Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋನನು 4:2 - ಕನ್ನಡ ಸತ್ಯವೇದವು C.L. Bible (BSI)

2 ಆಗ ಅವನು ಹೀಗೆಂದು ಮೊರೆಯಿಟ್ಟನು: “ಸ್ವಾಮೀ, ಈ ರೀತಿ ಸಂಭವಿಸುವುದೆಂದು ನಾನು ಸ್ವದೇಶವನ್ನು ಬಿಡುವ ಮುನ್ನವೇ ನಿಮಗೆ ಹೇಳಿದ್ದೆನಲ್ಲವೆ? ಈ ಕಾರಣದಿಂದಲೇ ಅಲ್ಲವೆ ನಾನು ತಾರ್ಷಿಷಿಗೆ ಓಡಿಹೋಗಲು ಪ್ರತ್ನಿಸಿದ್ದು? ನೀವು ಪ್ರೀತಿಸ್ವರೂಪಿ, ಕರುಣಾಮಯಿ, ಸಹನಾಶೀಲರಾದ ದೇವರು, ವಿಧಿಸಬೇಕೆಂದಿದ್ದ ಶಿಕ್ಷೆಯನ್ನು ಹಿಂತೆಗೆದುಕೊಳ್ಳುವ ದೇವರು - ಎಂದು ಆಗಲೇ ನನಗೆ ತಿಳಿದಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆಗ ಅವನು ಯೆಹೋವನಿಗೆ ಮೊರೆಯಿಟ್ಟನು, “ಯೆಹೋವನೇ, ಲಾಲಿಸು, ನಾನು ಸ್ವದೇಶದಲ್ಲಿರುವಾಗಲೇ ಹೀಗಾಗುವುದೆಂದು ಹೇಳಿದೆನಷ್ಟೆ; ನೀನು ದಯೆಯೂ, ಕನಿಕರವೂ, ದೀರ್ಘಶಾಂತಿಯೂ, ಮಹಾಕೃಪೆಯೂ ಉಳ್ಳ ದೇವರು, ಮಾಡಬೇಕೆಂದಿದ್ದ ಕೇಡಿಗೆ ಮನಮರುಗುವವನು ಎಂದು ನಾನು ತಿಳಿದೇ, ತಾರ್ಷೀಷಿಗೆ ಓಡಿಹೋಗಲು ಪ್ರಯತ್ನಿಸಿದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಅವನು ಸಿಟ್ಟುಗೊಂಡು - ಯೆಹೋವಾ, ಲಾಲಿಸು, ನಾನು ಸ್ವದೇಶದಲ್ಲಿರುವಾಗಲೇ ಹೀಗಾಗುವದೆಂದು ಹೇಳಿದೆನಷ್ಟೆ; ನೀನು ದಯೆಯೂ ಕನಿಕರವೂ ದೀರ್ಘಶಾಂತಿಯೂ ಮಹಾಕೃಪೆಯೂ ಉಳ್ಳ ದೇವರು, ಮಾಡಬೇಕೆಂದಿದ್ದ ಕೇಡಿಗೆ ಮನಮರುಗುವವನು ಎಂದು ನಾನು ತಿಳಿದೇ ತಾರ್ಷೀಷಿಗೆ ಓಡಿ ಹೋಗಲು ತ್ವರೆಪಟ್ಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಯೋನನು ಯೆಹೋವನಿಗೆ ದೂರು ಹೇಳುತ್ತಾ, “ಇದು ಹೀಗಾಗುತ್ತದೆಯೆಂದು ನನಗೆ ಗೊತ್ತಿತ್ತು. ನಾನು ನನ್ನ ದೇಶದಲ್ಲಿದ್ದೆ. ಇಲ್ಲಿಗೆ ಬರಲು ನನಗೆ ಹೇಳಿದವನು ನೀನೇ. ಈ ದುಷ್ಟಪಟ್ಟಣದ ಜನರನ್ನು ನೀನು ಕ್ಷಮಿಸುತ್ತೀ ಎಂದು ನನಗೆ ಆಗಲೇ ಗೊತ್ತಿತ್ತು. ಆದ್ದರಿಂದ ನಾನು ತಾರ್ಷೀಷಿಗೆ ಓಡಿಹೋಗಲು ನಿರ್ಧರಿಸಿದೆನು. ನೀನು ದಯಾಪರನಾದ, ಕೃಪಾಪೂರ್ಣನಾದ, ಕೋಪಗೊಳ್ಳುವುದರಲ್ಲಿ ನಿಧಾನವಾದ ಮತ್ತು ಮಹಾಕನಿಕರವುಳ್ಳ ದೇವರೆಂದು ನನಗೆ ಗೊತ್ತಿತ್ತು. ಆ ಜನರು ಪಾಪ ಮಾಡುವದನ್ನು ನಿಲ್ಲಿಸಿದರೆ, ನೀನು ನಿನ್ನ ಯೋಜನೆಯಂತೆ ಅವರನ್ನು ನಾಶಮಾಡುವುದಿಲ್ಲ ಎಂದು ನನಗೆ ಗೊತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಅವನು ಯೆಹೋವ ದೇವರಿಗೆ ಪ್ರಾರ್ಥನೆಮಾಡಿ: “ಯೆಹೋವ ದೇವರೇ, ನಾನು ನನ್ನ ದೇಶದಲ್ಲಿದ್ದಾಗಲೇ ಇದನ್ನು ನಾನು ಹೇಳಲಿಲ್ಲವೋ? ಆದಕಾರಣ ನಾನು ಮೊದಲು ತಾರ್ಷೀಷಿಗೆ ಓಡಿ ಹೋದೆನು. ನೀವು ಕೃಪೆಯೂ ಅನುಕಂಪವೂ ಪ್ರೀತಿಯಲ್ಲಿ ಐಶ್ವರ್ಯವುಳ್ಳ ದೇವರೆಂದೂ ಕೇಡಿನ ವಿಷಯವಾಗಿ ಮನಮರುಗುವವರೆಂದೂ ನನಗೆ ತಿಳಿದಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋನನು 4:2
24 ತಿಳಿವುಗಳ ಹೋಲಿಕೆ  

ಪ್ರಭು, ನೀ ದಯಾಳು, ದೇವಾ ನೀ ಕರುಣಾಮೂರ್ತಿ I ಸಹನಶೀಲನು, ಸತ್ಯಸ್ವರೂಪಿ, ಪ್ರೇಮಮೂರ್ತಿ II


ಪ್ರಭು ದಯಾನಿಧಿ, ಕೃಪಾಸಾಗರನು I ಸಹನಶೀಲನು, ಪ್ರೀತಿಪೂರ್ಣನು II


ಪ್ರಭು, ನೀನು ದಯಾವಂತನು, ಕ್ಷಮಿಸುವವನು I ಮೊರೆಯಿಡುವವರಿಗೆ ನೀನು ಕೃಪಾಪೂರ್ಣನು II


ನಿಮ್ಮಂಥ ದೇವರು ಯಾರಿದ್ದಾರೆ? ತಮ್ಮ ಸ್ವಂತ ಜನರಲ್ಲಿ ಅಳಿದುಳಿದವರ ಅಪರಾಧಗಳನ್ನು ಲೆಕ್ಕಿಸದೆ, ಅವರ ದ್ರೋಹಗಳನ್ನು ಕ್ಷಮಿಸುವಂಥ ದೇವರು ಯಾರಿದ್ದಾರೆ? ನೀವು ನಿತ್ಯಕ್ಕೂ ಕೋಪಿಷ್ಠರಾಗಿರದೆ ಕರುಣೆ ತೋರಿಸುವುದರಲ್ಲೇ ಸಂತುಷ್ಟರಾಗುವಿರಿ.


ದಂಡನೆಗೆ ನಿರ್ಣಯಿಸಲಾದ ಆ ಜನಾಂಗದವರು ತಮ್ಮ ಕೆಟ್ಟತನವನ್ನು ಬಿಟ್ಟು ಹಿಂತಿರುಗಿದ್ದೇ ಆದರೆ ನಾನು ಬರಮಾಡಬೇಕೆಂದಿದ್ದ ಆ ವಿಪತ್ತನ್ನು ನಾನು ಮನಮರುಗಿ ಬರಮಾಡದಿರುವೆನು.


ಆಗ ಸರ್ವೇಶ್ವರ ತಮ್ಮ ಪ್ರಜೆಗಳಿಗೆ ಮಾಡುವೆನೆಂದು ಹೇಳಿದ ಕೇಡಿನ ಬಗ್ಗೆ ಮನಸ್ಸನ್ನು ಮಾರ್ಪಡಿಸಿಕೊಂಡರು.


ಆದರೂ ಕ್ಷಮಿಸಿದನವರನು ಆ ದಯಾಳು, ನಾಶಮಾಡದೆ I ಕೋಪವ ತಾಳಿಕೊಂಡನು ಹಲವು ವೇಳೆ, ಉದ್ರೇಕಗೊಳ್ಳದೆ II


ಇದನ್ನು ಕೇಳಿ ಸರ್ವೇಶ್ವರ ಮನಮರುಗಿದರು. “ಈ ದರ್ಶನ ನೆರವೇರುವುದಿಲ್ಲ” ಎಂದು ಅಭಯವಿತ್ತರು.


ಆ ಜನರು ಮಾಡಿದುದೆಲ್ಲವನ್ನು ದೇವರು ಗಮನಿಸಿದರು. ತಮ್ಮ ದುರ್ನಡತೆಯನ್ನು ಜನರು ಕೈಬಿಟ್ಟದ್ದನ್ನು ಕಂಡು, ಮನಮರುಗಿ ಅವರಿಗೆ ವಿಧಿಸಬೇಕೆಂದಿದ್ದ ಶಿಕ್ಷೆಯನ್ನು ತಡೆಹಿಡಿದರು.


ಆದರೆ ಯೋನನು ಆ ಸ್ವಾಮಿಯ ಸನ್ನಿಧಿಯಿಂದ ತಪ್ಪಿಸಿಕೊಳ್ಳುವ ಸಲುವಾಗಿ ನಿನೆವೆಗೆ ಹೋಗುವುದರ ಬದಲು ತಾರ್ಷಿಷಿಗೆ ಅಭಿಮುಖವಾಗಿ ಓಡಿಹೋಗಲು ಹೊರಟನು. ಜೊಪ್ಪ ಎಂಬ ಊರನ್ನು ತಲುಪಿದಾಗ ತಾರ್ಷಿಷಿಗೆ ಹೊರಡಲಿದ್ದ ಹಡಗೊಂದನ್ನು ಕಂಡನು. ಪ್ರಯಾಣದ ದರವನ್ನು ತೆತ್ತು ಸಹನಾವಿಕರೊಂದಿಗೆ ಹಡಗನ್ನು ಹತ್ತಿದನು. ಹೀಗೆ ಯೋನನು ಸರ್ವೇಶ್ವರಸ್ವಾಮಿಯ ಸನ್ನಿಧಿಯಿಂದ ದೂರಹೋಗಬಹುದೆಂದು ಭಾವಿಸಿದನು.


ತರುವಾಯ ತಾನೊಬ್ಬನೇ, ಮರುಭೂಮಿಯಲ್ಲಿ ಒಂದು ದಿವಸದ ಪ್ರಯಾಣದಷ್ಟು ದೂರಹೋಗಿ, ಒಂದು ಜಾಲೀಗಿಡದ ಕೆಳಗೆ ಕುಳಿತುಕೊಂಡು ಮರಣವನ್ನು ಅಪೇಕ್ಷಿಸಿದನು. “ಸರ್ವೇಶ್ವರಾ, ನನಗೆ ಸಾಕಾಯಿತು; ನನ್ನ ಪ್ರಾಣವನ್ನು ತೆಗೆದುಬಿಡಿ; ನನ್ನ ಪೂರ್ವಜರಿಗಿಂತ ನಾನು ಉತ್ತಮನಲ್ಲ,” ಎಂದು ದೇವರನ್ನು ಪ್ರಾರ್ಥಿಸಿದನು.


ಒಡೆಯರಾದ ಸರ್ವೇಶ್ವರ ಇದನ್ನು ಕೇಳಿ ಮನಮರುಗಿ: “ಈ ದರ್ಶನ ನೆರವೇರುವುದಿಲ್ಲ” ಎಂದು ಅಭಯವಿತ್ತರು.


ಪ್ರಭು, ತಿರುಗಿ ಬಾ, ಕೋಪವೆಷ್ಟರ ತನಕ? I ನಿನ್ನೀ ಸೇವಕರ ಮೇಲಿರಲಿ ಮರುಕ II


ಆದರೆ ಆ ಶಾಸ್ತ್ರಜ್ಞನು ತನ್ನನ್ನು ತಾನೇ ಸಮರ್ಥಿಸಿಕೊಳ್ಳಲು, “ನನ್ನ ನೆರೆಯವನು ಯಾರು?” ಎಂದು ಯೇಸುವನ್ನು ಮತ್ತೆ ಪ್ರಶ್ನಿಸಿದನು.


ಸರ್ವೇಶ್ವರಾ, ನೀವು ನನ್ನನ್ನು ಮರುಳಾಗಿಸಿದಿರಿ. ನಾನು ಮರುಳಾದೆ. ನೀವು ನನ್ನನ್ನು ಗೆದ್ದುಬಿಟ್ಟಿರಿ, ನೀವು ನನಗಿಂತ ಬಲಿಷ್ಠರಲ್ಲವೆ? ಎಲ್ಲರು ನನ್ನನ್ನು ಅಣಕಿಸುವವರೆ, ದಿನವೆಲ್ಲ ನಾನು ಅಪಹಾಸ್ಯಕ್ಕೆ ಬಲಿಯಾದೆ.


ನಿಮ್ಮ ದೇವರಾದ ಸರ್ವೇಶ್ವರ ದಯಾಮಯ ದೇವರು. ಅವರು ನಿಮ್ಮನ್ನು ಅಲಕ್ಷ್ಯ ಮಾಡುವುದಿಲ್ಲ. ವಿನಾಶಕ್ಕೆ ಬಿಟ್ಟುಬಿಡುವುದಿಲ್ಲ. ನಿಮ್ಮ ಪೂರ್ವಜರ ಸಂಗಡ ಅವರು ಪ್ರಮಾಣಪೂರ್ವಕವಾಗಿ ಮಾಡಿಕೊಂಡ ಒಡಂಬಡಿಕೆಯನ್ನು ಮರೆತುಬಿಡುವುದಿಲ್ಲ.


ಪ್ರಭು ದಯಾಳು, ಕೃಪಾಪೂರ್ಣನು I ಸಹನಶೀಲನು, ಪ್ರೀತಿಮಯನು II


ಇದೀಗಲೇ ನೀವು ನಿಮ್ಮ ಮಾರ್ಗಗಳನ್ನೂ ನಡತೆಗಳನ್ನೂ ತಿದ್ದುಕೊಳ್ಳಿ. ನಿಮ್ಮ ದೇವರಾದ ಸರ್ವೇಶ್ವರನ ನುಡಿಗೆ ಕಿವಿಗೊಡಿ. ಆಗ ನಿಮಗೆ ತಿಳಿಸಿದ ಕೇಡು ಒದಗದಂತೆ ಸರ್ವೇಶ್ವರ ತಮ್ಮ ಮನಸ್ಸನ್ನು ಬದಲಾಯಿಸಿಕೊಳ್ಳುವರು.


‘ನೀವು ಈ ನಾಡಿನಲ್ಲಿ ನೆಲೆಗೊಂಡಿದ್ದರೆ ನಾನು ನಿಮ್ಮನ್ನು ಕಟ್ಟುವೆನು, ಕೆಡುವುದಿಲ್ಲ, ನೆಡುವೆನು, ಕೀಳುವುದಿಲ್ಲ, ನಾನು ನಿಮಗೆ ಮಾಡಿದ ಕೇಡಿಗಾಗಿ ವಿಷಾದಿಸುತ್ತೇನೆ.


ಹೀಗೆ ಮಾಡಿದ್ದೇ ಆದರೆ, ದೇವರು ಒಂದುವೇಳೆ ತಮ್ಮ ಮನಸ್ಸನ್ನು ಬದಲಾಯಿಸಿ, ತಮ್ಮ ಉಗ್ರಕೋಪವನ್ನು ತಡೆದಾರು, ನಾವು ನಾಶವಾಗದೆ ಉಳಿದೇವು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು