Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋನನು 3:4 - ಕನ್ನಡ ಸತ್ಯವೇದವು C.L. Bible (BSI)

4 ನಗರವನ್ನು ಪ್ರವೇಶಿಸಿ ಒಂದು ದಿನದ ಪ್ರಯಾಣಮಾಡಿದ ನಂತರ ಯೋನನು ಸ್ವಾಮಿಯ ಸಂದೇಶವನ್ನು ಸಾರುತ್ತಾ, “ಜನರೇ, ಕೇಳಿ: ನಿಮ್ಮ ನಗರ ನಲವತ್ತು ದಿನಗಳಲ್ಲಿ ನಾಶವಾಗುವುದು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಯೋನನು ಪಟ್ಟಣವನ್ನು ಪ್ರವೇಶಿಸಿ ಒಂದು ದಿನದಷ್ಟು ದೂರ ಪ್ರಯಾಣಮಾಡಿದ ನಂತರ “ನಲವತ್ತು ದಿನಗಳಾದ ಮೇಲೆ ನಿನೆವೆಯು ಕೆಡವಲ್ಪಡುವುದು” ಎಂದು ಸಾರತೊಡಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಯೋನನು ಪಟ್ಟಣದಲ್ಲಿ ಸೇರಿ ಮೊದಲು ಒಂದು ದಿವಸದ ಪ್ರಯಾಣದಷ್ಟು ದೂರ ನಡೆದು - ನಾಲ್ವತ್ತು ದಿನಗಳಾದ ಮೇಲೆ ನಿನೆವೆಯು ಕೆಡವಲ್ಪಡುವದು ಎಂದು ಸಾರ ತೊಡಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಯೋನನು ನಗರದ ಮಧ್ಯಕ್ಕೆ ಹೋಗಿ ಜನರಿಗೆ ಸಾರಲಿಕ್ಕೆ ಪ್ರಾರಂಭಿಸಿದನು. “ನಲವತ್ತು ದಿನಗಳು ಕಳೆದ ಬಳಿಕ ನಿನೆವೆಯು ನಾಶವಾಗುವದು” ಎಂದು ಜನರಿಗೆ ಸಾರಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆಗ ಯೋನನು ಒಂದು ದಿವಸದ ಪ್ರಯಾಣಮಾಡಿ, ಪಟ್ಟಣದಲ್ಲಿ ಪ್ರವೇಶಿಸಿ, “ಇನ್ನು ನಾಲ್ವತ್ತು ದಿವಸಗಳಾದ ಮೇಲೆ ನಿನೆವೆ ನಾಶವಾಗುವುದು,” ಎಂದು ಕೂಗಿ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋನನು 3:4
10 ತಿಳಿವುಗಳ ಹೋಲಿಕೆ  

ಪ್ರವಾದಿ ಸರ್ವೇಶ್ವರನ ಮಾತೆಂದು ಹೇಳಿ, ಮುಂತಿಳಿಸಿದ ಸಂಗತಿ ನಡೆಯದೆ ಹೋದರೆ, ಅವನ ಮಾತು ಸರ್ವೇಶ್ವರನದಲ್ಲವೆಂದು ನೀವು ತಿಳಿದುಕೊಳ್ಳಬೇಕು. ಅವನು ಅಧಿಕಾರವಿಲ್ಲದೆ ಮಾತಾಡಿದವನು; ಅವನಿಗೆ ಹೆದರಬಾರದು.


ಆ ಜನರು ಮಾಡಿದುದೆಲ್ಲವನ್ನು ದೇವರು ಗಮನಿಸಿದರು. ತಮ್ಮ ದುರ್ನಡತೆಯನ್ನು ಜನರು ಕೈಬಿಟ್ಟದ್ದನ್ನು ಕಂಡು, ಮನಮರುಗಿ ಅವರಿಗೆ ವಿಧಿಸಬೇಕೆಂದಿದ್ದ ಶಿಕ್ಷೆಯನ್ನು ತಡೆಹಿಡಿದರು.


ಅದಲ್ಲದೆ ನಿನ್ನ ಆಯುಷ್ಯಕ್ಕೆ ಹದಿನೈದು ವರ್ಷಗಳನ್ನು ಕೂಡಿಸುತ್ತೇನೆ. ನಿನ್ನನ್ನೂ ಈ ಪಟ್ಟಣವನ್ನೂ ಅಸ್ಸೀರಿಯದ ಅರಸನ ಕೈಗೆ ಬೀಳದಂತೆ ತಪ್ಪಿಸುವೆನು. ನನಗಾಗಿ ಹಾಗು ನನ್ನ ದಾಸ ದಾವೀದನಿಗಾಗಿ ಈ ಪಟ್ಟಣವನ್ನು ಉಳಿಸಿ ಕಾಪಾಡುವೆನು’ ಎಂಬುದಾಗಿ ನಿನ್ನ ಪೂರ್ವಜ ದಾವೀದನ ದೇವರಾಗಿರುವ ಸರ್ವೇಶ್ವರ ಹೇಳುತ್ತಾರೆ ಎಂದು ತಿಳಿಸು,” ಎಂದು ಆಜ್ಞಾಪಿಸಿದರು.


ಆ ದಿನಗಳಲ್ಲಿ ಹಿಜ್ಕೀಯನು ಮಾರಕ ರೋಗದಿಂದ ನರಳುತ್ತಿದ್ದನು. ಆಗ ಆಮೋಚನ ಮಗನೂ ಪ್ರವಾದಿಯೂ ಆದ ಯೆಶಾಯನು ಅವನ ಬಳಿಗೆ ಬಂದು, “ನಿನ್ನ ಸಂಸಾರದ ವಿಷಯವಾಗಿ ವ್ಯವಸ್ಥೆಮಾಡು; ಏಕೆಂದರೆ, ‘ನೀನು ಉಳಿಯುವ ಹಾಗಿಲ್ಲ, ಸಾಯಬೇಕಾಗಿದೆ,’ ಎಂಬುದಾಗಿ ಸರ್ವೇಶ್ವರ ಹೇಳಿದ್ದಾರೆ,” ಎಂದು ಹೇಳಿದನು.


ತೀರ್ಪಿನ ದಿನ ನಿನೆವೆ ನಗರದವರು ಈ ಪೀಳಿಗೆಗೆ ಎದುರಾಗಿ ನಿಂತು ಇದನ್ನು ಅಪರಾಧಿಯೆಂದು ಖಂಡಿಸುವರು. ಏಕೆಂದರೆ, ಪ್ರವಾದಿ ಯೋನನ ಬೋಧನೆಯನ್ನು ಕೇಳಿ ಅವರು ಪಾಪಕ್ಕೆ ವಿಮುಖರಾದರು. ಆದರೆ ಪ್ರವಾದಿ ಯೋನನಿಗಿಂತಲೂ ಮೇಲಾದವನು ಇಗೋ, ಇಲ್ಲಿದ್ದಾನೆ.


ಹೇಗೆಂದರೆ, ನಿನೆವೆ ನಗರದ ಜನರಿಗೆ ಪ್ರವಾದಿ ಯೋನನು ಸಂಕೇತವಾದಂತೆ ನರಪುತ್ರನು ಈ ಸಂತತಿಗೆ ಸಂಕೇತವಾಗಿರುವನು.


ತೀರ್ಪಿನ ದಿನ ನಿನೆವೆ ನಗರದವರು ಈ ಪೀಳಿಗೆಗೆ ಎದುರಾಗಿ ನಿಂತು ಇದನ್ನು ಅಪರಾಧಿ ಎಂದು ತೋರಿಸುವರು. ಏಕೆಂದರೆ, ಪ್ರವಾದಿ ಯೋನನ ಬೋಧನೆಯನ್ನು ಕೇಳಿ ಪಶ್ಚಾತ್ತಾಪಪಟ್ಟು ಅವರು ದೇವರಿಗೆ ಅಭಿಮುಖರಾದರು. ಆದರೆ ಪ್ರವಾದಿ ಯೋನನಿಗಿಂತಲೂ ಮೇಲಾದವನು ಇಗೋ, ಇಲ್ಲಿದ್ದಾನೆ.


ಆದರೆ ಸರ್ವೇಶ್ವರ ನಿಮಗೆ ಕೃಪೆತೋರಬೇಕೆಂದು ಕಾದಿರುತ್ತಾರೆ. ನಿಮ್ಮನ್ನು ಕರುಣಿಸಲು ಎದ್ದುನಿಂತಿದ್ದಾರೆ. ಅವರು ನ್ಯಾಯಪರರಾದ ದೇವರು, ಅವರಿಗಾಗಿ ಕಾದಿರುವವರೆಲ್ಲರೂ ಧನ್ಯರು.


‘ನೀವು ಈ ನಾಡಿನಲ್ಲಿ ನೆಲೆಗೊಂಡಿದ್ದರೆ ನಾನು ನಿಮ್ಮನ್ನು ಕಟ್ಟುವೆನು, ಕೆಡುವುದಿಲ್ಲ, ನೆಡುವೆನು, ಕೀಳುವುದಿಲ್ಲ, ನಾನು ನಿಮಗೆ ಮಾಡಿದ ಕೇಡಿಗಾಗಿ ವಿಷಾದಿಸುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು