಸುವೆಯೇಕೆ? ವ್ಯಥೆಪಡುವುದೇಕೆ? ದೇವನಲ್ಲಿಡು ನಂಬಿಕೆ I ಮತ್ತೆ ಸ್ತುತಿಸುವೆ ನಾನಾತನನು, ಮುಕ್ತಿದಾತ, ಪರಮಾತ್ಮ ಆತನೆನಗೆ II


ಎನ್ನ ಮನವೆ, ಚಿಂತಿಸುವೆಯೇಕೆ? I ವ್ಯಥೆಪಡುವುದೇಕೆ? ದೇವನಲ್ಲಿಡು ನಂಬಿಕೆ I ಮತ್ತೆ ಸ್ತುತಿಸುವೆ ನಾನಾತನನು, ಮುಕ್ತಿದಾತ, ಪರಮಾತ್ಮ ಆತನೆನಗೆ II


ಕ್ಷಯಿಸುತ್ತಿರುವೆ ನಾ ಚೆಲ್ಲಿದ ನೀರಿನಂತೆ I ಎಲುಬುಗಳು ಅಲುಗಿವೆ, ಎದೆ ಕರಗಿದೆ ಮೇಣದಂತೆ II


ಉರುಲೊಡ್ಡಿಹರು ನಾ ನಡೆಯುವ ಮಾರ್ಗದಲೆ I ನಾ ಮನಗುಂದಿರೆ, ಪರಿಹಾರವನು ನೀ ಬಲ್ಲೆ II


ನಾ ಪಟ್ಟ ದುಃಖವು ನನ್ನ ಸುಖಕ್ಕಾಗಿಯೇ ನನ್ನಾತ್ಮವನ್ನು ನಾಶಕೂಪದಿಂದ ರಕ್ಷಿಸಿದ್ದು ನಿನ್ನ ಪ್ರೀತಿಯೇ; ನನ್ನ ಪಾಪಗಳನ್ನೆಲ್ಲಾ ನೀ ಹಾಕಿರುವೆ ನಿನ್ನ ಬೆನ್ನ ಹಿಂದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು