Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 1:1 - ಕನ್ನಡ ಸತ್ಯವೇದವು C.L. Bible (BSI)

1 ‘ಊಚ್’ ಎಂಬ ನಾಡಿನಲ್ಲಿ ‘ಯೋಬ’ ಎಂಬ ಒಬ್ಬ ವ್ಯಕ್ತಿಯಿದ್ದ. ಆತನು ದೋಷರಹಿತ, ಸತ್ಯವಂತ, ದೇವರಲ್ಲಿ ಭಯಭಕ್ತಿ ಉಳ್ಳವನು, ಕೆಟ್ಟದ್ದನ್ನು ತೊರೆದು ಬಾಳಿದವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಊಚ್ ದೇಶದಲ್ಲಿ ಯೋಬನೆಂಬ ಒಬ್ಬ ಮನುಷ್ಯನಿದ್ದನು. ಅವನು ದೇವರಲ್ಲಿ ಭಯಭಕ್ತಿಯುಳ್ಳವನಾಗಿ ಕೆಟ್ಟದ್ದನ್ನು ನಿರಾಕರಿಸುತ್ತಾ, ನಿರ್ದೋಷಿಯೂ, ಯಥಾರ್ಥಚಿತ್ತನೂ ಆಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಊಚ್ ದೇಶದಲ್ಲಿ ಯೋಬನೆಂಬ ಒಬ್ಬ ಮನುಷ್ಯನಿದ್ದನು; ಅವನು ದೇವರಲ್ಲಿ ಭಯಭಕ್ತಿಯುಳ್ಳವನಾಗಿ ಕೆಟ್ಟದ್ದನ್ನು ನಿರಾಕರಿಸುತ್ತಾ ನಿರ್ದೋಷಿಯೂ ಯಥಾರ್ಥಚಿತ್ತನೂ ಆಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಊಚ್ ದೇಶದಲ್ಲಿ ಯೋಬನೆಂಬ ಒಬ್ಬ ಮನುಷ್ಯನಿದ್ದನು. ಅವನು ದೇವರಲ್ಲಿ ಭಯಭಕ್ತಿಯುಳ್ಳವನಾಗಿದ್ದನು; ಕೆಟ್ಟಕಾರ್ಯಗಳನ್ನು ಮಾಡದೆ ನಿರ್ದೋಷಿಯೂ ಯಥಾರ್ಥವಂತನೂ ಆಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಊಚ್ ದೇಶದಲ್ಲಿ ಯೋಬ ಎಂಬ ಮನುಷ್ಯನಿದ್ದನು. ಅವನು ನಿರ್ದೋಷಿಯೂ ಯಥಾರ್ಥನೂ ದೇವರಿಗೆ ಭಯಪಡುವವನೂ ಕೆಟ್ಟದ್ದನ್ನು ತೊರೆಯುವವನೂ ಆಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 1:1
34 ತಿಳಿವುಗಳ ಹೋಲಿಕೆ  

ತಾಳಿದವನು ಬಾಳಿಯಾನು ಎಂದು ಹೇಳುತ್ತೇವಲ್ಲವೇ? ಯೋಬನ ತಾಳ್ಮೆಯನ್ನು ಕುರಿತು ನೀವು ಕೇಳಿದ್ದೀರಿ. ಅಂತ್ಯದಲ್ಲಿ ಆತನಿಗೆ ಸರ್ವೇಶ್ವರ ದಯಪಾಲಿಸಿದ್ದನ್ನು ಬಲ್ಲಿರಿ. ದೇವರ ದಯೆ ಅನಂತ, ಅವರ ಅನುಕಂಪ ಅಪಾರ.


ನೋಹ, ದಾನಿಯೇಲ, ಯೋಬ, ಎಂಬೀ ಮೂವರು ವ್ಯಕ್ತಿಗಳು ಆ ನಾಡಿನಲ್ಲಿದ್ದರೂ ತಮ್ಮ ಸದಾಚಾರದಿಂದ ಸ್ವಂತಪ್ರಾಣಗಳನ್ನು ಮಾತ್ರ ಉಳಿಸಿಕೊಳ್ಳುತ್ತಿದ್ದರು; ಇದು ಸರ್ವೇಶ್ವರನಾದ ದೇವರ ನುಡಿ.


ನೋಹ, ದಾನಿಯೇಲ, ಯೋಬ, ಎಂಬವರು ಅದರಲ್ಲಿದ್ದರೂ ನನ್ನ ಜೀವದಾಣೆ, ತಮ್ಮ ಸದಾಚಾರದಿಂದ ಸ್ವಂತಪ್ರಾಣಗಳನ್ನು ಉಳಿಸಿಕೊಳ್ಳುತ್ತಿದ್ದರೇ ಹೊರತು ತಮ್ಮ ಗಂಡುಮಗನನ್ನಾಗಲಿ ಹೆಣ್ಣು ಮಗಳನ್ನಾಗಲಿ ಉಳಿಸಿಕೊಳ್ಳುತ್ತಿರಲಿಲ್ಲ; ಇದು ಸರ್ವೇಶ್ವರನಾದ ದೇವರ ನುಡಿ.”


ಬಳಿಕ ಮಾನವನಿಗೆ ಇಂತೆಂದನು: ‘ಸರ್ವೇಶ್ವರನಲ್ಲಿ ಭಯಭಕ್ತಿ ಇಡುವುದೇ ಸುಜ್ಞಾನ ದುಷ್ಟತನವನ್ನು ಬಿಟ್ಟುಬಿಡುವುದೇ ವಿವೇಕ’.”


ಆಗ ಸರ್ವೇಶ್ವರ ಅವನಿಗೆ, “ನನ್ನ ದಾಸ ಯೋಬನನ್ನು ಗಮನಿಸಿದೆಯಾ? ಆತನು ದೋಷರಹಿತ, ಸತ್ಯವಂತ, ದೇವರಲ್ಲಿ ಭಯಭಕ್ತಿಯುಳ್ಳವನು, ಕೆಟ್ಟದ್ದನ್ನು ತೊರೆದು ಬಾಳುವವನು. ನಿಷ್ಕಾರಣವಾಗಿ ಆತನನ್ನು ನಾಶಮಾಡಲು ಬಿಡಬೇಕೆಂದು ನೀನು ನನ್ನನ್ನು ಪೀಡಿಸಿದೆ. ಆದರೂ ಆತನು ತನ್ನ ಸತ್ಯಸಂಧತೆಯನ್ನು ಬಿಡದೆ ಇದ್ದಾನೆ ನೋಡು,” ಎಂದರು.


ಆಗ ಸರ್ವೇಶ್ವರ, “ನನ್ನ ದಾಸ ಯೋಬನನ್ನು ಗಮನಿಸಿದೆಯಾ? ಆತನು ದೋಷರಹಿತ, ಸತ್ಯವಂತ, ದೇವರಲ್ಲಿ ಭಯಭಕ್ತಿಯುಳ್ಳವನು, ಕೆಟ್ಟದ್ದನ್ನು ತೊರೆದು ಬಾಳುವವನು. ಆತನಿಗೆ ಸರಿಸಮಾನನು ಭೂಲೋಕದಲ್ಲಿ ಎಲ್ಲಿಯೂ ಸಿಗನು,” ಎಂದು ಹೇಳಿದರು.


ನೋಹನ ಚರಿತ್ರೆಯಿದು: ಆತ ಸತ್ಪುರುಷ, ಅವನಂಥ ನಿರ್ದೋಷಿ ಆ ಕಾಲದಲ್ಲಿ ಯಾರೂ ಇರಲಿಲ್ಲ. ದೇವರೊಡನೆ ಆತ ಅನ್ಯೋನ್ಯವಾಗಿ ನಡೆದುಕೊಳ್ಳುತ್ತಿದ್ದ.


ದಂಪತಿಗಳಿಬ್ಬರೂ ದೇವರ ದೃಷ್ಟಿಯಲ್ಲಿ ಭಯಭಕ್ತಿಯುಳ್ಳವರಾಗಿದ್ದರು; ಸರ್ವೇಶ್ವರನ ವಿಧಿನಿಯಮಗಳನ್ನು ನಿಷ್ಠೆಯಿಂದ ಪಾಲಿಸಿಕೊಂಡು ಬರುತ್ತಿದ್ದರು.


ದೈವಭಯದಿಂದ ಹುಟ್ಟುತ್ತದೆ ಪಾಪದ್ವೇಷ; ಗರ್ವ, ಅಹಂಕಾರ, ದುರಾಚಾರ, ಕಪಟ ಭಾಷಣ ನನಗೆ ಅಸಹ್ಯ.


ದೂತನು ಅವನಿಗೆ, "ಹುಡುಗನ ಮೇಲೆ ಕೈಯೆತ್ತಬೇಡ; ಅವನಿಗೆ ಯಾವ ಹಾನಿಯನ್ನೂ ಮಾಡಬೇಡ; ನೀನು ನಿನ್ನ ಒಬ್ಬನೇ ಮಗನನ್ನು ನನಗೆ ಬಲಿಕೊಡಲು ಹಿಂತೆಗೆಯಲಿಲ್ಲ; ಎಂತಲೇ, ನೀನು ದೇವರಲ್ಲಿ ಭಯಭಕ್ತಿಯುಳ್ಳವನೆಂದು ಈಗ ನನಗೆ ಚೆನ್ನಾಗಿ ಗೊತ್ತಾಯಿತು,” ಎಂದು ಹೇಳಿದನು.


ಅಬ್ರಾಮನಿಗೆ ತೊಂಬತ್ತೊಂಬತ್ತು ವರ್ಷಗಳಾಗಿದ್ದಾಗ, ಸರ್ವೇಶ್ವರ ದರ್ಶನವಿತ್ತು ಇಂತೆಂದರು: “ನಾನು ಸರ್ವಶಕ್ತ ಸರ್ವೇಶ್ವರ. ನೀನು ನನ್ನ ಸಮ್ಮುಖದಲ್ಲಿದ್ದು ನಿರ್ದೋಷಿಯಾಗಿ ನಡೆದುಕೊಳ್ಳಬೇಕು.


‘ಊಚ’ ಮತ್ತು ‘ಎದೋಮ್’ ನಾರೀಮಣಿಗಳೇ, ಸಂತೋಷಿಸಿ ಉಲ್ಲಾಸಿಸುತ್ತಿರುವಿರಿ ಅಲ್ಲವೇ? ಆದರೆ ಖಂಡಿತ ಬರುವುದು ಕಹಿಪಾನದ ಪಾತ್ರೆ ನಿಮ್ಮ ಪಾಲಿಗೆ ಅಮಲೇರಿ ಬೆತ್ತಲೆಯಾಗುವ ಗತಿ ಬಂದೇಬರುವುದು ನಿಮಗೆ!


ಪ್ರೀತಿ ಸತ್ಯತೆಗಳಿಂದ ಪಾಪನಿವಾರಣೆ; ಸರ್ವೇಶ್ವರನ ಭಯಭಕ್ತಿಯಿಂದ ಹಾನಿ ನಿವಾರಣೆ.


“ಸರ್ವೇಶ್ವರಾ, ನಾನು ಶ್ರದ್ಧೆಯಿಂದಲೂ ಪ್ರಾಮಾಣಿಕತೆಯಿಂದಲೂ ನಡೆದುಕೊಂಡಿದ್ದೇನೆ. ನಿಮ್ಮ ದೃಷ್ಟಿಯಲ್ಲಿ ಒಳ್ಳೆಯವನಾಗಿದ್ದುದನ್ನು ನೆನಪಿಗೆ ತಂದುಕೊಳ್ಳಿ,” ಎಂದು ಬಹಳವಾಗಿ ಕಣ್ಣೀರಿಡುತ್ತಾ ಪ್ರಾರ್ಥಿಸಿದನು.


ಕೆಡಕನ್ನು ಬಿಟ್ಟು ಒಳಿತನ್ನು ಕೈಗೊಳ್ಳಲಿ ಶಾಂತಿಯನರಸಿ ಅದರ ಸ್ಥಾಪನೆಗೆ ಶ್ರಮಿಸಲಿ.


ಊಚ್ ನಾಡಿನ ಎಲ್ಲ ಅರಸರು, ಫಿಲಿಷ್ಟಿಯ ದೇಶದ ಎಲ್ಲ ಅರಸರು, ಅಷ್ಕೆಲೋನ್, ಗಾಜಾ, ಎಕ್ರೋನ್, ಅಷ್ಟೋದಿನ ಶೇಷ, ಈ ಪ್ರಾಂತ್ಯಗಳ ಎಲ್ಲ ಅರಸರು;


ಏಚೆರ್: ಇವನು ಬಿಲ್ಹಾನ್, ಜಾವಾನ್, ಯಾಕಾನ್ ಎಂಬ ಕುಲಗಳ ಮೂಲಪುರುಷ. ದೀಶಾನನು, ಉಚ್ ಹಾಗೂ ಅರಾನ್ ಕುಲಗಳ ಪೂರ್ವಜ.


ಶೇಮನ ಮಕ್ಕಳು - ಏಲಾಮ್, ಅಶ್ಶೂರ್, ಅರ್ಪಕ್ಷದ್, ಲೂದ್, ಅರಾಮ್, ಊಚ್, ಹೂಲ್, ಗೆತೆರ್, ಮೆಷೆಕ್ ಎಂಬವರು. ಈ ಹೆಸರಿನ ಜನಾಂಗಗಳಿಗೆ ಇವರೇ ಮೂಲಪುರುಷರು.


ಆದರೆ ನೀನು ಈ ಜನರಲ್ಲೆಲ್ಲಾ ಸಮರ್ಥರು, ದೇವಭಕ್ತರು, ನಂಬಿಗಸ್ಥರು ಹಾಗು ಲಂಚ ಮುಟ್ಟದವರು ಆಗಿರುವ ವ್ಯಕ್ತಿಗಳನ್ನು ಆರಿಸಿಕೊ. ಅಂಥವರನ್ನು ಸಾವಿರ, ನೂರು, ಐವತ್ತು ಹಾಗು ಹತ್ತು ಮಂದಿಗಳ ಅಧಿಪತಿಗಳನ್ನಾಗಿ ನೇಮಿಸು.


ದೀಶಾನನ ಮಕ್ಕಳು ಊಚ್ ಮತ್ತು ಅರಾನ್.


ಆರಾಮ್ ಸಂತಾನದವರು - ಊಸ್, ಹೂಲ್, ಗೆತೆರ್ ಮತ್ತು ಮಷ್.


ಮೂರನೆಯ ದಿನ ಜೋಸೆಫನು ಅವರನ್ನು ಕರೆಸಿ, “ನಾನು ದೇವರಲ್ಲಿ ಭಯಭಕ್ತಿಯುಳ್ಳವನು; ನಿಮಗೆ ಜೀವದ ಮೇಲೆ ಆಶೆ ಇದ್ದರೆ ನಾನು ಹೇಳಿದಂತೆ ಮಾಡಿ;


ನೀವು ನಿಮ್ಮ ದೇವರಾದ ಸರ್ವೇಶ್ವರನ ಸೇವೆಯ ವಿಷಯದಲ್ಲಿ ಸದಾಚಾರವುಳ್ಳವರು ಆಗಿರಬೇಕು.


ನಿನ್ನ ನಂಬಿಕೆಗೆ ಆಧಾರ ನಿನ್ನ ಭಯಭಕ್ತಿಯಲ್ಲವೆ? ನಿನ್ನ ನಿರೀಕ್ಷೆಗೆ ಅಸ್ತಿವಾರ ನಿನ್ನ ಆದರ್ಶವಲ್ಲವೆ?


ನಾನು ನಿರ್ದೋಷಿಯೇ ಹೌದು; ಅದರ ಬಗ್ಗೆ ನನಗಿಲ್ಲ ಚಿಂತೆ. ನನ್ನ ಪ್ರಾಣ ಕೂಡ ನನಗೆ ತೃಣವಾಗಿಬಿಟ್ಟಿದೆ.


ನೀನೇ ಬುದ್ಧಿವಂತನೆಂದು ಎಣಿಸದಿರು. ಸರ್ವೇಶ್ವರನಿಗೆ ಭಯಪಟ್ಟು ಕೆಟ್ಟದ್ದನ್ನು ತೊರೆದುಬಿಡು.


ಸನ್ಮಾರ್ಗಿಯು ಸರ್ವೇಶ್ವರನಿಗೆ ಭಯಪಡುತ್ತಾನೆ; ದುರ್ಮಾರ್ಗಿಯು ಆತನನ್ನು ಅಸಡ್ಡೆಮಾಡುತ್ತಾನೆ.


ಬುದ್ಧಿವಂತನು ಕೇಡಿಗೆ ಅಂಜಿ ಓರೆಯಾಗುವನು; ಬುದ್ಧಿಹೀನನು ಸೊಕ್ಕಿನಿಂದ ಅದರತ್ತ ಧಾವಿಸುವನು.


ಸಜ್ಜನರ ರಾಜಮಾರ್ಗ ಹಾನಿಗೆ ದೂರ; ಸನ್ನಡತೆಯುಳ್ಳವ ಪ್ರಾಣಸಂರಕ್ಷಕ.


ನಿರ್ದೋಷಿಗಳಾಗಿ ನಡೆಯುತ್ತಾರೆ ನೀತಿವಂತರು; ಅವರು ಗತಿಸಿದ ಮೇಲೂ ಅವರ ಸಂತತಿಯವರು ಭಾಗ್ಯವಂತರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು