Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 1:18 - ಕನ್ನಡ ಸತ್ಯವೇದವು C.L. Bible (BSI)

18 ಅವನು ವರದಿಮಾಡುತ್ತಿದ್ದಾಗಲೇ ಬೇರೊಬ್ಬನು ಬಂದು, “ನಿಮ್ಮ ಪುತ್ರಪುತ್ರಿಯರು ಹಿರಿಯಣ್ಣನ ಮನೆಯಲ್ಲಿ ಔತಣದಲ್ಲಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಅವನು ಇನ್ನು ಮಾತನಾಡುತ್ತಿರುವಾಗಲೆ ಬೇರೊಬ್ಬನು ಬಂದು, “ನಿನ್ನ ಗಂಡು, ಹೆಣ್ಣು ಮಕ್ಕಳು ತಮ್ಮ ಅಣ್ಣನ ಮನೆಯಲ್ಲಿ ತಿಂದು ಕುಡಿಯುತ್ತಿರುವಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಸಂಗಡಲೇ ಬೇರೊಬ್ಬನು ಬಂದು ನಿನ್ನ ಕುಮಾರ ಕುಮಾರ್ತೆಯರು ತಮ್ಮ ಅಣ್ಣನ ಮನೆಯಲ್ಲಿ ಉಂಡು ಕುಡಿಯುತ್ತಿರುವಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಮೂರನೆಯ ಸೇವಕನು ಮಾತಾಡುತ್ತಿರುವಾಗಲೇ ಮತ್ತೊಬ್ಬ ಸೇವಕನು ಬಂದು ಯೋಬನಿಗೆ, “ನಿನ್ನ ಗಂಡು ಹೆಣ್ಣುಮಕ್ಕಳು ತಮ್ಮ ಹಿರಿಯ ಅಣ್ಣನ ಮನೆಯಲ್ಲಿ ಊಟ ಮಾಡುತ್ತಾ ದ್ರಾಕ್ಷಾರಸ ಕುಡಿಯುತ್ತಾ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಇವನು ಇನ್ನೂ ಮಾತನಾಡುತ್ತಿರಲು, ಮತ್ತೊಬ್ಬ ದೂತನು ಬಂದು, “ನಿನ್ನ ಪುತ್ರ ಪುತ್ರಿಯರೂ ತಮ್ಮ ಹಿರಿಯ ಅಣ್ಣನ ಮನೆಯಲ್ಲಿ ದ್ರಾಕ್ಷಾರಸ ಕಡಿಯುತ್ತಾ ಔತಣ ಮಾಡುತ್ತಿರುವಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 1:18
17 ತಿಳಿವುಗಳ ಹೋಲಿಕೆ  

ಆತನ ಗಂಡು ಮಕ್ಕಳು ಒಂದೊಂದು ದಿನ ಒಬ್ಬೊಬ್ಬನ ಮನೆಯಲ್ಲಿ ಔತಣವನ್ನು ಏರ್ಪಡಿಸುತ್ತಿದ್ದರು. ತಮ್ಮ ಮೂವರು ತಂಗಿಯರನ್ನೂ ಆ ಭೋಜನಕ್ಕೆ ಆಹ್ವಾನಿಸುತ್ತಿದ್ದರು.


ಇದಾದ ಬಳಿಕ ಯೋಬನ ಪುತ್ರಪುತ್ರಿಯರು ತಮ್ಮ ಹಿರಿಯಣ್ಣನ ಮನೆಯಲ್ಲಿ ಔತಣಮಾಡುತ್ತಿದ್ದರು.


ಹಾದುಹೋಗುವವರೇ, ನಿಮಗಿಲ್ಲವೆ ನನ್ನ ಚಿಂತೆ? ಸರ್ವೇಶ್ವರ ಸಿಟ್ಟುಗೊಂಡು ನನಗಿತ್ತಿರುವನು ಈ ವ್ಯಥೆ ! ಈ ಪರಿ ಸಂಕಟವನ್ನು ನೀವೆಲ್ಲಾದರು ನೋಡಿದ್ದುಂಟೆ?”


ಒಬ್ಬ ಸುದ್ದಿಗಾರ ಇನ್ನೊಬ್ಬ ಸುದ್ದಿಗಾರನತ್ತ ಓಡುತ್ತಾನೆ. ಒಬ್ಬ ದೂತ ಇನ್ನೊಬ್ಬ ದೂತನತ್ತ ದೌಡಾಯಿಸುತ್ತಾನೆ. ‘ರಾಜಧಾನಿಯನ್ನು ಎಲ್ಲಾ ಕಡೆಯಿಂದಲೂ ಆಕ್ರಮಿಸಿದ್ದಾರೆ.


ಅದು ಹಾದುಹೋಗುವಾಗಲೆಲ್ಲಾ ನಿಮ್ಮನ್ನು ಹಿಡಿದುಬಿಡುವುದು. ಪ್ರತಿದಿನವೂ ಹಗಲೂ ರಾತ್ರಿ ಅದು ಹಾದುಹೋಗುವುದು. ಸರ್ವೇಶ್ವರ ಸ್ವಾಮಿಯ ಈ ಸಂದೇಶವನ್ನು ಅರ್ಥಮಾಡಿಕೊಳ್ಳುವವರಿಗೆ ಭಯಭ್ರಾಂತಿ ಉಂಟಾಗುವುದು.


ಎಲ್ಲವೂ ಎಲ್ಲರಿಗೂ ಒಂದೇ ಬಗೆಯಾಗಿ ಸಂಭವಿಸುವುದು; ಸಜ್ಜನನಿಗೂ ದುರ್ಜನನಿಗೂ, ಒಳ್ಳೆಯವನಿಗೂ (ಕೆಟ್ಟವನಿಗೂ), ಶುದ್ಧನಿಗೂ, ಅಶುದ್ಧನಿಗೂ ಬಲಿಯನ್ನರ್ಪಿಸುವವನಿಗೂ ಅರ್ಪಿಸದವನಿಗೂ ಒಂದೇ ಗತಿ ಕಾದಿದೆ; ನಿರ್ದೋಷಿಯಂತೆ ದೋಷಿಯೂ ಇರುವನು; ಆಣೆಯಿಡುವವನ ಹಾಗೆ ಆಣೆಗೆ ಅಂಜುವವನೂ ಇರುವನು.


ಸಜ್ಜನನಿಗೊದಗುವ ಸಂಕಟಗಳು ವಿಪರೀತ I ಪ್ರಭುವೆಲ್ಲವನು ನಿವಾರಿಸುವುದು ನಿಶ್ಚಿತ II


ಅವನಿಗೆ ಮಕ್ಕಳು ಹೆಚ್ಚಿದರೂ ಕತ್ತಿಗೆ ತುತ್ತಾಗುವರು ಅವನ ಸಂತತಿಯವರಿಗೆ ಊಟದ ಕೊರತೆ ತಪ್ಪದು.


“ನನ್ನ ದುಃಖಪ್ರಲಾಪ ಈಗಲೂ ಕಟುವಾಗಿದೆ ನಾನು ನಿಟ್ಟುಸಿರಿಡುವಾಗಲೂ ದೇವರ ಹಸ್ತ ಭಾರವಾಗಿದೆ.


ಪೆಟ್ಟಿನ ಮೇಲೆ ಪೆಟ್ಟು ಕೊಟ್ಟು ನನ್ನನು ಬಡಕಲಾಗಿಸಿಹನು ಯುದ್ಧಶೂರನಂತೆ ಓಡಿಬಂದು ಮೇಲೆ ಬೀಳುತ್ತಿಹನು.


ಬಹುಶಃ ನಿನ್ನ ಮಕ್ಕಳು ಆತನ ವಿರುದ್ಧ ಪಾಪಮಾಡಿರಬೇಕು ಎಂದೇ ಆತ ಅವರನು ಆ ದ್ರೋಹದ ನಿಮಿತ್ತ ದಂಡಿಸಿರಬೇಕು.


ಇದಕ್ಕೆ ಮೊದಲೇ ಅಬ್ಷಾಲೋಮನು ತನ್ನ ಆಳುಗಳಿಗೆ, “ಕೇಳಿ, ಅಮ್ನೋನನು ದ್ರಾಕ್ಷಾರಸ ಕುಡಿದು ಮತ್ತನಾಗಿರುವಾಗ ನಾನು ಹೊಡೆಯಬೇಕೆಂದು ಹೇಳಿದಕೂಡಲೆ ಅವನನ್ನು ಹೊಡೆದು ಕೊಂದುಹಾಕಿ; ಹೆದರಬೇಡಿ, ನಿಮಗೆ ಆಜ್ಞಾಪಿಸಿದವನು ನಾನಲ್ಲವೆ? ಧೈರ್ಯದಿಂದಿರಿ, ಶೂರರಾಗಿರಿ,” ಎಂದು ಹೇಳಿದ್ದನು.


ಅಷ್ಟರಲ್ಲಿ ಇನ್ನೊಬ್ಬನು ಬಂದು, “ಕಸ್ದೀಯರು ಮೂರು ಗುಂಪುಗಳಾಗಿ ಬಂದು, ಮೇಲೆ ಬಿದ್ದು, ಒಂಟೆಗಳನ್ನು ಹೊಡೆದುಕೊಂಡುಹೋದರು. ಅಲ್ಲದೆ ಆ ಕೂಲಿ ಆಳುಗಳನ್ನು ಕತ್ತಿಯಿಂದ ಸಂಹರಿಸಿದರು. ನಾನೊಬ್ಬನೇ ತಲೆತಪ್ಪಿಸಿಕೊಂಡು ಈ ಸುದ್ದಿಯೊಂದಿಗೆ ನಿಮ್ಮ ಬಳಿಗೆ ಓಡಿಬಂದೆ,” ಎಂದನು.


ಆಗ ತಟ್ಟನೆ ಅರಣ್ಯ ಕಡೆಯಿಂದ ಬಿರುಗಾಳಿ ಎದ್ದಿತು; ನಾಲ್ಕು ಕಡೆಯಿಂದಲೂ ಮನೆಗೆ ಬಡಿಯಿತು. ಮನೆ ಕುಸಿದುಬಿತ್ತು. ಯುವಕಯುವತಿಯರೆಲ್ಲ ಸತ್ತುಹೋದರು. ನಾನೊಬ್ಬನೇ ತಲೆತಪ್ಪಿಸಿಕೊಂಡು ಈ ಸುದ್ದಿಯನ್ನು ನಿಮಗೆ ತಂದಿದ್ದೇನೆ,” ಎಂದು ತಿಳಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು